Homeಮುಖಪುಟದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

ದಳಪತಿ ವಿಜಯ್‌ಗೆ 47ರ ಸಂಭ್ರಮ: ಅಭಿಮಾನಿಗಳು ಮತ್ತು ಚಿತ್ರತಾರೆಯರಿಂದ ಶುಭಾಶಯಗಳ ಸುರಿಮಳೆ

- Advertisement -
- Advertisement -

ತಮಿಳು ಚಿತ್ರರಂಗದ ಪ್ರಸಿದ್ಧ ನಟ ದಳಪತಿ ವಿಜಯ್ ಇಂದು ತಮ್ಮ 47 ನೇ ಹುಟ್ಟಿದ ದಿನವನ್ನು ಆಚರಿಸಿಕೊಂಡಿದ್ದಾರೆ. ವಿಜಯ್ ಹುಟ್ಟಿದ ದಿನದಂದು ಅವರ ಮುಂದಿನ ಚಲನಚಿತ್ರ ಬೀಸ್ಟ್‌ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ವಿಜಯ್ ಹುಟ್ಟಿದ ದಿನದಂದು ಅವರ ಅಭಿಮಾನಿಗಳು ಮತ್ತು ಭಾರತ ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಧನುಷ್, ಕಾಜೊಲ್ ಅಗರವಾಲ್ ಸೇರಿದಂತೆ ತಮಿಳು ಚಿತ್ರರಂಗದ ಗಣ್ಯರು ವಿಜಯ್‌ ಅವರಿಗೆ ಉತ್ತಮ ಆರೋಗ್ಯ ಮತ್ತು ಯಶಸ್ಸು ಹೀಗೆ ಮುಂದುವರೆಯಲಿ ಎಂದು ಆಶಿಸಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟ ಮೋಹನ್‌ ಲಾಲ್ ಕೂಡ ದಳಪತಿ ವಿಜಯ್ ಅವರಿಗೆ ಟ್ವಿಟ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

ವಿಜಯ್ ಹಿಂದೆ ಮರ್ಸೆಲ್ ಚಿತ್ರದಲ್ಲಿ ಕೇಂದ್ರ ಸರ್ಕಾರದ ನೋಟು ರದ್ಧತಿ, ಜಿಎಸ್‌ಟಿ ಸೇರಿ ಹಲವು ಯೋಜನೆಗಳ ಕುರಿತು ಟೀಕೆ ಮಾಡಿ ವಿವಾದಕ್ಕೆ ಗುರಿಯಾಗಿದ್ದರು. ಹಾಗೆಯೇ ತಮಿಳು ನಾಡು ಚುನಾವಣೆ ಸಮಯದಲ್ಲಿ ಸೈಕಲ್‌ ಮೂಲಕ ಮತ ಚಲಾಯಿಸಲು ತೆರಳಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತುವುದರ ಜೊತೆಗೆ ಪರಿಸರ ರಕ್ಷಣೆಯ ಕುರಿತು ಜಾಗೃತಿಯನ್ನು ಮೂಡಿಸಿದ್ದರು. ನಟೆನೆಯ ಜೊತೆಗೆ ವಿವಿಧ ಸಾಮಾಜಿಕ ಕಳಕಳಿಯ ಚಟುವಟಿಕೆಯಲ್ಲಿಯೂ ದಳಪತಿ ವಿಜಯ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಜಯ್ ಹಲವು ಸಂದರ್ಭಗಳಲ್ಲಿ ಬಹಿರಂಗವಾಗಿ ಸರ್ಕಾರದ ವಿರುದ್ಧ ತಮ್ಮ ಧ್ವನಿಯನ್ನು ಎತ್ತುತ್ತಲೇ ಬಂದಿದ್ದಾರೆ.

ಸದ್ಯ ವಿಜಯ ಸೇತುಪತಿ ಅವರೊಂದಿಗಿನ ತಮ್ಮ ಹಿಂದಿನ ಚಿತ್ರ ಮಾಸ್ಟರ್ ಚಿತ್ರದ ಯಶಸ್ಸಿನಲ್ಲಿರುವ ವಿಜಯ ದಳಪತಿ ಮುಂದಿನ ಚಿತ್ರ ಬೀಸ್ಟ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಬೀಸ್ಟ್‌ ಚಿತ್ರದಲ್ಲಿ ದಳಪತಿ ವಿಜಯ್‌ ಜೊತೆಗೆ ಪೂಜಾ ಹೆಗ್ಡೆ ಕೂಡ ನಟಿಸುತ್ತದ್ದಾರೆ.

 

ನಿನ್ನೆ ಮಧ್ಯರಾತ್ರಿ 2 ಗಂಟೆಗೆ ಬಿಡುಗಡೆಯಾದ ದಳಪತಿ ವಿಜಯ್ ಅವರ ಬೀಸ್ಟ್‌ ಚಿತ್ರದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದ್ದು ಅಭಿಮಾನಿಗಳು ವಿಜಯ್ ಅವರ ಹೊಸ ಲುಕ್‌ಗೆ ಫಿದಾ ಆಗಿದ್ದಾರೆ.


ಇದನ್ನೂ ಓದಿ : ಜನಾಗ್ರಹ ಆಂದೋಲನ: ನಾಳೆ ವಸತಿ ಸಚಿವರ ಮನೆ ಮುಂದೆ ಖಾಲಿ ಚೀಲ ಸುಟ್ಟು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...