Homeಕರ್ನಾಟಕಜಿಲ್ಲಾ ಉಸ್ತುವಾರಿ ಸಚಿವರು ಎಂಬ ಕಲ್ಪನೆ ಮತ್ತು ಮಹತ್ವ

ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಕಲ್ಪನೆ ಮತ್ತು ಮಹತ್ವ

- Advertisement -
- Advertisement -

ಆಡಳಿತಾತ್ಮಕ ಅನುಕೂಲಕ್ಕಾಗಿ ಕೆಲ ರಾಜ್ಯಗಳಲ್ಲಿ ಮಾತ್ರ ಸೃಷ್ಟಿಯಾದ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಹುದ್ದೆಯು ಸದ್ಯ ಭಾರತದ ಬಹುತೇಕ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದೆ. ಮಹಾರಾಷ್ಟ್ರದಲ್ಲಿ ಪಾಲಿಕ ಸಚಿವರು ಎಂಬುದಾಗಿ ಅದನ್ನು ಕರೆಯಲಾಗುತ್ತಿತ್ತು. ತದನಂತರ ಕರ್ನಾಟಕದಲ್ಲಿ 70-80ರ ದಶಕದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಎಂಬ ಹುದ್ದೆಗಳನ್ನು ಸೃಷ್ಟಿಸಲಾಯಿತು. ಇಂಗ್ಲಿಷ್‌ನಲ್ಲಿ District In-Charge Minister ಎಂಬುದನ್ನು Guardian minister ಅಂತಲೂ ಕರೆಯುತ್ತಾರೆ. ತೀರಾ ಇತ್ತೀಚೆಗೆ 2021ರಲ್ಲಿ ಅಸ್ಸಾಂ ರಾಜ್ಯ ಸಹ ಈ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕಲ್ಪನೆ ಹೇಗೆ ಬಂತು?

ರಾಜ್ಯದೊಳಗಿನ ಹಲವು ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸರ್ಕಾರದ ಕಡೆಯಿಂದ ಒಬ್ಬ ಮಂತ್ರಿ ಇದ್ದರೆ ಅನುಕೂಲ ಎಂದು ಭಾವಿಸಿ ಈ ಹುದ್ದೆಯನ್ನು ಸೃಷ್ಟಿಸಲಾಯಿತು. ಇದು ಸಾಂವಿಧಾನಿಕ ಹುದ್ದೆಯಲ್ಲ. ಬದಲಿಗೆ ಆಡಳಿತದ ಅನುಕೂಲಕ್ಕಾಗಿ ಸೃಷ್ಟಿಸಿದ ಹುದ್ದೆಯಾಗಿದೆ. ಆದರೆ ಉಪಮುಖ್ಯಮಂತ್ರಿ ಹುದ್ದೆಯ ರೀತಿಯ ಮಹತ್ವ ಮತ್ತು ಪ್ರತಿಷ್ಠೆಯನ್ನು ಇದು ಹೊಂದಿದೆ. ಈಗಾಗಲೇ ಮಂತ್ರಿಯಾಗಿ ಸಂಪುಟದಲ್ಲಿ ಸ್ಥಾನ ಪಡೆದವರಿಗೆ ಕೆಲ ಜಿಲ್ಲೆಗಳ ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ವಹಿಸುತ್ತಾರೆ.

ದೇವರಾಜ ಅರಸು

ಆಯಾಯ ಜಿಲ್ಲೆಯ ಸಚಿವರು ತಮ್ಮದೇ ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡರೆ ಸರಾಗವಾಗಿ ಕೆಲಸ ಮಾಡಬಹುದು ಎಂಬ ಕಲ್ಪನೆಯೊಂದಿಗೆ ಸಾಮಾನ್ಯವಾಗಿ ಸಚಿವರನ್ನು ನೇಮಿಸಲಾಗುತ್ತದೆ. ಆದರೆ ಒಂದು ಜಿಲ್ಲೆಯಿಂದ ಇಬ್ಬರು-ಮೂವರು ಸಚಿವರಿದ್ದಾಗ ಅವರಲ್ಲಿ ಒಬ್ಬರನ್ನು ಮತ್ತು ಆಡಳಿತ ಪಕ್ಷದ ಸಚಿವರು ಇಲ್ಲದ ಜಿಲ್ಲೆಗಳಲ್ಲಿ ಬೇರೆ ಜಿಲ್ಲೆಯ ಸಚಿವರೊಬ್ಬರನ್ನು ನಿಯೋಜಿಸುವುದು ವಾಡಿಕೆಯಲ್ಲಿದೆ. ಕೆಲ ಸಚಿವರಿಗೆ ಎರಡೆರಡು ಜಿಲ್ಲೆಗಳ ಹೊಣೆ ಸಹ ಇರುತ್ತದೆ. ಉಸ್ತುವಾರಿ ಸಚಿವರು ತಾವು ಜವಾಬ್ದಾರಿ ವಹಿಸಿಕೊಂಡ ಜಿಲ್ಲೆಗಳ ಸಮಗ್ರ ಅಭಿವೃದ್ದಿಯ ಹೊಣೆ ಹೊತ್ತಿರುತ್ತಾರೆ. ತಮ್ಮ ಜಿಲ್ಲೆಗಳ ಬೇಕುಬೇಡಗಳನ್ನು ಗ್ರಹಿಸಿ ಅದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಗತಗೊಳಿಸುವುದು ಅವರ ಕೆಲಸ.

ಒಂದರ್ಥದಲ್ಲಿ ಉಸ್ತುವಾರಿ ಮಂತ್ರಿಗಳು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತದ ನಡುವಿನ ಕೊಂಡಿಯಾಗಿ ಕೆಲಸ ನಿರ್ವಹಿಸಬೇಕು. ಪ್ರತಿ ತಿಂಗಳು ಎಲ್ಲಾ ಇಲಾಖೆಗಳ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ಮೇಲ್ವಿಚಾರಣೆ ಮಾಡಬೇಕಿರುತ್ತದೆ. ಜಿಲ್ಲೆಗೆ ಬೇಕಾದ ಅನುದಾನ ತರಲು ಯತ್ನಿಸಬೇಕು, ಜಿಲ್ಲೆಯಲ್ಲಿ ನಡೆಯುವ ಯಾವುದೇ ಅವಘಡದ, ಸಮಸ್ಯೆಗಳ ಹೊಣೆ ಹೊರಬೇಕು- ಹೀಗೆ ಮುಂತಾದ ಜವಾಬ್ದಾರಿಗಳು ಇರುತ್ತವೆ. ಉತ್ತರ ಪ್ರದೇಶದಂತಹ ಕೆಲ ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ರಾಜ್ಯಗಳು ಈ ಮಾದರಿಯನ್ನು ಅಳವಡಿಸಿಕೊಂಡಿವೆ.

ಕರ್ನಾಟಕದಲ್ಲಿ ಉಸ್ತುವಾರಿ ಮಂತ್ರಿಗಳಿಗೆ ಇರುವ ಮಹತ್ವ

ಜಿಲ್ಲೆಯ ಯಾವುದೇ ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ಉಸ್ತುವಾರಿ ಸಚಿವರೇ ನೆರವೇರಿಸಬೇಕೆಂಬ ಪ್ರೊಟೋಕಾಲ್‌ಅನ್ನು ರಾಜ್ಯದಲ್ಲಿ ವಿಧಿಸಿಕೊಳ್ಳಲಾಗಿದೆ. ಸಚಿವರು ನಿಜವಾಗಿಯೂ ಇಚ್ಛಾಶಕ್ತಿಯಿಂದ ಕೆಲಸ ಮಾಡಿದ್ದಾದರೆ, ಇಡೀ ಜಿಲ್ಲೆಯಲ್ಲಿ ತಮ್ಮ ವರ್ಚಸ್ಸು ಮತ್ತು ಆಡಳಿತ ಸರ್ಕಾರದ ಪ್ರಭಾವ ಬೀರಬಹುದು. ಹಿಂದೆ ಮಹಾರಾಷ್ಟ್ರದ ಪುಣೆ ನಗರದ ಉಸ್ತುವಾರಿ ವಹಿಸಿಕೊಂಡ ಎನ್‌ಸಿಪಿ ಪಕ್ಷದ ಅಜಿತ್ ಪವಾರ್‌ರವರು ಅಲ್ಲಿ ಸಾಕಷ್ಟು ಪ್ರಭಾವ ಬೀರಿದ ನಂತರ, ಅಲ್ಲಿಯವರೆಗೂ ಅಷ್ಟೇನೂ ನೆಲೆ ಹೊಂದಿರದ ಎನ್‌ಸಿಪಿ ಪಕ್ಷವು ನಂತರದ ದಿನಗಳಲ್ಲಿ ಅಲ್ಲಿನ ಮಹಾನಗರ ಪಾಲಿಕೆ ಸೇರಿದಂತೆ ಇತರ ಚುನಾವಣೆಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು ಎಂದು ಹೇಳಲಾಗುತ್ತದೆ.

ಸಿದ್ದರಾಮಯ್ಯ

ಕರ್ನಾಟಕದಲ್ಲಿ ದೇವರಾಜ ಅರಸುರವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಈ ಉಸ್ತುವಾರಿ ಸಚಿವರು ಬಹಳ ಒಳ್ಳೆಯ ಕೆಲಸ ಮಾಡಿದ್ದರೆಂಬ ಅಭಿಪ್ರಾಯಗಳಿವೆ. ನಜೀರ್ ಸಾಬ್‌ರವರು ಸೇರಿದಂತೆ ಹಲವು ಸಚಿವರ ಪರಿಣಾಮಕಾರಿಯಾಗಿ ಕೆಲಸ ಮಾಡಿ ಹೆಸರುಗಳಿಸಿದ್ದಾರೆ.

ಸಾಧಕ-ಬಾಧಕಗಳು

ಸಚಿವರು ತಮ್ಮದಲ್ಲದ ಜಿಲ್ಲೆಗೆ ಉಸ್ತುವಾರಿಯಾದಾಗ ಹೆಚ್ಚಿನ ಸಮಯ ಕೊಡಲಾಗುವುದಿಲ್ಲ ಎಂಬ ಆರೋಪವಿದೆ. ಅದರಲ್ಲಿಯೂ ಅವರ ಸ್ವಕ್ಷೇತ್ರ ಮತ್ತು ಉಸ್ತುವಾರಿ ಜಿಲ್ಲೆಯ ನಡುವಿನ ಅಂತರ ಹೆಚ್ಚಿದ್ದಷ್ಟು ಅವರ ಭೇಟಿ ಕಡಿಮೆಯಾಗುತ್ತಿರುತ್ತದೆ. ಇನ್ನೊಂದೆಡೆ ಸ್ವಂತ ಜಿಲ್ಲೆಯ ಉಸ್ತುವಾರಿ ಪಡೆದವರು ಸಹ ತಮ್ಮತಮ್ಮ ಕ್ಷೇತ್ರಕ್ಕೆ ಮಾತ್ರ ಹೆಚ್ಚು ಸೀಮಿತರಾಗಿರುತ್ತಾರೆಯೇ ಹೊರತು ಇಡೀ ಜಿಲ್ಲೆಯ ಅಭಿವೃದ್ಧಿ ಕುರಿತು ಗಮನವಹಿಸುವುದಿಲ್ಲ ಎಂಬ ಆಪಾದನೆಗಳಿವೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: ಮಹಿಳೆಯರ ವಿಚಾರದಲ್ಲಿ ಮಾಡಿದ ತಪ್ಪನ್ನು ಕಾಂಗ್ರೆಸ್‌ ಈಗಲಾದರೂ ತಿದ್ದಿಕೊಂಡೀತೇ?

ಗಮನಿಸಬೇಕಾದ ಅಂಶವೆಂದರೆ ಕಳೆದ ಬೊಮ್ಮಾಯಿಯವರ ಸರ್ಕಾರದಲ್ಲಿ ಬಿ.ಶ್ರೀರಾಮುಲು ಒಬ್ಬರು ತಮ್ಮ ಸ್ವಂತ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರು ಶಾಸಕರಾಗಿ ಆಯ್ಕೆಯಾಗಿದ್ದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ. ಉಳಿದ 30 ಸಚಿವರಿಗೆ ತಮ್ಮದಲ್ಲದ ಬೇರೆಯ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ತುಮಕೂರಿನವರಾದ ಬಿ.ಸಿ ನಾಗೇಶ್ ಅವರಿಗೆ ಕೊಡಗು ಜಿಲ್ಲೆಯ ಜವಾಬ್ದಾರಿ ನೀಡಿದರೆ, ಶಿವಮೊಗ್ಗದ ಆರಗ ಜ್ಞಾನೇಂದ್ರರವರಿಗೆ ತುಮಕೂರಿನ ಜವಾಬ್ದಾರಿ ವಹಿಸಲಾಗಿತ್ತು. ಅದಕ್ಕೂ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ 8 ಸಚಿವರಿಗೆ ಮಾತ್ರ ಅವರ ಸ್ವಂತ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿತ್ತು. 11 ಸಚಿವರಿಗೆ ತಲಾ 2 ಜಿಲ್ಲೆಗಳ ಉಸ್ತುವಾರಿ ನೀಡಲಾಗಿತ್ತು.

ಸದ್ಯ ಸಿದ್ದರಾಮಯ್ಯನವರ ಸಂಪುಟದಲ್ಲಿ 18 ಸಚಿವರು ತಮ್ಮ ಸ್ವಂತ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. 8 ಸಚಿವರಿಗೆ ಅಕ್ಕಪಕ್ಕದ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಉಳಿದ 5 ಸಚಿವರು ಮಾತ್ರ ದೂರದ ಬೇರೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಜೊತೆಗೆ ಕೃಷ್ಣಭೈರೇಗೌಡ ಮತ್ತು ರಹೀಂ ಖಾನ್ ಯಾವುದೇ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿಕೊಂಡಿಲ್ಲ. ಅಷ್ಟರಮಟ್ಟಿಗೆ ಉಸ್ತುವಾರಿ ಹಂಚಿಕೆಯಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಕಾರಾತ್ಮಕ ಬದಲಾವಣೆ ಬಂದಿದೆ ಎನ್ನಬಹುದು. ಆದರೆ ಈ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಮಾಡುವ ಕೆಲಸವನ್ನು ಪರಾಮರ್ಶಿಸಲು ಇನ್ನೂ ಸಾಕಷ್ಟು ಸಮಯವಿದೆ.

ಉಸ್ತುವಾರಿ ಸಚಿವರು ತಮ್ಮ ಇಡೀ ಜಿಲ್ಲೆಯನ್ನು ಸುತ್ತಿ ಜನರ ಸಂಕಷ್ಟಗಳನ್ನು ಆಲಿಸಿ ಪರಿಹಾರ ಸೂಚಿಸಬೇಕು. ಅವರು ಒಂದು ಇಲಾಖೆಯ ಸಚಿವರೂ ಸಹ ಆಗಿರುವುದರಿಂದ ಅವರಿಗೆ ಇಡೀ ರಾಜ್ಯದ ಪರಿಚಯವಿರಬೇಕು ಮತ್ತು ಇಡೀ ರಾಜ್ಯವನ್ನು ಸುತ್ತಬೇಕು. ಕೇವಲ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರೆ ಪ್ರಯೋಜನವಾಗುವುದಿಲ್ಲ. ಏಕೆಂದರೆ ಅಧಿಕಾರಿಗಳು ಎಂದಿಗೂ ತಮ್ಮ ವಶನ್ ಹೇಳುತ್ತಾರೆಯೇ ಹೊರತು ಜನರ ಧ್ವನಿಯಾಗಿರುವುದಿಲ್ಲ. ಇನ್ನು ಸಚಿವರು ಬೇರೆ ಜಿಲ್ಲೆಗಳಿಗೆ ಹೋದಾಗಲೆಲ್ಲ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೇ ಅವರನ್ನು ಸುತ್ತುವರೆದಿರುತ್ತಾರೆ. ಹಾಗಾಗಿ ನಿಜವಾಗಿಯೂ ಜನರ ಸ್ಥಿತಿ ಅರಿಯಲು ಸಾಧ್ಯವಾಗುವುದಿಲ್ಲ. ಈ ಎಲ್ಲಾ ಅಡೆತಡೆಗಳನ್ನು ಮೀರಲು ಸಚಿವರು ಯತ್ನಿಸಬೇಕು. ಅದರಲ್ಲಿಯೂ ದೂರದ ಜಿಲ್ಲೆಗಳ ಉಸ್ತುವಾರಿ ಹೊತ್ತವರಂತೂ ಅದೇ ಜಿಲ್ಲೆಯ ತಾಲ್ಲೂಕು ಕೇಂದ್ರದಲ್ಲಿ ವಾಸ್ತವ್ಯ ಹೂಡಬೇಕು. ಆಗ ಮಾತ್ರ ಜನರ ಸ್ಥಿತಿ ಸ್ವಲ್ಪಮಟ್ಟಿಗೆ ಅವರ ಅರಿವಿಗೆ ಬರಲು ಸಾಧ್ಯ. ಆದರೆ ಇಷ್ಟು ಬದ್ಧತೆಯನ್ನು ನಮ್ಮ ಸಚಿವರು ತೋರುತ್ತಾರೆಯೇ? ಅವರು ಹಾಗೆ ಮಾಡಲು ಜನರು ಒತ್ತಡ ಹೇರುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...