Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

- Advertisement -
- Advertisement -

ಕನ್ನಡದಲ್ಲಿ ಕಲಾವಿದರು-ಲೇಖಕರು ಬರೆದ ಆತ್ಮಕಥೆಗಳು ಸಾಕಷ್ಟಿವೆ. ಆದರೆ ರಾಜಕಾರಣಿಗಳ ಆತ್ಮಕಥೆಗಳ ಸಂಖ್ಯೆ ಕಡಿಮೆ. ಇರುವ ಕೆಲವು ಆತ್ಮಕಥೆಗಳಾದರೂ ಆಧುನಿಕ ಕರ್ನಾಟಕದ ರಾಜಕೀಯ ಚರಿತ್ರೆಯ ಅಪೂರ್ವ ದಾಖಲೆಗಳಂತಿವೆ. ಇವುಗಳಲ್ಲಿ ಹಗರಿಬೊಮ್ಮನಹಳ್ಳಿಯ ಶಾಸಕರಾಗಿದ್ದ ಚನ್ನಬಸವನಗೌಡರ ‘ನಾನೊಬ್ಬ ಸಾರ್ವಜನಿಕ’ ಹಾಗೂ ಕರ್ನಾಟಕದ ಶಿಕ್ಷಣಮಂತ್ರಿಗಳಾಗಿದ್ದ ಬಿ.ಎ. ಮೊಹಿದೀನ್ ಅವರ ‘ನನ್ನೊಳಗಿನ ನಾನು’ ಸೇರಿವೆ.

ಇದೊಂದು ಹೇಳಿ ಬರೆಯಿಸಿದ ಆತ್ಮಕಥೆ. ಇದರಲ್ಲಿ ಲೇಖಕರ ವೈಯಕ್ತಿಕ, ವ್ಯಕ್ತಿತ್ವದ, ಕುಟುಂಬದ, ಬ್ಯಾರಿ ಸಮುದಾಯದ, ಕರಾವಳಿಯ ಹಾಗೂ ರಾಜ್ಯದ ರಾಜಕಾರಣದ ಸ್ತರಗಳಿವೆ. ಆತ್ಮಕಥೆಯ ಹೆಸರು ಸಾಂಕೇತಿಕವಾಗಿದೆ. ಬಾಳನ್ನೆಲ್ಲ ಸಾರ್ವಜನಿಕವಾಗಿ ಮತ್ತು ಬಹಿರ್ಮುಖಿಯಾಗಿ ಕಳೆದ ವ್ಯಕ್ತಿಯೊಬ್ಬರು ತಮ್ಮ ವೃದ್ಧಾಪ್ಯದ ಸಾವಿನ ಸನ್ನಿಧಿಯಲ್ಲಿ ಬದುಕನ್ನು ಒಮ್ಮೆ ಹಿಂತಿರುಗಿ ಕಾಣುವಾಗ ಹುಟ್ಟುವ ನೋಟದಲ್ಲಿ ಜನ್ಮತಳೆದ ಕೃತಿಯಿದು. ಇದು ತನ್ನನ್ನು ತಾನು ನೋಡಿಕೊಳ್ಳುವ ಆತ್ಮಾವಲೋಕನ ಕ್ರಮದಲ್ಲಿ ಹುಟ್ಟಿದ ಕೃತಿ. ಕರ್ನಾಟಕದ ರಾಜಕೀಯ ಚರಿತ್ರೆಯನ್ನು ಕಂಡರಿಸುತ್ತ ಅದರ ಮೌಲ್ಯಮಾಪನ ಮಾಡುವ ಕೃತಿ ಕೂಡ. ಲೇಖಕರು ಗಂಡಾಳಿಕೆ ಮನೋಭಾವದಿಂದ ಹೆಂಗರುಳಿನ ಅಂತಃಕರಣಕ್ಕೆ, ಹಿರಿತನದಿಂದ ಮಗುತನಕ್ಕೆ ರೂಪಾಂತರವಾದಂತೆ ಇಲ್ಲಿನ ಭಾವವಿದೆ. ಒಂಟಿತನದಲ್ಲಿ, ಏಕಾಂತದಲ್ಲಿ ಕಾಡುವ ಬಾಲ್ಯಕಾಲದ ನೆನಪುಗಳು ಬರುವ ಕಡೆ ಆತ್ಮಕಥೆ ಆಪ್ತವಾಗಿದೆ.

ಆತ್ಮಕಥೆಯ ವಿಶೇಷವೆಂದರೆ, ಸ್ವಂತ ವ್ಯಕ್ತಿತ್ವದ, ಕರ್ನಾಟಕ ರಾಜಕಾರಣದ, ಬ್ಯಾರಿ ಸಮುದಾಯದ ಹಾಗೂ ಕರಾವಳಿಯ ಸಾಮಾಜಿಕ ಸನ್ನಿವೇಶದ ಚಿತ್ರಗಳನ್ನು ಕೊಡುವುದು; ಮಾತ್ರವಲ್ಲದೆ, ಅವುಗಳ ವಿಮರ್ಶೆಯನ್ನೂ ಮಾಡಿರುವುದು. ಸೌದಿ ಅರೇಬಿಯಾದಲ್ಲಿ ಇರುವ ವಂಶಾಡಳಿತದ ರಾಜಪ್ರಭುತ್ವವು ಪೈಗಂಬರ್ ಬಯಸಿದ ಖಲೀಫಾ ಪದ್ಧತಿಗೆ ವಿರುದ್ಧವಾಗಿದೆ ಎಂದು ಲೇಖಕರು ಒಂದೆಡೆ ಹೇಳುತ್ತಾರೆ. ಆತ್ಮಕಥೆ ಮುಗಿಯುವುದು ಮಡದಿಯ ಜತೆ ಗಂಡಾಳಿಕೆಯ ಮನೋಭಾವವುಳ್ಳ ತಾನು ನಡೆದುಕೊಂಡ ಬಗೆಗಿನ ಪರಿತಾಪದಿಂದ. ಬೇರೆಬೇರೆ ಧರ್ಮ ಜಾತಿಗಳ ಮಕ್ಕಳೊಂದಿಗೆ ಬೆರೆಯದ ಮದ್ರಸಾ ಶಿಕ್ಷಣದ ಪದ್ಧತಿಯ ಐಸೊಲೇಶನ್ ಬಗ್ಗೆ ಇಲ್ಲಿ ವಿಮರ್ಶೆಯಿದೆ. ಸಂಪ್ರದಾಯವಾದಿ ಮೌಲವಿಗಳ ಟೀಕೆಯಿದೆ. ಲೇಖಕರು ಅವರೊಟ್ಟಿಗೆ ಚರ್ಚೆ ಕೂಡ ಮಾಡುತ್ತಾರೆ. ಮದ್ರಸಾಗಳ ಧಾರ್ಮಿಕ ಶಿಕ್ಷಣವನ್ನು ಲೌಕಿಕವಾಗಿ ಉಪಯುಕ್ತವಾಗುವ ವಿದ್ಯೆಗಳನ್ನು ಕಲಿವ ಜಾಗವಾಗಿಸಬೇಕೆಂದೂ, ಕ್ರೈಸ್ತ ಮಿಶನರಿ ಶಾಲೆಗಳಿರುವಂತೆ ಎಲ್ಲ ಧರ್ಮ ಜಾತಿಯ ಮಕ್ಕಳು ಕಲಿಯುವಂತೆ ವಿಸ್ತರಣೆ ಪಡೆಯಬೇಕೆಂದೂ, ಅಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲ ಧರ್ಮದವರಿಗೆ ಸಂಬಂಧಪಟ್ಟಿರಬೇಕೆಂದೂ ಅಭಿಪ್ರಾಯ ಪಡುವರು. ಮಹಿಳಾ ಶಿಕ್ಷಣದ ಪ್ರಾಮುಖ್ಯದ ಬಗ್ಗೆ ಪ್ರಸ್ತಾಪಿಸುವರು. ಈ ಕಾರಣಕ್ಕೆ ಆತ್ಮಕಥೆಯು ಸಮಾಜ ಸುಧಾರಣವಾದಿಯೊಬ್ಬನ ಜಾತ್ಯತೀತ ಚಿಂತನೆಯ ದಾಖಲೆ.

ಇದನ್ನೂ ಓದಿ: ಪುಸ್ತಕ ಪರಿಚಯ: ಸದನದಲ್ಲಿ ಭೂಪತಿ

ಲೇಖಕರು ಒಂದೆಡೆ ಹೀಗೆ ಹೇಳುತ್ತಾರೆ: “ಮಸೀದಿ ಮದ್ರಸಾಗಳ ಆವರಣದೊಳಗಿರುವ ಶಾಲೆಗಳಲ್ಲಿ ಶಾಲಾ ವಾರ್ಷಿಕೋತ್ಸವ ಸಂದರ್ಭಗಳಲ್ಲಿ ಹಾಡು ನಾಟಕ ನೃತ್ಯ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲು ವಿದ್ಯಾರ್ಥಿಗಳಿಗೆ ಅಲ್ಲಿಯ ವ್ಯವಸ್ಥಾಪಕರು, ಧಾರ್ಮಿಕ ನಾಯಕರು ಬಿಡುತ್ತಿಲ್ಲ ಎಂಬ ಆರೋಪ ಕೂಡ ಇದೆ. ಇದು ತಪ್ಪು. ಎಳೆಯ ಮಕ್ಕಳನ್ನು ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ. ಇದೂ ಶಿಕ್ಷಣದ ಒಂದು ಅಂಗವಾಗಿದೆ. ಇಂದಿನ ಕಾಲದ ಅಗತ್ಯವೂ ಆಗಿದೆ. ಇದರಿಂದ ಮಕ್ಕಳ ಪ್ರತಿಭೆ ಹೊರಹೊಮ್ಮಿ ಅರಳಿ ಬೆಳೆಯಲು ಸಹಕಾರಿಯಾಗುತ್ತದೆ ಮತ್ತು ಇದು ಸೌಹಾರ್ದ ಬದುಕಿಗೆ ತುಂಬಾ ಅಗತ್ಯವೂ ಆಗಿದೆ.”

ಆತ್ಮಕಥೆಯು 70-80ರ ದಶಕದ ಕೂಡುಬದುಕಿನ ಚಿತ್ರಗಳನ್ನು ಕೊಡುತ್ತದೆ. ಅದರಲ್ಲಿ ಮುಸ್ಲಿಮರು ಭೂತದಕೋಲ, ಯಕ್ಷಗಾನ, ಕೋಳಿಅಂಕ, ಕಂಬಳದಲ್ಲಿ ಭಾಗವಹಿಸುವ ವಿವರಗಳಿವೆ. ಬಂಟರು ಸ್ಥಳೀಯ ಉರುಸನ್ನು ನಡೆಸಿಕೊಡುವ ವಿವರಗಳಿವೆ. ಇಲ್ಲೊಂದು ವಿಶೇಷ ಪ್ರಸಂಗ ಬರುತ್ತದೆ: ಯಕ್ಷಗಾನಕ್ಕೆ ಹೋಗಲು ಹಟಮಾಡುವ ಮೊಮ್ಮಗನನ್ನು ಮನೆಯ ಅಜ್ಜಿ ನಿರಾಕರಿಸಿ, ಅವನಿಗೆ ಬುದ್ಧಿಹೇಳಲು ಮೌಲವಿಯೊಬ್ಬರಿಗೆ ಒಪ್ಪಿಸುವಳು. ಆದರೆ ಆ ಮೌಲವಿಯು ಮಗುವಿಗೆ ಹಣಕೊಟ್ಟು ನಿದ್ದೆಗೆಡದಂತೆ ಎಚ್ಚರವಹಿಸಿ, ಆಟಕ್ಕೆ ಗುಪ್ತವಾಗಿ ಕಳಿಸಿಕೊಡುತ್ತಾರೆ. ಮಕ್ಕಳನ್ನು ಅವರ ಸಹಜ ಇಚ್ಛೆಗೆ ವಿರುದ್ಧವಾಗಿ ಹಿಡಿದಿಡಬಾರದು ಎಂಬ ಶಿಕ್ಷಕ ಪ್ರಜ್ಞೆಯ ಜತೆಗೆ, ಮಕ್ಕಳು ಸ್ಥಳೀಯ ಪರಿಸರದೊಂದಿಗೆ ಸಹಜವಾಗಿ ಬೆರೆಯುವ ಸನ್ನಿವೇಶವೂ ಇರಬೇಕೆಂಬ ನಾಗರಿಕ ಪ್ರಜ್ಞೆಯನ್ನು ಪ್ರಕಟಿಸುತ್ತಾರೆ. ಇದಕ್ಕೆ ಪೂರಕವಾಗಿ ಆತ್ಮಕಥೆಯು ಬ್ಯಾರಿ ಮುಸ್ಲಿಮರ ಸಂಸ್ಕೃತಿಯ ಚಿತ್ರಗಳನ್ನು ಕೊಡುವುದು. ಬ್ಯಾರಿಗಳ ಮದುವೆ ಬಟ್ಟೆಬರೆ ಊಟಆಟ ಉರುಸುಗಳನ್ನು ದಟ್ಟವಾಗಿ ಕಟ್ಟಿಕೊಡುತ್ತದೆ.

ಈ ಕಾರಣದಿಂದ ಆತ್ಮಕತೆಯು ಮುಸ್ಲಿಮರ ದಟ್ಟವಾದ ಜಾನಪದ ಸಂಸ್ಕೃತಿಯನ್ನು ಮೂಲಭೂತವಾದವೂ; ಕರಾವಳಿಯ ಧಾರ್ಮಿಕ ಕೂಡುಬಾಳ್ವೆಯ ಬದುಕನ್ನು ಕೋಮುವಾದವೂ ಕಳೆದುಹಾಕಿದವು ಎಂಬ ವಿಷಾದಕರ ದನಿಯನ್ನು ಒಳಗೊಂಡಿದೆ. ಇದರ ಭಾಗವಾಗಿಯೇ ಇಲ್ಲಿ ಬರುವ ಸುರತ್ಕಲ್ ಕೋಮುಗಲಭೆಯ ವಿವರಗಳನ್ನು ಗಮನಿಸಬೇಕು. ಕರಾವಳಿಯಲ್ಲಿ ಆರ್ಥಿಕ ಬಡತನವಿದ್ದಾಗ ಅದು ಸಾಂಸ್ಕೃತಿಕವಾಗಿ ಸಿರಿವಂತವಾಗಿತ್ತು ಮತ್ತು ಕೂಡುಬಾಳಿನ ಬದುಕನ್ನು ಹೊಂದಿತ್ತು. ಈಗ ಆರ್ಥಿಕ ಏಳಿಗೆಯಿದೆ; ಸಂಪತ್ತಿದೆ. ಆದರೆ ಮನುಷ್ಯ ಸಂಬಂಧಗಳು ಹಾಗೂ ಸಾಮಾಜಿಕ ಬದುಕು ವಿಘಟಿತವಾಗಿದೆ ಎಂಬ ವಿಷಾದವನ್ನು ಆತ್ಮಕಥೆ ಓದುಗರಲ್ಲಿ ಮೂಡಿಸುತ್ತದೆ. ಹಲಾಲ್, ಹಿಜಾಬ್, ಆಜಾನ್, ಟಿಪ್ಪು, ಉರಿಗೌಡ-ನಂಜೇಗೌಡ, ವ್ಯಾಪಾರ ನಿಷೇಧ, ಮೀಸಲಾತಿ ರದ್ದತಿ ಮೊದಲಾದ ವಿದ್ಯಮಾನಗಳು ಕಳೆದ ಒಂದು ವರ್ಷದಿಂದ ಕರ್ನಾಟಕದ ರಾಜಕೀಯ ಸಾಮಾಜಿಕ ಆರ್ಥಿಕ ಬದುಕನ್ನು ಕದಡಿವೆ. ಈ ಹಿನ್ನೆಲೆಯಲ್ಲಿ ಈ ಆತ್ಮಕಥೆಯು, ಸಾಂಸ್ಕೃತಿಕವಾಗಿ ಕಳೆದುಹೋದ ಸುವರ್ಣಯುಗದಂತೆ, ಸಮಾಜವಾದಿ ರಾಜಕಾರಣದ ಅಧ್ಯಾಯದಂತೆ ಭಾಸವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...