Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ - ಒಂದು...

ಪುಸ್ತಕ ಪರಿಚಯ: ಯಡೂರು ಮಹಾಬಲ ಅವರ ಜಯಪ್ರಕಾಶ ನಾರಯಣ ಬಾಲ್ಯದಿಂದ ಸಂಪೂರ್ಣ ಕ್ರಾಂತಿಯವರೆಗೆ – ಒಂದು ಮೌಲ್ಯಮಾಪನ

- Advertisement -
- Advertisement -

ಜಯಪ್ರಕಾಶ ನಾರಾಯಣ (ಜೆ.ಪಿ) ಅವರ ಹೆಸರು ಕೇಳಿದಾಕ್ಷಣ ನಮಗೆ ನೆನಪಾಗುವುದು 1970ರ ದಶಕದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದ ಜನರ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದು, ಮತ್ತು ಜೆ.ಪಿಯವರ ನೇತೃತ್ವದಲ್ಲಿ ಅದಕ್ಕೆ ಪ್ರತಿರೋಧ ಉಂಟಾಗಿ 1977ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಸೋಲು ಕಂಡಿದ್ದು. ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಜೈಲುಪಾಲಾದ ಜೆ.ಪಿ. ಬಿಡುಗಡೆಗೊಂಡ ಮೇಲೆ ಎಲ್ಲ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿ ಕಾಂಗ್ರೆಸ್ ಪಕ್ಷಕ್ಕೆ ಒಂದು ಪರ್ಯಾಯ ಶಕ್ತಿಯನ್ನು ಹುಟ್ಟುಹಾಕುವುದು ಸಾಧ್ಯ ಅನ್ನುವುದನ್ನು ತೋರಿಸಿದರು. ಆ ಸಂದರ್ಭದ ಅವರ ’ಸಂಪೂರ್ಣ ಕ್ರಾಂತಿ’ಯ ಪರಿಕಲ್ಪನೆ ಹಾಗೂ ಜೈಲು ದಿನಚರಿಗಳಿಂದಾಗಿ ದೇಶದಲ್ಲಿ ಮನೆಮಾತಾದ ಜೆ.ಪಿ. ಭಾರತದ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನೇ ಆರಂಭಿಸಿದರು. ಹೀಗಾಗಿ ಆಧುನಿಕ ಭಾರತದ ಇತಿಹಾಸದಲ್ಲಿ ಜೆ.ಪಿ.ಯವರು ಭದ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

ಆದರೆ ಜೆ.ಪಿ.ಯವರಿಗೆ ಸಂಬಂಧಪಟ್ಟಂತೆ ಇಷ್ಟು ಮಾತ್ರ ಇತಿಹಾಸವಲ್ಲ. ಇಂದಿರಾ ಗಾಂಧಿಯವರ ನಿರಂಕುಶಾಧಿಕಾರವನ್ನು ಎದುರಿಸುವುದಕ್ಕೊ ಮೊದಲೇ, ಅಂದರೆ 1947ರವರೆಗೂ ಈ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಸಕ್ರಿಯವಾಗಿದ್ದರು. ಆನಂತರವೂ ಅವರು ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರುರವರ ಟೀಕಾಕಾರರಾಗಿದ್ದರು. ಬಿಹಾರದ ಶ್ರೀಮಂತವೇ ಎನ್ನಬಹುದಾದ ಕುಟುಂಬದಲ್ಲಿ ಹುಟ್ಟಿದ ಜೆ.ಪಿ. ಒಳ್ಳೆಯ ಶಿಕ್ಷಣವನ್ನು ಪಡೆದರು; ಆಧುನಿಕ ಚಿಂತನೆಗೆ ತಮ್ಮನ್ನು ತಾವು ತೆರೆದುಕೊಂಡರು. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಗತಿಪರ ಮನೋಧರ್ಮವನ್ನು ಮೈಗೂಡಿಸಿಕೊಂಡು ಸಮಾಜವಾದ ಮಾರ್ಕ್ಸ್‌ವಾದಗಳ ಕಡೆ ಆಕರ್ಷಿತರಾದರು. ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಅದರೊಳಗಿನ ಸಮಾಜವಾದಿ ಗುಂಪಿನ ಮುಖ್ಯ ಸದಸ್ಯರೂ ಅಗಿದ್ದರು.

ಇಂದಿನ ಪೀಳಿಗೆಯವರಿಗೆ ಜೆ.ಪಿ. ಎಂದು ಮಾತ್ರ ತಿಳಿದಿರುವ ಜಯಪ್ರಕಾಶ ನಾರಾಯಣದ ಬೌದ್ಧಿಕ ಪಯಣದ ವಿವರಗಳು ಅಪರಿಚಿತವೆಂದೇ ಹೇಳಬೇಕು. ಯಡೂರ ಮಹಾಬಲ ಅವರು ಈ ಅವಶ್ಯಕತೆಯನ್ನು ಪೂರೈಸಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ ನಿವೃತ್ತರಾದ ಮಹಾಬಲರವರು ಈಗಾಗಲೇ ಲೋಹಿಯಾರವರ ವಿಚಾರಗಳ ವಿಮರ್ಶೆಯ ಮೂಲಕ ಲೋಹಿಯಾವಾದಿಗಳ ಬಗ್ಗೆ, ಲೋಹಿಯಾವಾದದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಜೆ.ಪಿಯವರ ಜೀವನ ಚರಿತ್ರೆಯಾಗಿರುವ ಈ ಕೃತಿಯೂ ಸಹ ಆ ಪ್ರಶ್ನೆಗಳ ಮುಂದುವರಿಕೆ ಎನ್ನಬಹುದು. ಅಲ್ಲದೆ ಈಶಾನ್ಯ ರಾಜ್ಯಗಳ ಹಿನ್ನೆಲೆಯಲ್ಲಿ ಭಾರತ-ಚೀನಾ ದೇಶಗಳ ಸಂಬಂಧಗಳ ಕುರಿತಾದ ಹಲವು ಗ್ರಂಥಗಳೂ ಅವರ ಲೇಖನಿಯಿಂದ ಹೊರಬಂದಿದೆ. ’ನಿಗೂಢ ಟಿಬೆಟ್, ’ಯುದ್ಧೋತ್ತರ ಕಾಂಡ’, ’ಅಕ್ಸಾಯ್ ಚಿನ್’ ಮುಂತಾದ ಕೃತಿಗಳೇ ಅಲ್ಲದೆ ’ಕ್ವಿಟ್ ಇಂಡಿಯಾ ಚಳವಳಿಯ ಒಳಗುಟ್ಟುಗಳು’ ಎಂಬ ಸ್ವಾತಂತ್ರ್ಯ ಹೋರಾಟದ ಕುರಿತಾದ ಪುಸ್ತಕವನ್ನೂ ರಚಿಸಿ ಮಹಾಬಲರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಪುಸ್ತಕ ಪರಿಚಯ: ನನ್ನ ಸಂಗೀತ ವ್ಯಾಸಂಗ (ಆತ್ಮಕಥೆ)

ಯಾವುದೇ ವಿಷಯದ ಕುರಿತು ಬರೆಯಲಿ, ಮಹಾಬಲ ಅವರ ಆ ಪ್ರಯತ್ನದಲ್ಲಿ ಸಾಕಷ್ಟು ಓದು, ಸಂಶೋಧನೆಗಳು ಇರುವುದು ಸ್ಪಷ್ಟವಾಗಿ ಕಾಣುತ್ತದೆ. ಸಂಶೋಧನೆಯ ಫಲವಾಗಿ ಅವರು ಸಾಧಾರಣಕ್ಕಿಂತ ಭಿನ್ನವಾದ ತೀರ್ಮಾನಗಳಿಗೆ ಬರುತ್ತಾರೆ, ಆ ಮೂಲಕ ಓದುಗರಲ್ಲಿ ಹೊಸ ಪ್ರಶ್ನೆಗಳನ್ನು ಮೂಡಿಸುತ್ತಾರೆ.

ಜೆ.ಪಿಯವರ ಬಗೆಗಿನ ಈ ಕೃತಿಯೂ ಸಹ ಮಹಾಬಲರ ಸಂಶೋಧನೆಯ ಮತ್ತೊಂದು ಫಲ. ಜೆ.ಪಿ.ಯವರ ಬಾಲ್ಯ, ವಿದ್ಯಾಭ್ಯಾಸ, ಕೌಟುಂಬಿಕ ಜೀವನ, ರಾಜಕಾರಣ ಮುಂತಾದವುಗಳನ್ನು ಹಲವು ಆಕರಗಳ ಅಧ್ಯಯನದ ಮೂಲಕ ಪ್ರಸ್ತುತಪಡಿಸಲಾಗಿದೆ. ಅಲ್ಲದೆ, ಆ ಜೀವನದ ವಿವರಗಳನ್ನು ನೀಡುವಾಗಲೇ ಆಯಾ ಸಂದರ್ಭಗಳಲ್ಲಿನ ಜೆ.ಪಿ.ಯವರ ನಿಲುವುಗಳ ಮೌಲ್ಯಮಾಪನವನ್ನು ಮಹಾಬಲರು ನಡೆಸಿದ್ದಾರೆ. ಹೀಗೆ ಮಾಡುವಲ್ಲಿ ಇವರು ಯಾವ ಮುಲಾಜನ್ನು ತೋರುವುದಿಲ್ಲ; ಸರಿಯಾದ ತೀರ್ಮಾನಗಳನ್ನು ಹೊಗಳುವಂತೆಯೇ ವೈರುಧ್ಯಗಳಿಂದ ಕೂಡಿದ, ಅಥವಾ ಆ ಸಂದರ್ಭಕ್ಕೆ ಸರಿಹೊಂದದ ತೀರ್ಮಾನವನ್ನು ಅಷ್ಟೇ ಕಟುವಾಗಿ ಟೀಕಿಸುತ್ತಾರೆ.

ಕಾಂಗ್ರೆಸ್ ಪಕ್ಷದ ಸಮಾಜವಾದಿ ಗುಂಪಿನ ಸಕ್ರಿಯ ಸದಸ್ಯರಾಗಿದ್ದಾಗ ಜೆ.ಪಿ.ಯವರ ನಿಲುವುಗಳಿಗೂ, ನಂತರದ ಘಟ್ಟದ ಅವರ ನಿಲುವುಗಳಿಗೂ ಇರುವ ವೈರುಧ್ಯವನ್ನು ಎತ್ತಿತೋರಿಸುತ್ತಾರೆ. ಸ್ವಾತಂತ್ರ್ಯ ಬಂದ ಹೊಸದರಲ್ಲಿ ಆರ್.ಎಸ್.ಎಸ್. ಕುರಿತ ಅವರ ವಿಮರ್ಶೆಗಳಿಗೂ ತುರ್ತು ಪರಿಸ್ಥಿತಿಯ ನಂತರ ಅದೇ ಸಂಘಟನೆಯ ಬಗ್ಗೆ ಬದಲಾದ ಅಭಿಪ್ರಾಯಗಳಿಗೂ ಒಂದಕ್ಕೊಂದು ತಾಳೆಯಾಗುವುದಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ನಿರೂಪಿಸುತ್ತಾರೆ.

ಮಾತ್ರವಲ್ಲದೆ ಜೆ.ಪಿ.ಯವರ ಸಮಕಾಲೀನರಾದ ಹಲವಾರು ರಾಜಕಾರಣಿಗಳು, ಆ ಕಾಲದ ಪ್ರಮುಖ ಬೆಳವಣಿಗೆಗಳು ಸಹ ಮಹಾಬಲರ ಪರಿಶೀಲನೆಯ ವಸ್ತುಗಳಾಗಿವೆ. ಸಾಮಾಜಿಕ ಬದಲಾವಣೆಗಾಗಿ ನಿರಂತರ ತುಡಿಯುತ್ತಿದ್ದ ಮನಸ್ಸುಳ್ಳ ಜೆ.ಪಿ.ಯವರ ನಿಲುವುಗಳು ಅವರ ಇಂಥ ತುಡಿತದ ಕಾರಣದಿಂದಲೇ ಕಾಲಕಾಲಕ್ಕೆ ಪರಸ್ಪರ ವಿರುದ್ಧವೆನಿಸುವ ರೀತಿಯಲ್ಲಿ ಬದಲಾಗುತ್ತಿದ್ದವೇನೋ ಎನ್ನುವ ಭಾವನೆಯನ್ನೂ ಮಹಾಬಲರ ಈ ಕೃತಿ ಹುಟ್ಟಿಸುತ್ತದೆ. ’ಸಂಪೂರ್ಣ ಕ್ರಾಂತಿ’ಯನ್ನು ಸದರಿ ಪುಸ್ತಕದ ಲೇಖಕರು ’ಸಂಪೂರ್ಣ ಭ್ರಾಂತಿ’ ಎಂತಲೂ ಕರೆಯುತ್ತಾರೆ ಮತ್ತು ಅದಕ್ಕೆ ಕಾರಣಗಳನ್ನು ಒದಗಿಸುತ್ತಾರೆ.

ಮಹಾಬಲರ ತೀರ್ಮಾನಗಳನ್ನು, ಮೌಲ್ಯಮಾಪನವನ್ನು ಓದುಗರು ಒಪ್ಪಬಹುದು ಅಥವಾ ಒಪ್ಪದಿರಬಹುದು. ಆದರೆ ಜೆ.ಪಿ.ಯವರಂತಹ ಪ್ರಮುಖ ವ್ಯಕ್ತಿಯ ಜೀವನದ ವಿವರಗಳನ್ನು ಅದರ ಎಲ್ಲ ಸಂಕೀರ್ಣತೆಗಳೊಂದಿಗೆ ತಿಳಿಯಲು ಈ ಕೃತಿ ಸಹಾಯಕವಾಗುತ್ತದೆ. ಜೆ.ಪಿ.ಯವರ ಬಗೆಗಿನ ಓದುಗರ ಮೌಲ್ಯಮಾಪನವನ್ನೇ ಮೌಲ್ಯಮಾಪನ ಮಾಡುವಂತೆ ಈ ಪುಸ್ತಕ ಪ್ರೇರೇಪಿಸುತ್ತದೆ; ಈ ಕಾರಣಗಳಿಗಾಗಿ ಇದೊಂದು ಓದಬೇಕಾದ ಪುಸ್ತಕ.

ಮುಗಿಸುವ ಮುನ್ನ ಒಂದು ಮಾತು; ಮಹಾಬಲರು ಕೈಗೆತ್ತಿಕೊಂಡಿರುವ ವಿಷಯಗಳು ಮೌಲಿಕವಾದವು. ಅವುಗಳು ಎಲ್ಲರನ್ನೂ ಸುಲಭವಾಗಿ ತಟ್ಟಬೇಕೆಂದರೆ ಮಹಾಬಲರ ಭಾಷೆಯ ಬಳಕೆ ಇನ್ನಷ್ಟ ಉತ್ತಮಗೊಳ್ಳಬೇಕಿದೆ; ಆಗ ಈ ಪುಸ್ತಕವು ಸೇರಿದಂತೆ ಅವರ ಅನೇಕ ಕೃತಿಗಳನ್ನು ಓದುಗರು ಸುಲಭವಾಗಿ ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಅವರು ತಮ್ಮ ವಿಷಯಮಂಡನೆ ಮತ್ತು ಬರವಣಿಗೆಯ ಶೈಲಿಯಲ್ಲಿ ಇನ್ನಷ್ಟು ಪ್ರಯೋಗಗಳನ್ನು ನಡೆಸಿ ಉತ್ತಮಪಡಿಸಿಕೊಂಡರೆ ಅವರ ಕೃತಿಗಳ ಮೌಲ್ಯ ಮತ್ತಷ್ಟು ಹೆಚ್ಚುವುದರಲ್ಲಿ ಅನುಮಾನವಿಲ್ಲ.

ಪ್ರೊ. ನಗರಗೆರೆ ರಮೇಶ್

ಪ್ರೊ. ನಗರಗೆರೆ ರಮೇಶ್
ನಗರಗೆರೆ ರಮೇಶ್ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆಯವರು. ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು ನಂತರ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಮಾನವ ಹಕ್ಕು ಸಂಘಟನೆಯಾದ ಪ್ರಜಾತಾಂತ್ರಿಕ ಜನರ ವೇದಿಕೆ ಮೊದಲಾದವುಗಳ ಭಾಗವಾಗಿದ್ದಾರೆ. ಎಲ್ಲ ಜನಪರ ಚಳವಳಿಗಳ ದೀರ್ಘಕಾಲದ ಒಡನಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...