Homeಕರ್ನಾಟಕಜಿಲ್ಲಾ ಉಸ್ತುವಾರಿ ಸಚಿವರು ಎಂಬ ಕಲ್ಪನೆ ಮತ್ತು ಮಹತ್ವ

ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಕಲ್ಪನೆ ಮತ್ತು ಮಹತ್ವ

- Advertisement -
- Advertisement -

ಆಡಳಿತಾತ್ಮಕ ಅನುಕೂಲಕ್ಕಾಗಿ ಕೆಲ ರಾಜ್ಯಗಳಲ್ಲಿ ಮಾತ್ರ ಸೃಷ್ಟಿಯಾದ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಹುದ್ದೆಯು ಸದ್ಯ ಭಾರತದ ಬಹುತೇಕ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದೆ. ಮಹಾರಾಷ್ಟ್ರದಲ್ಲಿ ಪಾಲಿಕ ಸಚಿವರು ಎಂಬುದಾಗಿ ಅದನ್ನು ಕರೆಯಲಾಗುತ್ತಿತ್ತು. ತದನಂತರ ಕರ್ನಾಟಕದಲ್ಲಿ 70-80ರ ದಶಕದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಹುದ್ದೆಗಳನ್ನು ಸೃಷ್ಟಿಸಲಾಯಿತು. ಇಂಗ್ಲಿಷ್‌ನಲ್ಲಿ District In-Charge Minister ಎಂಬುದನ್ನು Guardian minister ಅಂತಲೂ ಕರೆಯುತ್ತಾರೆ. ತೀರಾ ಇತ್ತೀಚೆಗೆ 2021ರಲ್ಲಿ ಅಸ್ಸಾಂ ರಾಜ್ಯ ಸಹ ಈ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕಲ್ಪನೆ ಹೇಗೆ ಬಂತು?

ರಾಜ್ಯದೊಳಗಿನ ಹಲವು ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸರ್ಕಾರದ ಕಡೆಯಿಂದ ಒಬ್ಬ ಮಂತ್ರಿ ಇದ್ದರೆ ಅನುಕೂಲ ಎಂದು ಭಾವಿಸಿ ಈ ಹುದ್ದೆಯನ್ನು ಸೃಷ್ಟಿಸಲಾಯಿತು. ಇದು ಸಾಂವಿಧಾನಿಕ ಹುದ್ದೆಯಲ್ಲ. ಬದಲಿಗೆ ಆಡಳಿತದ ಅನುಕೂಲಕ್ಕಾಗಿ ಸೃಷ್ಟಿಸಿದ ಹುದ್ದೆಯಾಗಿದೆ. ಆದರೆ ಉಪಮುಖ್ಯಮಂತ್ರಿ ಹುದ್ದೆಯ ರೀತಿಯ ಮಹತ್ವ ಮತ್ತು ಪ್ರತಿಷ್ಠೆಯನ್ನು ಇದು ಹೊಂದಿದೆ. ಈಗಾಗಲೇ ಮಂತ್ರಿಯಾಗಿ ಸಂಪುಟದಲ್ಲಿ ಸ್ಥಾನ ಪಡೆದವರಿಗೆ ಕೆಲ ಜಿಲ್ಲೆಗಳ ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ವಹಿಸುತ್ತಾರೆ.

ದೇವರಾಜ ಅರಸು

ಆಯಾಯ ಜಿಲ್ಲೆಯ ಸಚಿವರು ತಮ್ಮದೇ ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡರೆ ಸರಾಗವಾಗಿ ಕೆಲಸ ಮಾಡಬಹುದು ಎಂಬ ಕಲ್ಪನೆಯೊಂದಿಗೆ ಸಾಮಾನ್ಯವಾಗಿ ಸಚಿವರನ್ನು ನೇಮಿಸಲಾಗುತ್ತದೆ. ಆದರೆ ಒಂದು ಜಿಲ್ಲೆಯಿಂದ ಇಬ್ಬರು-ಮೂವರು ಸಚಿವರಿದ್ದಾಗ ಅವರಲ್ಲಿ ಒಬ್ಬರನ್ನು ಮತ್ತು ಆಡಳಿತ ಪಕ್ಷದ ಸಚಿವರು ಇಲ್ಲದ ಜಿಲ್ಲೆಗಳಲ್ಲಿ ಬೇರೆ ಜಿಲ್ಲೆಯ ಸಚಿವರೊಬ್ಬರನ್ನು ನಿಯೋಜಿಸುವುದು ವಾಡಿಕೆಯಲ್ಲಿದೆ. ಕೆಲ ಸಚಿವರಿಗೆ ಎರಡೆರಡು ಜಿಲ್ಲೆಗಳ ಹೊಣೆ ಸಹ ಇರುತ್ತದೆ. ಉಸ್ತುವಾರಿ ಸಚಿವರು ತಾವು ಜವಾಬ್ದಾರಿ ವಹಿಸಿಕೊಂಡ ಜಿಲ್ಲೆಗಳ ಸಮಗ್ರ ಅಭಿವೃದ್ದಿಯ ಹೊಣೆ ಹೊತ್ತಿರುತ್ತಾರೆ. ತಮ್ಮ ಜಿಲ್ಲೆಗಳ ಬೇಕುಬೇಡಗಳನ್ನು ಗ್ರಹಿಸಿ ಅದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಗತಗೊಳಿಸುವುದು ಅವರ ಕೆಲಸ.

ಒಂದರ್ಥದಲ್ಲಿ ಉಸ್ತುವಾರಿ ಮಂತ್ರಿಗಳು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತದ ನಡುವಿನ ಕೊಂಡಿಯಾಗಿ ಕೆಲಸ ನಿರ್ವಹಿಸಬೇಕು. ಪ್ರತಿ ತಿಂಗಳು ಎಲ್ಲಾ ಇಲಾಖೆಗಳ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ಮೇಲ್ವಿಚಾರಣೆ ಮಾಡಬೇಕಿರುತ್ತದೆ. ಜಿಲ್ಲೆಗೆ ಬೇಕಾದ ಅನುದಾನ ತರಲು ಯತ್ನಿಸಬೇಕು, ಜಿಲ್ಲೆಯಲ್ಲಿ ನಡೆಯುವ ಯಾವುದೇ ಅವಘಡದ, ಸಮಸ್ಯೆಗಳ ಹೊಣೆ ಹೊರಬೇಕು- ಹೀಗೆ ಮುಂತಾದ ಜವಾಬ್ದಾರಿಗಳು ಇರುತ್ತವೆ. ಉತ್ತರ ಪ್ರದೇಶದಂತಹ ಕೆಲ ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ರಾಜ್ಯಗಳು ಈ ಮಾದರಿಯನ್ನು ಅಳವಡಿಸಿಕೊಂಡಿವೆ.

ಕರ್ನಾಟಕದಲ್ಲಿ ಉಸ್ತುವಾರಿ ಮಂತ್ರಿಗಳಿಗೆ ಇರುವ ಮಹತ್ವ

ಜಿಲ್ಲೆಯ ಯಾವುದೇ ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ಉಸ್ತುವಾರಿ ಸಚಿವರೇ ನೆರವೇರಿಸಬೇಕೆಂಬ ಪ್ರೊಟೋಕಾಲ್‌ಅನ್ನು ರಾಜ್ಯದಲ್ಲಿ ವಿಧಿಸಿಕೊಳ್ಳಲಾಗಿದೆ. ಸಚಿವರು ನಿಜವಾಗಿಯೂ ಇಚ್ಛಾಶಕ್ತಿಯಿಂದ ಕೆಲಸ ಮಾಡಿದ್ದಾದರೆ, ಇಡೀ ಜಿಲ್ಲೆಯಲ್ಲಿ ತಮ್ಮ ವರ್ಚಸ್ಸು ಮತ್ತು ಆಡಳಿತ ಸರ್ಕಾರದ ಪ್ರಭಾವ ಬೀರಬಹುದು. ಹಿಂದೆ ಮಹಾರಾಷ್ಟ್ರದ ಪುಣೆ ನಗರದ ಉಸ್ತುವಾರಿ ವಹಿಸಿಕೊಂಡ ಎನ್‌ಸಿಪಿ ಪಕ್ಷದ ಅಜಿತ್ ಪವಾರ್‌ರವರು ಅಲ್ಲಿ ಸಾಕಷ್ಟು ಪ್ರಭಾವ ಬೀರಿದ ನಂತರ, ಅಲ್ಲಿಯವರೆಗೂ ಅಷ್ಟೇನೂ ನೆಲೆ ಹೊಂದಿರದ ಎನ್‌ಸಿಪಿ ಪಕ್ಷವು ನಂತರದ ದಿನಗಳಲ್ಲಿ ಅಲ್ಲಿನ ಮಹಾನಗರ ಪಾಲಿಕೆ ಸೇರಿದಂತೆ ಇತರ ಚುನಾವಣೆಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು ಎಂದು ಹೇಳಲಾಗುತ್ತದೆ.

ಸಿದ್ದರಾಮಯ್ಯ

ಕರ್ನಾಟಕದಲ್ಲಿ ದೇವರಾಜ ಅರಸುರವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಈ ಉಸ್ತುವಾರಿ ಸಚಿವರು ಬಹಳ ಒಳ್ಳೆಯ ಕೆಲಸ ಮಾಡಿದ್ದರೆಂಬ ಅಭಿಪ್ರಾಯಗಳಿವೆ. ನಜೀರ್ ಸಾಬ್‌ರವರು ಸೇರಿದಂತೆ ಹಲವು ಸಚಿವರ ಪರಿಣಾಮಕಾರಿಯಾಗಿ ಕೆಲಸ ಮಾಡಿ ಹೆಸರುಗಳಿಸಿದ್ದಾರೆ.

ಸಾಧಕ-ಬಾಧಕಗಳು

ಸಚಿವರು ತಮ್ಮದಲ್ಲದ ಜಿಲ್ಲೆಗೆ ಉಸ್ತುವಾರಿಯಾದಾಗ ಹೆಚ್ಚಿನ ಸಮಯ ಕೊಡಲಾಗುವುದಿಲ್ಲ ಎಂಬ ಆರೋಪವಿದೆ. ಅದರಲ್ಲಿಯೂ ಅವರ ಸ್ವಕ್ಷೇತ್ರ ಮತ್ತು ಉಸ್ತುವಾರಿ ಜಿಲ್ಲೆಯ ನಡುವಿನ ಅಂತರ ಹೆಚ್ಚಿದ್ದಷ್ಟು ಅವರ ಭೇಟಿ ಕಡಿಮೆಯಾಗುತ್ತಿರುತ್ತದೆ. ಇನ್ನೊಂದೆಡೆ ಸ್ವಂತ ಜಿಲ್ಲೆಯ ಉಸ್ತುವಾರಿ ಪಡೆದವರು ಸಹ ತಮ್ಮತಮ್ಮ ಕ್ಷೇತ್ರಕ್ಕೆ ಮಾತ್ರ ಹೆಚ್ಚು ಸೀಮಿತರಾಗಿರುತ್ತಾರೆಯೇ ಹೊರತು ಇಡೀ ಜಿಲ್ಲೆಯ ಅಭಿವೃದ್ಧಿ ಕುರಿತು ಗಮನವಹಿಸುವುದಿಲ್ಲ ಎಂಬ ಆಪಾದನೆಗಳಿವೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: ಮಹಿಳೆಯರ ವಿಚಾರದಲ್ಲಿ ಮಾಡಿದ ತಪ್ಪನ್ನು ಕಾಂಗ್ರೆಸ್‌ ಈಗಲಾದರೂ ತಿದ್ದಿಕೊಂಡೀತೇ?

ಗಮನಿಸಬೇಕಾದ ಅಂಶವೆಂದರೆ ಕಳೆದ ಬೊಮ್ಮಾಯಿಯವರ ಸರ್ಕಾರದಲ್ಲಿ ಬಿ.ಶ್ರೀರಾಮುಲು ಒಬ್ಬರು ತಮ್ಮ ಸ್ವಂತ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರು ಶಾಸಕರಾಗಿ ಆಯ್ಕೆಯಾಗಿದ್ದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ. ಉಳಿದ 30 ಸಚಿವರಿಗೆ ತಮ್ಮದಲ್ಲದ ಬೇರೆಯ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ತುಮಕೂರಿನವರಾದ ಬಿ.ಸಿ ನಾಗೇಶ್ ಅವರಿಗೆ ಕೊಡಗು ಜಿಲ್ಲೆಯ ಜವಾಬ್ದಾರಿ ನೀಡಿದರೆ, ಶಿವಮೊಗ್ಗದ ಆರಗ ಜ್ಞಾನೇಂದ್ರರವರಿಗೆ ತುಮಕೂರಿನ ಜವಾಬ್ದಾರಿ ವಹಿಸಲಾಗಿತ್ತು. ಅದಕ್ಕೂ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರಿಗೆ ಮಾತ್ರ ಅವರ ಸ್ವಂತ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿತ್ತು. 11 ಸಚಿವರಿಗೆ ತಲಾ 2 ಜಿಲ್ಲೆಗಳ ಉಸ್ತುವಾರಿ ನೀಡಲಾಗಿತ್ತು.

ಸದ್ಯ ಸಿದ್ದರಾಮಯ್ಯನವರ ಸಂಪುಟದಲ್ಲಿ 18 ಸಚಿವರು ತಮ್ಮ ಸ್ವಂತ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. 8 ಸಚಿವರಿಗೆ ಅಕ್ಕಪಕ್ಕದ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಉಳಿದ 5 ಸಚಿವರು ಮಾತ್ರ ದೂರದ ಬೇರೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಜೊತೆಗೆ ಕೃಷ್ಣಭೈರೇಗೌಡ ಮತ್ತು ರಹೀಂ ಖಾನ್ ಯಾವುದೇ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿಕೊಂಡಿಲ್ಲ. ಅಷ್ಟರಮಟ್ಟಿಗೆ ಉಸ್ತುವಾರಿ ಹಂಚಿಕೆಯಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಕಾರಾತ್ಮಕ ಬದಲಾವಣೆ ಬಂದಿದೆ ಎನ್ನಬಹುದು. ಆದರೆ ಈ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಮಾಡುವ ಕೆಲಸವನ್ನು ಪರಾಮರ್ಶಿಸಲು ಇನ್ನೂ ಸಾಕಷ್ಟು ಸಮಯವಿದೆ.

ಉಸ್ತುವಾರಿ ಸಚಿವರು ತಮ್ಮ ಇಡೀ ಜಿಲ್ಲೆಯನ್ನು ಸುತ್ತಿ ಜನರ ಸಂಕಷ್ಟಗಳನ್ನು ಆಲಿಸಿ ಪರಿಹಾರ ಸೂಚಿಸಬೇಕು. ಅವರು ಒಂದು ಇಲಾಖೆಯ ಸಚಿವರೂ ಸಹ ಆಗಿರುವುದರಿಂದ ಅವರಿಗೆ ಇಡೀ ರಾಜ್ಯದ ಪರಿಚಯವಿರಬೇಕು ಮತ್ತು ಇಡೀ ರಾಜ್ಯವನ್ನು ಸುತ್ತಬೇಕು. ಕೇವಲ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರೆ ಪ್ರಯೋಜನವಾಗುವುದಿಲ್ಲ. ಏಕೆಂದರೆ ಅಧಿಕಾರಿಗಳು ಎಂದಿಗೂ ತಮ್ಮ ವಶನ್ ಹೇಳುತ್ತಾರೆಯೇ ಹೊರತು ಜನರ ಧ್ವನಿಯಾಗಿರುವುದಿಲ್ಲ. ಇನ್ನು ಸಚಿವರು ಬೇರೆ ಜಿಲ್ಲೆಗಳಿಗೆ ಹೋದಾಗಲೆಲ್ಲ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೇ ಅವರನ್ನು ಸುತ್ತುವರೆದಿರುತ್ತಾರೆ. ಹಾಗಾಗಿ ನಿಜವಾಗಿಯೂ ಜನರ ಸ್ಥಿತಿ ಅರಿಯಲು ಸಾಧ್ಯವಾಗುವುದಿಲ್ಲ. ಈ ಎಲ್ಲಾ ಅಡೆತಡೆಗಳನ್ನು ಮೀರಲು ಸಚಿವರು ಯತ್ನಿಸಬೇಕು. ಅದರಲ್ಲಿಯೂ ದೂರದ ಜಿಲ್ಲೆಗಳ ಉಸ್ತುವಾರಿ ಹೊತ್ತವರಂತೂ ಅದೇ ಜಿಲ್ಲೆಯ ತಾಲ್ಲೂಕು ಕೇಂದ್ರದಲ್ಲಿ ವಾಸ್ತವ್ಯ ಹೂಡಬೇಕು. ಆಗ ಮಾತ್ರ ಜನರ ಸ್ಥಿತಿ ಸ್ವಲ್ಪಮಟ್ಟಿಗೆ ಅವರ ಅರಿವಿಗೆ ಬರಲು ಸಾಧ್ಯ. ಆದರೆ ಇಷ್ಟು ಬದ್ಧತೆಯನ್ನು ನಮ್ಮ ಸಚಿವರು ತೋರುತ್ತಾರೆಯೇ? ಅವರು ಹಾಗೆ ಮಾಡಲು ಜನರು ಒತ್ತಡ ಹೇರುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...