Homeಮುಖಪುಟಏಪ್ರಿಲ್ 16ರಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ಏಪ್ರಿಲ್ 16ರಂದು ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಸೇರಿದಂತೆ 10 ಅರ್ಜಿಗಳನ್ನು ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಏಪ್ರಿಲ್ 16ರಂದು  ನಡೆಸಲಿದೆ. ಸುಪ್ರೀಂಕೋರ್ಟ್ ವೆಬ್‌ಸೈಟ್ ಪ್ರಕಾರ, ವಿಚಾರಣೆಗಾಗಿ ತ್ರಿಸದಸ್ಯ ಪೀಠ ರಚನೆಯಾಗಿದ್ದು, ಮುಖ್ಯನ್ಯಾಯಮೂರ್ತಿ ಜೊತೆಗೆ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಇರಲಿದ್ದಾರೆ.

AIMPLB ಯ ಅರ್ಜಿಯ ಜೊತೆಗೆ, ಎಎಪಿ ನಾಯಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ಅಂಜುಮ್ ಖಾದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಮೊಹಮ್ಮದ್ ಫಜ್ಲುರ್ರಹೀಮ್ ಮತ್ತು ಆರ್‌ಜೆಡಿ ನಾಯಕ ಮನೋಜ್ ಕುಮಾರ್ ಝಾ ಅವರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಸುಪ್ರೀಂಕೋರ್ಟ್ ರಿಜಿಸ್ಟ್ರಿ ಇನ್ನೂ ಕೆಲವು ಅರ್ಜಿಗಳನ್ನು ಪೀಠದ ಮುಂದೆ ಪಟ್ಟಿ ಮಾಡಬೇಕಾಗಿದೆ.

ಏಪ್ರಿಲ್ 8 ರಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿ, ಈ ವಿಷಯದಲ್ಲಿ ಯಾವುದೇ ಆದೇಶ ಹೊರಡಿಸುವ ಮೊದಲು ವಿಚಾರಣೆ ನಡೆಸುವಂತೆ ಕೋರಿತು. ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಾಮಾನ್ಯವಾಗಿ ಒಂದು ಕಡೆಯವರು ಕೇವಿಯಟ್ ಸಲ್ಲಿಸಿ, ಅದನ್ನು ವಿಚಾರಣೆ ಮಾಡದೆ ಯಾವುದೇ ಆದೇಶಗಳನ್ನು ಹೊರಡಿಸದಂತೆ ನೋಡಿಕೊಳ್ಳುತ್ತದೆ.

ಕೇಂದ್ರ ಸರ್ಕಾರ ಮಂಗಳವಾರ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಅಧಿಸೂಚನೆ ಮಾಡಿದೆ. ಈ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಭಾರಿ ಚರ್ಚೆಗಳ ನಂತರ ಸಂಸತ್ತಿನಲ್ಲಿ ಅಂಗೀಕಾರ ಮಾಡಲಾಗಿತ್ತು. ನಂತರ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆಯಿತು. ಮಸೂದೆಯನ್ನು ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರು ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.

ಜಮಿಯತ್ ಉಲಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಕಾಂಗ್ರೆಸ್ ಸಂಸದರಾದ ಇಮ್ರಾನ್ ಪ್ರತಾಪ್‌ಗಢಿ ಮತ್ತು ಮೊಹಮ್ಮದ್ ಜಾವೇದ್ ಇತರ ಪ್ರಮುಖ ಅರ್ಜಿದಾರರಾಗಿದ್ದಾರೆ. ಏಪ್ರಿಲ್ 7 ರಂದು, ಸಿಜೆಐ ನೇತೃತ್ವದ ಪೀಠವು ಜಮಿಯತ್ ಉಲಮಾ-ಇ-ಹಿಂದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಅರ್ಜಿಗಳನ್ನು ಪಟ್ಟಿ ಮಾಡುವುದನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು.

ಡಿಎಂಕೆ ತನ್ನ ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ ಮೂಲಕ ಉನ್ನತ ನ್ಯಾಯಾಲಯಕ್ಕೆ ಮನವಿ ಮಾಡಿತ್ತು ಮತ್ತು ಪತ್ರಿಕಾ ಪ್ರಕಟಣೆಯಲ್ಲಿ, “ವ್ಯಾಪಕ ವಿರೋಧದ ಹೊರತಾಗಿಯೂ, ಜೆಪಿಸಿ ಸದಸ್ಯರು ಮತ್ತು ಇತರ ಪಾಲುದಾರರು ಎತ್ತಿದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಗಣಿಸದೆ ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ, 2025 ಅನ್ನು ಅಂಗೀಕರಿಸಿದೆ” ಎಂದು ಹೇಳಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ತಕ್ಷಣದ ಅನುಷ್ಠಾನವು ತಮಿಳುನಾಡಿನಲ್ಲಿ ಸುಮಾರು 50 ಲಕ್ಷ ಮುಸ್ಲಿಮರು ಮತ್ತು ದೇಶದ ಇತರ ಭಾಗಗಳಲ್ಲಿರುವ 20 ಕೋಟಿ ಮುಸ್ಲಿಮರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪೂರ್ವಾಗ್ರಹ ಪೀಡಿತವಾಗಿದೆ ಎಂದು ಡಿಎಂಕೆ ಹೇಳಿದೆ. ಏಪ್ರಿಲ್ 16ರಂದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...