Homeಮುಖಪುಟಏಪ್ರಿಲ್ 16 ರಂದು ಮತಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ಏಪ್ರಿಲ್ 16 ರಂದು ಮತಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

- Advertisement -
- Advertisement -

ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 16 ರಂದು ಸುಪ್ರೀಂಕೋರ್ಟ್ ನಡೆಸಲಿದೆ. ದೇಶದ ಹಲವಾರು ರಾಜ್ಯಗಳಲ್ಲಿನ ಮತಾಂತರ ವಿರೋಧಿ ಕಾನೂನುಗಳ ಬಗ್ಗೆ ಕೆಲವು ಅರ್ಜಿಗಳು ಪ್ರಶ್ನಿಸಿದ್ದರೆ, ಮತ್ತೊಂದು ಅರ್ಜಿ ಬಲವಂತದ ಧಾರ್ಮಿಕ ಮತಾಂತರಗಳ ವಿರುದ್ಧ ಪರಿಹಾರ ಕೋರಿ ಸಲ್ಲಿಸಲಾಗಿದೆ.

ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ಏಪ್ರಿಲ್ 16 ರಂದು ಪ್ರಕಟವಾದ ಪ್ರಕರಣದ ಪಟ್ಟಿಯಲ್ಲಿ, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠದ ಮುಂದೆ ಈ ಅರ್ಜಿಗಳು ವಿಚಾರಣೆಗೆ ಬರಲಿದೆ ಎಂದು ಹೇಳಿದೆ.

ಜನವರಿ 2023 ರಲ್ಲಿ ನಡೆಸಲಾದ ವಿಚಾರಣೆಯ ಸಂದರ್ಭದಲ್ಲಿ, ಧಾರ್ಮಿಕ ಮತಾಂತರಗಳು ಗಂಭೀರ ವಿಷಯವಾಗಿದ್ದು ಅದಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

ವಂಚನೆಯ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ಸಹಾಯವನ್ನು ಸುಪ್ರಿಂಕೋರ್ಟ್ ಕೋರಿತ್ತು.

“ಬೆದರಿಕೆ, ಉಡುಗೊರೆಗಳು ಮತ್ತು ಹಣಕಾಸಿನ ನೆರವುಗಳ ಮೂಲಕ ಮೋಸ ಮಾಡುವ ಆಮಿಷ”ದ ಮೂಲಕ ಧಾರ್ಮಿಕ ಮತಾಂತರಗಳನ್ನು ತಡೆಯುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಸುಪ್ರೀಂ ಕೋರ್ಟ್ 2023 ರಲ್ಲಿ ಹಲವಾರು ರಾಜ್ಯಗಳ ಮತಾಂತರ ವಿರೋಧಿ ಕಾನೂನುಗಳನ್ನು ಪ್ರಶ್ನಿಸುವವರ ಅರ್ಜಿಗಳನ್ನು ಹೈಕೋರ್ಟ್‌ಗಳಿಂದ ಸುಪ್ರೀಂಕೋರ್ಟ್‌ಗೆ ವರ್ಗಾಯಿಸಲು ಸಾಮಾನ್ಯ ಅರ್ಜಿಯನ್ನು ಸಲ್ಲಿಸುವಂತೆ ಕೇಳಿಕೊಂಡಿತ್ತು.

“ಅಲಹಾಬಾದ್ ಹೈಕೋರ್ಟ್ ಮುಂದೆ; ಮಧ್ಯಪ್ರದೇಶ ಹೈಕೋರ್ಟ್ ಮುಂದೆ ಏಳು; ಗುಜರಾತ್ ಮತ್ತು ಜಾರ್ಖಂಡ್ ಹೈಕೋರ್ಟ್‌ಗಳಲ್ಲಿ ತಲಾ ಎರಡು; ಹಿಮಾಚಲ ಪ್ರದೇಶದ ಮುಂದೆ ಮೂರು ಮತ್ತು ಕರ್ನಾಟಕ ಮತ್ತು ಉತ್ತರಾಖಂಡ್ ಹೈಕೋರ್ಟ್‌ಗಳಲ್ಲಿ ತಲಾ ಒಂದು ಸೇರಿದಂತೆ ಇಂತಹ ಕನಿಷ್ಠ ಐದು ಅರ್ಜಿಗಳು ಸಲ್ಲಿಕೆಯಾಗಿವೆ” ಎಂದು ಅದು ಹೇಳಿತ್ತು.

ಮತಾಂತರದ ಕುರಿತಾದ ತಮ್ಮ ಕಾನೂನುಗಳ ಕೆಲವು ನಿಬಂಧನೆಗಳನ್ನು ತಡೆಹಿಡಿದ ಆಯಾ ಹೈಕೋರ್ಟ್‌ಗಳ ಮಧ್ಯಂತರ ಆದೇಶಗಳನ್ನು ಪ್ರಶ್ನಿಸಿ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿವೆ.

ಜಮಿಯತ್ ಉಲಮಾ-ಐ-ಹಿಂದ್ ಸಂಘಟನೆಯು ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮತಾಂತರ ವಿರೋಧಿ ಕಾನೂನುಗಳ ವಿರುದ್ಧವೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತು ಮತ್ತು ಅಂತರ್ಧರ್ಮೀಯ ದಂಪತಿಗಳಿಗೆ “ಕಿರುಕುಳ” ನೀಡಲು ಮತ್ತು ಅವರನ್ನು ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿಸಲು ಅವುಗಳನ್ನು ಜಾರಿಗೆ ತರಲಾಗಿದೆ ಎಂದು ವಾದಿಸಿತ್ತು.

ಐದು ರಾಜ್ಯಗಳ ಎಲ್ಲಾ ಸ್ಥಳೀಯ ಕಾನೂನುಗಳ ನಿಬಂಧನೆಗಳು ವ್ಯಕ್ತಿಯೊಬ್ಬ ತನ್ನ ನಂಬಿಕೆಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸುತ್ತವೆ ಮತ್ತು ಈ ಮೂಲಕ ಅವರ ಗೌಪ್ಯತೆಯ ಉಲ್ಲಂಘನೆ ಮಾಡುತ್ತದೆ ಎಂದು ಜಮಿಯತ್ ಉಲಮಾ-ಐ-ಹಿಂದ್ ಹೇಳಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಾಂಗ್ಲಾದೇಶ| ಶೇಖ್ ಹಸೀನಾ ಸೇರಿದಂತೆ 19 ಜನರ ವಿರುದ್ಧ ಬಂಧನ ವಾರಂಟ್

ಬಾಂಗ್ಲಾದೇಶ| ಶೇಖ್ ಹಸೀನಾ ಸೇರಿದಂತೆ 19 ಜನರ ವಿರುದ್ಧ ಬಂಧನ ವಾರಂಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...