Homeಪುಸ್ತಕ ವಿಮರ್ಶೆ’ನದಿಯೊಂದು ನಿದ್ರಿಸಿದಾಗ’: ವಿಶಿಷ್ಟ ಆಚರಣೆಗಳು, ನಂಬಿಕೆಗಳು, ಪೂರ್ವಜರ ಆರಾಧನೆಯೇ ಕಾಪಾಡುವ ಬುಡಕಟ್ಟು ಚಿತ್ರಣ

’ನದಿಯೊಂದು ನಿದ್ರಿಸಿದಾಗ’: ವಿಶಿಷ್ಟ ಆಚರಣೆಗಳು, ನಂಬಿಕೆಗಳು, ಪೂರ್ವಜರ ಆರಾಧನೆಯೇ ಕಾಪಾಡುವ ಬುಡಕಟ್ಟು ಚಿತ್ರಣ

- Advertisement -
- Advertisement -

ನಾಗಲ್ಯಾಂಡ್ ಲೇಖಕಿ ಈಸ್ಟರೀನ್ ಕೀರೆಯವರ ’ನದಿಯೊಂದು ನಿದ್ರಿಸಿದಾಗ’ ಕಾದಂಬರಿ ಓದಿದೆ. 2015ನೇ ಸಾಲಿನ ದ ಹಿಂದೂ (ಪತ್ರಿಕೆ) ಸಾಹಿತ್ಯ ಪ್ರಶಸ್ತಿಯನ್ನ ಪಡೆದುಕೊಂಡ ಕೃತಿ ಮಾಂತ್ರಿಕ ವಾಸ್ತವವಾದವನ್ನು ಬಳಸಿಕೊಂಡು ನಾಗಲ್ಯಾಂಡ್ ಬುಡಕಟ್ಟು ಜನಾಂಗದ ಕಠಿಣ ಬದುಕನ್ನ ಸರಳ ನಿರೂಪಣೆಯ ಮೂಲಕ ತೋರಿಸಿಕೊಟ್ಟಿದೆ. ಬುಡಕಟ್ಟು ಜನಾಂಗ ಎಂದಾಗ ನೆನಪಿಗೆ ಬಂದಿದ್ದು ಪಂಜಾಬಿ ಲೇಖಕ ಹಾಗೂ ಚಳವಳಿಯ ಸಂಗಾತಿ ಸತ್ನಾಮ್ ಬರೆದಿರುವ ಪ್ರವಾಸಕಥನದ ದಾಟಿಯಲ್ಲಿರುವ ’ಜಂಗಲ್ ನಾಮಾ’ ಪುಸ್ತಕ. ಆದಿವಾಸಿ ಸಮುದಾಯಗಳು ನಾಗರಿಕ ಜಗತ್ತಿನೊಂದಿಗೆ ದೂರವಿದ್ದು ಬದುಕುವ ಪರಿ ಅಚ್ಚರಿಯಾದದ್ದು. ಶಿಕ್ಷಣ ಮತ್ತು ಅನೇಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಆದಿವಾಸಿಗಳೂ ಕಾಡಿನಲ್ಲೇ ತಮ್ಮ ಬದುಕನ್ನ ಕಟ್ಟಿಕೊಂಡಿದ್ದಾರೆ; ಆಧುನೀಕರಣದ ಹೆಸರಲ್ಲಿ ಕಾಡನ್ನ ಮತ್ತು ಬದುಕನ್ನ ನಾಶಮಾಡುವ ಬಂಡವಾಳಶಾಹಿಗಳ ಕ್ರೂರತೆಯನ್ನ ’ಜಂಗಲ್ ನಾಮಾ’ ಅತ್ಯಂತ ಅಚ್ಚುಕಟ್ಟಾಗಿ ಚಿತ್ರಿಸಿದೆ. ಕೊನೆಗೆ ಸರಕಾರದಿಂದ ಬೇಸತ್ತು ಚಳವಳಿಗೆ ಕಾಲಿಡುವ ಚಿತ್ರಣವನ್ನು ಹಂತಹಂತವಾಗಿ ಕಟ್ಟಿಕೊಡುತ್ತದೆ.

ಆದರೆ ’ನದಿಯೊಂದು ನಿದ್ರಿಸುವಾಗ’ ಕಾದಂಬರಿಯಲ್ಲಿ ಇಲ್ಲಿನ ಜನಾಂಗ ಕೇವಲ ತಮ್ಮ ನಂಬಿಕೆಯೊಂದಿಗೆ ಜೀವಿಸುವ ಚಿತ್ರಣವಿದೆ. ತಮ್ಮನ್ನು ಲೆಕ್ಕಿಸದ, ನಿರ್ಲಕ್ಷಿಸಿದ ಅಲ್ಲಿನ ಆಡಳಿತದ ವಿರುದ್ಧ ಯಾವುದೇ ಪ್ರತಿರೋಧ ನಮಗೆ ಕಾಣಸಿಗುವುದಿಲ್ಲ; ಕಾದಂಬರಿ ಚಲಿಸುವ ದಿಕ್ಕು ಬೇರೆಯೇ ತರಹದ್ದಾಗಿರುವುದರಿಂದ ಪ್ರತಿರೋಧದ ಪ್ರಶ್ನೆಯೇ ಏಳುವುದಿಲ್ಲ. ಕಾದಂಬರಿಯ ಆರಂಭದಲ್ಲಿ ವೀಲಿ ನಿದ್ರಿಸುವ ನದಿಯ ಕನಸನ್ನು ಕಾಣುತ್ತಾನೆ. ಕಾಲಜ್ಞಾನಿಯ ಮಾತಿನಂತೆ ನದಿ ನಿದ್ರಿಸುವಾಗ ನದಿಯ ಮಧ್ಯಭಾಗದಲ್ಲಿ ಮುಳುಗಿ ಹೃದಯದ ಕಲ್ಲನ್ನು ಎತ್ತಿತಂದರೆ ಅದು ಹಣ, ಒಡವೆ, ಆಕಳು ಮತ್ತು ಸುಂದರವಾದ ಹುಡುಗಿಯನ್ನು ಕೊಡುತ್ತದೆಂಬುದು ಕಥಾನಾಯಕ ವೀಲಿಯ ನಂಬಿಕೆ ಮಾತ್ರವಲ್ಲದೇ ಆ ಜನಾಂಗದ ಪ್ರತಿಯೊಬ್ಬರ ನಂಬಿಕೆ. ನಿದ್ರಿಸುವ ನದಿಯನ್ನು ಹುಡುಕುತ್ತಾ ಹೋಗುವ ಕಥಾನಾಯಕನ ಪ್ರಯಾಣದ ಮೂಲಕ, ಯಾವುದೇ ಮೂಲಭೂತ ಅಥವಾ ಆಧುನಿಕ ಸೌಕರ್ಯಗಳಿಲ್ಲದ ಕಾಡಿನ ಹಾಡಿಗಳಲ್ಲಿ ಬುಡಕಟ್ಟು ಸಂಸ್ಕೃತಿಗಳು ಬದುಕನ್ನ ಕಟ್ಟಿಕೊಂಡ ರೀತಿಯನ್ನ ಲೇಖಕಿ ಅತಿ ಸರಳವಾಗಿ ಕಟ್ಟಿಕೊಡುತ್ತಾರೆ.

ಈಸ್ಟರೀನ್ ಕೀರೆ

ಕಾಡಿನ ಜೀವನ ವಿಧಾನ, ಸಾಂಸ್ಕೃತಿಕ ಚೆಲುವಿನಲ್ಲಿ ಭಾಗಿಯಾಗುವುದು, ಮರುಗುವುದು, ಭಯಗೊಳ್ಳುವುದು ಹಾಗೂ ಕೆಲವೊಮ್ಮೆ ಆಶ್ಚರ್ಯಚಕಿತರಾಗುವುದಕ್ಕೆ ಈ ಕೃತಿ ಓದುಗನಿಗೆ ಅವಕಾಶ ನೀಡುತ್ತದೆ; ಆದರೆ, ಉಳ್ಳವನ ಮತ್ತು ಇಲ್ಲದವನ ನಡುವಿನ ಅಂತರ, ಬುಡಕಟ್ಟು ಸಮುದಾಯಗಳ ಬದುಕಿನ ಲೌಖಿಕ ಬಡತನ, ಇವರ ಇಂತಹ ಬದುಕಿಗೆ ಕಾರಣರಾದವರು ಯಾರು ಎಂಬ ವಿಮರ್ಶೆಗೆ ಓದುಗ ಮುಂದಾಗಲು ಬಿಡುವುದಿಲ್ಲ. ಕೃತಿಯ ನಡುವೆ ಕೆಲವೊಂದು ಭಯಾನಕ ಸಂಗತಿಗಳು ಓದುಗನಲ್ಲಿ ದಿಗಿಲು ಹುಟ್ಟಿಸುತ್ತವೆ. ಆತ್ಮದ ಹುಲಿಯೊಂದಿಗೆ ನಡೆಯುವ ಸೆಣಸಾಟ, ಮತ್ತೊಮ್ಮೆ ಕ್ಷುಲ್ಲಕ ಕಾರಣವೊಂದಕ್ಕೆ ಬೇಟೆಗಾರ ಪೇಹುವಿನ ಕೊಲೆ, ನೇಪಾಳಿ ದಂಪತಿಗಳ ಕೊಲೆ, ಕೊನೆಗೆ ವೀಲಿಯ ಸಾವು ಈ ತರಹದ ಭಯಾನಕ ಸಂಗತಿಗಳು ಓದುಗನಿಗೆ ಶಾಕ್ ನೀಡಿ ನೆನಪಲ್ಲಿ ಅಚ್ಚಳಿಯದೇ ಉಳಿಯುತ್ತವೆ. ವೀಲಿಗೆ ಕಾಡಿನಲ್ಲಿ ಹಂತಹಂತವಾಗಿ ಆಶ್ರಯ ನೀಡಿ, ಸಹಾಯ ಮಾಡಿ ಮುಂದಿನ ಪ್ರಯಾಣಕ್ಕೆ ಅಣಿಮಾಡಿಕೊಡುವ ಮಾನವೀಯತೆ ಮತ್ತು ಕರುಣೆ ತುಂಬಿದ ಕುಟುಂಬಗಳು ಕೂಡ ಇಲ್ಲಿ ಕಾಣಸಿಗುತ್ತವೆ.

ಇದನ್ನೂ ಓದಿ: ಸರಮಾಗೋನ ’ಕುರುಡು’ ಕಾದಂಬರಿ: ನಾವು ಕಟ್ಟಿದ ಸ್ವರ್ಗ ದಿಢೀರನೆ ಕುಸಿದಾಗ..!

ನಾಗರಿಕ ಜಗತ್ತು ಯಾವುದನ್ನು ಮೂಢನಂಬಿಕೆಯೆಂದು, ಅತಿಮಾನುಷವೆಂದು ಭಾವಿಸಿದೆಯೋ ಅದನ್ನು ಮಾಂತ್ರಿಕತೆಯ ಮೂಲಕ ವಾಸ್ತವವಾಗಿಸಿದ್ದಾರೆ ಕೀರೆ. ಕರ್ಪ್ಯೂಮಿಯಾ ಹಳ್ಳಿಯಿಂದ ಬಂದಂತಹ ಹೆಂಗಸರು ಶಾಪಗ್ರಸ್ತರು; ಬುಡಕಟ್ಟು ಜನಾಂಗದೊಳಗಡೆನೇ ತಿರಸ್ಕೃತಗೊಂಡು ಕಾಡಿನಲ್ಲಿ ಅವಿವಾಹಿತರಾಗಿ ಬದುಕವಂತಹ ಜನಾಂಗವಿದು. ಇವರಿಗೇನಾದರೂ ಸಿಟ್ಟು ಬಂದು ಬೆರಳು ತೋರಿಸಿದರೆ ಅನರ್ಥ ಸಂಭವಿಸುತ್ತೆಂದು ಅಲ್ಲಿನ ಜನರ ಬಲವಾದ ನಂಬಿಕೆ. ಇವರನ್ನು ದೂರ ಇಟ್ಟ ಜನ ತಮಗೆ ಏನಾದರೂ ಕಾಯಿಲೆ ಬಂದರೆ ಕರ್ಪ್ಯೂಮಿಯಾ ಮಹಿಳೆಯರ ಹತ್ತಿರ ಹೋಗಿ ಉಡುಗೊರೆಯ ರೂಪದಲ್ಲಿ ದವಸ ಧಾನ್ಯಗಳನ್ನು ನೀಡಿ ಗುಣವಾಗುತ್ತಾರೆ. ಏಟಿಯೆಂಬ ಪಾತ್ರ ಕೂಡ ತಿರಸ್ಕೃತಗೊಂಡ ಒಂದು ಕರ್ಪ್ಯೂಮಿಯಾ ಸಮುದಾಯದಿಂದ ಬಂದವಳು. ಅವಳು ತಮ್ಮ ಜನಾಂಗದ ಪೂರ್ವಜರ ದುಷ್ಕೃತ್ಯದಿಂದ, ಮಾನಸಿಕವಾಗಿ, ದೈಹಿಕವಾಗಿ ಹಿಂಸೆಗೆ ಒಳಪಟ್ಟಿದ್ದಾಳೆ; ಪೂರ್ವಗ್ರಹದಿಂದ ನಾವು ಯಾರನ್ನು ಮನುಷ್ಯರಲ್ಲವೆಂದು ಒಪ್ಪಿಕೊಂಡಿದ್ದೇವೆಯೋ ಅಂಥವಳನ್ನು “ನೀವು ಮನುಷ್ಯರೇ” ಎಂದು ವೀಲಿಯ ಮೂಲಕ ತೋರಿಸಿಕೊಡುವುದರಲ್ಲಿ ಕಾದಂಬರಿ ಗೆಲ್ಲುತ್ತದೆ. ಅವಳ ಮೂಢನಂಬಿಕೆಯಿಂದ, ಏಟಿಯನ್ನು ಪಾರು ಮಾಡಿದ ವೀಲಿಗೆ, ಸಂಪತ್ತು ನೀಡುತ್ತದೆ ಎಂದು ಹೃದಯದ ಕಲ್ಲನ್ನು ಹುಡುಕಲು ಹೋಗುವುದು ಕೂಡ ಮೂಢನಂಬಿಕೆಯ ಭಾಗವೇ ಇರಬಹುದೆಂದು ಹೊಳೆಯುವುದಿಲ್ಲ. ಅದು ಅವರ ಬದುಕಿನ ಭಾಗವಾಗಿರುವುದರಿಂದ ನಂಬಿಕೆಯನ್ನ ಮತ್ತು ಮೂಢನಂಬಿಕೆಯನ್ನು ಬೇರ್ಪಡಿಸುವ ಗೋಜಿಗೆ ಹೋಗಿಲ್ಲ; ಹಾಗೆ ಮಾಡಿದರೆ ಪೂರ್ವಜರಿಗೆ ಅನ್ಯಾಯವೆಸಗಿ ಘೋರ ಅಪರಾಧ ಮಾಡಿದಂತಾಗುತ್ತದೆ ಎನ್ನುವದು ಅವರ ಅಭಿಪ್ರಾಯ. ಅದೇ ಈ ಕಾದಂಬರಿಯ ವಿಶೇಷ ವೈರುಧ್ಯ ಅನ್ನಿಸಿಬಿಡುತ್ತದೆ.

ರವಿಕುಮಾರ್ ಹಂಪಿ

ಮನುಷ್ಯತ್ವವುಳ್ಳ ಹಾಗೂ ಸದಾ ಒಳ್ಳೆಯದನ್ನೇ ಯೋಚನೆ ಮಾಡುವಂತಹ ವ್ಯಕ್ತಿ ವೀಲಿ. ಏಟಿಯನ್ನು ಅಂಚಿನಿಂದ ಮುಖ್ಯವಾಹಿನಿಗೆ ತರುವಲ್ಲಿ ಅವಳ ಬದುಕಿನಲ್ಲಾಗುವ ಬದಲಾವಣೆಗೆ ವೀಲಿಯ ಪಾತ್ರ ತುಂಬಾ ಮುಖ್ಯವಾದುದು. ಹೀಗಾಗಿ ಏಟಿಯು ವೀಲಿಗೆ ಯಾವರೀತಿ ಋಣ ಸಂದಾಯ ಮಾಡಬೇಕೆಂದು ತಿಳಿಯದೇ ಹೆಂಡತಿಯಾಗಬೇಕೋ? ವಯಸ್ಸಿನ ಅಂತರ ಲೆಕ್ಕಹಾಕಿ ಮಗಳಾಗಬೇಕೋ? ಎಂಬ ಗೊಂದಲಕ್ಕೆ ಸಿಕ್ಕ ಏಟಿ ವೀಲಿಯ ಆಸೆಯಂತೆ ಕೊನೆಗೆ ಮಗಳಾಗಿಯೇ ಉಳಿಯುತ್ತಾಳೆ.

ಒಟ್ಟಿನಲ್ಲಿ ಕಾದಂಬರಿ ನಾಯಕ ಲೌಖಿಕ ಬದುಕನ್ನ ಅಲೌಖಿಕತೆಯಲ್ಲಿ ಹುಡುಕುವವನು. ಈ ಕಾದಂಬರಿಯಲ್ಲಿ ಬರುವ ಸಮುದಾಯದ ವಿಶಿಷ್ಟ ಆಚರಣೆಗಳು, ನಂಬಿಕೆಗಳು, ಪೂರ್ವಜರ ಆರಾಧನೆ- ಅವೇ ಅವರನ್ನ ಬದುಕಿನುದ್ದಕ್ಕೂ ಮುನ್ನಡೆಸುತ್ತವೆ. ಕಾಡಿನಲ್ಲಿನ ಸಸ್ಯಗಳು, ಪ್ರಾಣಿಗಳು, ಎಂದೂ ಬತ್ತದ ನದಿ, ನದಿಮೀನುಗಳು ಇದ್ದರೆ ಸಾಕು ಒಂದು ಶತಮಾನವನ್ನು ಯಾವುದೇ ತಾಪತ್ರಯವಿಲ್ಲದೇ ನೂಕುವರು ಅವರು. ವಿಶೇಷ ಹಾಗೂ ಸರಳ ನಿರೂಪಣೆಯ ಕ್ರಮದಿಂದಾಗಿ ಓದಿನಲ್ಲಿ ಎಲ್ಲೂ ತೊಡಕು ಮತ್ತು ಗೊಂದಲಗಳಾಗುವುದಿಲ್ಲ. ಕಾದಂಬರಿ ಜೊತೆಗೆ ನಾವು ಕೂಡ ಕಾಡು ಸುತ್ತಿದಂತೆ ಭಾಸವಾಗುತ್ತದೆ. ಬೇರೆ ರಾಜ್ಯದ ಕಾದಂಬರಿಯನ್ನು ಕನ್ನಡಕ್ಕೆ ತರುವಲ್ಲಿ ರವಿ ಹಂಪಿಯವರು ಯಶಸ್ವಿಯಾಗಿದ್ದಾರೆ..

ನದಿಯೊಂದು ನಿದ್ರಿಸಿದಾಗ
ಕಾದಂಬರಿ-ಅನುವಾದ
ಮೂಲ: ವೆನ್ ದ ರಿವರ್ ಸ್ಲೀಪ್ಸ್
(ಈಸ್ಟರೀನ್ ಕೀರೆ)
ಅನುವಾದ: ರವಿ ಹಂಪಿ
ಪ್ರಕಾಶನ: ವೈಷ್ಣವಿ ಪ್ರಕಾಶನ

ಅಮರೇಶ ಗಿಣಿವಾರ

ಅಮರೇಶ ಗಿಣಿವಾರ
ಕಥೆಗಾರ- ಕವಿ ಅಮರೇಶ ಗಿಣಿವಾರ ಅವರು ಸಿಂಧನೂರಿನ ಗಿಣಿವಾರದವರು. ಅವರ ’ಹಿಂಡೆಕುಳ್ಳು’ ಕತೆಗೆ ’ಸಂಗಾತ’ ಯುವ ಕತಾ ಸ್ಫರ್ಧೆಯಲ್ಲಿ ಬಹುಮಾನ ಲಭಿಸಿದೆ. ’ಬಯಲು’ ಕವನ ಸಂಕಲನ, ’ಬಾಂಗ್ಲಾದ ಹಕ್ಕಿಗಳು’ ಅವರ ಇತ್ತೀಚಿನ ಕಥಾಸಂಕಲನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...