Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

- Advertisement -
- Advertisement -

ಕನ್ನಡದಲ್ಲಿ ಕಲಾವಿದರು-ಲೇಖಕರು ಬರೆದ ಆತ್ಮಕಥೆಗಳು ಸಾಕಷ್ಟಿವೆ. ಆದರೆ ರಾಜಕಾರಣಿಗಳ ಆತ್ಮಕಥೆಗಳ ಸಂಖ್ಯೆ ಕಡಿಮೆ. ಇರುವ ಕೆಲವು ಆತ್ಮಕಥೆಗಳಾದರೂ ಆಧುನಿಕ ಕರ್ನಾಟಕದ ರಾಜಕೀಯ ಚರಿತ್ರೆಯ ಅಪೂರ್ವ ದಾಖಲೆಗಳಂತಿವೆ. ಇವುಗಳಲ್ಲಿ ಹಗರಿಬೊಮ್ಮನಹಳ್ಳಿಯ ಶಾಸಕರಾಗಿದ್ದ ಚನ್ನಬಸವನಗೌಡರ ‘ನಾನೊಬ್ಬ ಸಾರ್ವಜನಿಕ’ ಹಾಗೂ ಕರ್ನಾಟಕದ ಶಿಕ್ಷಣಮಂತ್ರಿಗಳಾಗಿದ್ದ ಬಿ.ಎ. ಮೊಹಿದೀನ್ ಅವರ ‘ನನ್ನೊಳಗಿನ ನಾನು’ ಸೇರಿವೆ.

ಇದೊಂದು ಹೇಳಿ ಬರೆಯಿಸಿದ ಆತ್ಮಕಥೆ. ಇದರಲ್ಲಿ ಲೇಖಕರ ವೈಯಕ್ತಿಕ, ವ್ಯಕ್ತಿತ್ವದ, ಕುಟುಂಬದ, ಬ್ಯಾರಿ ಸಮುದಾಯದ, ಕರಾವಳಿಯ ಹಾಗೂ ರಾಜ್ಯದ ರಾಜಕಾರಣದ ಸ್ತರಗಳಿವೆ. ಆತ್ಮಕಥೆಯ ಹೆಸರು ಸಾಂಕೇತಿಕವಾಗಿದೆ. ಬಾಳನ್ನೆಲ್ಲ ಸಾರ್ವಜನಿಕವಾಗಿ ಮತ್ತು ಬಹಿರ್ಮುಖಿಯಾಗಿ ಕಳೆದ ವ್ಯಕ್ತಿಯೊಬ್ಬರು ತಮ್ಮ ವೃದ್ಧಾಪ್ಯದ ಸಾವಿನ ಸನ್ನಿಧಿಯಲ್ಲಿ ಬದುಕನ್ನು ಒಮ್ಮೆ ಹಿಂತಿರುಗಿ ಕಾಣುವಾಗ ಹುಟ್ಟುವ ನೋಟದಲ್ಲಿ ಜನ್ಮತಳೆದ ಕೃತಿಯಿದು. ಇದು ತನ್ನನ್ನು ತಾನು ನೋಡಿಕೊಳ್ಳುವ ಆತ್ಮಾವಲೋಕನ ಕ್ರಮದಲ್ಲಿ ಹುಟ್ಟಿದ ಕೃತಿ. ಕರ್ನಾಟಕದ ರಾಜಕೀಯ ಚರಿತ್ರೆಯನ್ನು ಕಂಡರಿಸುತ್ತ ಅದರ ಮೌಲ್ಯಮಾಪನ ಮಾಡುವ ಕೃತಿ ಕೂಡ. ಲೇಖಕರು ಗಂಡಾಳಿಕೆ ಮನೋಭಾವದಿಂದ ಹೆಂಗರುಳಿನ ಅಂತಃಕರಣಕ್ಕೆ, ಹಿರಿತನದಿಂದ ಮಗುತನಕ್ಕೆ ರೂಪಾಂತರವಾದಂತೆ ಇಲ್ಲಿನ ಭಾವವಿದೆ. ಒಂಟಿತನದಲ್ಲಿ, ಏಕಾಂತದಲ್ಲಿ ಕಾಡುವ ಬಾಲ್ಯಕಾಲದ ನೆನಪುಗಳು ಬರುವ ಕಡೆ ಆತ್ಮಕಥೆ ಆಪ್ತವಾಗಿದೆ.

ಆತ್ಮಕಥೆಯ ವಿಶೇಷವೆಂದರೆ, ಸ್ವಂತ ವ್ಯಕ್ತಿತ್ವದ, ಕರ್ನಾಟಕ ರಾಜಕಾರಣದ, ಬ್ಯಾರಿ ಸಮುದಾಯದ ಹಾಗೂ ಕರಾವಳಿಯ ಸಾಮಾಜಿಕ ಸನ್ನಿವೇಶದ ಚಿತ್ರಗಳನ್ನು ಕೊಡುವುದು; ಮಾತ್ರವಲ್ಲದೆ, ಅವುಗಳ ವಿಮರ್ಶೆಯನ್ನೂ ಮಾಡಿರುವುದು. ಸೌದಿ ಅರೇಬಿಯಾದಲ್ಲಿ ಇರುವ ವಂಶಾಡಳಿತದ ರಾಜಪ್ರಭುತ್ವವು ಪೈಗಂಬರ್ ಬಯಸಿದ ಖಲೀಫಾ ಪದ್ಧತಿಗೆ ವಿರುದ್ಧವಾಗಿದೆ ಎಂದು ಲೇಖಕರು ಒಂದೆಡೆ ಹೇಳುತ್ತಾರೆ. ಆತ್ಮಕಥೆ ಮುಗಿಯುವುದು ಮಡದಿಯ ಜತೆ ಗಂಡಾಳಿಕೆಯ ಮನೋಭಾವವುಳ್ಳ ತಾನು ನಡೆದುಕೊಂಡ ಬಗೆಗಿನ ಪರಿತಾಪದಿಂದ. ಬೇರೆಬೇರೆ ಧರ್ಮ ಜಾತಿಗಳ ಮಕ್ಕಳೊಂದಿಗೆ ಬೆರೆಯದ ಮದ್ರಸಾ ಶಿಕ್ಷಣದ ಪದ್ಧತಿಯ ಐಸೊಲೇಶನ್ ಬಗ್ಗೆ ಇಲ್ಲಿ ವಿಮರ್ಶೆಯಿದೆ. ಸಂಪ್ರದಾಯವಾದಿ ಮೌಲವಿಗಳ ಟೀಕೆಯಿದೆ. ಲೇಖಕರು ಅವರೊಟ್ಟಿಗೆ ಚರ್ಚೆ ಕೂಡ ಮಾಡುತ್ತಾರೆ. ಮದ್ರಸಾಗಳ ಧಾರ್ಮಿಕ ಶಿಕ್ಷಣವನ್ನು ಲೌಕಿಕವಾಗಿ ಉಪಯುಕ್ತವಾಗುವ ವಿದ್ಯೆಗಳನ್ನು ಕಲಿವ ಜಾಗವಾಗಿಸಬೇಕೆಂದೂ, ಕ್ರೈಸ್ತ ಮಿಶನರಿ ಶಾಲೆಗಳಿರುವಂತೆ ಎಲ್ಲ ಧರ್ಮ ಜಾತಿಯ ಮಕ್ಕಳು ಕಲಿಯುವಂತೆ ವಿಸ್ತರಣೆ ಪಡೆಯಬೇಕೆಂದೂ, ಅಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲ ಧರ್ಮದವರಿಗೆ ಸಂಬಂಧಪಟ್ಟಿರಬೇಕೆಂದೂ ಅಭಿಪ್ರಾಯ ಪಡುವರು. ಮಹಿಳಾ ಶಿಕ್ಷಣದ ಪ್ರಾಮುಖ್ಯದ ಬಗ್ಗೆ ಪ್ರಸ್ತಾಪಿಸುವರು. ಈ ಕಾರಣಕ್ಕೆ ಆತ್ಮಕಥೆಯು ಸಮಾಜ ಸುಧಾರಣವಾದಿಯೊಬ್ಬನ ಜಾತ್ಯತೀತ ಚಿಂತನೆಯ ದಾಖಲೆ.

ಇದನ್ನೂ ಓದಿ: ಪುಸ್ತಕ ಪರಿಚಯ: ಸದನದಲ್ಲಿ ಭೂಪತಿ

ಲೇಖಕರು ಒಂದೆಡೆ ಹೀಗೆ ಹೇಳುತ್ತಾರೆ: “ಮಸೀದಿ ಮದ್ರಸಾಗಳ ಆವರಣದೊಳಗಿರುವ ಶಾಲೆಗಳಲ್ಲಿ ಶಾಲಾ ವಾರ್ಷಿಕೋತ್ಸವ ಸಂದರ್ಭಗಳಲ್ಲಿ ಹಾಡು ನಾಟಕ ನೃತ್ಯ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲು ವಿದ್ಯಾರ್ಥಿಗಳಿಗೆ ಅಲ್ಲಿಯ ವ್ಯವಸ್ಥಾಪಕರು, ಧಾರ್ಮಿಕ ನಾಯಕರು ಬಿಡುತ್ತಿಲ್ಲ ಎಂಬ ಆರೋಪ ಕೂಡ ಇದೆ. ಇದು ತಪ್ಪು. ಎಳೆಯ ಮಕ್ಕಳನ್ನು ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ. ಇದೂ ಶಿಕ್ಷಣದ ಒಂದು ಅಂಗವಾಗಿದೆ. ಇಂದಿನ ಕಾಲದ ಅಗತ್ಯವೂ ಆಗಿದೆ. ಇದರಿಂದ ಮಕ್ಕಳ ಪ್ರತಿಭೆ ಹೊರಹೊಮ್ಮಿ ಅರಳಿ ಬೆಳೆಯಲು ಸಹಕಾರಿಯಾಗುತ್ತದೆ ಮತ್ತು ಇದು ಸೌಹಾರ್ದ ಬದುಕಿಗೆ ತುಂಬಾ ಅಗತ್ಯವೂ ಆಗಿದೆ.”

ಆತ್ಮಕಥೆಯು 70-80ರ ದಶಕದ ಕೂಡುಬದುಕಿನ ಚಿತ್ರಗಳನ್ನು ಕೊಡುತ್ತದೆ. ಅದರಲ್ಲಿ ಮುಸ್ಲಿಮರು ಭೂತದಕೋಲ, ಯಕ್ಷಗಾನ, ಕೋಳಿಅಂಕ, ಕಂಬಳದಲ್ಲಿ ಭಾಗವಹಿಸುವ ವಿವರಗಳಿವೆ. ಬಂಟರು ಸ್ಥಳೀಯ ಉರುಸನ್ನು ನಡೆಸಿಕೊಡುವ ವಿವರಗಳಿವೆ. ಇಲ್ಲೊಂದು ವಿಶೇಷ ಪ್ರಸಂಗ ಬರುತ್ತದೆ: ಯಕ್ಷಗಾನಕ್ಕೆ ಹೋಗಲು ಹಟಮಾಡುವ ಮೊಮ್ಮಗನನ್ನು ಮನೆಯ ಅಜ್ಜಿ ನಿರಾಕರಿಸಿ, ಅವನಿಗೆ ಬುದ್ಧಿಹೇಳಲು ಮೌಲವಿಯೊಬ್ಬರಿಗೆ ಒಪ್ಪಿಸುವಳು. ಆದರೆ ಆ ಮೌಲವಿಯು ಮಗುವಿಗೆ ಹಣಕೊಟ್ಟು ನಿದ್ದೆಗೆಡದಂತೆ ಎಚ್ಚರವಹಿಸಿ, ಆಟಕ್ಕೆ ಗುಪ್ತವಾಗಿ ಕಳಿಸಿಕೊಡುತ್ತಾರೆ. ಮಕ್ಕಳನ್ನು ಅವರ ಸಹಜ ಇಚ್ಛೆಗೆ ವಿರುದ್ಧವಾಗಿ ಹಿಡಿದಿಡಬಾರದು ಎಂಬ ಶಿಕ್ಷಕ ಪ್ರಜ್ಞೆಯ ಜತೆಗೆ, ಮಕ್ಕಳು ಸ್ಥಳೀಯ ಪರಿಸರದೊಂದಿಗೆ ಸಹಜವಾಗಿ ಬೆರೆಯುವ ಸನ್ನಿವೇಶವೂ ಇರಬೇಕೆಂಬ ನಾಗರಿಕ ಪ್ರಜ್ಞೆಯನ್ನು ಪ್ರಕಟಿಸುತ್ತಾರೆ. ಇದಕ್ಕೆ ಪೂರಕವಾಗಿ ಆತ್ಮಕಥೆಯು ಬ್ಯಾರಿ ಮುಸ್ಲಿಮರ ಸಂಸ್ಕೃತಿಯ ಚಿತ್ರಗಳನ್ನು ಕೊಡುವುದು. ಬ್ಯಾರಿಗಳ ಮದುವೆ ಬಟ್ಟೆಬರೆ ಊಟಆಟ ಉರುಸುಗಳನ್ನು ದಟ್ಟವಾಗಿ ಕಟ್ಟಿಕೊಡುತ್ತದೆ.

ಈ ಕಾರಣದಿಂದ ಆತ್ಮಕತೆಯು ಮುಸ್ಲಿಮರ ದಟ್ಟವಾದ ಜಾನಪದ ಸಂಸ್ಕೃತಿಯನ್ನು ಮೂಲಭೂತವಾದವೂ; ಕರಾವಳಿಯ ಧಾರ್ಮಿಕ ಕೂಡುಬಾಳ್ವೆಯ ಬದುಕನ್ನು ಕೋಮುವಾದವೂ ಕಳೆದುಹಾಕಿದವು ಎಂಬ ವಿಷಾದಕರ ದನಿಯನ್ನು ಒಳಗೊಂಡಿದೆ. ಇದರ ಭಾಗವಾಗಿಯೇ ಇಲ್ಲಿ ಬರುವ ಸುರತ್ಕಲ್ ಕೋಮುಗಲಭೆಯ ವಿವರಗಳನ್ನು ಗಮನಿಸಬೇಕು. ಕರಾವಳಿಯಲ್ಲಿ ಆರ್ಥಿಕ ಬಡತನವಿದ್ದಾಗ ಅದು ಸಾಂಸ್ಕೃತಿಕವಾಗಿ ಸಿರಿವಂತವಾಗಿತ್ತು ಮತ್ತು ಕೂಡುಬಾಳಿನ ಬದುಕನ್ನು ಹೊಂದಿತ್ತು. ಈಗ ಆರ್ಥಿಕ ಏಳಿಗೆಯಿದೆ; ಸಂಪತ್ತಿದೆ. ಆದರೆ ಮನುಷ್ಯ ಸಂಬಂಧಗಳು ಹಾಗೂ ಸಾಮಾಜಿಕ ಬದುಕು ವಿಘಟಿತವಾಗಿದೆ ಎಂಬ ವಿಷಾದವನ್ನು ಆತ್ಮಕಥೆ ಓದುಗರಲ್ಲಿ ಮೂಡಿಸುತ್ತದೆ. ಹಲಾಲ್, ಹಿಜಾಬ್, ಆಜಾನ್, ಟಿಪ್ಪು, ಉರಿಗೌಡ-ನಂಜೇಗೌಡ, ವ್ಯಾಪಾರ ನಿಷೇಧ, ಮೀಸಲಾತಿ ರದ್ದತಿ ಮೊದಲಾದ ವಿದ್ಯಮಾನಗಳು ಕಳೆದ ಒಂದು ವರ್ಷದಿಂದ ಕರ್ನಾಟಕದ ರಾಜಕೀಯ ಸಾಮಾಜಿಕ ಆರ್ಥಿಕ ಬದುಕನ್ನು ಕದಡಿವೆ. ಈ ಹಿನ್ನೆಲೆಯಲ್ಲಿ ಈ ಆತ್ಮಕಥೆಯು, ಸಾಂಸ್ಕೃತಿಕವಾಗಿ ಕಳೆದುಹೋದ ಸುವರ್ಣಯುಗದಂತೆ, ಸಮಾಜವಾದಿ ರಾಜಕಾರಣದ ಅಧ್ಯಾಯದಂತೆ ಭಾಸವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...