Homeಮುಖಪುಟಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು ಡಿಸೆಂಬರ್ 12ರಂದು ಮಧ್ಯಾಹ್ನ 3:30 ಕ್ಕೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನು ಒಳಗೊಂಡಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಬಾಬರಿ ಮಸೀದಿಯೊಂದನ್ನು ಬಿಟ್ಟು, ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಕಾಯ್ದೆಯು ಹೇಳುತ್ತದೆ. ಜೊತೆಗೆ, ಯಾವುದೇ ಬಾಕಿ ಉಳಿದಿರುವ ಪ್ರಕ್ರಿಯೆಯು ಸ್ಥಗಿತಗೊಳ್ಳುತ್ತದೆ. ಡಿಸೆಂಬರ್ 12ರಂದು

ಕಾಯ್ದೆಯು ಸಂವಿಧಾನದ ಮೂಲಭೂತ ಲಕ್ಷಣವಾದ ನ್ಯಾಯಾಂಗ ಪರಿಶೀಲನೆಯ ಪರಿಹಾರವನ್ನು ಇದು ನಿರ್ಬಂಧಿಸುತ್ತದೆ ಮತ್ತು ಸಂಸತ್ತಿನ ಶಾಸಕಾಂಗ ಸಾಮರ್ಥ್ಯದಿಂದ ಹೊರಗಿದೆ ಎಂದು ಹಲವಾರು ಅರ್ಜಿಗಳು ಕಾಯ್ದೆಯನ್ನು ಪ್ರಶ್ನಿಸಿವೆ. ಈ ಕಾಯ್ದೆಯು ಜಾತ್ಯತೀತತೆಯ ತತ್ವವನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಅಝೀಝ್ ಮುಶಬ್ಬರ್ ಅಹ್ಮದಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಅಹ್ಮದಿ ಫೌಂಡೇಶನ್‌ನ ಉಪನ್ಯಾಸ ಕಾರ್ಯಕ್ರಮದಲ್ಲಿ ಇತ್ತಿಚೆಗೆ ಮಾತನಾಡಿದ್ದ ನ್ಯಾಯಮೂರ್ತಿ ನಾರಿಮನ್, ಅಯೋಧ್ಯೆ ತೀರ್ಪನ್ನು ‘ಜಾತ್ಯತೀತತೆಗೆ ನ್ಯಾಯದ ಅಪಹಾಸ್ಯ’ ಎಂದು ಬಣ್ಣಿಸಿದ್ದು, 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿದ ಭಾಗವನ್ನು ಅವರು ಪ್ರಶಂಸಿಸಿದ್ದರು.

ಅಯೋಧ್ಯೆ ವಿವಾದದ ಕುರಿತು ಸಂವಿಧಾನ ಪೀಠದ ತೀರ್ಪಿನ ಐದು ಪುಟಗಳು ಈ ಹಿಂದೆ ದೇವಾಲಯಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾದ ಮಸೀದಿಗಳ ಸಮೀಕ್ಷೆಯನ್ನು ಕೋರಿ ದೇಶದಾದ್ಯಂತ ನಡೆಯುತ್ತಿರುವ ವ್ಯಾಜ್ಯಗಳಿಗೆ ಉತ್ತರವಾಗಿದೆ. ಈ ಐದು ಪುಟಗಳು, ದೇಶದಾದ್ಯಂತ ಮಸೀದಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚುತ್ತಿರುವ ಪ್ರಕರಣಗಳನ್ನು ಪರಿಹರಿಸಲು ನಿರ್ಣಾಯಕ ಸಾಧನವಾಗಿ ಕಾರ್ಯನಿರ್ವಹಿಸಬಹುದು ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದ್ದರು.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಹೇಳುತ್ತದೆ. ಇದು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಸವಾಲಾಗಿದೆ. ಇದನ್ನು ತಡೆಗಟ್ಟುವ ಏಕೈಕ ಮಾರ್ಗವೆಂದರೆ ಅಯೋಧ್ಯೆಯ ತೀರ್ಪಿನ ಐದು ಪುಟಗಳನ್ನು ರಾಷ್ಟ್ರವ್ಯಾಪಿ ನ್ಯಾಯಾಲಯಗಳಲ್ಲಿ ಅನ್ವಯಿಸುವುದಾಗಿದೆ ಎಂದು ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಧೀಶರು ನಿವೃತ್ತಿಯ ನಂತರ ಉತ್ತರ ಪ್ರದೇಶದ ಉಪ ಲೋಕಾಯುಕ್ತರಾಗಿ ನೇಮಕಗೊಂಡರು ಎಂದು ಹೇಳಿರುವ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್, ʼಕೊಡು-ಕೊಳ್ಳುವಿಕೆʼ ನೇಮಕಾತಿಗಳ ಬಗ್ಗೆ ಗಮನಸೆಳೆದಿದ್ದಾರೆ.

ಇದನ್ನೂ ಓದಿ: ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...