Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ - ಒಂದು...

ಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ – ಒಂದು ಮೌಲ್ಯಮಾಪನ

- Advertisement -
- Advertisement -

ಜಯಪ್ರಕಾಶ ನಾರಾಯಣ (ಜೆ.ಪಿ) ಅವರ ಹೆಸರು ಕೇಳಿದಾಕ್ಷಣ ನಮಗೆ ನೆನಪಾಗುವುದು 1970ರ ದಶಕದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದ ಜನರ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದು, ಮತ್ತು ಜೆ.ಪಿಯವರ ನೇತೃತ್ವದಲ್ಲಿ ಅದಕ್ಕೆ ಪ್ರತಿರೋಧ ಉಂಟಾಗಿ 1977ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಸೋಲು ಕಂಡಿದ್ದು. ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಜೈಲುಪಾಲಾದ ಜೆ.ಪಿ. ಬಿಡುಗಡೆಗೊಂಡ ಮೇಲೆ ಎಲ್ಲ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿ ಕಾಂಗ್ರೆಸ್ ಪಕ್ಷಕ್ಕೆ ಒಂದು ಪರ್ಯಾಯ ಶಕ್ತಿಯನ್ನು ಹುಟ್ಟುಹಾಕುವುದು ಸಾಧ್ಯ ಅನ್ನುವುದನ್ನು ತೋರಿಸಿದರು. ಆ ಸಂದರ್ಭದ ಅವರ ’ಸಂಪೂರ್ಣ ಕ್ರಾಂತಿ’ಯ ಪರಿಕಲ್ಪನೆ ಹಾಗೂ ಜೈಲು ದಿನಚರಿಗಳಿಂದಾಗಿ ದೇಶದಲ್ಲಿ ಮನೆಮಾತಾದ ಜೆ.ಪಿ. ಭಾರತದ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನೇ ಆರಂಭಿಸಿದರು. ಹೀಗಾಗಿ ಆಧುನಿಕ ಭಾರತದ ಇತಿಹಾಸದಲ್ಲಿ ಜೆ.ಪಿ.ಯವರು ಭದ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

ಆದರೆ ಜೆ.ಪಿ.ಯವರಿಗೆ ಸಂಬಂಧಪಟ್ಟಂತೆ ಇಷ್ಟು ಮಾತ್ರ ಇತಿಹಾಸವಲ್ಲ. ಇಂದಿರಾ ಗಾಂಧಿಯವರ ನಿರಂಕುಶಾಧಿಕಾರವನ್ನು ಎದುರಿಸುವುದಕ್ಕೊ ಮೊದಲೇ, ಅಂದರೆ 1947ರವರೆಗೂ ಈ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಸಕ್ರಿಯವಾಗಿದ್ದರು. ಆನಂತರವೂ ಅವರು ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರುರವರ ಟೀಕಾಕಾರರಾಗಿದ್ದರು. ಬಿಹಾರದ ಶ್ರೀಮಂತವೇ ಎನ್ನಬಹುದಾದ ಕುಟುಂಬದಲ್ಲಿ ಹುಟ್ಟಿದ ಜೆ.ಪಿ. ಒಳ್ಳೆಯ ಶಿಕ್ಷಣವನ್ನು ಪಡೆದರು; ಆಧುನಿಕ ಚಿಂತನೆಗೆ ತಮ್ಮನ್ನು ತಾವು ತೆರೆದುಕೊಂಡರು. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಗತಿಪರ ಮನೋಧರ್ಮವನ್ನು ಮೈಗೂಡಿಸಿಕೊಂಡು ಸಮಾಜವಾದ ಮಾರ್ಕ್ಸ್‌ವಾದಗಳ ಕಡೆ ಆಕರ್ಷಿತರಾದರು. ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಅದರೊಳಗಿನ ಸಮಾಜವಾದಿ ಗುಂಪಿನ ಮುಖ್ಯ ಸದಸ್ಯರೂ ಅಗಿದ್ದರು.

ಇಂದಿನ ಪೀಳಿಗೆಯವರಿಗೆ ಜೆ.ಪಿ. ಎಂದು ಮಾತ್ರ ತಿಳಿದಿರುವ ಜಯಪ್ರಕಾಶ ನಾರಾಯಣದ ಬೌದ್ಧಿಕ ಪಯಣದ ವಿವರಗಳು ಅಪರಿಚಿತವೆಂದೇ ಹೇಳಬೇಕು. ಯಡೂರ ಮಹಾಬಲ ಅವರು ಈ ಅವಶ್ಯಕತೆಯನ್ನು ಪೂರೈಸಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ ನಿವೃತ್ತರಾದ ಮಹಾಬಲರವರು ಈಗಾಗಲೇ ಲೋಹಿಯಾರವರ ವಿಚಾರಗಳ ವಿಮರ್ಶೆಯ ಮೂಲಕ ಲೋಹಿಯಾವಾದಿಗಳ ಬಗ್ಗೆ, ಲೋಹಿಯಾವಾದದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಜೆ.ಪಿಯವರ ಜೀವನ ಚರಿತ್ರೆಯಾಗಿರುವ ಈ ಕೃತಿಯೂ ಸಹ ಆ ಪ್ರಶ್ನೆಗಳ ಮುಂದುವರಿಕೆ ಎನ್ನಬಹುದು. ಅಲ್ಲದೆ ಈಶಾನ್ಯ ರಾಜ್ಯಗಳ ಹಿನ್ನೆಲೆಯಲ್ಲಿ ಭಾರತ-ಚೀನಾ ದೇಶಗಳ ಸಂಬಂಧಗಳ ಕುರಿತಾದ ಹಲವು ಗ್ರಂಥಗಳೂ ಅವರ ಲೇಖನಿಯಿಂದ ಹೊರಬಂದಿದೆ. ’ನಿಗೂಢ ಟಿಬೆಟ್, ’ಯುದ್ಧೋತ್ತರ ಕಾಂಡ’, ’ಅಕ್ಸಾಯ್ ಚಿನ್’ ಮುಂತಾದ ಕೃತಿಗಳೇ ಅಲ್ಲದೆ ’ಕ್ವಿಟ್ ಇಂಡಿಯಾ ಚಳವಳಿಯ ಒಳಗುಟ್ಟುಗಳು’ ಎಂಬ ಸ್ವಾತಂತ್ರ್ಯ ಹೋರಾಟದ ಕುರಿತಾದ ಪುಸ್ತಕವನ್ನೂ ರಚಿಸಿ ಮಹಾಬಲರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಪುಸ್ತಕ ಪರಿಚಯ: ನನ್ನ ಸಂಗೀತ ವ್ಯಾಸಂಗ (ಆತ್ಮಕಥೆ)

ಯಾವುದೇ ವಿಷಯದ ಕುರಿತು ಬರೆಯಲಿ, ಮಹಾಬಲ ಅವರ ಆ ಪ್ರಯತ್ನದಲ್ಲಿ ಸಾಕಷ್ಟು ಓದು, ಸಂಶೋಧನೆಗಳು ಇರುವುದು ಸ್ಪಷ್ಟವಾಗಿ ಕಾಣುತ್ತದೆ. ಸಂಶೋಧನೆಯ ಫಲವಾಗಿ ಅವರು ಸಾಧಾರಣಕ್ಕಿಂತ ಭಿನ್ನವಾದ ತೀರ್ಮಾನಗಳಿಗೆ ಬರುತ್ತಾರೆ, ಆ ಮೂಲಕ ಓದುಗರಲ್ಲಿ ಹೊಸ ಪ್ರಶ್ನೆಗಳನ್ನು ಮೂಡಿಸುತ್ತಾರೆ.

ಜೆ.ಪಿಯವರ ಬಗೆಗಿನ ಈ ಕೃತಿಯೂ ಸಹ ಮಹಾಬಲರ ಸಂಶೋಧನೆಯ ಮತ್ತೊಂದು ಫಲ. ಜೆ.ಪಿ.ಯವರ ಬಾಲ್ಯ, ವಿದ್ಯಾಭ್ಯಾಸ, ಕೌಟುಂಬಿಕ ಜೀವನ, ರಾಜಕಾರಣ ಮುಂತಾದವುಗಳನ್ನು ಹಲವು ಆಕರಗಳ ಅಧ್ಯಯನದ ಮೂಲಕ ಪ್ರಸ್ತುತಪಡಿಸಲಾಗಿದೆ. ಅಲ್ಲದೆ, ಆ ಜೀವನದ ವಿವರಗಳನ್ನು ನೀಡುವಾಗಲೇ ಆಯಾ ಸಂದರ್ಭಗಳಲ್ಲಿನ ಜೆ.ಪಿ.ಯವರ ನಿಲುವುಗಳ ಮೌಲ್ಯಮಾಪನವನ್ನು ಮಹಾಬಲರು ನಡೆಸಿದ್ದಾರೆ. ಹೀಗೆ ಮಾಡುವಲ್ಲಿ ಇವರು ಯಾವ ಮುಲಾಜನ್ನು ತೋರುವುದಿಲ್ಲ; ಸರಿಯಾದ ತೀರ್ಮಾನಗಳನ್ನು ಹೊಗಳುವಂತೆಯೇ ವೈರುಧ್ಯಗಳಿಂದ ಕೂಡಿದ, ಅಥವಾ ಆ ಸಂದರ್ಭಕ್ಕೆ ಸರಿಹೊಂದದ ತೀರ್ಮಾನವನ್ನು ಅಷ್ಟೇ ಕಟುವಾಗಿ ಟೀಕಿಸುತ್ತಾರೆ.

ಕಾಂಗ್ರೆಸ್ ಪಕ್ಷದ ಸಮಾಜವಾದಿ ಗುಂಪಿನ ಸಕ್ರಿಯ ಸದಸ್ಯರಾಗಿದ್ದಾಗ ಜೆ.ಪಿ.ಯವರ ನಿಲುವುಗಳಿಗೂ, ನಂತರದ ಘಟ್ಟದ ಅವರ ನಿಲುವುಗಳಿಗೂ ಇರುವ ವೈರುಧ್ಯವನ್ನು ಎತ್ತಿತೋರಿಸುತ್ತಾರೆ. ಸ್ವಾತಂತ್ರ್ಯ ಬಂದ ಹೊಸದರಲ್ಲಿ ಆರ್.ಎಸ್.ಎಸ್. ಕುರಿತ ಅವರ ವಿಮರ್ಶೆಗಳಿಗೂ ತುರ್ತು ಪರಿಸ್ಥಿತಿಯ ನಂತರ ಅದೇ ಸಂಘಟನೆಯ ಬಗ್ಗೆ ಬದಲಾದ ಅಭಿಪ್ರಾಯಗಳಿಗೂ ಒಂದಕ್ಕೊಂದು ತಾಳೆಯಾಗುವುದಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ನಿರೂಪಿಸುತ್ತಾರೆ.

ಮಾತ್ರವಲ್ಲದೆ ಜೆ.ಪಿ.ಯವರ ಸಮಕಾಲೀನರಾದ ಹಲವಾರು ರಾಜಕಾರಣಿಗಳು, ಆ ಕಾಲದ ಪ್ರಮುಖ ಬೆಳವಣಿಗೆಗಳು ಸಹ ಮಹಾಬಲರ ಪರಿಶೀಲನೆಯ ವಸ್ತುಗಳಾಗಿವೆ. ಸಾಮಾಜಿಕ ಬದಲಾವಣೆಗಾಗಿ ನಿರಂತರ ತುಡಿಯುತ್ತಿದ್ದ ಮನಸ್ಸುಳ್ಳ ಜೆ.ಪಿ.ಯವರ ನಿಲುವುಗಳು ಅವರ ಇಂಥ ತುಡಿತದ ಕಾರಣದಿಂದಲೇ ಕಾಲಕಾಲಕ್ಕೆ ಪರಸ್ಪರ ವಿರುದ್ಧವೆನಿಸುವ ರೀತಿಯಲ್ಲಿ ಬದಲಾಗುತ್ತಿದ್ದವೇನೋ ಎನ್ನುವ ಭಾವನೆಯನ್ನೂ ಮಹಾಬಲರ ಈ ಕೃತಿ ಹುಟ್ಟಿಸುತ್ತದೆ. ’ಸಂಪೂರ್ಣ ಕ್ರಾಂತಿ’ಯನ್ನು ಸದರಿ ಪುಸ್ತಕದ ಲೇಖಕರು ’ಸಂಪೂರ್ಣ ಭ್ರಾಂತಿ’ ಎಂತಲೂ ಕರೆಯುತ್ತಾರೆ ಮತ್ತು ಅದಕ್ಕೆ ಕಾರಣಗಳನ್ನು ಒದಗಿಸುತ್ತಾರೆ.

ಮಹಾಬಲರ ತೀರ್ಮಾನಗಳನ್ನು, ಮೌಲ್ಯಮಾಪನವನ್ನು ಓದುಗರು ಒಪ್ಪಬಹುದು ಅಥವಾ ಒಪ್ಪದಿರಬಹುದು. ಆದರೆ ಜೆ.ಪಿ.ಯವರಂತಹ ಪ್ರಮುಖ ವ್ಯಕ್ತಿಯ ಜೀವನದ ವಿವರಗಳನ್ನು ಅದರ ಎಲ್ಲ ಸಂಕೀರ್ಣತೆಗಳೊಂದಿಗೆ ತಿಳಿಯಲು ಈ ಕೃತಿ ಸಹಾಯಕವಾಗುತ್ತದೆ. ಜೆ.ಪಿ.ಯವರ ಬಗೆಗಿನ ಓದುಗರ ಮೌಲ್ಯಮಾಪನವನ್ನೇ ಮೌಲ್ಯಮಾಪನ ಮಾಡುವಂತೆ ಈ ಪುಸ್ತಕ ಪ್ರೇರೇಪಿಸುತ್ತದೆ; ಈ ಕಾರಣಗಳಿಗಾಗಿ ಇದೊಂದು ಓದಬೇಕಾದ ಪುಸ್ತಕ.

ಮುಗಿಸುವ ಮುನ್ನ ಒಂದು ಮಾತು; ಮಹಾಬಲರು ಕೈಗೆತ್ತಿಕೊಂಡಿರುವ ವಿಷಯಗಳು ಮೌಲಿಕವಾದವು. ಅವುಗಳು ಎಲ್ಲರನ್ನೂ ಸುಲಭವಾಗಿ ತಟ್ಟಬೇಕೆಂದರೆ ಮಹಾಬಲರ ಭಾಷೆಯ ಬಳಕೆ ಇನ್ನಷ್ಟ ಉತ್ತಮಗೊಳ್ಳಬೇಕಿದೆ; ಆಗ ಈ ಪುಸ್ತಕವು ಸೇರಿದಂತೆ ಅವರ ಅನೇಕ ಕೃತಿಗಳನ್ನು ಓದುಗರು ಸುಲಭವಾಗಿ ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಅವರು ತಮ್ಮ ವಿಷಯಮಂಡನೆ ಮತ್ತು ಬರವಣಿಗೆಯ ಶೈಲಿಯಲ್ಲಿ ಇನ್ನಷ್ಟು ಪ್ರಯೋಗಗಳನ್ನು ನಡೆಸಿ ಉತ್ತಮಪಡಿಸಿಕೊಂಡರೆ ಅವರ ಕೃತಿಗಳ ಮೌಲ್ಯ ಮತ್ತಷ್ಟು ಹೆಚ್ಚುವುದರಲ್ಲಿ ಅನುಮಾನವಿಲ್ಲ.

ಪ್ರೊ. ನಗರಗೆರೆ ರಮೇಶ್

ಪ್ರೊ. ನಗರಗೆರೆ ರಮೇಶ್
ನಗರಗೆರೆ ರಮೇಶ್ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆಯವರು. ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು ನಂತರ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಮಾನವ ಹಕ್ಕು ಸಂಘಟನೆಯಾದ ಪ್ರಜಾತಾಂತ್ರಿಕ ಜನರ ವೇದಿಕೆ ಮೊದಲಾದವುಗಳ ಭಾಗವಾಗಿದ್ದಾರೆ. ಎಲ್ಲ ಜನಪರ ಚಳವಳಿಗಳ ದೀರ್ಘಕಾಲದ ಒಡನಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...