Homeಮುಖಪುಟಸಾವಧಾನವಾಗಿ ಆವರಿಸಿಕೊಳ್ಳುವ ‘19(1)(a)’

ಸಾವಧಾನವಾಗಿ ಆವರಿಸಿಕೊಳ್ಳುವ ‘19(1)(a)’

- Advertisement -
- Advertisement -

ಸಂವಿಧಾನದ ವಿಚಾರಗಳು ಮತ್ತು ಅದರ ಆಶಯಗಳು ಕಲೆಯಲ್ಲಿ ಅಭಿವ್ಯಕ್ತಿಗೊಳ್ಳುವುದೇ ಅಪರೂಪ. ಹೀಗಿರುವಾಗ ಸಂವಿಧಾನದ ಆತ್ಮ ಎಂದೇ ಕರೆಯುವ ಅನುಚ್ಛೇದಗಳಲ್ಲಿ ಒಂದನ್ನು ಸಿನಿಮಾದ ಶೀರ್ಷಿಕೆಯಾಗಿ ಇಟ್ಟುಕೊಂಡಿರುವುದೇ ಸಿನಿಮಾ ನೋಡಲು ಪ್ರೆರೇಪಿಸುತ್ತದೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಇಂದಿಗೆ 75 ವರ್ಷ. ಸ್ವತಂತ್ರ ಭಾರತ ಹೇಗೆ ಮುನ್ನಡೆಯಬೇಕು ಎಂಬುದಕ್ಕೆ ಬೃಹತ್ ಆದ ಸಂವಿಧಾನವನ್ನು ರಚಿಸಿಕೊಂಡು 73 ವರ್ಷಗಳಾಗಿವೆ. ಸಂವಿಧಾನದ ಯಾವ ಆಶಯಗಳು ನಮ್ಮ ದಿನನಿತ್ಯದ ಚರ್ಚೆ, ಕಲೆ, ಸಾಹಿತ್ಯ, ಸಂಶೋಧನೆಗಳಲ್ಲಿ ಪ್ರತಿಫಲಿಸಬೇಕಿತ್ತೊ ಅದಕ್ಕೆ ಬದಲಾಗಿ ಅದರ ವಿರುದ್ಧವಾದ ಸಂಗತಿಗಳೆ ಹೆಚ್ಚು ಅಭಿವ್ಯಕ್ತಿಗೊಳ್ಳುತ್ತಿರುವುದನ್ನು ಇತ್ತೀಚಿನ ದಿನಗಳಲ್ಲಿ ನಾವು ಹೆಚ್ಚು ಕಾಣುತ್ತಿದ್ದೇವೆ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸುವ ಧ್ವನಿಗಳನ್ನು ದಬ್ಬಾಳಿಕೆಯ ಮೂಲಕ ಹತ್ತಿಕ್ಕುವುದೂ ಸಾಮಾನ್ಯವಾಗಿದೆ.

ಸಂವಿಧಾನ ಗಟ್ಟಿ ಧ್ವನಿಗಳಲ್ಲಿ ಒಬ್ಬರಾಗಿದ್ದ ಗೌರಿ ಲಂಕೇಶರ ಹತ್ಯೆಯ ಘಟನೆಯೇ ಮಲೆಯಾಳಂನ ’19(1)(a)’ ಸಿನಿಮಾಗೆ ಪ್ರೇರಣೆ ಎಂಬುದು ಮೇಲ್ನೋಟಕ್ಕೇ ಕಾಣುತ್ತದೆ. ಬರವಣಿಗೆ ಎಂಬುದು ತನ್ನ ಆತ್ಮದ ಅನುಸಂಧಾನ ಎಂದು ನಂಬಿದ್ದ, ತನ್ನ ಸುತ್ತಲು ನಡೆಯುವ ದೌರ್ಜನ್ಯವನ್ನು ಬರವಣಿಗೆ ಮೂಲಕ ಅಭಿವ್ಯಕ್ತಿಸುತ್ತಿದ್ದ ಮತ್ತು ಬಾಬಾಸಾಹೇಬರ ಅಲೋಚನೆಗಳ ಪ್ರಭಾವವಿದ್ದ ಗೌರಿ ಶಂಕರ್ ಎಂಬ ಲೇಖಕನನ್ನು ಆತನ ಅಭಿಪ್ರಾಯದ ಕಾರಣಕ್ಕಾಗಿಯೇ ಕೊಲೆ ಮಾಡಲಾಗುತ್ತದೆ. ಒಂದು ಸಣ್ಣ ಊರಿನಲ್ಲಿ ಜೆರಾಕ್ಸ್ ಅಂಗಡಿ ಇಟ್ಟುಕೊಂಡು ತಂದೆಯೊಡನೆ ಸಾಧಾರಣ ಬದುಕನ್ನು ಕಟ್ಟಿಕೊಂಟು ಬದುಕುತ್ತಿರುವ ಯುವತಿ (ಈ ಪಾತ್ರಕ್ಕೆ ಹೆಸರಿಲ್ಲ) ಈ ಸಿನಿಮಾದ ಪ್ರಧಾನ ಪಾತ್ರ. ಒಂದು ದಿನ ವ್ಯಕ್ತಿಯೊಬ್ಬ ಈ ಯುವತಿಯ ಅಂಗಡಿಗೆ ಬಂದು ಕೈ ಬರಹದ ಒಂದಷ್ಟು ಪುಟಗಳಿದ್ದ ಕಟ್ಟನ್ನು ಕೊಟ್ಟು, ಅದರ ಪ್ರತಿ ಮಾಡಿ ಬೈಡಿಂಗ್ ಮಾಡಲು ಹೇಳಿ, ನಂತರ ಮರಳಿ ಪಡೆಯುತ್ತೇನೆ, ಸ್ವಲ್ಪ ತಡವಾದರೂ ಕಾಯುತ್ತಿರಿ ಎಂದು ಹೇಳಿಹೋಗುತ್ತಾನೆ. ತಡ ರಾತ್ರಿ ಎಷ್ಟು ಸಮಯವಾದರೂ ಆ ವ್ಯಕ್ತಿ ಅದನ್ನು ಪಡೆಯಲು ಬರುವುದಿಲ್ಲ. ಸ್ವಲ್ಪ ದಿನದ ನಂತರ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ಕಾರ್ಯಕ್ರಮದ ಮುಖಾಂತರ ಯುವತಿಗೆ ತಿಳಿಯುವುದು, ತನಗೆ ಜೆರಾಕ್ಸ್ ಮಾಡಲು ಕೊಟ್ಟ ವ್ಯಕ್ತಿ ಪ್ರಸಿದ್ಧ ಬರಹಗಾರ ಗೌರಿ ಶಂಕರ್ ಮತ್ತು ಆತನನ್ನು ತನ್ನ ಅಭಿಪ್ರಾಯದ ರಾಜಕೀಯ ಕಾರಣಕ್ಕಾಗಿ ಕೊಲೆ ಮಾಡಲಾಗಿದೆಯೆಂದು.

ಗೌರಿ ಶಂಕರ್ ಹತ್ಯೆಯ ಸುದ್ದಿ ಆ ಯುವತಿಯನ್ನು ಅಲುಗಾಡಿಸಿಬಿಡುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಎಷ್ಟು ಮುಖ್ಯ ಎಂಬುದರ ಬಗ್ಗೆ ಒಮ್ಮೆಯೂ ಯೋಚಿಸದ, ತನ್ನ ಪಾಲಿಗೆ ಬಂದ ಬದುಕನ್ನು ಬದುಕುವುದಷ್ಟೆ ತನ್ನ ಕರ್ತವ್ಯ ಎಂದು ನಂಬಿದ್ದ ಈಕೆಗೆ ಗೌರಿ ಶಂಕರ್ ಹತ್ಯೆ ಮತ್ತು ಅದಕ್ಕೆ ಕಾರಣವಾಗುವ ಸಂಗತಿಯಿಂದ ಅವಳ ಅಲೋಚನೆ ಮತ್ತು ವ್ಯಕ್ತಿತ್ವ ಸ್ಥಿತ್ಯಂತರವಾಗುವುದನ್ನು ಬಹಳ ಸಾವಧಾನವಾಗಿ ಕಟ್ಟಿಕೊಡಲಾಗಿದೆ.

ನಿಧಾನಗತಿಯಲ್ಲಿ ಚಲಿಸುವ ಈ ಸಿನಿಮಾದಲ್ಲಿ, ಗೌರಿ ಶಂಕರ್ ಹತ್ಯೆಯ ನಂತರ ಏನಾದರು ಘಟನೆ ಘಟಿಸಬಹುದು ಈ ಕೊಲೆಗೆ ಪ್ರತಿಯಾಗಿ ಯಾವುದಾದರು ಹೋರಾಟ ಮತ್ತು ಪ್ರತಿರೋಧದ ಘಟನೆಗಳನ್ನು ತರಬಹುದು ಎಂಬ ನಿರೀಕ್ಷೆಯ ಜೊತೆ ಕಾಯುವುದು ಸಹಜ. ಆದರೆ ಆ ತರದ ಘಟನೆಗಳಾವುದನ್ನು ನಿರ್ದೇಶಕಿ ಇಂದು ತರುವುದಿಲ್ಲ. ಆದರೆ ಈ ಸಿನಿಮಾದಲ್ಲಿ ಗೌರಿ ಶಂಕರ್ ಪಾತ್ರ ಮತ್ತು ಆ ಪಾತ್ರದ ಘಟನೆ ನೆಪ ಮಾತ್ರ. ಇದನ್ನ ಹಿನ್ನೆಲೆಯಾಗಿಸಿಕೊಂಡು ಹೇಗೆ ಒಬ್ಬ ಸಾಧಾರಣ ಯುವತಿ ತನ್ನ ಸಾಧಾರಣ ಬದುಕು, ಸುತ್ತಲಿನ ಪರಿಸರ ಮತ್ತು ಸಮುದಾಯವನ್ನ ಹೊಸ ಕಣ್ಣೋಟದಲ್ಲಿ ನೋಡುವುದಕ್ಕೆ ಪ್ರಾರಂಭಿಸುತ್ತಾಳೆ ಹಾಗು ಗೌರಿಶಂಕರ್ ಎಂಬ ವ್ಯಕ್ತಿತ್ವಕ್ಕೆ, ಆತನ ಅಲೋಚನೆಗೆ, ಮುಂದುವರೆದು ಅವನ ಬದುಕಿಗೆ ಹೇಗೆ ಸ್ಪಂದಿಸುತ್ತಾಳೆ ಎಂಬುದನ್ನು ಬಹಳ ಸವಾಕಾಶವಾಗಿ ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ.

c

ತನ್ನ ಬರವಣಿಗೆಗಿಂತ ತನ್ನ ಬದುಕು ದೊಡ್ಡದಲ್ಲ, ನನ್ನ ನಂತರ ನನ್ನ ಬರವಣಿಗೆ ಮಾತನಾಡುತ್ತದೆ ಎಂದು ನಂಬಿದ್ದ ಗೌರಿಶಂಕರನ ಕೊನೆಯ ಕೃತಿಯನ್ನು ಹೇಗಾದರೂ ಮಾಡಿ ಸರಿಯಾದ ವಾರಸುದಾರರಿಗೆ ತಲುಪಿಸಬೇಕು ಎಂದು ಶ್ರಮಿಸುವ ಈ ಯುವತಿ ತನ್ನ ಆ ಜರ್ನಿಯಲ್ಲಿ ಗೌರಿ ಶಂಕರ ಜೀವಿಸಿದ್ದ ಬದುಕಿಗೆ ಹತ್ತಿರವಾಗುವುದರ ಜೊತೆಜೊತೆಯಲ್ಲಿಯೇ ತನ್ನ ಬದುಕನ್ನು ಹೊಸದಾಗಿ ನೋಡಲು ಪ್ರಾರಂಭಿಸುತ್ತಾಳೆ. ತನ್ನ ತಂದೆಯೊಟ್ಟಿಗಿನ ಅಂತರಕ್ಕೆ ಕಾರಣಕಂಡುಕೊಂಡು ಬಗೆಹರಿಸಿಕೊಳ್ಳಲು ಪ್ರಯತ್ನಿಸುತ್ತಾಳೆ. ಮನೆಯಲ್ಲಿ ಯಾವುದೇ ಅಭಿಪ್ರಾಯ ಕೇಳದೆ ಮದುವೆ ನಿಶ್ಚಯ ಮಾಡುವ ತನ್ನ ಸ್ನೇಹಿತೆಗೆ ’ನಿನ್ನ ಒಪ್ಪಿಗೆಯಂತೆ’ ಬದುಕು ಎಂದು ಸಲಹೆ ನೀಡುತ್ತಾಳೆ.

ಭಾರತ ಸಂವಿಧಾನದಲ್ಲಿ ಈ ದೇಶದ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸಲು ಇರುವ ಒಂದು ಕಲಂನನ್ನೆ ಸಿನಿಮಾದ ಶೀರ್ಷಿಕೆಯಾಗಿ ಇಟ್ಟುಕೊಂಡು ತನ್ನ ಚೊಚ್ಚಲ ಸಿನಿಮಾದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕಿ ವಿ.ಎಸ್ ಇಂದು. ಯಾರಾದರೂ ಉಪೇಕ್ಷೆ ಮಾಡುವಂತಹ ಸಣ್ಣ ಊರು, ಸಣ್ಣ ಬದುಕು, ಸಣ್ಣ ವ್ಯಕ್ತಿತ್ವ, ಇವರುಗಳು ಸಮಾಜ ಘಾತುಕ ಘಟನೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಮತ್ತು ಆ ಘಟನೆಗಳು ಅವರನ್ನು ಹೇಗೆ ಪ್ರಭಾವಿಸುತ್ತವೆ ಎಂಬುದನ್ನು ಇಂದು ಬಹಳ ಪರಿಣಾಮಕಾರಿಯಾಗಿ ಕಟ್ಟಿಕೊಡುತ್ತಾರೆ. ಹೆಸರೆ ಇಲ್ಲದ ಯುವತಿಯ ಪಾತ್ರದಲ್ಲಿನ ನಿತ್ಯ ಮೆನನ್ ಅಭಿನಯ ಸದಾ ಕಾಲ ನೆನಪಿನಲ್ಲಿ ಉಳಿಯುವಂತದ್ದು.

ಯದುನಂದನ್ ಕೀಲಾರ

ಯದುನಂದನ್ ಕೀಲಾರ
ಜಗತ್ತಿನ ಸಿನಿಮಾಗಳ ವೀಕ್ಷಣೆ ಮತ್ತು ಅವುಗಳು ಬೀರುವ ಸಾಮಾಜಿಕ ಪ್ರಭಾವದ ಸಾಧ್ಯತೆಗಳ ಬಗ್ಗೆ ಅಪಾರ ಉತ್ಸಾಹ ಇರುವ ಯದುನಂದನ್ ಸಿನಿಮಾಗಳ ರಾಜಕೀಯ ನಿಲುವುಗಳನ್ನು ತೀಕ್ಷ್ಣವಾಗಿ ಶೋಧಿಸುತ್ತಾರೆ.


ಇದನ್ನೂ ಓದಿ: ಹಿಪೊಕ್ರಸಿ ಜಗತ್ತಿನಲ್ಲಿ ಮತ್ತೊಂದು ಎದೆಯ ದನಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...