Homeಪುಸ್ತಕ ವಿಮರ್ಶೆ’ನದಿಯೊಂದು ನಿದ್ರಿಸಿದಾಗ’: ವಿಶಿಷ್ಟ ಆಚರಣೆಗಳು, ನಂಬಿಕೆಗಳು, ಪೂರ್ವಜರ ಆರಾಧನೆಯೇ ಕಾಪಾಡುವ ಬುಡಕಟ್ಟು ಚಿತ್ರಣ

’ನದಿಯೊಂದು ನಿದ್ರಿಸಿದಾಗ’: ವಿಶಿಷ್ಟ ಆಚರಣೆಗಳು, ನಂಬಿಕೆಗಳು, ಪೂರ್ವಜರ ಆರಾಧನೆಯೇ ಕಾಪಾಡುವ ಬುಡಕಟ್ಟು ಚಿತ್ರಣ

- Advertisement -
- Advertisement -

ನಾಗಲ್ಯಾಂಡ್ ಲೇಖಕಿ ಈಸ್ಟರೀನ್ ಕೀರೆಯವರ ’ನದಿಯೊಂದು ನಿದ್ರಿಸಿದಾಗ’ ಕಾದಂಬರಿ ಓದಿದೆ. 2015ನೇ ಸಾಲಿನ ದ ಹಿಂದೂ (ಪತ್ರಿಕೆ) ಸಾಹಿತ್ಯ ಪ್ರಶಸ್ತಿಯನ್ನ ಪಡೆದುಕೊಂಡ ಕೃತಿ ಮಾಂತ್ರಿಕ ವಾಸ್ತವವಾದವನ್ನು ಬಳಸಿಕೊಂಡು ನಾಗಲ್ಯಾಂಡ್ ಬುಡಕಟ್ಟು ಜನಾಂಗದ ಕಠಿಣ ಬದುಕನ್ನ ಸರಳ ನಿರೂಪಣೆಯ ಮೂಲಕ ತೋರಿಸಿಕೊಟ್ಟಿದೆ. ಬುಡಕಟ್ಟು ಜನಾಂಗ ಎಂದಾಗ ನೆನಪಿಗೆ ಬಂದಿದ್ದು ಪಂಜಾಬಿ ಲೇಖಕ ಹಾಗೂ ಚಳವಳಿಯ ಸಂಗಾತಿ ಸತ್ನಾಮ್ ಬರೆದಿರುವ ಪ್ರವಾಸಕಥನದ ದಾಟಿಯಲ್ಲಿರುವ ’ಜಂಗಲ್ ನಾಮಾ’ ಪುಸ್ತಕ. ಆದಿವಾಸಿ ಸಮುದಾಯಗಳು ನಾಗರಿಕ ಜಗತ್ತಿನೊಂದಿಗೆ ದೂರವಿದ್ದು ಬದುಕುವ ಪರಿ ಅಚ್ಚರಿಯಾದದ್ದು. ಶಿಕ್ಷಣ ಮತ್ತು ಅನೇಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಆದಿವಾಸಿಗಳೂ ಕಾಡಿನಲ್ಲೇ ತಮ್ಮ ಬದುಕನ್ನ ಕಟ್ಟಿಕೊಂಡಿದ್ದಾರೆ; ಆಧುನೀಕರಣದ ಹೆಸರಲ್ಲಿ ಕಾಡನ್ನ ಮತ್ತು ಬದುಕನ್ನ ನಾಶಮಾಡುವ ಬಂಡವಾಳಶಾಹಿಗಳ ಕ್ರೂರತೆಯನ್ನ ’ಜಂಗಲ್ ನಾಮಾ’ ಅತ್ಯಂತ ಅಚ್ಚುಕಟ್ಟಾಗಿ ಚಿತ್ರಿಸಿದೆ. ಕೊನೆಗೆ ಸರಕಾರದಿಂದ ಬೇಸತ್ತು ಚಳವಳಿಗೆ ಕಾಲಿಡುವ ಚಿತ್ರಣವನ್ನು ಹಂತಹಂತವಾಗಿ ಕಟ್ಟಿಕೊಡುತ್ತದೆ.

ಆದರೆ ’ನದಿಯೊಂದು ನಿದ್ರಿಸುವಾಗ’ ಕಾದಂಬರಿಯಲ್ಲಿ ಇಲ್ಲಿನ ಜನಾಂಗ ಕೇವಲ ತಮ್ಮ ನಂಬಿಕೆಯೊಂದಿಗೆ ಜೀವಿಸುವ ಚಿತ್ರಣವಿದೆ. ತಮ್ಮನ್ನು ಲೆಕ್ಕಿಸದ, ನಿರ್ಲಕ್ಷಿಸಿದ ಅಲ್ಲಿನ ಆಡಳಿತದ ವಿರುದ್ಧ ಯಾವುದೇ ಪ್ರತಿರೋಧ ನಮಗೆ ಕಾಣಸಿಗುವುದಿಲ್ಲ; ಕಾದಂಬರಿ ಚಲಿಸುವ ದಿಕ್ಕು ಬೇರೆಯೇ ತರಹದ್ದಾಗಿರುವುದರಿಂದ ಪ್ರತಿರೋಧದ ಪ್ರಶ್ನೆಯೇ ಏಳುವುದಿಲ್ಲ. ಕಾದಂಬರಿಯ ಆರಂಭದಲ್ಲಿ ವೀಲಿ ನಿದ್ರಿಸುವ ನದಿಯ ಕನಸನ್ನು ಕಾಣುತ್ತಾನೆ. ಕಾಲಜ್ಞಾನಿಯ ಮಾತಿನಂತೆ ನದಿ ನಿದ್ರಿಸುವಾಗ ನದಿಯ ಮಧ್ಯಭಾಗದಲ್ಲಿ ಮುಳುಗಿ ಹೃದಯದ ಕಲ್ಲನ್ನು ಎತ್ತಿತಂದರೆ ಅದು ಹಣ, ಒಡವೆ, ಆಕಳು ಮತ್ತು ಸುಂದರವಾದ ಹುಡುಗಿಯನ್ನು ಕೊಡುತ್ತದೆಂಬುದು ಕಥಾನಾಯಕ ವೀಲಿಯ ನಂಬಿಕೆ ಮಾತ್ರವಲ್ಲದೇ ಆ ಜನಾಂಗದ ಪ್ರತಿಯೊಬ್ಬರ ನಂಬಿಕೆ. ನಿದ್ರಿಸುವ ನದಿಯನ್ನು ಹುಡುಕುತ್ತಾ ಹೋಗುವ ಕಥಾನಾಯಕನ ಪ್ರಯಾಣದ ಮೂಲಕ, ಯಾವುದೇ ಮೂಲಭೂತ ಅಥವಾ ಆಧುನಿಕ ಸೌಕರ್ಯಗಳಿಲ್ಲದ ಕಾಡಿನ ಹಾಡಿಗಳಲ್ಲಿ ಬುಡಕಟ್ಟು ಸಂಸ್ಕೃತಿಗಳು ಬದುಕನ್ನ ಕಟ್ಟಿಕೊಂಡ ರೀತಿಯನ್ನ ಲೇಖಕಿ ಅತಿ ಸರಳವಾಗಿ ಕಟ್ಟಿಕೊಡುತ್ತಾರೆ.

ಈಸ್ಟರೀನ್ ಕೀರೆ

ಕಾಡಿನ ಜೀವನ ವಿಧಾನ, ಸಾಂಸ್ಕೃತಿಕ ಚೆಲುವಿನಲ್ಲಿ ಭಾಗಿಯಾಗುವುದು, ಮರುಗುವುದು, ಭಯಗೊಳ್ಳುವುದು ಹಾಗೂ ಕೆಲವೊಮ್ಮೆ ಆಶ್ಚರ್ಯಚಕಿತರಾಗುವುದಕ್ಕೆ ಈ ಕೃತಿ ಓದುಗನಿಗೆ ಅವಕಾಶ ನೀಡುತ್ತದೆ; ಆದರೆ, ಉಳ್ಳವನ ಮತ್ತು ಇಲ್ಲದವನ ನಡುವಿನ ಅಂತರ, ಬುಡಕಟ್ಟು ಸಮುದಾಯಗಳ ಬದುಕಿನ ಲೌಖಿಕ ಬಡತನ, ಇವರ ಇಂತಹ ಬದುಕಿಗೆ ಕಾರಣರಾದವರು ಯಾರು ಎಂಬ ವಿಮರ್ಶೆಗೆ ಓದುಗ ಮುಂದಾಗಲು ಬಿಡುವುದಿಲ್ಲ. ಕೃತಿಯ ನಡುವೆ ಕೆಲವೊಂದು ಭಯಾನಕ ಸಂಗತಿಗಳು ಓದುಗನಲ್ಲಿ ದಿಗಿಲು ಹುಟ್ಟಿಸುತ್ತವೆ. ಆತ್ಮದ ಹುಲಿಯೊಂದಿಗೆ ನಡೆಯುವ ಸೆಣಸಾಟ, ಮತ್ತೊಮ್ಮೆ ಕ್ಷುಲ್ಲಕ ಕಾರಣವೊಂದಕ್ಕೆ ಬೇಟೆಗಾರ ಪೇಹುವಿನ ಕೊಲೆ, ನೇಪಾಳಿ ದಂಪತಿಗಳ ಕೊಲೆ, ಕೊನೆಗೆ ವೀಲಿಯ ಸಾವು ಈ ತರಹದ ಭಯಾನಕ ಸಂಗತಿಗಳು ಓದುಗನಿಗೆ ಶಾಕ್ ನೀಡಿ ನೆನಪಲ್ಲಿ ಅಚ್ಚಳಿಯದೇ ಉಳಿಯುತ್ತವೆ. ವೀಲಿಗೆ ಕಾಡಿನಲ್ಲಿ ಹಂತಹಂತವಾಗಿ ಆಶ್ರಯ ನೀಡಿ, ಸಹಾಯ ಮಾಡಿ ಮುಂದಿನ ಪ್ರಯಾಣಕ್ಕೆ ಅಣಿಮಾಡಿಕೊಡುವ ಮಾನವೀಯತೆ ಮತ್ತು ಕರುಣೆ ತುಂಬಿದ ಕುಟುಂಬಗಳು ಕೂಡ ಇಲ್ಲಿ ಕಾಣಸಿಗುತ್ತವೆ.

ಇದನ್ನೂ ಓದಿ: ಸರಮಾಗೋನ ’ಕುರುಡು’ ಕಾದಂಬರಿ: ನಾವು ಕಟ್ಟಿದ ಸ್ವರ್ಗ ದಿಢೀರನೆ ಕುಸಿದಾಗ..!

ನಾಗರಿಕ ಜಗತ್ತು ಯಾವುದನ್ನು ಮೂಢನಂಬಿಕೆಯೆಂದು, ಅತಿಮಾನುಷವೆಂದು ಭಾವಿಸಿದೆಯೋ ಅದನ್ನು ಮಾಂತ್ರಿಕತೆಯ ಮೂಲಕ ವಾಸ್ತವವಾಗಿಸಿದ್ದಾರೆ ಕೀರೆ. ಕರ್ಪ್ಯೂಮಿಯಾ ಹಳ್ಳಿಯಿಂದ ಬಂದಂತಹ ಹೆಂಗಸರು ಶಾಪಗ್ರಸ್ತರು; ಬುಡಕಟ್ಟು ಜನಾಂಗದೊಳಗಡೆನೇ ತಿರಸ್ಕೃತಗೊಂಡು ಕಾಡಿನಲ್ಲಿ ಅವಿವಾಹಿತರಾಗಿ ಬದುಕವಂತಹ ಜನಾಂಗವಿದು. ಇವರಿಗೇನಾದರೂ ಸಿಟ್ಟು ಬಂದು ಬೆರಳು ತೋರಿಸಿದರೆ ಅನರ್ಥ ಸಂಭವಿಸುತ್ತೆಂದು ಅಲ್ಲಿನ ಜನರ ಬಲವಾದ ನಂಬಿಕೆ. ಇವರನ್ನು ದೂರ ಇಟ್ಟ ಜನ ತಮಗೆ ಏನಾದರೂ ಕಾಯಿಲೆ ಬಂದರೆ ಕರ್ಪ್ಯೂಮಿಯಾ ಮಹಿಳೆಯರ ಹತ್ತಿರ ಹೋಗಿ ಉಡುಗೊರೆಯ ರೂಪದಲ್ಲಿ ದವಸ ಧಾನ್ಯಗಳನ್ನು ನೀಡಿ ಗುಣವಾಗುತ್ತಾರೆ. ಏಟಿಯೆಂಬ ಪಾತ್ರ ಕೂಡ ತಿರಸ್ಕೃತಗೊಂಡ ಒಂದು ಕರ್ಪ್ಯೂಮಿಯಾ ಸಮುದಾಯದಿಂದ ಬಂದವಳು. ಅವಳು ತಮ್ಮ ಜನಾಂಗದ ಪೂರ್ವಜರ ದುಷ್ಕೃತ್ಯದಿಂದ, ಮಾನಸಿಕವಾಗಿ, ದೈಹಿಕವಾಗಿ ಹಿಂಸೆಗೆ ಒಳಪಟ್ಟಿದ್ದಾಳೆ; ಪೂರ್ವಗ್ರಹದಿಂದ ನಾವು ಯಾರನ್ನು ಮನುಷ್ಯರಲ್ಲವೆಂದು ಒಪ್ಪಿಕೊಂಡಿದ್ದೇವೆಯೋ ಅಂಥವಳನ್ನು “ನೀವು ಮನುಷ್ಯರೇ” ಎಂದು ವೀಲಿಯ ಮೂಲಕ ತೋರಿಸಿಕೊಡುವುದರಲ್ಲಿ ಕಾದಂಬರಿ ಗೆಲ್ಲುತ್ತದೆ. ಅವಳ ಮೂಢನಂಬಿಕೆಯಿಂದ, ಏಟಿಯನ್ನು ಪಾರು ಮಾಡಿದ ವೀಲಿಗೆ, ಸಂಪತ್ತು ನೀಡುತ್ತದೆ ಎಂದು ಹೃದಯದ ಕಲ್ಲನ್ನು ಹುಡುಕಲು ಹೋಗುವುದು ಕೂಡ ಮೂಢನಂಬಿಕೆಯ ಭಾಗವೇ ಇರಬಹುದೆಂದು ಹೊಳೆಯುವುದಿಲ್ಲ. ಅದು ಅವರ ಬದುಕಿನ ಭಾಗವಾಗಿರುವುದರಿಂದ ನಂಬಿಕೆಯನ್ನ ಮತ್ತು ಮೂಢನಂಬಿಕೆಯನ್ನು ಬೇರ್ಪಡಿಸುವ ಗೋಜಿಗೆ ಹೋಗಿಲ್ಲ; ಹಾಗೆ ಮಾಡಿದರೆ ಪೂರ್ವಜರಿಗೆ ಅನ್ಯಾಯವೆಸಗಿ ಘೋರ ಅಪರಾಧ ಮಾಡಿದಂತಾಗುತ್ತದೆ ಎನ್ನುವದು ಅವರ ಅಭಿಪ್ರಾಯ. ಅದೇ ಈ ಕಾದಂಬರಿಯ ವಿಶೇಷ ವೈರುಧ್ಯ ಅನ್ನಿಸಿಬಿಡುತ್ತದೆ.

ರವಿಕುಮಾರ್ ಹಂಪಿ

ಮನುಷ್ಯತ್ವವುಳ್ಳ ಹಾಗೂ ಸದಾ ಒಳ್ಳೆಯದನ್ನೇ ಯೋಚನೆ ಮಾಡುವಂತಹ ವ್ಯಕ್ತಿ ವೀಲಿ. ಏಟಿಯನ್ನು ಅಂಚಿನಿಂದ ಮುಖ್ಯವಾಹಿನಿಗೆ ತರುವಲ್ಲಿ ಅವಳ ಬದುಕಿನಲ್ಲಾಗುವ ಬದಲಾವಣೆಗೆ ವೀಲಿಯ ಪಾತ್ರ ತುಂಬಾ ಮುಖ್ಯವಾದುದು. ಹೀಗಾಗಿ ಏಟಿಯು ವೀಲಿಗೆ ಯಾವರೀತಿ ಋಣ ಸಂದಾಯ ಮಾಡಬೇಕೆಂದು ತಿಳಿಯದೇ ಹೆಂಡತಿಯಾಗಬೇಕೋ? ವಯಸ್ಸಿನ ಅಂತರ ಲೆಕ್ಕಹಾಕಿ ಮಗಳಾಗಬೇಕೋ? ಎಂಬ ಗೊಂದಲಕ್ಕೆ ಸಿಕ್ಕ ಏಟಿ ವೀಲಿಯ ಆಸೆಯಂತೆ ಕೊನೆಗೆ ಮಗಳಾಗಿಯೇ ಉಳಿಯುತ್ತಾಳೆ.

ಒಟ್ಟಿನಲ್ಲಿ ಕಾದಂಬರಿ ನಾಯಕ ಲೌಖಿಕ ಬದುಕನ್ನ ಅಲೌಖಿಕತೆಯಲ್ಲಿ ಹುಡುಕುವವನು. ಈ ಕಾದಂಬರಿಯಲ್ಲಿ ಬರುವ ಸಮುದಾಯದ ವಿಶಿಷ್ಟ ಆಚರಣೆಗಳು, ನಂಬಿಕೆಗಳು, ಪೂರ್ವಜರ ಆರಾಧನೆ- ಅವೇ ಅವರನ್ನ ಬದುಕಿನುದ್ದಕ್ಕೂ ಮುನ್ನಡೆಸುತ್ತವೆ. ಕಾಡಿನಲ್ಲಿನ ಸಸ್ಯಗಳು, ಪ್ರಾಣಿಗಳು, ಎಂದೂ ಬತ್ತದ ನದಿ, ನದಿಮೀನುಗಳು ಇದ್ದರೆ ಸಾಕು ಒಂದು ಶತಮಾನವನ್ನು ಯಾವುದೇ ತಾಪತ್ರಯವಿಲ್ಲದೇ ನೂಕುವರು ಅವರು. ವಿಶೇಷ ಹಾಗೂ ಸರಳ ನಿರೂಪಣೆಯ ಕ್ರಮದಿಂದಾಗಿ ಓದಿನಲ್ಲಿ ಎಲ್ಲೂ ತೊಡಕು ಮತ್ತು ಗೊಂದಲಗಳಾಗುವುದಿಲ್ಲ. ಕಾದಂಬರಿ ಜೊತೆಗೆ ನಾವು ಕೂಡ ಕಾಡು ಸುತ್ತಿದಂತೆ ಭಾಸವಾಗುತ್ತದೆ. ಬೇರೆ ರಾಜ್ಯದ ಕಾದಂಬರಿಯನ್ನು ಕನ್ನಡಕ್ಕೆ ತರುವಲ್ಲಿ ರವಿ ಹಂಪಿಯವರು ಯಶಸ್ವಿಯಾಗಿದ್ದಾರೆ..

ನದಿಯೊಂದು ನಿದ್ರಿಸಿದಾಗ
ಕಾದಂಬರಿ-ಅನುವಾದ
ಮೂಲ: ವೆನ್ ದ ರಿವರ್ ಸ್ಲೀಪ್ಸ್
(ಈಸ್ಟರೀನ್ ಕೀರೆ)
ಅನುವಾದ: ರವಿ ಹಂಪಿ
ಪ್ರಕಾಶನ: ವೈಷ್ಣವಿ ಪ್ರಕಾಶನ

ಅಮರೇಶ ಗಿಣಿವಾರ

ಅಮರೇಶ ಗಿಣಿವಾರ
ಕಥೆಗಾರ- ಕವಿ ಅಮರೇಶ ಗಿಣಿವಾರ ಅವರು ಸಿಂಧನೂರಿನ ಗಿಣಿವಾರದವರು. ಅವರ ’ಹಿಂಡೆಕುಳ್ಳು’ ಕತೆಗೆ ’ಸಂಗಾತ’ ಯುವ ಕತಾ ಸ್ಫರ್ಧೆಯಲ್ಲಿ ಬಹುಮಾನ ಲಭಿಸಿದೆ. ’ಬಯಲು’ ಕವನ ಸಂಕಲನ, ’ಬಾಂಗ್ಲಾದ ಹಕ್ಕಿಗಳು’ ಅವರ ಇತ್ತೀಚಿನ ಕಥಾಸಂಕಲನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....