Homeಮುಖಪುಟಬಿಹಾರದಲ್ಲಿ ಮುಂದುವರಿದ ಭಾರತ್ ಜೋಡೋ ನ್ಯಾಯ ಯಾತ್ರೆ: ಸಾಮಾಜಿಕ, ಆರ್ಥಿಕ ನ್ಯಾಯವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ;...

ಬಿಹಾರದಲ್ಲಿ ಮುಂದುವರಿದ ಭಾರತ್ ಜೋಡೋ ನ್ಯಾಯ ಯಾತ್ರೆ: ಸಾಮಾಜಿಕ, ಆರ್ಥಿಕ ನ್ಯಾಯವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ; ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಬಿಹಾರದ ಕಿಶನ್‌ಗಂಜ್ ಜಿಲ್ಲೆಗೆ ಪ್ರವೇಶಿಸಿದೆ. ಬಿಹಾರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಬಿಹಾರದಲ್ಲಿ ರಾಹುಲ್‌ ಗಾಂಧಿಯನ್ನು ಸ್ವಾಗತಿಸಿದ್ದಾರೆ.

ಕಿಶನ್‌ಗಂಜ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ, ನರೇಂದ್ರ ಮೋದಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ ಮತ್ತು ದೇಶಾದ್ಯಂತ ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿದ್ದಾರೆ. ಬಿಹಾರವನ್ನು”ಸಾಮಾಜಿಕ ನ್ಯಾಯದ ನಾಡು” ಎಂದು ಕರೆದಿದ್ದಾರೆ ಮತ್ತು ದೇಶವು ಬಿಹಾರದ ಜನರನ್ನು ನೋಡುತ್ತಿದೆ ಏಕೆಂದರೆ ರಾಜ್ಯದ ಜನರಿಗಿಂತ ಸಾಮಾಜಿಕ ನ್ಯಾಯವನ್ನು ಯಾರೂ ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ ದ್ವೇಷವನ್ನು ಹರಡುವುದರ ಜೊತೆಗೆ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್ ಪಕ್ಷವು ಪ್ರೀತಿ, ಗೌರವ ಮತ್ತು ಸಹೋದರತ್ವದ ಪ್ರಚಾರದ ಬಗ್ಗೆ ಗಮನಹರಿಸುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ದೇಶದ ಬಡ ಜನರು ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಧ್ಯವಾಗದ ಕಾರಣ ತಮ್ಮ ಯಾತ್ರೆಯ ಹೆಸರಿಗೆ ನ್ಯಾಯ ಪದವನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕತೆಯನ್ನು ಕೆಲವು ಬಿಲಿಯನೇರ್‌ಗಳಿಗೆ ಹಸ್ತಾಂತರಿಸಲಾಗಿದೆ. ವಿಮಾನ ನಿಲ್ದಾಣಗಳು, ಬಂದರುಗಳು, ಆಸ್ಪತ್ರೆಗಳು ಮತ್ತು ವಿಶ್ವವಿದ್ಯಾನಿಲಯಗಳು ಎಲ್ಲವನ್ನೂ ಎರಡರಿಂದ ಮೂರು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರವು ಬಡವರಿಗೆ, ಕಾರ್ಮಿಕರಿಗೆ ಅಥವಾ ರೈತರಿಗೆ ಸಹಾಯ ಮಾಡುವುದಿಲ್ಲ ಮತ್ತು ಬಡವರಿಗೆ ಬ್ಯಾಂಕ್‌ಗಳ ಬಾಗಿಲು ಯಾವಾಗಲು ಮುಚ್ಚಲ್ಪಟ್ಟಿದೆ. ಆದರೆ ಪ್ರಧಾನಿ ಕಚೇರಿಯ ಆದೇಶದ ಮೇರೆಗೆ ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ಗಳು ಯಾವಾಗಲೂ ತೆರೆದಿರುತ್ತದೆ. ಸಾಮಾಜಿಕ ಮತ್ತು ಆರ್ಥಿಕ ನ್ಯಾಯವಿಲ್ಲದೆ ದೇಶವು ಎಂದಿಗೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಬಿಜೆಪಿಯವರು ಮಾತನಾಡುವುದು ಸುಳ್ಳು ಎಂದು ಹೇಳಿದ್ದಾರೆ.

ಒಬಿಸಿಗಳು, ಅಲ್ಪಸಂಖ್ಯಾತ ಸಮುದಾಯಗಳು, ಬುಡಕಟ್ಟು ಮತ್ತು ಸಾಮಾನ್ಯ ವರ್ಗಗಳ ನಿಖರವಾದ ಜನಸಂಖ್ಯೆಯನ್ನು ತಿಳಿಯಲು ಪ್ರತಿಯೊಬ್ಬರಿಗೂ ಹಕ್ಕಿದೆ ಮತ್ತು ಅದಕ್ಕಾಗಿ ಜಾತಿ ಆಧಾರಿತ ಜನಗಣತಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಎಷ್ಟು ಮುಖ್ಯ ಎಂಬುದನ್ನು ಜನರಿಗೆ ತಿಳಿಸಲು ನಾನು ಬಿಹಾರಕ್ಕೆ ಬಂದಿದ್ದೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಹಾರದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮುಂದುವರಿದಿದ್ದು, INDIA ಮೈತ್ರಿ ಕೂಟದಿಂದ ನಿತೀಶ್ ಕುಮಾರ್ ಅವರ ನಿರ್ಗಮನದ ಬಳಿಕ ಮೊದಲ ಬಾರಿಗೆ ಅವರು ಪೂರ್ಣಿಯಾ ಜಿಲ್ಲೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಹಾರದ ಕಾಂಗ್ರೆಸ್  ಪಕ್ಷದ ನಾಯಕರ ಪ್ರಕಾರ ರ್ಯಾಲಿಯನ್ನುದ್ದೇಶಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಮಾತನಾಡಲಿದ್ದಾರೆ ಮತ್ತು ಅವರು ವೇದಿಕೆಯನ್ನು ಹಂಚಿಕೊಳ್ಳಲು ವಿರೋಧ ಪಕ್ಷದ INDIA ಬಣದ ಇತರ ನಾಯಕರನ್ನು ಆಹ್ವಾನಿಸಿದ್ದಾರೆ. ಸಭೆಯಲ್ಲಿ ಯುವ ನಾಯಕ ಕನ್ಹಯ್ಯ ಕುಮಾರ್ ಕೂಡ ಭಾಗವಹಿಸುವ ಸಾಧ್ಯತೆ ಇದೆ.

ಇದನ್ನು ಓದಿ: ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...