Homeಮುಖಪುಟಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು ಡಿಸೆಂಬರ್ 12ರಂದು ಮಧ್ಯಾಹ್ನ 3:30 ಕ್ಕೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನು ಒಳಗೊಂಡಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಬಾಬರಿ ಮಸೀದಿಯೊಂದನ್ನು ಬಿಟ್ಟು, ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಕಾಯ್ದೆಯು ಹೇಳುತ್ತದೆ. ಜೊತೆಗೆ, ಯಾವುದೇ ಬಾಕಿ ಉಳಿದಿರುವ ಪ್ರಕ್ರಿಯೆಯು ಸ್ಥಗಿತಗೊಳ್ಳುತ್ತದೆ. ಡಿಸೆಂಬರ್ 12ರಂದು

ಕಾಯ್ದೆಯು ಸಂವಿಧಾನದ ಮೂಲಭೂತ ಲಕ್ಷಣವಾದ ನ್ಯಾಯಾಂಗ ಪರಿಶೀಲನೆಯ ಪರಿಹಾರವನ್ನು ಇದು ನಿರ್ಬಂಧಿಸುತ್ತದೆ ಮತ್ತು ಸಂಸತ್ತಿನ ಶಾಸಕಾಂಗ ಸಾಮರ್ಥ್ಯದಿಂದ ಹೊರಗಿದೆ ಎಂದು ಹಲವಾರು ಅರ್ಜಿಗಳು ಕಾಯ್ದೆಯನ್ನು ಪ್ರಶ್ನಿಸಿವೆ. ಈ ಕಾಯ್ದೆಯು ಜಾತ್ಯತೀತತೆಯ ತತ್ವವನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಅಝೀಝ್ ಮುಶಬ್ಬರ್ ಅಹ್ಮದಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಅಹ್ಮದಿ ಫೌಂಡೇಶನ್‌ನ ಉಪನ್ಯಾಸ ಕಾರ್ಯಕ್ರಮದಲ್ಲಿ ಇತ್ತಿಚೆಗೆ ಮಾತನಾಡಿದ್ದ ನ್ಯಾಯಮೂರ್ತಿ ನಾರಿಮನ್, ಅಯೋಧ್ಯೆ ತೀರ್ಪನ್ನು ‘ಜಾತ್ಯತೀತತೆಗೆ ನ್ಯಾಯದ ಅಪಹಾಸ್ಯ’ ಎಂದು ಬಣ್ಣಿಸಿದ್ದು, 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿದ ಭಾಗವನ್ನು ಅವರು ಪ್ರಶಂಸಿಸಿದ್ದರು.

ಅಯೋಧ್ಯೆ ವಿವಾದದ ಕುರಿತು ಸಂವಿಧಾನ ಪೀಠದ ತೀರ್ಪಿನ ಐದು ಪುಟಗಳು ಈ ಹಿಂದೆ ದೇವಾಲಯಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾದ ಮಸೀದಿಗಳ ಸಮೀಕ್ಷೆಯನ್ನು ಕೋರಿ ದೇಶದಾದ್ಯಂತ ನಡೆಯುತ್ತಿರುವ ವ್ಯಾಜ್ಯಗಳಿಗೆ ಉತ್ತರವಾಗಿದೆ. ಈ ಐದು ಪುಟಗಳು, ದೇಶದಾದ್ಯಂತ ಮಸೀದಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚುತ್ತಿರುವ ಪ್ರಕರಣಗಳನ್ನು ಪರಿಹರಿಸಲು ನಿರ್ಣಾಯಕ ಸಾಧನವಾಗಿ ಕಾರ್ಯನಿರ್ವಹಿಸಬಹುದು ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದ್ದರು.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಹೇಳುತ್ತದೆ. ಇದು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಸವಾಲಾಗಿದೆ. ಇದನ್ನು ತಡೆಗಟ್ಟುವ ಏಕೈಕ ಮಾರ್ಗವೆಂದರೆ ಅಯೋಧ್ಯೆಯ ತೀರ್ಪಿನ ಐದು ಪುಟಗಳನ್ನು ರಾಷ್ಟ್ರವ್ಯಾಪಿ ನ್ಯಾಯಾಲಯಗಳಲ್ಲಿ ಅನ್ವಯಿಸುವುದಾಗಿದೆ ಎಂದು ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಧೀಶರು ನಿವೃತ್ತಿಯ ನಂತರ ಉತ್ತರ ಪ್ರದೇಶದ ಉಪ ಲೋಕಾಯುಕ್ತರಾಗಿ ನೇಮಕಗೊಂಡರು ಎಂದು ಹೇಳಿರುವ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್, ʼಕೊಡು-ಕೊಳ್ಳುವಿಕೆʼ ನೇಮಕಾತಿಗಳ ಬಗ್ಗೆ ಗಮನಸೆಳೆದಿದ್ದಾರೆ.

ಇದನ್ನೂ ಓದಿ: ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...