Homeಅಂಕಣಗಳುಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ'

ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

"ಕಾಮಾಚಾರವೆಲ್ಲ ವಾಮಾಚಾರವಲ್ಲ, ವೇದಾಂತಿಗಳೆಲ್ಲ ಸುಭಗರಲ್ಲ. ಮುಚ್ಚಿಟ್ಟ ಚಿಂದಿಗಳು; ಮುಚ್ಚಿಟ್ಟ ದುರ್ನಾತಗಳು. ಎಷ್ಟು ದಿನ ಈ ನಾಟಕ! ಒಂದಲ್ಲ ಒಂದು ದಿನ ಎಲ್ಲ ಬಯಲಾಗಬೇಕು" ಎನ್ನುವ ಬನ್ನಂಜೆ ಕಾಮವನ್ನು ಹತ್ತಿಕ್ಕಲು ಪ್ರಯತ್ನಿಸುವ ಮನುಷ್ಯನ ಪ್ರಯತ್ನವೇ ಒಂದು ನಿಷ್ಫಲದ ಸಾಹಸವೆನ್ನುತ್ತಾರೆ. ಸಾಮಾನ್ಯ ಮತ್ತು ಸಹಜ ಕ್ರಿಯೆಯಾಗಿರುವ ಈ ಲೈಂಗಿಕಾಸಕ್ತಿ ಮತ್ತು ಲಿಂಗಶಕ್ತಿಗಳನ್ನು ಉಪನಿಷತ್ತು ಮತ್ತು ವೇದಗಳಲ್ಲಿ ಪ್ರಕಟಗೊಂಡಿರುವ ಬಗೆಗಳನ್ನು ಬಿಚ್ಚಿಡುತ್ತಾರೆ.

- Advertisement -
- Advertisement -

ಸಂಭೋಗ ಅಂದತಕ್ಷಣ ಸುಭಗರಂತೆ ಮೂಗು ಮುರಿಯುವ ಸಂಪ್ರದಾಯವಾದಿಗಳಿಗೆ ಬನ್ನಂಜೆ ಗೋವಿಂದಾಚಾರ್ಯರು ತಮ್ಮ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ ಪುಸ್ತಕದ ಪುಟಪುಟಗಳಲ್ಲಿ ಮೈ ಚಳಿ ಬಿಡಿಸುತ್ತಾ ಹೋಗುತ್ತಾರೆ. “ಹೆಣ್ಣಿನ ಮುಂದೆಯೂ ವೇದಾಂತ ಬಿಚ್ಚುವವರು ವೇದಾಂತದ ಒಳಗೂ ಹೆಣ್ಣನ್ನೇ ಹುಡುಕುತ್ತಿರುತ್ತಾರೆ. ಒಳಗೊಂದು ಹೊರಗೊಂದು ಆದವರು ಮಡಿವಂತ ವೇದಾಂತಿಗಳಾಗಿ ನೆಲದಲ್ಲೆ ಕುಪ್ಪಳಿಸುತ್ತಾರೆ” ಎಂದು ವಿಡಂಬಿಸುವ ಬನ್ನಂಜೆ, ಕೃತಿಯುದ್ದಕ್ಕೂ ವೇದ ಮತ್ತು ಇತರ ಪ್ರಾಚೀನ ಗ್ರಂಥಗಳ ಆಧಾರದಿಂದಲೇ ಲೈಂಗಿಕತೆಯ ವಿವಿಧ ವಿಸ್ತಾರಗಳನ್ನು ಪ್ರಸ್ತುತಪಡಿಸುತ್ತಾ ಹೋಗುತ್ತಾರೆ. ವಿಮರ್ಶೆ ಮತ್ತು ವಿಡಂಬನೆಗಳು ಗುಪ್ತಗಾಮಿಯಾಗಿದ್ದು ವಿಷಯ ಪ್ರಧಾನವಾಗಿ ಪ್ರಸ್ತುತವಾಗುತ್ತದೆ.

“ಕಾಮಾಚಾರವೆಲ್ಲ ವಾಮಾಚಾರವಲ್ಲ, ವೇದಾಂತಿಗಳೆಲ್ಲ ಸುಭಗರಲ್ಲ. ಮುಚ್ಚಿಟ್ಟ ಚಿಂದಿಗಳು; ಮುಚ್ಚಿಟ್ಟ ದುರ್ನಾತಗಳು. ಎಷ್ಟು ದಿನ ಈ ನಾಟಕ! ಒಂದಲ್ಲ ಒಂದು ದಿನ ಎಲ್ಲ ಬಯಲಾಗಬೇಕು” ಎನ್ನುವ ಬನ್ನಂಜೆ ಕಾಮವನ್ನು ಹತ್ತಿಕ್ಕಲು ಪ್ರಯತ್ನಿಸುವ ಮನುಷ್ಯನ ಪ್ರಯತ್ನವೇ ಒಂದು ನಿಷ್ಫಲದ ಸಾಹಸವೆನ್ನುತ್ತಾರೆ. ಸಾಮಾನ್ಯ ಮತ್ತು ಸಹಜ ಕ್ರಿಯೆಯಾಗಿರುವ ಈ ಲೈಂಗಿಕಾಸಕ್ತಿ ಮತ್ತು ಲಿಂಗಶಕ್ತಿಗಳನ್ನು ಉಪನಿಷತ್ತು ಮತ್ತು ವೇದಗಳಲ್ಲಿ ಪ್ರಕಟಗೊಂಡಿರುವ ಬಗೆಗಳನ್ನು ಬಿಚ್ಚಿಡುತ್ತಾರೆ.

“ಗಂಡಿಗಾಗಿ ಗಂಡನ್ನು ಹೆಣ್ಣು ಪ್ರೀತಿಸುವುದಿಲ್ಲ. ಹೆಣ್ಣಿಗಾಗಿ ಹೆಣ್ಣನ್ನು ಗಂಡು ಪ್ರೀತಿಸುವುದಿಲ್ಲ. ತನ್ನ ಕಾಮಪೂರ್ತಿಗಾಗಿ ಒಬ್ಬರನ್ನೊಬ್ಬರು ಪ್ರೀತಿಸುತ್ತಾರೆ. ತನ್ನ ಕಾಮಪೂರ್ತಿಗಾಗಿಯೇ ಮನುಷ್ಯ ಎಲ್ಲವನ್ನೂ ಪ್ರೀತಿಸುತ್ತಾನೆ” ಎಂದು ಬೃಹದಾರಣ್ಯಕೋಪನಿಷತ್ತಿನ (4.5) ಶ್ಲೋಕವು ಸಿಗ್ಮಂಡ್ ಫ್ರಾಯ್ಡನ ಪ್ರಾಚೀನ ಸೊಲ್ಲಿನಂತೆ ಹಿಂಧ್ವನಿಸುತ್ತದೆ.

ಕಾಮ ಎನ್ನುವುದು ಹೆಣ್ಣು ಗಂಡಿನ ಸಂಬಂಧಕ್ಕೆ ಮಾತ್ರ ಸೀಮಿತವಲ್ಲ. ಎಲ್ಲ ಬಗೆಯ ಬದುಕಿನ ಬಯಕೆಯೂ ಕಾಮ. ಎಲ್ಲ ಇಂದ್ರಿಯಗಳ ಬಯಕೆಯೂ ಕಾಮ. ಈ ಎಲ್ಲ ಬಯಕೆಗಳಿಗೆ ಎಲ್ಲಿ ಸಾಫಲ್ಯವೋ ಅದೇ ಕಾಮದ ಗೌರೀಶಂಕರ ಎನ್ನುವ ಬನ್ನಂಜೆ ಹಿಂದೆ ಹೆಣ್ಣಿಗಿದ್ದ ಲೈಂಗಿಕ ಸ್ವಾತಂತ್ರ್ಯದ ಬಗ್ಗೆ ಮಾಹಿತಿಗಳನ್ನು ನೀಡುತ್ತಾರೆ. ಶೀಲ ಮತ್ತು ಅಶ್ಲೀಲವೆಂಬುದೇ ಮನುಷ್ಯನ ಸಂಕುಚಿತ ಮಾನಸಿಕ ಅವಸ್ಥೆಗಳಿಂದ ಹುಟ್ಟಿರುವುದು. ಮನುಷ್ಯ ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವ ಸ್ವಾರ್ಥದಿಂದ ಹೇಗೆ ನಾನಾ ಬಗೆಯ ತಂತ್ರಗಳನ್ನು ಹೂಡುತ್ತಾನೋ ಹಾಗೆಯೇ ತನ್ನ ಲೈಂಗಿಕಾಭಿಲಾಷೆಯನ್ನು ಪೂರೈಸಿಕೊಳ್ಳಲು ಯತ್ನಿಸಿದಾಗ ಅಕ್ರಮಿಯಾಗಿಬಿಡುತ್ತಾನೆ. ಹಾಗಾಗಲು ಕಾರಣಗಳೋ ಹಲವು. ಹೆಣ್ಣಿಗೆ ಪಾತಿವ್ರತ್ಯದ ಮೌಲ್ಯವನ್ನು ಎತ್ತಿ ಹಿಡಿಯಲು ಗಂಡುಸಂತತಿಗಳು ಹೆಣಗಾಡಿದ್ದೇ ತಮ್ಮ ದೌರ್ಬಲ್ಯ ಮತ್ತು ಅಸೂಯೆಗಳನ್ನು ಮರೆಮಾಚಲು. ಹಾಗೆಯೇ ಅವುಗಳಷ್ಟೇ ಪಾತಿವ್ರತ್ಯವೆಂಬ ಮೌಲ್ಯದ ಹಿಂದಿನ ಕಾರಣಗಳೂ ಕೂಡಾ. ಆ ಮೂಲಕ ಹೆಣ್ಣಿನ ಲೈಂಗಿಕ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ಲೈಂಗಿಕ ತೃಷೆಯಲ್ಲಿ ಅಗ್ನಿಯಾಗಿರುವ ಹೆಣ್ಣನ್ನು ತಣಿಸಲು ತನ್ನ ತುಪ್ಪವಾಗಿಸಿಕೊಂಡು ಸುರಿಯುವ ಪುರುಷತ್ವವು ಟುಸ್ಸ್ ಆದರೂ ಅವಳು ಮತ್ತೊಂದು ಪುರುಷನಿಂದ ತಣಿದುಬಿಟ್ಟು ತನ್ನ ಕಡೆಗಣಿಸಿಬಿಟ್ಟಾಳೆಂದು ಅವನ ಪುರುಷಾಧಿಕ್ಯದ ಅಹಂಕಾರವನ್ನು ಬೆದರಿಸುತ್ತಿತ್ತು. ಈ ಹೆದರಿಕೆಯನ್ನು ದರ್ಪವನ್ನಾಗಿಸಿಕೊಂಡ ಗಂಡು ಹೆಣ್ಣಿಗೆ ಶೀಲ, ಪಾತಿವ್ರತ್ಯ, ಪತಿಯೇ ಪರದೈವ; ಹೀಗೆ ಅನೇಕಾನೇಕ ಅನೈಸರ್ಗಿಕವಾದ ನೈತಿಕ ಮೌಲ್ಯಗಳಿಂದ ಅವಳನ್ನು ಬಂಧಿಸಿ ವಿಧೇಯವಾಗಿರಿಸಲು ಯತ್ನಿಸಿದ. ಅಂಜುಕುಳಿಯು ಅಬ್ಬರಿಸುವುದು ಶೂರತ್ವದಂತೆ ಕಾಣುವುದು ದೂರದಿಂದ.

ಹೆಣ್ಣಿನ ಲೈಂಗಿಕ ತೃಷೆಯೆಂಬ ಅಗ್ನಿಯ ಬಗ್ಗೆ ಮಾತು ಹಾಗಿರಲಿ, ಕಾಮವಾದರೂ ಏನು? ಭಗವಂತನ ತೆಕ್ಕೆಯಲ್ಲಿ ಹಾಯಾಗಿ ಮಲಗಿದ ಜೀವದಂತೆ. ಬೃಹದಾರಣ್ಯಕೋಪನಿಷತ್ತಿನಲ್ಲಿ (6.3.21) ಹೇಳುವಂತೆ ಮೆಚ್ಚಿದ ಹೆಣ್ಣಿನ ತೆಕ್ಕೆಯಲ್ಲಿ ಮೈಮರೆತು ಮಲಗಿದವನಿಗೆ ಹೊರಗಿನ ಮತ್ತು ಒಳಗಿನ ಪರಿವೆಯು ಇರುವುದಿಲ್ಲ. ನಿದ್ದೆಯಲ್ಲಿ ಭಗವಂತನ ತೆಕ್ಕೆಯಲ್ಲಿ ಹಾಯಾಗಿ ಮಲಗಿದ ಜೀವನೂ ಹಾಗೆಯೇ. ಅದು ಕೇವಲ ಆನಂದದ ಅನುಭೂತಿಯ ಸ್ಥಿತಿ; ಎಂದು ಕಾಮ ನೀಡುವ ಸುವಿಶ್ರಾಂತ ಸ್ಥಿತಿಗಳನ್ನು ಅನೇಕ ಉಲ್ಲೇಖಗಳಿಂದ ಬನ್ನಂಜೆ ವಿವರಿಸುತ್ತಾರೆ.

“ಸಂಗವನ್ನು ಬಯಸಿ ಹಾಸಿಗೆಗೆ ಬಂದ ಯಾವ ಹೆಣ್ಣನ್ನೂ ನಿರಾಶೆಗೊಳಿಸಬಾರದು. ವಾಮದೇವ ಯಜ್ಞದಲ್ಲಿ ದೀಕ್ಷಿತರಾದವರಿಗೆ ಇದೊಂದು ಪುಣ್ಯಕಾರ್ಯ ಎನ್ನುತ್ತಾ ಛಂದೋಗ್ಯೋಪನಿಷತ್ತಿನ (2.13.2) ಭಾಗವೊಂದನ್ನು ವಿವರಿಸುವಾಗ ಗಮನಿಸಬೇಕಾದ ಅಂಶವೆಂದರೆ ಬಲಾತ್ಕಾರವನ್ನು ನಿರಾಕರಿಸುವುದು. ಬಯಸಿ ಬಂದ ಹೆಣ್ಣನ್ನು ನಿರಾಕರಿಸಬಾರದು, ಅವಳ ಬಯಕೆಯನ್ನು ಈಡೇರಿಸುವುದೇ ಒಂದು ಮಹಾಯಜ್ಞ ಎನ್ನುವ ಉಪನಿಷತ್ತು ಅತ್ಯಾಚಾರವನ್ನು ಪುರಸ್ಕರಿಸುವುದಿಲ್ಲ. ಬದಲಾಗಿ ಹೆಣ್ಣಿನ ಲೈಂಗಿಕ ಸ್ವಾತಂತ್ರ್ಯವನ್ನು ಬೆಂಬಲಿಸುತ್ತದೆ. ಗಂಡು ಬಲಾತ್ಕರಿಸಬಾರದು. “ಹೆಣ್ಣು ಯಾವನೇ ಒಬ್ಬನ ಖಾಸಗಿ ಸೊತ್ತಲ್ಲ ಎನ್ನುವ ಪ್ರಾಚೀನ ಕಾಮಶಾಸ್ತ್ರ ರಚನಾಕಾರ ಯಶೋಧರಾ “ಅವಳೊಡನೆ ಜಗಳವಾಡಬೇಡ. ಅವಳಲ್ಲೇ ಮುಳುಗಿರಲೂ ಬೇಡ. ರಮಿಸಿ ಖುಷಿಪಡು, ಖುಷಿ ಕೊಡು” ಎಂದು ಕಿವಿಮಾತು ಹೇಳುತ್ತಾನಂತೆ.

PC : Prajavani, (ಬನ್ನಂಜೆ ಗೋವಿಂದಾಚಾರ್ಯ)

ಒಟ್ಟಾರೆ ಪ್ರಾಚೀನರು ಹೇಳುವಂತೆ ಹೆಣ್ಣಿಗೆ ಯಾವುದೇ ನಿರ್ಬಂಧ ಸಲ್ಲದು. ಆದರೆ ಮಕ್ಕಳಾಗಲಿ ಆಗದಿರಲಿ, ಸುಖ ಸಿಗಲಿ, ಸಿಗದಿರಲಿ, ಹೆಣ್ಣಿಗೆ ತಾಳಿ ಕಟ್ಟಿದ ಗಂಡೇ ಪರದೈವ ಎನ್ನುವುದು ಅಂಜುಕುಳಿ ಗಂಡಸರು ಅಸೂಯೆಯಿಂದ ಮಾಡಿರುವ ಕಟ್ಟುಪಾಡುಗಳು. ಪ್ರಾಚೀನ ಭಾರತದಲ್ಲಿ ತನ್ನ ಗಂಡನಿಂದ ಮಕ್ಕಳಾಗದಿದ್ದರೆ ನಿಯೋಗ ಪದ್ಧತಿಯಲ್ಲಿ ಅವಳು ತನ್ನ ತಾಯ್ತನವನ್ನು ಪೂರೈಸಿಕೊಳ್ಳಬಹುದಿತ್ತು. ಮಹಾಭಾರತ ಮತ್ತು ರಾಮಾಯಣದಲ್ಲಿ ಮಂತ್ರದಿಂದ ಮತ್ತು ಪಾಯಸದಿಂದ ಹುಟ್ಟಿದವರೆಲ್ಲಾ ಹೀಗೇ ಅಲ್ಲವೇ!

ಲೈಂಗಿಕಾಂಗಗಳ ಗಾತ್ರ ಮತ್ತು ಅದರ ಪುಷ್ಟೀಕರಣದ ವಿಷಯವಾಗಿ ಹಲವಾರು ಉಲ್ಲೇಖಗಳನ್ನು ನೀಡುವ ಬನ್ನಂಜೆ ಹೀಗೆ ಹೇಳುತ್ತಾರೆ: “ಮನಸ್ಸಿನಲ್ಲಿ ಕಾಮದ ಭಾವನೆ ಮೂಡಿದರೆ ಅದನ್ನು ಹೇಳಿ ಕೈ ತೊಳೆದುಕೊಂಡುಬಿಡಬೇಕು. ಅದನ್ನು ಉಲ್ಲೇಖಿಸದೇಬಿಟ್ಟರೆ ಅದು ಒಳಗಿಂದೊಳಗೆ ಬೆಳೆದು ಕೊನೆಗೊಮ್ಮೆ ವಿನಾಶಕಾರಿಯಾಗಿ ಸ್ಫೋಟಗೊಳ್ಳಬಹುದು. ಕ್ಯಾನ್ಸರಿನಂತೆ ಒಳಗೆಯೇ ಹಬ್ಬಿ ವ್ಯಕ್ತಿತ್ವವನ್ನು ನಾಶಮಾಡಬಹುದು. ಅಪ್ಪ ಅದುಮಿಟ್ಟ ಕಾಮ ಮಗನಲ್ಲಿ, ಮೊಮ್ಮಗನಲ್ಲಿ ಅತಿಕಾಮವಾಗಿ ಮತ್ತೊಮ್ಮೆ ಪುಟಿದೇಳಬಹುದು. ಮನಸ್ಸನ್ನು ಮಡಿಯಾಗಿಡುವುದೆಂದರೆ ಕೆಟ್ಟ ಭಾವನೆಗಳನ್ನು ಮನಸ್ಸಿನೊಳಗೆ ಅದುಮಿ ಹಿಡಿಯುವುದಲ್ಲ. ಹೊರಕ್ಕೆ ಬಿಡುವುದು.”

ಸಮಾಜದಲ್ಲಿ ಅತ್ಯಾಚಾರಿಗಳು ರೂಪುಗೊಳ್ಳುವ ಬಗೆಯನ್ನು ಈಗ ನಾವು ಆಲೋಚಿಸಬಹುದು. ಲೈಂಗಿಕ ಶಿಕ್ಷಣವೆಂದರೆ ಇದೆಯೇ. ತನ್ನದೇ ಲೈಂಗಿಕಾಂಗಗಳ ಬಗ್ಗೆ ತಾನು ತಿಳಿದುಕೊಂಡು, ಅದರ ಕುರಿತಾದ ವಿಚಾರಗಳನ್ನು ಮುಕ್ತವಾಗಿ ಮೂಗು ಮುಸುಡಿಯ ಬಗ್ಗೆ ಮಾತಾಡುವಂತೆ ವಿಷಯವನ್ನು ಹಂಚಿಕೊಳ್ಳುವುದು. ಆಗ ಅದು ಬಚ್ಚಿಟ್ಟುಕೊಂಡು ಕೊಳೆತು ಗಲೀಜಾಗಿ ಹೊರಗೊಮ್ಮೆ ಚಿಮ್ಮುವುದಿಲ್ಲ. ಆರೋಗ್ಯಕರವಾದ ಬದುಕಿಗೆ ಆರೋಗ್ಯಕವಾದ ಲೈಂಗಿಕತೆಯೂ ಕಾರಣವಾಗುತ್ತದೆ. ಪ್ರಾಚೀನ ಭಾರತದಲ್ಲಿ ಲೈಂಗಿಕ ಶಿಕ್ಷಣವನ್ನು ಪ್ರತಿಪಾದಿಸಿರುವ ರೀತಿಗಳನ್ನು ಬನ್ನಂಜೆ ಉಲ್ಲೇಖಿಸುತ್ತಾರೆ.

“ಚಂದದ ಅಪ್ಸರೆಯರ ಹುಳು ತಲೆಗೆ ಹೊಕ್ಕಾಗ ಋಷಿಗಳು ಮೊದಲು ಅವರನ್ನು ಭೋಗಿಸಿ ಮತ್ತೆ ತಪಸ್ಸಿಗೆ ಹೊರಡುತ್ತಿದ್ದರು. ಇಲ್ಲವಾದರೆ ತಪಸ್ಸಿನ ಉದ್ದಕ್ಕು ಅಪ್ಸರೆಯರೆ ಕಂಡಾರು. ಮೊದಲು ತಲೆ ಖಾಲಿಯಾಗಬೇಕು. ಆಮೇಲೆ ತಪಸ್ಸಿಗೆ ಕೂಡಬೇಕು.”

ಯಜುರ್ವೇದದಲ್ಲಿ ಅಶ್ಲೀಲ ಭಾಷಣವೊಂದು ಈ ಕಾಲದ ಯಾವ ಪೋಲಿ ಪೋಕರಿಯ ಮಾತಿಗೂ ಕಡಿಮೆಯಿಲ್ಲದಂತೆ ಸಂಸ್ಕೃತದಲ್ಲಿ ಉಲಿಯುತ್ತದೆ.

ಕರ್ನಾಟಕದ ಪಶ್ಚಿಮ ಕರಾವಳಿ, ಗುಜರಾತ್, ಆಂದ್ರಪ್ರದೇಶವೂ ಸೇರಿದಂತೆ ಭಾರತದ ಅನೇಕ ಭಾಗಗಳಲ್ಲಿ ಮಂತ್ರಿಮಾಗಧರು ತಮ್ಮ ಹೆಂಡಂದಿರನ್ನು ರಾತ್ರಿಯ ಹೊತ್ತು ರಾಜನ ಆರೈಕೆಗೆಂದು ಅಂತಃಪುರಕ್ಕೆ ಕಳಿಸುತ್ತಿದ್ದರು. ಅಷ್ಟೇ ಅಲ್ಲ. ಮದುವೆಯಾದ ಹತ್ತನೆಯ ದಿವಸ ಗಂಡನ ಜತೆಗೆ ಪ್ರಸ್ತಕ್ಕೆ ಕೂಡುವ ಮುನ್ನ, ರಾಜ್ಯದ ಹುಡುಗಿಯರು ರಾಜನಿಗೆ ಉಡುಗೊರೆಯಾಗಿ ಒಪ್ಪಿಸಲು ಅಂತಃಪುರಕ್ಕೆ ಹೋಗಬೇಕಾಗಿತ್ತು. ಇದು ಪ್ರಭುತ್ವದಲ್ಲಿರುವ ಪುರುಷರು ಅಥವಾ ಶ್ರೀಮಂತ ಲಂಪಟರು ಹೆಣ್ಣನ್ನು ಶೋಷಿಸಿದ ರೀತಿಯಾದರೆ, ರಾಣಿಯರಿಗೆ ಚಾಕರಿಯ ಹುಡುಗಿಯರು ಚೆಂದದ ಹುಡುಗರನ್ನು ಬೇಟೆಯಾಡಿ ತಂದು ಅವರ ಶಯನ ಗೃಹಕ್ಕೆ ಬಿಡುತ್ತಿದ್ದರು. ಅಂತಃಪುರದ ಕಾವಲಿಗಿರುವವರು ರಾಣಿಯರು ಸೇರುತ್ತಿದ್ದರು. ಪೇಟೆಯ ಹುಡುಗರಿಗೆ ಹೆಣ್ಣಿನ ವೇಶ ತೊಡಿಸಿ ತಂದೊಪ್ಪಿಸುತ್ತಿದ್ದರು. ಹೀಗೆ ರಾಣಿಯರೂ ಗುಪ್ತವಾಗಿ ತಮ್ಮ ರಾಜರ ದರ್ಬಾರಿಗೆ ಸೆಡ್ಡೊಡೆಯುತ್ತಿದ್ದರು.

ಲೈಂಗಿಕ ವಾಂಛೆಯ ಸುತ್ತ ಇರುವ ಪ್ರಾಚೀನ ಭಾರತದ ವಿಚಿತ್ರ ಸಂಪ್ರದಾಯಗಳನ್ನು ಕೆದಕುತ್ತಾ ಬೆದಕುತ್ತಾ ತಮ್ಮ ಸನಾತನ ಶಾಸ್ತ್ರಗಳು ಶ್ರೇಷ್ಠ ಮತ್ತು ಪವಿತ್ರ ಎಂದು ಕೊಚ್ಚಿಕೊಳ್ಳುತ್ತಾ ಶೀಲ ಅಶ್ಲೀಲಗಳೆಂದು ಪಾಶ್ಚಾತ್ಯರ ಮುಕ್ತತೆಯನ್ನು ಹೀಯಾಳಿಸುವವರಿಗೆ ಚುರುಕು ಮುಟ್ಟಿಸುತ್ತಾರೆ ಬನ್ನಂಜೆ ಗೋವಿಂದಾಚಾರ್ಯರು.

ಹೆಣ್ಣು, ಹೊನ್ನು ಮತ್ತು ಮಣ್ಣು ಎಂದು ಹೆಣ್ಣನ್ನು ಭೋಗದ ಮತ್ತು ಅಧೀನಕ್ಕೊಳಪಡಿಸುವ ವಸ್ತುವನ್ನಾಗಿ ಸಂಕುಚಿಸಿದ ಪುರುಷಧರ್ಮಿಗಳು ಮಾಡಿಕೊಂಡಿರುವ ಎಡವಟ್ಟುಗಳನ್ನು ಅನಾವರಣ ಮಾಡುವ ಕೃತಿಯು ಪ್ರಾಚೀನ ವೇಶ್ಯೆಯರ ಕಲೆ ಮತ್ತು ಕಸುಬಿನ ಬಗ್ಗೆಯೂ ಬೆಳಕು ಚೆಲ್ಲುತ್ತದೆ. ಏನೆಲ್ಲಾ ಲೈಂಗಿಕ ಮುಕ್ತತೆಯ ಬಗ್ಗೆ ಶಾಸ್ತ್ರಗಳು ವಿವರಿಸಿದರೂ ರಚಿಸಿದವರು ಪುರುಷರೇ ಆದ್ದರಿಂದ ಹೆಣ್ಣು ಒಂದು ಭೋಗದ ಮತ್ತು ಸುಖ ನೀಡುವ ವಸ್ತುವನ್ನಾಗಿಯೇ ನೋಡುವುದು. ಆದರೆ ವ್ಯತ್ಯಾಸವೆಂದರೆ ಬಲಾತ್ಕಾರ ಮತ್ತು ಹಿಂಸೆಗಳನ್ನು ಅನುಮೋದಿಸದೇ ಒಲಿಸಿಕೊಳ್ಳುವ ದಿಕ್ಕಿನಲ್ಲಿ ಬೆತ್ತಲಾಗಿ ತೆರೆದುಕೊಂಡು ಬಿದ್ದುಕೊಳ್ಳುತ್ತದೆ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮಸ್ಕಾರಗಳು
    ಭಾರತೀಯ ಸಮಾಜದಲ್ಲಿ ಕಾಮಶಾಸ್ತ್ರ ಈ ಪುಸ್ತಕದ ಪ್ರಕಾಶಕರು ಯಾರು ತಿಳಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...