Homeಅಂಕಣಗಳುಧಾವಂತದಲ್ಲಿ ಓದಿಸಿಕೊಳ್ಳುವ ಗಂಗಪ್ಪ ತಳವಾರ್ ಅವರ ’ಧಾವತಿ’

ಧಾವಂತದಲ್ಲಿ ಓದಿಸಿಕೊಳ್ಳುವ ಗಂಗಪ್ಪ ತಳವಾರ್ ಅವರ ’ಧಾವತಿ’

- Advertisement -
- Advertisement -

ಗಂಗಪ್ಪ ತಳವಾರ್ ಅವರ ಚೊಚ್ಚಲ ಕಾದಂಬರಿ ’ಧಾವತಿ’ ಕೋಲಾರ ಸೀಮೆಯ ಭಾಷೆಯ ಬನಿಯಲ್ಲಿ ಕನ್ನಡದ ವಿವೇಕಕ್ಕೆ ದಕ್ಕಬಹುದಾದ ತಳಪ್ರಜ್ಞೆಯನ್ನು ಕಸಿ ಮಾಡುವಲ್ಲಿ ಯಶಸ್ವಿಯಾಗಿದೆ. ಅಕ್ಕನ ವಚನದೊಂದಿಗೆ ತೆರೆದುಕೊಳ್ಳುವ ಕಥನ, ಅಕ್ಕನ ಹುಡುಕಾಟದ ಧಾವತಿಯನ್ನು ಉದ್ದಕ್ಕೂ ಹೊತ್ತು ಕ್ರಮಿಸುತ್ತದೆ.

ಇಡೀ ಕಾದಂಬರಿಯನ್ನು ಚಂದ್ರಿ ಮತ್ತು ದುಗ್ಯಮ್ಮ ಪಾತ್ರಗಳು ಆವರಿಸಿಕೊಂಡಿವೆ. ಕತೆಯ ಕೇಂದ್ರಬಿಂದು ಚಂದ್ರಿ. ಅವಳ ಜೀವನದ ಕಕ್ಕುಲಾತಿ, ಬದುಕು ಕಟ್ಟಿಕೊಳ್ಳಲು ಪರದಾಡುವ ಪರಿ, ಅಕ್ಕ ಚೆನ್ನಮಲ್ಲಿಕಾರ್ಜುನನನ್ನು ಹುಡುಕಿ ಹೊರಟ ದಾರಿಯಂತೆಯೇ ಇದೆ. ಸ್ಮಶಾನದಿಂದ ಪ್ರಾರಂಭವಾಗುವ ಕತೆ ಸ್ಮಶಾನದೊಂದಿಗೇ ಅಂತ್ಯವಾಗುತ್ತದೆ. ಈ ಸ್ಮಶಾನ ಯಾತ್ರೆ ಲೇಖಕರ ಸಾಮಾಜಿಕ ದೃಷ್ಟಿಕೋನದ ಸೂಚಕವಾಗಿದೆ. ಇಲ್ಲಿ ಸಾವು, ದುರಂತ ಬದುಕಿನ ಸುಖಾಂತ್ಯವೆನಿಸುವುದು ವಿಪರ್ಯಾಸ. ಚಂದ್ರಿ ಚಿಕ್ಕಂದಿನಿಂದಲೂ ಪ್ರೀತಿಗೆ ಹಾತೊರೆಯುವ ಬಗೆ ಎಲ್ಲಾ ಹೆಣ್ಣುಗಳದ್ದೇ ಆಗಿದೆ. ದುಗ್ಯಮ್ಮನ ನಡವಳಿಕೆ, ಒರಟುತನ, ಆಗಾಗ ಬೆಂಡು ಬತ್ತಾಸುಗಳ ಜೊತೆಗೆ ಬಂದುಹೋಗುವ ಅಪ್ಪನ ಮೇಲಿನ ಅಕ್ಕರೆ, ಚಂದ್ರಿಯ ಕಣ್ಣಂಚಲ್ಲಿ ತುಂಬಿ ತುಳುಕುವ ಪ್ರೀತಿಯ ಹಂಬಲ ಎದ್ದುಕಾಣುತ್ತದೆ. ದಲಿತ ಕೇರಿಯ ಚಿತ್ರಣದೊಂದಿಗೆ ಅಲ್ಲಿನ ದಾರುಣ ಸ್ಥಿತಿಯನ್ನು ಕಣ್ಣಿಗೆಕಾಣುವಂತೆ ಕಟ್ಟಿಕೊಡುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ.

ಮೇಲ್ನೋಟಕ್ಕೆ ಚಂದ್ರಿ ಆರ್ಥಿಕ ಕಾರಣದಿಂದಾಗಿ ಶಾಲೆಯಿಂದ ಹೊರಗುಳಿದಂತೆ ಕಂಡರೂ, ಭಾರತೀಯ ಜಾತಿ ಪ್ರಣೀತ ಸಾಮಾಜಿಕ ವ್ಯವಸ್ಥೆ ದಲಿತರ ಮಕ್ಕಳು ಅದರಲ್ಲೂ ಹೆಣ್ಣುಮಕ್ಕಳು ಶಾಲೆಯಿಂದ ಹೊರಗುಳಿಯುವಂತೆ ನೋಡಿಕೊಳ್ಳುವ ಬೇರೇ ಕಾರಣವನ್ನೇ ಹೊಂದಿದೆ. ಭೇದಭಾವ ತೋರುವ, ಹೀಯಾಳಿಸುವ ಜಾಗಕ್ಕಿಂತ, ಯಾವ ಭೇದವೂ ಇರದ ಕಾಡು ಮತ್ತು ಅಲ್ಲಿ ಸಿಗುವ ನೆಮ್ಮದಿಗಾಗಿ ಗೊಡ್ಡೆಮ್ಮೆಗಳ ಮೇಯಿಸುವುದೇ ಲೇಸು ಎನಿಸುವುದು ತಳಸಮುದಾಯದ ಕೊನೆಯಲ್ಲಿರುವವರಿಗೆ ಇಲ್ಲಿ ಸಹಜ. ಜೀವನಕ್ಕಾಗಿ ಹೆಕ್ಕುವ ಸಗಣಿ, ಅವ್ವನ ಬೈಗುಳಗಳಿಂದ ತಪ್ಪಿಸಿಕೊಳ್ಳಲು ಕೂಡ ಇದ್ದ ಕಾರಣವಾಗಿತ್ತು ಕುರುಚಲು ಕಾಡು ಸೇರುವುದು. ಎಮ್ಮೆ ಮೇಯಿಸುವಲ್ಲಿ ಸಿಕ್ಕ ಗೆಳತಿ ಗೆಳೆಯರು; ಅಲ್ಲಿ ಆಡುತ್ತಿದ್ದ ಆಟಗಳು; ತಿನ್ನೋಕೆ ಸಿಗುತ್ತಿದ್ದ ನಾನಾ ಥರದ ಹಣ್ಣುಗಳು, ಕಬ್ಬು, ಚೇಪೆಕಾಯಿ, ಏಡಿ, ಚಂದ್ರಿಯ ಅಚ್ಚುಮೆಚ್ಚಾಗಿದ್ದವು. ಕೇರಿಗೂ ಹಟ್ಟಿಗೂ ಇದ್ದ ಜಿಯೊಗ್ರಾಫಿಕಲ್ ದೂರ ಕಡಿಮೆಯಾದರೂ, ಸಾಮಾಜಿಕ ಅಂತರ ದೊಡ್ಡದಿತ್ತು. ಸಗಣಿ ಹೆಕ್ಕೋದು, ಎಮ್ಮೆ ಮೇಯ್ಸೋದು, ಹೂ ಬಿಡ್ಸೋದು, ಹೊಲದ ಕೆಲ್ಸ, ಕಲ್ಲು ಹೊಡಿಯೋದು ಹೀಗೆ ಬದುಕಿನ ಸಂದರ್ಭಗಳಿಗೆ ತಕ್ಕನಾದ ಕೆಲಸಗಳನ್ನ ಮಾಡಿಕೊಂಡು ಬರುವ ಚಂದ್ರಿ, ಕೇರಿಯಲ್ಲಿ ಇದ್ದ ಬೇರೆ ಹುಡುಗಿಯರಿಂತ ಸ್ವಲ್ಪ ನಾಜೂಕು ಸ್ವಭಾವದವಳೇ ಅನ್ನಿಸುತ್ತದೆ. ತನ್ನ ಬೇರೆ ಗೆಳತಿಯರ ಧೈರ್ಯ, ಸಾಹಸ ಪರಿಚಯಿಸುವಾಗಿನ ಮಾತುಗಳಿಂದ ಹಾಗೆನಿಸುತ್ತದೆ.

ಅವ್ವನ ಬಿಗಿ ಬಂದೋಬಸ್ತಿನಲ್ಲಿ ಬೆಳೆವ ಚಂದ್ರಿಗೆ ಸಾಧುವಿನಂತಿದ್ದ ಅಪ್ಪ ಎಂದರೆ ಎಲ್ಲಿಲ್ಲದ ಪ್ರೀತಿ. ಆದರೆ ತಾಯಿಗೆ ಎಲ್ಲಿಲ್ಲದ ಇರುಸು-ಮುರುಸು. ಗಾರೆ ಕೆಲಸ ಮಾಡಿಕೊಂಡು ತನ್ನ ಪಾಡಿಗೆ ತಾನಿದ್ದ ಕದಿರೆಪ್ಪ, ಬಿಡುವಿದ್ದಾಗಲೆಲ್ಲ ಆಧ್ಯಾತ್ಮ ಜೀವಿ. ಕೈವಾರ ತಾತಯ್ಯನ ಭಕ್ತ. ಗಾರೆಕೆಲಸ ಮಾಡುವಾಗಲೇ ಕಟ್ಟಡದ ಮೇಲಿಂದ ಬಿದ್ದು ಪ್ರಾಣ ಬಿಡುವ ಅಪ್ಪನ ಸಾವಿನಿಂದ ಜರ್ಜರಿತಳಾದ ಚಂದ್ರಿ ಮತ್ತೆ ಜೀವನದ ಹದಕ್ಕಾಗಿ ಬೇಯುತ್ತಾಳೆ; ಬೇಯಲೇಬೇಕು ಬೇರೆ ದಾರಿ ಇಲ್ಲ. ದುಗ್ಯಮ್ಮನ ವರ್ತನೆ, ಅವಳ ಬೇಜವಾಬ್ದಾರಿತನ ಕೋಪ ತರಿಸಿದರೂ ಭಯ ತುಸು ಹೆಚ್ಚೇ ಇದ್ದ ಕಾರಣ ಏನೂ ಮಾತಾಡದೆ ದುಡಿಯಲು ಮುಂದಾಗುವ ಚಂದ್ರಿ ಶ್ರಮಿಕ ಹೆಣ್ಣುಗಳ ಪ್ರತಿನಿಧಿಯಾಗಿ ಕಾಣುತ್ತಾಳೆ.

ಗಂಗಪ್ಪ ತಳವಾರ್

ಗಂಗಪ್ಪನವರ ದಲಿತ ಪ್ರಜ್ಞೆಯನ್ನು ಸೂಕ್ಷ್ಮವಾಗಿ ಗಮನಿಸಲು ಓದುಗರಿಗೆ ಒಂದು ಸಿದ್ಧತೆ ಬೇಕಾಗುತ್ತದೆ. ಚಂದ್ರಿಯ ಅಪ್ಪ ಮತ್ತು ಮಾವ ಹೆಂಗರುಳ ಗಂಡಸರು. ಜಾತಿ ಅಪಮಾನದಿಂದ ದುಗ್ಯಮ್ಮ ಗಂಡು ಪ್ರಜ್ಞೆಯನ್ನು ಬೆಳೆಳಿಸಿಕೊಳ್ಳುವುದು ವಿಶೇಷವಾಗಿದೆ. ಹಾಗೆ ನೋಡಿದರೆ ’ಧಾವತಿ’ಯಲ್ಲಿ ಮಹಿಳಾ ದೃಷ್ಟಿಕೋನ ಮತ್ತು ದಲಿತ ದೃಷ್ಟಿಕೋನಗಳ ಸಮ್ಮಿಳಿತ ಮಾದರಿ ಒಂದಕ್ಕೊಂದು ಬೆಸೆದುಕೊಂಡಿರುವುದು ಕಾಣುತ್ತದೆ. ಇಲ್ಲಿ ಲೈಂಗಿಕತೆಯನ್ನು ವಿವರಿಸುವ ವಿಧಾನ ಬೇರೆ ಜಾತಿಯ ಲೇಖಕರಿಗಿಂತ ಭಿನ್ನವಾಗಿದೆ. ಯಾವುದೇ ಕಾಮೋದ್ರೇಕದ ಭಾಷೆಯನ್ನು ಬಳಸದೆ, ಸಹಜ ಮತ್ತು ನೈಸರ್ಗಿಕವಾಗಿ ಹೆಣೆದಿರುವ ವಿಧಾನ ಘನತೆಯುಕ್ತವಾಗಿದೆ. ಚಂದ್ರಿ ಮೈನೆರೆದಾಗ, ಅವಳೊಳಗೆ ವಯೋಸಹಜ ಆಕರ್ಷಣೆಗಳಾದಾಗ ವಿವರಿಸಿರುವ ವಿಧಾನ ವಿಶೇಷವಾಗಿದೆ. ಊರಿನ ಜಾತ್ರೆ, ಕತ್ತಲೆ, ಕೂಡಿಟ್ಟ ಹಣ ಕಳೆದುಕೊಂಡು ಪಡುವ ಸಂಕಟ, ಮನಸ್ಸಿಗೆ ಹಿಡಿಸಿದ ಸರ ಒಂದನ್ನು ಕದಿಯಲು ಮಾಡುವ ಧೈರ್ಯ, ಸಿಕ್ಕಿಬಿದ್ದಾಗ ಆದ ಅವಮಾನ, ಅವ್ವನ ಲೈಂಗಿಕ ಸಂಬಂಧ, ನೆರೆಹೊರೆಯವರ ಕರುಣೆ, ಪ್ರೀತಿ, ಭಯ ಎಲ್ಲವೂ ಎಲ್ಲಾ ಹಳ್ಳಿ, ನಗರಗಳಲ್ಲಿ ವಾಸಿಸುವ ಕೇರಿಯ ಜನರ ಸಾಮಾನ್ಯ ಬದುಕಿನ ಬಿಂಬವೇನೋ ಎಂಬಂತಿದೆ. ಇವುಗಳ ವಿಶ್ಲೇಷಣೆಯೂ ಕಣ್ಣಿಗೆ ಕಟ್ಟಿದಹಾಗಿದೆ.

ಚಂದ್ರಿ ತನ್ನ ಮಗಳನ್ನು ಗಂಡನ ಮನೆಯಲ್ಲೇ ಬಿಟ್ಟು ಬರುವುದು, ಅವಳು ಮತ್ತೊಬ್ಬಳು ಚಂದ್ರಿಯಾಗದಿರಲಿ ಎಂಬ ಆತಂಕದಿಂದಲೇ ಅನ್ನಿಸುತ್ತದೆ. ಮತ್ತು ದ್ರಾವಿಡ ಹೆಣ್ಣು ಮಕ್ಕಳಿಗೆ ತಾಳಿಗಿಂತ ಸ್ವಾಭಿಮಾನವೇ ಮುಖ್ಯ ಎಂಬುದನ್ನು ಕಾದಂಬರಿಕಾರರು ಸೂಕ್ಷ್ಮವಾಗಿ ಸೂಚಿಸಿದ್ದಾರೆ.

ದುರಂತಗಳಲ್ಲೇ ತಿರುವು ಪಡೆದು, ದುರಂತಗಳಲ್ಲೇ ಅಂತ್ಯಗೊಳ್ಳುವ ಹಲವಾರು ಚಂದ್ರಿಯರು ನಮ್ಮ ನಡುವೆಯೇ ಇದ್ದಾರೆ ಎಂಬುದನ್ನು ಕಾದಂಬರಿ ಪ್ರತಿ ಓದಿನಲ್ಲೂ ಎಚ್ಚರಿಸುತ್ತದೆ. ಮೇಲ್ನೋಟಕ್ಕೆ ’ಚಂದ್ರಿ’ ಎಂಬ ಹೆಣ್ಣೊಬ್ಬಳು ಲೈಂಗಿಕ ಅತ್ಯಾಚಾರಕ್ಕೆ ಬಲಿಯಾದಳು ಅನ್ನಿಸಿದರೂ, ಇಡೀ ಕಾದಂಬರಿ ಈ ಗಂಡು ಸಮಾಜದ ಅದರಲ್ಲೂ “ಮೇಲ್ಜಾತಿಯ ಗಂಡಸರ” ನಗ್ನತೆಯನ್ನು ತೋರುತ್ತದೆ.

ಇದನ್ನೂ ಓದಿ: ಮಂಪರು: ಸ್ತ್ರೀಸಂವೇದನೆ ಹಾಗೂ ಮೈಮನಗಳ ಉಭಯ ಸಂಕಟ

ಗೌಣ್ಣೋರ ಪ್ರಭಾಕರ, ಗಂಡ, ಮೈದುನ, ಲಾರಿ ಡ್ರೈವರ್ ಹೀಗೆ ನಂಬಿದ ಪ್ರತಿ ಗಂಡಸು ಅವಳನ್ನ ಬಳಸಿಕೊಳ್ಳುವ ವಿಕೃತತೆ ಕೇವಲ ಕಾಲ್ಪನಿಕವಲ್ಲ. ಲೈಂಗಿಕತೆ ಎಂಬುದು ಶ್ಲೀಲ-ಅಶ್ಲೀಲಕ್ಕಿಂತ ನಂಬಿಕೆಯ, ಒಪ್ಪಿಗೆಯ ಮೇಲೆ ನಿಂತಿರುತ್ತದೆ. ಇಲ್ಲಿ ಚಂದ್ರಿ ನಂಬಿದ ಅಷ್ಟೂ ಗಂಡಸರು ನಂಬಿಕೆಗೆ ಅನರ್ಹರು ಎಂಬುದು ಸಾಬೀತಾಗುತ್ತದೆ. ಇದು ಈ ವಿಕೃತ ಸಮಾಜದ ನೈಜ ಮುಖ. ಇಲ್ಲಿ ನಾಚಿಕೆ ಪಡಬೇಕಾದದ್ದು ಹೆಣ್ಣನ್ನು ವಸ್ತುವಿನ ಹಾಗೆ ಬಳಸಿಕೊಳ್ಳುವ ಗಂಡಸರು.

ಮುಗ್ಧೆಯಾಗಿದ್ದ ಚಂದ್ರಿಯ ಬದುಕನ್ನು ಅತಂತ್ರಗೊಳಿಸುವಲ್ಲಿ ಗಂಡಸರ ಪಾತ್ರ ದೊಡ್ಡದಿದೆ. ಸಾಯುವ ಮುಂಚೆ ತನ್ನ ಇಡೀ ಬದುಕಿನ ಪುಟಗಳನ್ನು ನೆನಪಿಸಿಕೊಳ್ಳುವ ಚಂದ್ರಿ, ಕೊನೆಗೆ ಅವ್ವನ ಮಡಿಲಲ್ಲೇ ಪ್ರಾಣ ಬಿಡುವುದು ದುರಂತದ ಅಂತ್ಯವೆನಿಸಬಹುದು. ಕತೆಗಾರರು ಚಂದ್ರಿಯ ಬದುಕನ್ನು ಹಸನುಗೊಳಿಸಬಹುದಿತ್ತು ಎಂದುಕೊಂಡರೆ ಅದು ಹಿಪೋಕ್ರಸಿಯಾಗಿಬಿಡುತ್ತದೆಯೇ ಎಂಬ ಪ್ರಶ್ನೆ ಏಳುತ್ತದೆ. ಬದುಕುಗಳೇ ಹೀಗರುವಾಗ ನಮ್ಮ ಕಲ್ಪನೆಗಳಲ್ಲಿ ಮಾತ್ರ ಹಸನುಗೊಳಿಸುವುದು ಎಲ್ಲಿಯ ನ್ಯಾಯ?

ಕಾದಂಬರಿಯ ಭಾಷೆ, ಕಟ್ಟಿರುವ ಬಗೆ ಸರಾಗವಾಗಿ ಒಂದೇ ಗುಕ್ಕಿಗೆ ಓದಿಸಿಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ. ಹೆಣ್ಣಿನ ಆಂತರ್ಯದ ಕಣ್ಣಿನ ಭಾಷೆಯಾಗುವುದು ಒಮ್ಮೊಮ್ಮೆ ಹೆಂಗಸರಿಗೇ ಕಷ್ಟವಾಗುವಾಗ ಗಂಗಪ್ಪನವರು ಅವಳ ಒಳಗುದಿಯನ್ನು ಸಲೀಸಾಗಿ ನಮ್ಮ ಮುಂದಿಟ್ಟಿರುವ ದಿಟ್ಟತನಕ್ಕೆ ಶರಣನೆನ್ನಲೇಬೇಕು.

’ತಮಟೆ ಪುಸ್ತಕ’ದ ಮೊದಲ ಪ್ರಕಟಣೆಯಾದ ’ಧಾವತಿ’ ಹಲವು ಬಗೆಯ ಚರ್ಚೆಗಳನ್ನು ಬಿಡುಗಡೆಯಾದಾಗಿನಿಂದಲೂ ಎಬ್ಬಿಸುತ್ತಿರುವುದು ಗಂಗಪ್ಪನವರು ಈ ಕಾದಂಬರಿಯನ್ನು ದಿಟ್ಟವಾಗಿ ಕಟ್ಟಿಕೊಟ್ಟಿರುವುದಕ್ಕೆ ಸಾಕ್ಷಿಯಾಗಿದೆ.

ಅಶ್ವಿನಿ ಆರ್ ಆರ್

ಅಶ್ವಿನಿ ಆರ್ ಆರ್
ಕನ್ನಡ ಉಪನ್ಯಾಸಕಿ ಮತ್ತು ಸಾಮಾಜಿಕ ಕಾರ್ಯಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...