Homeಅಂಕಣಗಳುಧಾವಂತದಲ್ಲಿ ಓದಿಸಿಕೊಳ್ಳುವ ಗಂಗಪ್ಪ ತಳವಾರ್ ಅವರ ’ಧಾವತಿ’

ಧಾವಂತದಲ್ಲಿ ಓದಿಸಿಕೊಳ್ಳುವ ಗಂಗಪ್ಪ ತಳವಾರ್ ಅವರ ’ಧಾವತಿ’

- Advertisement -
- Advertisement -

ಗಂಗಪ್ಪ ತಳವಾರ್ ಅವರ ಚೊಚ್ಚಲ ಕಾದಂಬರಿ ’ಧಾವತಿ’ ಕೋಲಾರ ಸೀಮೆಯ ಭಾಷೆಯ ಬನಿಯಲ್ಲಿ ಕನ್ನಡದ ವಿವೇಕಕ್ಕೆ ದಕ್ಕಬಹುದಾದ ತಳಪ್ರಜ್ಞೆಯನ್ನು ಕಸಿ ಮಾಡುವಲ್ಲಿ ಯಶಸ್ವಿಯಾಗಿದೆ. ಅಕ್ಕನ ವಚನದೊಂದಿಗೆ ತೆರೆದುಕೊಳ್ಳುವ ಕಥನ, ಅಕ್ಕನ ಹುಡುಕಾಟದ ಧಾವತಿಯನ್ನು ಉದ್ದಕ್ಕೂ ಹೊತ್ತು ಕ್ರಮಿಸುತ್ತದೆ.

ಇಡೀ ಕಾದಂಬರಿಯನ್ನು ಚಂದ್ರಿ ಮತ್ತು ದುಗ್ಯಮ್ಮ ಪಾತ್ರಗಳು ಆವರಿಸಿಕೊಂಡಿವೆ. ಕತೆಯ ಕೇಂದ್ರಬಿಂದು ಚಂದ್ರಿ. ಅವಳ ಜೀವನದ ಕಕ್ಕುಲಾತಿ, ಬದುಕು ಕಟ್ಟಿಕೊಳ್ಳಲು ಪರದಾಡುವ ಪರಿ, ಅಕ್ಕ ಚೆನ್ನಮಲ್ಲಿಕಾರ್ಜುನನನ್ನು ಹುಡುಕಿ ಹೊರಟ ದಾರಿಯಂತೆಯೇ ಇದೆ. ಸ್ಮಶಾನದಿಂದ ಪ್ರಾರಂಭವಾಗುವ ಕತೆ ಸ್ಮಶಾನದೊಂದಿಗೇ ಅಂತ್ಯವಾಗುತ್ತದೆ. ಈ ಸ್ಮಶಾನ ಯಾತ್ರೆ ಲೇಖಕರ ಸಾಮಾಜಿಕ ದೃಷ್ಟಿಕೋನದ ಸೂಚಕವಾಗಿದೆ. ಇಲ್ಲಿ ಸಾವು, ದುರಂತ ಬದುಕಿನ ಸುಖಾಂತ್ಯವೆನಿಸುವುದು ವಿಪರ್ಯಾಸ. ಚಂದ್ರಿ ಚಿಕ್ಕಂದಿನಿಂದಲೂ ಪ್ರೀತಿಗೆ ಹಾತೊರೆಯುವ ಬಗೆ ಎಲ್ಲಾ ಹೆಣ್ಣುಗಳದ್ದೇ ಆಗಿದೆ. ದುಗ್ಯಮ್ಮನ ನಡವಳಿಕೆ, ಒರಟುತನ, ಆಗಾಗ ಬೆಂಡು ಬತ್ತಾಸುಗಳ ಜೊತೆಗೆ ಬಂದುಹೋಗುವ ಅಪ್ಪನ ಮೇಲಿನ ಅಕ್ಕರೆ, ಚಂದ್ರಿಯ ಕಣ್ಣಂಚಲ್ಲಿ ತುಂಬಿ ತುಳುಕುವ ಪ್ರೀತಿಯ ಹಂಬಲ ಎದ್ದುಕಾಣುತ್ತದೆ. ದಲಿತ ಕೇರಿಯ ಚಿತ್ರಣದೊಂದಿಗೆ ಅಲ್ಲಿನ ದಾರುಣ ಸ್ಥಿತಿಯನ್ನು ಕಣ್ಣಿಗೆಕಾಣುವಂತೆ ಕಟ್ಟಿಕೊಡುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ.

ಮೇಲ್ನೋಟಕ್ಕೆ ಚಂದ್ರಿ ಆರ್ಥಿಕ ಕಾರಣದಿಂದಾಗಿ ಶಾಲೆಯಿಂದ ಹೊರಗುಳಿದಂತೆ ಕಂಡರೂ, ಭಾರತೀಯ ಜಾತಿ ಪ್ರಣೀತ ಸಾಮಾಜಿಕ ವ್ಯವಸ್ಥೆ ದಲಿತರ ಮಕ್ಕಳು ಅದರಲ್ಲೂ ಹೆಣ್ಣುಮಕ್ಕಳು ಶಾಲೆಯಿಂದ ಹೊರಗುಳಿಯುವಂತೆ ನೋಡಿಕೊಳ್ಳುವ ಬೇರೇ ಕಾರಣವನ್ನೇ ಹೊಂದಿದೆ. ಭೇದಭಾವ ತೋರುವ, ಹೀಯಾಳಿಸುವ ಜಾಗಕ್ಕಿಂತ, ಯಾವ ಭೇದವೂ ಇರದ ಕಾಡು ಮತ್ತು ಅಲ್ಲಿ ಸಿಗುವ ನೆಮ್ಮದಿಗಾಗಿ ಗೊಡ್ಡೆಮ್ಮೆಗಳ ಮೇಯಿಸುವುದೇ ಲೇಸು ಎನಿಸುವುದು ತಳಸಮುದಾಯದ ಕೊನೆಯಲ್ಲಿರುವವರಿಗೆ ಇಲ್ಲಿ ಸಹಜ. ಜೀವನಕ್ಕಾಗಿ ಹೆಕ್ಕುವ ಸಗಣಿ, ಅವ್ವನ ಬೈಗುಳಗಳಿಂದ ತಪ್ಪಿಸಿಕೊಳ್ಳಲು ಕೂಡ ಇದ್ದ ಕಾರಣವಾಗಿತ್ತು ಕುರುಚಲು ಕಾಡು ಸೇರುವುದು. ಎಮ್ಮೆ ಮೇಯಿಸುವಲ್ಲಿ ಸಿಕ್ಕ ಗೆಳತಿ ಗೆಳೆಯರು; ಅಲ್ಲಿ ಆಡುತ್ತಿದ್ದ ಆಟಗಳು; ತಿನ್ನೋಕೆ ಸಿಗುತ್ತಿದ್ದ ನಾನಾ ಥರದ ಹಣ್ಣುಗಳು, ಕಬ್ಬು, ಚೇಪೆಕಾಯಿ, ಏಡಿ, ಚಂದ್ರಿಯ ಅಚ್ಚುಮೆಚ್ಚಾಗಿದ್ದವು. ಕೇರಿಗೂ ಹಟ್ಟಿಗೂ ಇದ್ದ ಜಿಯೊಗ್ರಾಫಿಕಲ್ ದೂರ ಕಡಿಮೆಯಾದರೂ, ಸಾಮಾಜಿಕ ಅಂತರ ದೊಡ್ಡದಿತ್ತು. ಸಗಣಿ ಹೆಕ್ಕೋದು, ಎಮ್ಮೆ ಮೇಯ್ಸೋದು, ಹೂ ಬಿಡ್ಸೋದು, ಹೊಲದ ಕೆಲ್ಸ, ಕಲ್ಲು ಹೊಡಿಯೋದು ಹೀಗೆ ಬದುಕಿನ ಸಂದರ್ಭಗಳಿಗೆ ತಕ್ಕನಾದ ಕೆಲಸಗಳನ್ನ ಮಾಡಿಕೊಂಡು ಬರುವ ಚಂದ್ರಿ, ಕೇರಿಯಲ್ಲಿ ಇದ್ದ ಬೇರೆ ಹುಡುಗಿಯರಿಂತ ಸ್ವಲ್ಪ ನಾಜೂಕು ಸ್ವಭಾವದವಳೇ ಅನ್ನಿಸುತ್ತದೆ. ತನ್ನ ಬೇರೆ ಗೆಳತಿಯರ ಧೈರ್ಯ, ಸಾಹಸ ಪರಿಚಯಿಸುವಾಗಿನ ಮಾತುಗಳಿಂದ ಹಾಗೆನಿಸುತ್ತದೆ.

ಅವ್ವನ ಬಿಗಿ ಬಂದೋಬಸ್ತಿನಲ್ಲಿ ಬೆಳೆವ ಚಂದ್ರಿಗೆ ಸಾಧುವಿನಂತಿದ್ದ ಅಪ್ಪ ಎಂದರೆ ಎಲ್ಲಿಲ್ಲದ ಪ್ರೀತಿ. ಆದರೆ ತಾಯಿಗೆ ಎಲ್ಲಿಲ್ಲದ ಇರುಸು-ಮುರುಸು. ಗಾರೆ ಕೆಲಸ ಮಾಡಿಕೊಂಡು ತನ್ನ ಪಾಡಿಗೆ ತಾನಿದ್ದ ಕದಿರೆಪ್ಪ, ಬಿಡುವಿದ್ದಾಗಲೆಲ್ಲ ಆಧ್ಯಾತ್ಮ ಜೀವಿ. ಕೈವಾರ ತಾತಯ್ಯನ ಭಕ್ತ. ಗಾರೆಕೆಲಸ ಮಾಡುವಾಗಲೇ ಕಟ್ಟಡದ ಮೇಲಿಂದ ಬಿದ್ದು ಪ್ರಾಣ ಬಿಡುವ ಅಪ್ಪನ ಸಾವಿನಿಂದ ಜರ್ಜರಿತಳಾದ ಚಂದ್ರಿ ಮತ್ತೆ ಜೀವನದ ಹದಕ್ಕಾಗಿ ಬೇಯುತ್ತಾಳೆ; ಬೇಯಲೇಬೇಕು ಬೇರೆ ದಾರಿ ಇಲ್ಲ. ದುಗ್ಯಮ್ಮನ ವರ್ತನೆ, ಅವಳ ಬೇಜವಾಬ್ದಾರಿತನ ಕೋಪ ತರಿಸಿದರೂ ಭಯ ತುಸು ಹೆಚ್ಚೇ ಇದ್ದ ಕಾರಣ ಏನೂ ಮಾತಾಡದೆ ದುಡಿಯಲು ಮುಂದಾಗುವ ಚಂದ್ರಿ ಶ್ರಮಿಕ ಹೆಣ್ಣುಗಳ ಪ್ರತಿನಿಧಿಯಾಗಿ ಕಾಣುತ್ತಾಳೆ.

ಗಂಗಪ್ಪ ತಳವಾರ್

ಗಂಗಪ್ಪನವರ ದಲಿತ ಪ್ರಜ್ಞೆಯನ್ನು ಸೂಕ್ಷ್ಮವಾಗಿ ಗಮನಿಸಲು ಓದುಗರಿಗೆ ಒಂದು ಸಿದ್ಧತೆ ಬೇಕಾಗುತ್ತದೆ. ಚಂದ್ರಿಯ ಅಪ್ಪ ಮತ್ತು ಮಾವ ಹೆಂಗರುಳ ಗಂಡಸರು. ಜಾತಿ ಅಪಮಾನದಿಂದ ದುಗ್ಯಮ್ಮ ಗಂಡು ಪ್ರಜ್ಞೆಯನ್ನು ಬೆಳೆಳಿಸಿಕೊಳ್ಳುವುದು ವಿಶೇಷವಾಗಿದೆ. ಹಾಗೆ ನೋಡಿದರೆ ’ಧಾವತಿ’ಯಲ್ಲಿ ಮಹಿಳಾ ದೃಷ್ಟಿಕೋನ ಮತ್ತು ದಲಿತ ದೃಷ್ಟಿಕೋನಗಳ ಸಮ್ಮಿಳಿತ ಮಾದರಿ ಒಂದಕ್ಕೊಂದು ಬೆಸೆದುಕೊಂಡಿರುವುದು ಕಾಣುತ್ತದೆ. ಇಲ್ಲಿ ಲೈಂಗಿಕತೆಯನ್ನು ವಿವರಿಸುವ ವಿಧಾನ ಬೇರೆ ಜಾತಿಯ ಲೇಖಕರಿಗಿಂತ ಭಿನ್ನವಾಗಿದೆ. ಯಾವುದೇ ಕಾಮೋದ್ರೇಕದ ಭಾಷೆಯನ್ನು ಬಳಸದೆ, ಸಹಜ ಮತ್ತು ನೈಸರ್ಗಿಕವಾಗಿ ಹೆಣೆದಿರುವ ವಿಧಾನ ಘನತೆಯುಕ್ತವಾಗಿದೆ. ಚಂದ್ರಿ ಮೈನೆರೆದಾಗ, ಅವಳೊಳಗೆ ವಯೋಸಹಜ ಆಕರ್ಷಣೆಗಳಾದಾಗ ವಿವರಿಸಿರುವ ವಿಧಾನ ವಿಶೇಷವಾಗಿದೆ. ಊರಿನ ಜಾತ್ರೆ, ಕತ್ತಲೆ, ಕೂಡಿಟ್ಟ ಹಣ ಕಳೆದುಕೊಂಡು ಪಡುವ ಸಂಕಟ, ಮನಸ್ಸಿಗೆ ಹಿಡಿಸಿದ ಸರ ಒಂದನ್ನು ಕದಿಯಲು ಮಾಡುವ ಧೈರ್ಯ, ಸಿಕ್ಕಿಬಿದ್ದಾಗ ಆದ ಅವಮಾನ, ಅವ್ವನ ಲೈಂಗಿಕ ಸಂಬಂಧ, ನೆರೆಹೊರೆಯವರ ಕರುಣೆ, ಪ್ರೀತಿ, ಭಯ ಎಲ್ಲವೂ ಎಲ್ಲಾ ಹಳ್ಳಿ, ನಗರಗಳಲ್ಲಿ ವಾಸಿಸುವ ಕೇರಿಯ ಜನರ ಸಾಮಾನ್ಯ ಬದುಕಿನ ಬಿಂಬವೇನೋ ಎಂಬಂತಿದೆ. ಇವುಗಳ ವಿಶ್ಲೇಷಣೆಯೂ ಕಣ್ಣಿಗೆ ಕಟ್ಟಿದಹಾಗಿದೆ.

ಚಂದ್ರಿ ತನ್ನ ಮಗಳನ್ನು ಗಂಡನ ಮನೆಯಲ್ಲೇ ಬಿಟ್ಟು ಬರುವುದು, ಅವಳು ಮತ್ತೊಬ್ಬಳು ಚಂದ್ರಿಯಾಗದಿರಲಿ ಎಂಬ ಆತಂಕದಿಂದಲೇ ಅನ್ನಿಸುತ್ತದೆ. ಮತ್ತು ದ್ರಾವಿಡ ಹೆಣ್ಣು ಮಕ್ಕಳಿಗೆ ತಾಳಿಗಿಂತ ಸ್ವಾಭಿಮಾನವೇ ಮುಖ್ಯ ಎಂಬುದನ್ನು ಕಾದಂಬರಿಕಾರರು ಸೂಕ್ಷ್ಮವಾಗಿ ಸೂಚಿಸಿದ್ದಾರೆ.

ದುರಂತಗಳಲ್ಲೇ ತಿರುವು ಪಡೆದು, ದುರಂತಗಳಲ್ಲೇ ಅಂತ್ಯಗೊಳ್ಳುವ ಹಲವಾರು ಚಂದ್ರಿಯರು ನಮ್ಮ ನಡುವೆಯೇ ಇದ್ದಾರೆ ಎಂಬುದನ್ನು ಕಾದಂಬರಿ ಪ್ರತಿ ಓದಿನಲ್ಲೂ ಎಚ್ಚರಿಸುತ್ತದೆ. ಮೇಲ್ನೋಟಕ್ಕೆ ’ಚಂದ್ರಿ’ ಎಂಬ ಹೆಣ್ಣೊಬ್ಬಳು ಲೈಂಗಿಕ ಅತ್ಯಾಚಾರಕ್ಕೆ ಬಲಿಯಾದಳು ಅನ್ನಿಸಿದರೂ, ಇಡೀ ಕಾದಂಬರಿ ಈ ಗಂಡು ಸಮಾಜದ ಅದರಲ್ಲೂ “ಮೇಲ್ಜಾತಿಯ ಗಂಡಸರ” ನಗ್ನತೆಯನ್ನು ತೋರುತ್ತದೆ.

ಇದನ್ನೂ ಓದಿ: ಮಂಪರು: ಸ್ತ್ರೀಸಂವೇದನೆ ಹಾಗೂ ಮೈಮನಗಳ ಉಭಯ ಸಂಕಟ

ಗೌಣ್ಣೋರ ಪ್ರಭಾಕರ, ಗಂಡ, ಮೈದುನ, ಲಾರಿ ಡ್ರೈವರ್ ಹೀಗೆ ನಂಬಿದ ಪ್ರತಿ ಗಂಡಸು ಅವಳನ್ನ ಬಳಸಿಕೊಳ್ಳುವ ವಿಕೃತತೆ ಕೇವಲ ಕಾಲ್ಪನಿಕವಲ್ಲ. ಲೈಂಗಿಕತೆ ಎಂಬುದು ಶ್ಲೀಲ-ಅಶ್ಲೀಲಕ್ಕಿಂತ ನಂಬಿಕೆಯ, ಒಪ್ಪಿಗೆಯ ಮೇಲೆ ನಿಂತಿರುತ್ತದೆ. ಇಲ್ಲಿ ಚಂದ್ರಿ ನಂಬಿದ ಅಷ್ಟೂ ಗಂಡಸರು ನಂಬಿಕೆಗೆ ಅನರ್ಹರು ಎಂಬುದು ಸಾಬೀತಾಗುತ್ತದೆ. ಇದು ಈ ವಿಕೃತ ಸಮಾಜದ ನೈಜ ಮುಖ. ಇಲ್ಲಿ ನಾಚಿಕೆ ಪಡಬೇಕಾದದ್ದು ಹೆಣ್ಣನ್ನು ವಸ್ತುವಿನ ಹಾಗೆ ಬಳಸಿಕೊಳ್ಳುವ ಗಂಡಸರು.

ಮುಗ್ಧೆಯಾಗಿದ್ದ ಚಂದ್ರಿಯ ಬದುಕನ್ನು ಅತಂತ್ರಗೊಳಿಸುವಲ್ಲಿ ಗಂಡಸರ ಪಾತ್ರ ದೊಡ್ಡದಿದೆ. ಸಾಯುವ ಮುಂಚೆ ತನ್ನ ಇಡೀ ಬದುಕಿನ ಪುಟಗಳನ್ನು ನೆನಪಿಸಿಕೊಳ್ಳುವ ಚಂದ್ರಿ, ಕೊನೆಗೆ ಅವ್ವನ ಮಡಿಲಲ್ಲೇ ಪ್ರಾಣ ಬಿಡುವುದು ದುರಂತದ ಅಂತ್ಯವೆನಿಸಬಹುದು. ಕತೆಗಾರರು ಚಂದ್ರಿಯ ಬದುಕನ್ನು ಹಸನುಗೊಳಿಸಬಹುದಿತ್ತು ಎಂದುಕೊಂಡರೆ ಅದು ಹಿಪೋಕ್ರಸಿಯಾಗಿಬಿಡುತ್ತದೆಯೇ ಎಂಬ ಪ್ರಶ್ನೆ ಏಳುತ್ತದೆ. ಬದುಕುಗಳೇ ಹೀಗರುವಾಗ ನಮ್ಮ ಕಲ್ಪನೆಗಳಲ್ಲಿ ಮಾತ್ರ ಹಸನುಗೊಳಿಸುವುದು ಎಲ್ಲಿಯ ನ್ಯಾಯ?

ಕಾದಂಬರಿಯ ಭಾಷೆ, ಕಟ್ಟಿರುವ ಬಗೆ ಸರಾಗವಾಗಿ ಒಂದೇ ಗುಕ್ಕಿಗೆ ಓದಿಸಿಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ. ಹೆಣ್ಣಿನ ಆಂತರ್ಯದ ಕಣ್ಣಿನ ಭಾಷೆಯಾಗುವುದು ಒಮ್ಮೊಮ್ಮೆ ಹೆಂಗಸರಿಗೇ ಕಷ್ಟವಾಗುವಾಗ ಗಂಗಪ್ಪನವರು ಅವಳ ಒಳಗುದಿಯನ್ನು ಸಲೀಸಾಗಿ ನಮ್ಮ ಮುಂದಿಟ್ಟಿರುವ ದಿಟ್ಟತನಕ್ಕೆ ಶರಣನೆನ್ನಲೇಬೇಕು.

’ತಮಟೆ ಪುಸ್ತಕ’ದ ಮೊದಲ ಪ್ರಕಟಣೆಯಾದ ’ಧಾವತಿ’ ಹಲವು ಬಗೆಯ ಚರ್ಚೆಗಳನ್ನು ಬಿಡುಗಡೆಯಾದಾಗಿನಿಂದಲೂ ಎಬ್ಬಿಸುತ್ತಿರುವುದು ಗಂಗಪ್ಪನವರು ಈ ಕಾದಂಬರಿಯನ್ನು ದಿಟ್ಟವಾಗಿ ಕಟ್ಟಿಕೊಟ್ಟಿರುವುದಕ್ಕೆ ಸಾಕ್ಷಿಯಾಗಿದೆ.

ಅಶ್ವಿನಿ ಆರ್ ಆರ್

ಅಶ್ವಿನಿ ಆರ್ ಆರ್
ಕನ್ನಡ ಉಪನ್ಯಾಸಕಿ ಮತ್ತು ಸಾಮಾಜಿಕ ಕಾರ್ಯಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...