Homeಮುಖಪುಟಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

- Advertisement -
- Advertisement -

ಮದ್ರಾಸ್ ಹೈಕೋರ್ಟಿನ ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆಸ್ತಿ ಮೇಲಿನ ವಿವಾಹಿತ ಮಹಿಳೆಯ ಹಕ್ಕಿನ ಬಗ್ಗೆ ಉಲ್ಲೇಖ ಮಾಡುತ್ತ ಕುಟುಂಬದಲ್ಲಿ ಹೆಂಡತಿಯ ಕೊಡುಗೆಗಳನ್ನು ಗುರುತಿಸುವಂತಹ ಯಾವುದೇ ವಿಧಾನಗಳು ಲಭ್ಯವಿಲ್ಲ ಆದರೆ ನ್ಯಾಯಾಲಯಗಳು ಅದನ್ನು ಗುರುತಿಸಬಹುದು ಎಂದು ಹೇಳುವ ಮೂಲಕ ಮಹಿಳಾ ಸಶಕ್ತೀಕರಣದತ್ತ ಒಂದು ಬಲವಾದ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದುವರೆಗೂ ಆಸ್ತಿ ಮೇಲಿನ ಹೆಣ್ಣುಮಕ್ಕಳ ಹಕ್ಕಿಗೆ ಸಂಬಂಧಿಸಿ ಬಂದಿರುವ ಪ್ರತಿಯೊಂದು ತೀರ್ಪುಗಳು ಕಾಲಕಾಲಕ್ಕೆ ಸಮಾನತೆಯ ಕಡೆಗೆ ಹೆಜ್ಜೆಹಾಕುವ ನಿರ್ದಿಷ್ಟ ಘಟ್ಟಗಳಂತೆ ಕೆಲಸ ಮಾಡಿವೆ, ಆದರೆ ಅನೇಕಬಾರಿ ಕೆಲವೊಂದು ಗೊಂದಲ ಅನಿರ್ದಿಷ್ಟತೆಗಳಿಗೂ ಅವಕಾಶ ಮಾಡಿಕೊಟ್ಟಿದ್ದವು. ತೀರ ಇತ್ತೀಚಿನವರೆಗೂ ಹೆಣ್ಣುಮಕ್ಕಳ ಆಸ್ತಿಯ ಮೇಲಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಮಗಳಿಗೆ ತಂದೆಯ ಆಸ್ತಿಯಲ್ಲಿ ಅಥವಾ ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡುಮಕ್ಕಳಿಗೆ ಸಮವಾದ ಹಕ್ಕುಗಳ ಬಗ್ಗೆ ಮಾತ್ರ ಪ್ರಸ್ತಾಪವಾಗುತ್ತಿತ್ತು. ಅದಕ್ಕೆ ಕಾರಣವೂ ಇದೆ; ಅದೇನೆಂದರೆ ತಂದೆಯ ಆಸ್ತಿಯಲ್ಲಿ ಹಕ್ಕು ಪಡೆದ ಮಹಿಳೆ ಅದೇ ಕಾಲಕ್ಕೆ ಇನ್ನೊಬ್ಬರ ಹೆಂಡತಿಯೂ ಆಗಿರುತ್ತಾಳೆ ಎಂಬುದು ವಾದ. ಅಂದರೆ ಒಬ್ಬ ವಿವಾಹಿತ ಹೆಣ್ಣುಮಗಳ ಗಂಡ ತನ್ನ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಸಹೋದರಿಯರ ಜೊತೆ ಹಂಚಿಕೊಂಡಿರುತ್ತಾನೆ ಎಂಬುದು ಊಹೆ.

ಕೆಲವೊಂದು ಪ್ರಕರಣಗಳಲ್ಲಿ ದಶಕಗಳ ಹಿಂದೆಯೇ ಮದುವೆ ಆಗಿಹೋದ ಹೆಣ್ಣುಮಕ್ಕಳು ವರದಕ್ಷಿಣೆ ರೂಪದಲ್ಲಿ ಗಂಡನಿಗೆ ಅಪಾರ ಹಣ ನೀಡಿದ ನಂತರವೂ, ಹೊಸ ಕಾನೂನಿನ ಅಡಿಯಲ್ಲಿ ತಮ್ಮ ಸಹೋದರರಿಂದ ಸಮಾನ ಅಧಿಕಾರಗಳನ್ನು ಕೇಳಲು ನ್ಯಾಯಾಲಯದ ಮೊರೆ ಹೋದಾಗ ಈ ಹಕ್ಕುಗಳ ವಿರುದ್ಧ ಒಂದು ದೊಡ್ಡ ನೆಗೆಟಿವ್ ಪ್ರಚಾರವೇ ಶುರುವಾದಂತೆ ಇತ್ತು. ಇದು ಕೇವಲ ಈ ಒಂದು ಕಾನೂನಿಗೆ ಮಾತ್ರ ಅಲ್ಲ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯುವ ಯಾವುದೇ ಹೊಸ ಕಾನೂನು ಬಂದರೂ ಇಂತಹ ಅಪಸ್ವರಗಳು ಸಾಮಾನ್ಯ.

ಈಗ ಒಂದು ವಿಶ್ಲೇಷಣಾತ್ಮಕ ದೃಷ್ಟಿಕೋನದಿಂದ ಇದನ್ನು ನೋಡಲು ಪ್ರಯತ್ನಿಸೋಣ. ಹಿಂದೂ ವಾರಸುದಾರ ಕಾಯ್ದೆ ಜಾರಿಯಾದಾಗಿನಿಂದ (1956) ಇಲ್ಲಿಯವರೆಗೂ ಪಿತ್ರಾರ್ಜಿತ ಆಸ್ತಿಗಳು ಭಾಗವಾಗದೇ ಇರುವ ಸಾಧ್ಯತೆಗಳು ಎಷ್ಟಿರುತ್ತವೆ? ಏಕೆಂದರೆ ಈಗಾಗಲೇ ವಿಭಾಗವಾಗಿರುವ ಆಸ್ತಿಗಳಿಗೆ ಇದು ಅನ್ವಯವಾಗುವುದಿಲ್ಲ. ಅಂದರೆ ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ಎಂದು ಕಾಯ್ದೆ ಬಂದಾಗ ಆ ಮಹಿಳೆಯ ಕುಟುಂಬಕ್ಕೆ ಸಂಬಂಧಿಸಿದ ಪಿತ್ರಾರ್ಜಿತ ಆಸ್ತಿ ವಿಭಾಗ ಆಗದೇ ಇದ್ದ ಪಕ್ಷದಲ್ಲಿ ಮಾತ್ರ ಅವಳಿಗೆ ಹಕ್ಕು ಸಿಗುತ್ತಿತ್ತು. ಇಂತಹ ಒಂದು ಅವಕಾಶವನ್ನು ತಪ್ಪಿಸಲು ಬಾಯಿಮಾತಿನ ವಿಭಾಗ ಅಥವಾ ನೋಂದಣಿ ಆಗದ ಹಳೆಯ ದಿನಾಂಕದ ಕರಾರುಪತ್ರಗಳನ್ನು ಎಷ್ಟೋ ಜನ ಸೃಷ್ಟಿಸಿದರು. ಅದಕ್ಕೆಂದೇ ನ್ಯಾಯಾಲಯ ಮತ್ತೆ ಮಧ್ಯಪ್ರವೇಶಿಸಿ ಈ ತರಹದ ವಿಭಾಗ ಪತ್ರಗಳಿಗೆ ಮಾನ್ಯತೆಯನ್ನು ನೀಡಲಿಲ್ಲ. ಇನ್ನು ಕೆಲವೊಂದು ಪ್ರದೇಶಗಳಲ್ಲಿ ಹೆಣ್ಣುಮಕ್ಕಳನ್ನು ಮದುವೆ ಮಾಡಿ ಕಳಿಸುವ ಮೊದಲು ಆಸ್ತಿ ಹಕ್ಕು ಬಿಡುಗಡೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಭಾರತದಂತಹ ಸಾಂಪ್ರದಾಯಿಕ ಸಮಾಜದಲ್ಲಿ ಮದುವೆಯಾಗಿ ಇನ್ನೂ ತಂದೆ ತಾಯಿ ಹಾಗೂ ಸಹೋದರರನ್ನೇ ನಂಬಿರುವ ಹೆಣ್ಣುಮಕ್ಕಳು ಸಹಿ ಹಾಕುವುದಿಲ್ಲ ಎಂದು ಹೇಳುವ ಸಾಧ್ಯತೆಗಳು ಎಷ್ಟಿವೆ? ಇನ್ನು ವರದಕ್ಷಿಣೆ ಎನ್ನುವುದು ಗಂಡನಿಗೆ ಸಲ್ಲುವಂಥದ್ದು, ಅದರಿಂದ ಆ ಹೆಣ್ಣುಮಕ್ಕಳಿಗೆ ಏನು ಲಾಭ? ಈ ಎಲ್ಲ ಹಿನ್ನೆಲೆಗಳಲ್ಲಿ ಆಸ್ತಿಯ ಸಮಾನ ಹಕ್ಕಿನ ಲಾಭ ಪಡೆದ ಹೆಂಗಸರು ಎಷ್ಟಿರಬಹುದು ಎಂದು ನೋಡಿದಾಗ ವಸ್ತುಸ್ಥಿತಿ ನಿರಾಶಾದಾಯಕವೇ ಆಗಿರುತ್ತದೆ.

ಗಂಡನ ಮನೆಯಲ್ಲಿದ್ದು ಹೊರಗಡೆ ಕೆಲಸ ಮಾಡುವ ಬಹುತೇಕ ಹೆಣ್ಣುಮಕ್ಕಳು ಸಹ ತಮ್ಮ ತಿಂಗಳ ಸಂಬಳವನ್ನು ತಂದು ಗಂಡನ ಕೈಗೇ ಕೊಡುವ ಉದಾಹರಣೆಗಳು ಹೇರಳವಾಗಿವೆ. ಹಣವನ್ನು ಬೇರೆಬೇರೆ ಲಾಭದಾಯಕ ಸ್ಕೀಮ್‌ಗಳಲ್ಲಿ ತೊಡಗಿಸುವ ಕೆಲಸವನ್ನೆಲ್ಲಾ ಗಂಡಸರೇ ಮಾಡುತ್ತಾರೆ. ಹೀಗಿರುವಾಗ ಯಾವುದೇ ಉದ್ಯೋಗ ಮಾಡದೆ ಗೃಹಿಣಿ ಆಗಿದ್ದುಕೊಂಡು ತನ್ನ ಇಡೀ ಜೀವನವನ್ನು ಗಂಡ, ಮನೆ, ಮಕ್ಕಳು ಹಾಗೂ ಅವರ ಅಭಿವೃದ್ಧಿಗಾಗಿ ಶ್ರಮಿಸುವ ಹೆಣ್ಣುಮಕ್ಕಳಿಗೆ ತನ್ನ ಆಪತ್ಕಾಲದಲ್ಲಿ ಯಾರು ಆಸರೆ? ಉದ್ಯೋಗ ತೊರೆದು ಗೃಹಿಣಿ ಆದ ಹೆಣ್ಣುಮಕ್ಕಳಾಗಲೀ ಮೊದಲಿನಿಂದಲೂ ಮನೆ ನೋಡಿಕೊಂಡ ಮಹಿಳೆ ಆಗಲಿ ಅಕಸ್ಮಾತ್ ಮದುವೆ ಆಗಿ ದಶಕಗಳ ನಂತರ ಗಂಡನಿಂದ ದೂರಾಗುವ ಸಂದರ್ಭ ಬಂದರೆ ಕೇವಲ ಆತ ಕೊಡುವ ಜೀವನಾಂಶ ಅಥವಾ ಶಾಶ್ವತ ಪರಿಹಾರದ ರೂಪದಲ್ಲಿ ದೊರೆಯುವ ಮೊತ್ತವಷ್ಟೇ ಅವಳಿಗೆ ಆಧಾರವಾಗಿರುತ್ತಿತ್ತು. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟಿನ ಈ ತೀರ್ಪು ಮಹಿಳಾ ಸ್ವಾಭಿಮಾನದ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಾಗಿದೆ.

ಕೃಷ್ಣನ್ ರಾಮಸ್ವಾಮಿ

ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ತಮ್ಮ ತೀರ್ಪಿನಲ್ಲಿ “ಗಂಡ ಆಸ್ತಿ ಖರೀದಿಸುವುದಕ್ಕೆ ಆತನಿಗೆ ಅನುಕೂಲ ಮಾಡಿಕೊಡುವಲ್ಲಿ ಹೆಂಡತಿ ನಿರ್ವಹಿಸುವ ಪಾತ್ರವನ್ನು ಗುರುತಿಸಲು ನ್ಯಾಯಾಲಯದ ಮೇಲೆ ಯಾವುದೇ ಕಾನೂನಿನ ಪ್ರತಿಬಂಧಗಳು ಇಲ್ಲ ಎಂದು ಹೇಳಿದ್ದಾರೆ. ಮುಂದುವರಿದು ’ಹೆಂಡತಿ ಮನೆಯ ಎಲ್ಲ ಕೆಲಸ ಹಾಗೂ ಜವಾಬ್ದಾರಿಗಳನ್ನು ತಾನೇ ತೆಗೆದುಕೊಂಡು, ಕುಟುಂಬದ ದಿನನಿತ್ಯದ ಜಂಜಾಟಗಳಿಂದ ಅವನನ್ನು ಮುಕ್ತಗೊಳಿಸಿದ್ದರಿಂದ ಆತ ಆರ್ಥಿಕವಾಗಿ ಸಶಕ್ತನಾಗಲು ಮತ್ತು ಆಸ್ತಿ ಹೊಂದಲು ಸಾಧ್ಯವಾಗುತ್ತದೆ; ಹಾಗಿರುವಾಗ ಆತ ಗಳಿಸಿದ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು ಕೊಡುವುದು ಸಮಂಜಸವಾಗಿದೆ’ ಎಂದು ಹೇಳಿದ್ದಾರೆ. ನಿತ್ಯ ಹೊರಗಡೆ ಹೋಗಿ 8 ಗಂಟೆ ಕೆಲಸ ಮಾಡುವ ಗಂಡನ ಜೊತೆ 24 ಗಂಟೆಯೂ ಗೃಹಿಣಿಯಾಗಿ ಜವಬ್ದಾರಿ ನಿರ್ವಹಿಸುವ ಹೆಚ್ಚಿನ ಕೊಡುಗೆಯನ್ನು ನಗಣ್ಯಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಗಂಡ ಸತ್ತಾಗ ಆತನ ಸ್ವಯಾರ್ಜಿತ ಆಸ್ತಿಯಲ್ಲಿ ಹೆಂಡತಿಗೆ ಒಂದು ಭಾಗ ಬರುವ ಕಾನೂನು ಈಗಾಗಲೇ ಇದ್ದರೂ ಈ ತೀರ್ಮಾನ ವಿಶೇಷವಾಗಿ ಕಾಣಲು ಕಾರಣವೆಂದರೆ, ಇಲ್ಲಿ ಹೆಣ್ಣಿನ ಕೊಡುಗೆಯನ್ನು ಮಾನ್ಯಮಾಡಿರುವ ರೀತಿ ಮತ್ತು ವಿಚ್ಚೇದನಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಈ ತೀರ್ಪಿನಿಂದ ಸ್ವಲ್ಪ ಲಾಭ ಆಗಬಹುದು ಎಂಬುದಕ್ಕೆ. ಪ್ರತಿಯೊಂದು ತೀರ್ಪುಗಳು ಆಯಾ ಪ್ರಕರಣಗಳಿಗೆ ಸೂಕ್ತವಾಗುವ ರೀತಿಯಲ್ಲಿ ಬಂದಿರುತ್ತವೆ. ಆದರೆ ಕೆಲವೊಂದು ವಿಶೇಷ ತೀರ್ಪುಗಳು ತಮ್ಮ ವಿಶೇಷ ದೃಷ್ಟಿಕೋನದಿಂದಾಗಿ ವಿಭಿನ್ನವಾಗಿ ನಿಲ್ಲುತ್ತವೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಂತಹ ಇನ್ನೂ ಹತ್ತಾರು ತೀರ್ಪುಗಳ ಅಗತ್ಯವಿದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...