Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

- Advertisement -
- Advertisement -

ಕನ್ನಡದಲ್ಲಿ ಕಲಾವಿದರು-ಲೇಖಕರು ಬರೆದ ಆತ್ಮಕಥೆಗಳು ಸಾಕಷ್ಟಿವೆ. ಆದರೆ ರಾಜಕಾರಣಿಗಳ ಆತ್ಮಕಥೆಗಳ ಸಂಖ್ಯೆ ಕಡಿಮೆ. ಇರುವ ಕೆಲವು ಆತ್ಮಕಥೆಗಳಾದರೂ ಆಧುನಿಕ ಕರ್ನಾಟಕದ ರಾಜಕೀಯ ಚರಿತ್ರೆಯ ಅಪೂರ್ವ ದಾಖಲೆಗಳಂತಿವೆ. ಇವುಗಳಲ್ಲಿ ಹಗರಿಬೊಮ್ಮನಹಳ್ಳಿಯ ಶಾಸಕರಾಗಿದ್ದ ಚನ್ನಬಸವನಗೌಡರ ‘ನಾನೊಬ್ಬ ಸಾರ್ವಜನಿಕ’ ಹಾಗೂ ಕರ್ನಾಟಕದ ಶಿಕ್ಷಣಮಂತ್ರಿಗಳಾಗಿದ್ದ ಬಿ.ಎ. ಮೊಹಿದೀನ್ ಅವರ ‘ನನ್ನೊಳಗಿನ ನಾನು’ ಸೇರಿವೆ.

ಇದೊಂದು ಹೇಳಿ ಬರೆಯಿಸಿದ ಆತ್ಮಕಥೆ. ಇದರಲ್ಲಿ ಲೇಖಕರ ವೈಯಕ್ತಿಕ, ವ್ಯಕ್ತಿತ್ವದ, ಕುಟುಂಬದ, ಬ್ಯಾರಿ ಸಮುದಾಯದ, ಕರಾವಳಿಯ ಹಾಗೂ ರಾಜ್ಯದ ರಾಜಕಾರಣದ ಸ್ತರಗಳಿವೆ. ಆತ್ಮಕಥೆಯ ಹೆಸರು ಸಾಂಕೇತಿಕವಾಗಿದೆ. ಬಾಳನ್ನೆಲ್ಲ ಸಾರ್ವಜನಿಕವಾಗಿ ಮತ್ತು ಬಹಿರ್ಮುಖಿಯಾಗಿ ಕಳೆದ ವ್ಯಕ್ತಿಯೊಬ್ಬರು ತಮ್ಮ ವೃದ್ಧಾಪ್ಯದ ಸಾವಿನ ಸನ್ನಿಧಿಯಲ್ಲಿ ಬದುಕನ್ನು ಒಮ್ಮೆ ಹಿಂತಿರುಗಿ ಕಾಣುವಾಗ ಹುಟ್ಟುವ ನೋಟದಲ್ಲಿ ಜನ್ಮತಳೆದ ಕೃತಿಯಿದು. ಇದು ತನ್ನನ್ನು ತಾನು ನೋಡಿಕೊಳ್ಳುವ ಆತ್ಮಾವಲೋಕನ ಕ್ರಮದಲ್ಲಿ ಹುಟ್ಟಿದ ಕೃತಿ. ಕರ್ನಾಟಕದ ರಾಜಕೀಯ ಚರಿತ್ರೆಯನ್ನು ಕಂಡರಿಸುತ್ತ ಅದರ ಮೌಲ್ಯಮಾಪನ ಮಾಡುವ ಕೃತಿ ಕೂಡ. ಲೇಖಕರು ಗಂಡಾಳಿಕೆ ಮನೋಭಾವದಿಂದ ಹೆಂಗರುಳಿನ ಅಂತಃಕರಣಕ್ಕೆ, ಹಿರಿತನದಿಂದ ಮಗುತನಕ್ಕೆ ರೂಪಾಂತರವಾದಂತೆ ಇಲ್ಲಿನ ಭಾವವಿದೆ. ಒಂಟಿತನದಲ್ಲಿ, ಏಕಾಂತದಲ್ಲಿ ಕಾಡುವ ಬಾಲ್ಯಕಾಲದ ನೆನಪುಗಳು ಬರುವ ಕಡೆ ಆತ್ಮಕಥೆ ಆಪ್ತವಾಗಿದೆ.

ಆತ್ಮಕಥೆಯ ವಿಶೇಷವೆಂದರೆ, ಸ್ವಂತ ವ್ಯಕ್ತಿತ್ವದ, ಕರ್ನಾಟಕ ರಾಜಕಾರಣದ, ಬ್ಯಾರಿ ಸಮುದಾಯದ ಹಾಗೂ ಕರಾವಳಿಯ ಸಾಮಾಜಿಕ ಸನ್ನಿವೇಶದ ಚಿತ್ರಗಳನ್ನು ಕೊಡುವುದು; ಮಾತ್ರವಲ್ಲದೆ, ಅವುಗಳ ವಿಮರ್ಶೆಯನ್ನೂ ಮಾಡಿರುವುದು. ಸೌದಿ ಅರೇಬಿಯಾದಲ್ಲಿ ಇರುವ ವಂಶಾಡಳಿತದ ರಾಜಪ್ರಭುತ್ವವು ಪೈಗಂಬರ್ ಬಯಸಿದ ಖಲೀಫಾ ಪದ್ಧತಿಗೆ ವಿರುದ್ಧವಾಗಿದೆ ಎಂದು ಲೇಖಕರು ಒಂದೆಡೆ ಹೇಳುತ್ತಾರೆ. ಆತ್ಮಕಥೆ ಮುಗಿಯುವುದು ಮಡದಿಯ ಜತೆ ಗಂಡಾಳಿಕೆಯ ಮನೋಭಾವವುಳ್ಳ ತಾನು ನಡೆದುಕೊಂಡ ಬಗೆಗಿನ ಪರಿತಾಪದಿಂದ. ಬೇರೆಬೇರೆ ಧರ್ಮ ಜಾತಿಗಳ ಮಕ್ಕಳೊಂದಿಗೆ ಬೆರೆಯದ ಮದ್ರಸಾ ಶಿಕ್ಷಣದ ಪದ್ಧತಿಯ ಐಸೊಲೇಶನ್ ಬಗ್ಗೆ ಇಲ್ಲಿ ವಿಮರ್ಶೆಯಿದೆ. ಸಂಪ್ರದಾಯವಾದಿ ಮೌಲವಿಗಳ ಟೀಕೆಯಿದೆ. ಲೇಖಕರು ಅವರೊಟ್ಟಿಗೆ ಚರ್ಚೆ ಕೂಡ ಮಾಡುತ್ತಾರೆ. ಮದ್ರಸಾಗಳ ಧಾರ್ಮಿಕ ಶಿಕ್ಷಣವನ್ನು ಲೌಕಿಕವಾಗಿ ಉಪಯುಕ್ತವಾಗುವ ವಿದ್ಯೆಗಳನ್ನು ಕಲಿವ ಜಾಗವಾಗಿಸಬೇಕೆಂದೂ, ಕ್ರೈಸ್ತ ಮಿಶನರಿ ಶಾಲೆಗಳಿರುವಂತೆ ಎಲ್ಲ ಧರ್ಮ ಜಾತಿಯ ಮಕ್ಕಳು ಕಲಿಯುವಂತೆ ವಿಸ್ತರಣೆ ಪಡೆಯಬೇಕೆಂದೂ, ಅಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲ ಧರ್ಮದವರಿಗೆ ಸಂಬಂಧಪಟ್ಟಿರಬೇಕೆಂದೂ ಅಭಿಪ್ರಾಯ ಪಡುವರು. ಮಹಿಳಾ ಶಿಕ್ಷಣದ ಪ್ರಾಮುಖ್ಯದ ಬಗ್ಗೆ ಪ್ರಸ್ತಾಪಿಸುವರು. ಈ ಕಾರಣಕ್ಕೆ ಆತ್ಮಕಥೆಯು ಸಮಾಜ ಸುಧಾರಣವಾದಿಯೊಬ್ಬನ ಜಾತ್ಯತೀತ ಚಿಂತನೆಯ ದಾಖಲೆ.

ಇದನ್ನೂ ಓದಿ: ಪುಸ್ತಕ ಪರಿಚಯ: ಸದನದಲ್ಲಿ ಭೂಪತಿ

ಲೇಖಕರು ಒಂದೆಡೆ ಹೀಗೆ ಹೇಳುತ್ತಾರೆ: “ಮಸೀದಿ ಮದ್ರಸಾಗಳ ಆವರಣದೊಳಗಿರುವ ಶಾಲೆಗಳಲ್ಲಿ ಶಾಲಾ ವಾರ್ಷಿಕೋತ್ಸವ ಸಂದರ್ಭಗಳಲ್ಲಿ ಹಾಡು ನಾಟಕ ನೃತ್ಯ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲು ವಿದ್ಯಾರ್ಥಿಗಳಿಗೆ ಅಲ್ಲಿಯ ವ್ಯವಸ್ಥಾಪಕರು, ಧಾರ್ಮಿಕ ನಾಯಕರು ಬಿಡುತ್ತಿಲ್ಲ ಎಂಬ ಆರೋಪ ಕೂಡ ಇದೆ. ಇದು ತಪ್ಪು. ಎಳೆಯ ಮಕ್ಕಳನ್ನು ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ. ಇದೂ ಶಿಕ್ಷಣದ ಒಂದು ಅಂಗವಾಗಿದೆ. ಇಂದಿನ ಕಾಲದ ಅಗತ್ಯವೂ ಆಗಿದೆ. ಇದರಿಂದ ಮಕ್ಕಳ ಪ್ರತಿಭೆ ಹೊರಹೊಮ್ಮಿ ಅರಳಿ ಬೆಳೆಯಲು ಸಹಕಾರಿಯಾಗುತ್ತದೆ ಮತ್ತು ಇದು ಸೌಹಾರ್ದ ಬದುಕಿಗೆ ತುಂಬಾ ಅಗತ್ಯವೂ ಆಗಿದೆ.”

ಆತ್ಮಕಥೆಯು 70-80ರ ದಶಕದ ಕೂಡುಬದುಕಿನ ಚಿತ್ರಗಳನ್ನು ಕೊಡುತ್ತದೆ. ಅದರಲ್ಲಿ ಮುಸ್ಲಿಮರು ಭೂತದಕೋಲ, ಯಕ್ಷಗಾನ, ಕೋಳಿಅಂಕ, ಕಂಬಳದಲ್ಲಿ ಭಾಗವಹಿಸುವ ವಿವರಗಳಿವೆ. ಬಂಟರು ಸ್ಥಳೀಯ ಉರುಸನ್ನು ನಡೆಸಿಕೊಡುವ ವಿವರಗಳಿವೆ. ಇಲ್ಲೊಂದು ವಿಶೇಷ ಪ್ರಸಂಗ ಬರುತ್ತದೆ: ಯಕ್ಷಗಾನಕ್ಕೆ ಹೋಗಲು ಹಟಮಾಡುವ ಮೊಮ್ಮಗನನ್ನು ಮನೆಯ ಅಜ್ಜಿ ನಿರಾಕರಿಸಿ, ಅವನಿಗೆ ಬುದ್ಧಿಹೇಳಲು ಮೌಲವಿಯೊಬ್ಬರಿಗೆ ಒಪ್ಪಿಸುವಳು. ಆದರೆ ಆ ಮೌಲವಿಯು ಮಗುವಿಗೆ ಹಣಕೊಟ್ಟು ನಿದ್ದೆಗೆಡದಂತೆ ಎಚ್ಚರವಹಿಸಿ, ಆಟಕ್ಕೆ ಗುಪ್ತವಾಗಿ ಕಳಿಸಿಕೊಡುತ್ತಾರೆ. ಮಕ್ಕಳನ್ನು ಅವರ ಸಹಜ ಇಚ್ಛೆಗೆ ವಿರುದ್ಧವಾಗಿ ಹಿಡಿದಿಡಬಾರದು ಎಂಬ ಶಿಕ್ಷಕ ಪ್ರಜ್ಞೆಯ ಜತೆಗೆ, ಮಕ್ಕಳು ಸ್ಥಳೀಯ ಪರಿಸರದೊಂದಿಗೆ ಸಹಜವಾಗಿ ಬೆರೆಯುವ ಸನ್ನಿವೇಶವೂ ಇರಬೇಕೆಂಬ ನಾಗರಿಕ ಪ್ರಜ್ಞೆಯನ್ನು ಪ್ರಕಟಿಸುತ್ತಾರೆ. ಇದಕ್ಕೆ ಪೂರಕವಾಗಿ ಆತ್ಮಕಥೆಯು ಬ್ಯಾರಿ ಮುಸ್ಲಿಮರ ಸಂಸ್ಕೃತಿಯ ಚಿತ್ರಗಳನ್ನು ಕೊಡುವುದು. ಬ್ಯಾರಿಗಳ ಮದುವೆ ಬಟ್ಟೆಬರೆ ಊಟಆಟ ಉರುಸುಗಳನ್ನು ದಟ್ಟವಾಗಿ ಕಟ್ಟಿಕೊಡುತ್ತದೆ.

ಈ ಕಾರಣದಿಂದ ಆತ್ಮಕತೆಯು ಮುಸ್ಲಿಮರ ದಟ್ಟವಾದ ಜಾನಪದ ಸಂಸ್ಕೃತಿಯನ್ನು ಮೂಲಭೂತವಾದವೂ; ಕರಾವಳಿಯ ಧಾರ್ಮಿಕ ಕೂಡುಬಾಳ್ವೆಯ ಬದುಕನ್ನು ಕೋಮುವಾದವೂ ಕಳೆದುಹಾಕಿದವು ಎಂಬ ವಿಷಾದಕರ ದನಿಯನ್ನು ಒಳಗೊಂಡಿದೆ. ಇದರ ಭಾಗವಾಗಿಯೇ ಇಲ್ಲಿ ಬರುವ ಸುರತ್ಕಲ್ ಕೋಮುಗಲಭೆಯ ವಿವರಗಳನ್ನು ಗಮನಿಸಬೇಕು. ಕರಾವಳಿಯಲ್ಲಿ ಆರ್ಥಿಕ ಬಡತನವಿದ್ದಾಗ ಅದು ಸಾಂಸ್ಕೃತಿಕವಾಗಿ ಸಿರಿವಂತವಾಗಿತ್ತು ಮತ್ತು ಕೂಡುಬಾಳಿನ ಬದುಕನ್ನು ಹೊಂದಿತ್ತು. ಈಗ ಆರ್ಥಿಕ ಏಳಿಗೆಯಿದೆ; ಸಂಪತ್ತಿದೆ. ಆದರೆ ಮನುಷ್ಯ ಸಂಬಂಧಗಳು ಹಾಗೂ ಸಾಮಾಜಿಕ ಬದುಕು ವಿಘಟಿತವಾಗಿದೆ ಎಂಬ ವಿಷಾದವನ್ನು ಆತ್ಮಕಥೆ ಓದುಗರಲ್ಲಿ ಮೂಡಿಸುತ್ತದೆ. ಹಲಾಲ್, ಹಿಜಾಬ್, ಆಜಾನ್, ಟಿಪ್ಪು, ಉರಿಗೌಡ-ನಂಜೇಗೌಡ, ವ್ಯಾಪಾರ ನಿಷೇಧ, ಮೀಸಲಾತಿ ರದ್ದತಿ ಮೊದಲಾದ ವಿದ್ಯಮಾನಗಳು ಕಳೆದ ಒಂದು ವರ್ಷದಿಂದ ಕರ್ನಾಟಕದ ರಾಜಕೀಯ ಸಾಮಾಜಿಕ ಆರ್ಥಿಕ ಬದುಕನ್ನು ಕದಡಿವೆ. ಈ ಹಿನ್ನೆಲೆಯಲ್ಲಿ ಈ ಆತ್ಮಕಥೆಯು, ಸಾಂಸ್ಕೃತಿಕವಾಗಿ ಕಳೆದುಹೋದ ಸುವರ್ಣಯುಗದಂತೆ, ಸಮಾಜವಾದಿ ರಾಜಕಾರಣದ ಅಧ್ಯಾಯದಂತೆ ಭಾಸವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...