Homeಮುಖಪುಟಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

- Advertisement -
- Advertisement -

ಮದ್ರಾಸ್ ಹೈಕೋರ್ಟಿನ ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆಸ್ತಿ ಮೇಲಿನ ವಿವಾಹಿತ ಮಹಿಳೆಯ ಹಕ್ಕಿನ ಬಗ್ಗೆ ಉಲ್ಲೇಖ ಮಾಡುತ್ತ ಕುಟುಂಬದಲ್ಲಿ ಹೆಂಡತಿಯ ಕೊಡುಗೆಗಳನ್ನು ಗುರುತಿಸುವಂತಹ ಯಾವುದೇ ವಿಧಾನಗಳು ಲಭ್ಯವಿಲ್ಲ ಆದರೆ ನ್ಯಾಯಾಲಯಗಳು ಅದನ್ನು ಗುರುತಿಸಬಹುದು ಎಂದು ಹೇಳುವ ಮೂಲಕ ಮಹಿಳಾ ಸಶಕ್ತೀಕರಣದತ್ತ ಒಂದು ಬಲವಾದ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದುವರೆಗೂ ಆಸ್ತಿ ಮೇಲಿನ ಹೆಣ್ಣುಮಕ್ಕಳ ಹಕ್ಕಿಗೆ ಸಂಬಂಧಿಸಿ ಬಂದಿರುವ ಪ್ರತಿಯೊಂದು ತೀರ್ಪುಗಳು ಕಾಲಕಾಲಕ್ಕೆ ಸಮಾನತೆಯ ಕಡೆಗೆ ಹೆಜ್ಜೆಹಾಕುವ ನಿರ್ದಿಷ್ಟ ಘಟ್ಟಗಳಂತೆ ಕೆಲಸ ಮಾಡಿವೆ, ಆದರೆ ಅನೇಕಬಾರಿ ಕೆಲವೊಂದು ಗೊಂದಲ ಅನಿರ್ದಿಷ್ಟತೆಗಳಿಗೂ ಅವಕಾಶ ಮಾಡಿಕೊಟ್ಟಿದ್ದವು. ತೀರ ಇತ್ತೀಚಿನವರೆಗೂ ಹೆಣ್ಣುಮಕ್ಕಳ ಆಸ್ತಿಯ ಮೇಲಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಮಗಳಿಗೆ ತಂದೆಯ ಆಸ್ತಿಯಲ್ಲಿ ಅಥವಾ ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡುಮಕ್ಕಳಿಗೆ ಸಮವಾದ ಹಕ್ಕುಗಳ ಬಗ್ಗೆ ಮಾತ್ರ ಪ್ರಸ್ತಾಪವಾಗುತ್ತಿತ್ತು. ಅದಕ್ಕೆ ಕಾರಣವೂ ಇದೆ; ಅದೇನೆಂದರೆ ತಂದೆಯ ಆಸ್ತಿಯಲ್ಲಿ ಹಕ್ಕು ಪಡೆದ ಮಹಿಳೆ ಅದೇ ಕಾಲಕ್ಕೆ ಇನ್ನೊಬ್ಬರ ಹೆಂಡತಿಯೂ ಆಗಿರುತ್ತಾಳೆ ಎಂಬುದು ವಾದ. ಅಂದರೆ ಒಬ್ಬ ವಿವಾಹಿತ ಹೆಣ್ಣುಮಗಳ ಗಂಡ ತನ್ನ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಸಹೋದರಿಯರ ಜೊತೆ ಹಂಚಿಕೊಂಡಿರುತ್ತಾನೆ ಎಂಬುದು ಊಹೆ.

ಕೆಲವೊಂದು ಪ್ರಕರಣಗಳಲ್ಲಿ ದಶಕಗಳ ಹಿಂದೆಯೇ ಮದುವೆ ಆಗಿಹೋದ ಹೆಣ್ಣುಮಕ್ಕಳು ವರದಕ್ಷಿಣೆ ರೂಪದಲ್ಲಿ ಗಂಡನಿಗೆ ಅಪಾರ ಹಣ ನೀಡಿದ ನಂತರವೂ, ಹೊಸ ಕಾನೂನಿನ ಅಡಿಯಲ್ಲಿ ತಮ್ಮ ಸಹೋದರರಿಂದ ಸಮಾನ ಅಧಿಕಾರಗಳನ್ನು ಕೇಳಲು ನ್ಯಾಯಾಲಯದ ಮೊರೆ ಹೋದಾಗ ಈ ಹಕ್ಕುಗಳ ವಿರುದ್ಧ ಒಂದು ದೊಡ್ಡ ನೆಗೆಟಿವ್ ಪ್ರಚಾರವೇ ಶುರುವಾದಂತೆ ಇತ್ತು. ಇದು ಕೇವಲ ಈ ಒಂದು ಕಾನೂನಿಗೆ ಮಾತ್ರ ಅಲ್ಲ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯುವ ಯಾವುದೇ ಹೊಸ ಕಾನೂನು ಬಂದರೂ ಇಂತಹ ಅಪಸ್ವರಗಳು ಸಾಮಾನ್ಯ.

ಈಗ ಒಂದು ವಿಶ್ಲೇಷಣಾತ್ಮಕ ದೃಷ್ಟಿಕೋನದಿಂದ ಇದನ್ನು ನೋಡಲು ಪ್ರಯತ್ನಿಸೋಣ. ಹಿಂದೂ ವಾರಸುದಾರ ಕಾಯ್ದೆ ಜಾರಿಯಾದಾಗಿನಿಂದ (1956) ಇಲ್ಲಿಯವರೆಗೂ ಪಿತ್ರಾರ್ಜಿತ ಆಸ್ತಿಗಳು ಭಾಗವಾಗದೇ ಇರುವ ಸಾಧ್ಯತೆಗಳು ಎಷ್ಟಿರುತ್ತವೆ? ಏಕೆಂದರೆ ಈಗಾಗಲೇ ವಿಭಾಗವಾಗಿರುವ ಆಸ್ತಿಗಳಿಗೆ ಇದು ಅನ್ವಯವಾಗುವುದಿಲ್ಲ. ಅಂದರೆ ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ಎಂದು ಕಾಯ್ದೆ ಬಂದಾಗ ಆ ಮಹಿಳೆಯ ಕುಟುಂಬಕ್ಕೆ ಸಂಬಂಧಿಸಿದ ಪಿತ್ರಾರ್ಜಿತ ಆಸ್ತಿ ವಿಭಾಗ ಆಗದೇ ಇದ್ದ ಪಕ್ಷದಲ್ಲಿ ಮಾತ್ರ ಅವಳಿಗೆ ಹಕ್ಕು ಸಿಗುತ್ತಿತ್ತು. ಇಂತಹ ಒಂದು ಅವಕಾಶವನ್ನು ತಪ್ಪಿಸಲು ಬಾಯಿಮಾತಿನ ವಿಭಾಗ ಅಥವಾ ನೋಂದಣಿ ಆಗದ ಹಳೆಯ ದಿನಾಂಕದ ಕರಾರುಪತ್ರಗಳನ್ನು ಎಷ್ಟೋ ಜನ ಸೃಷ್ಟಿಸಿದರು. ಅದಕ್ಕೆಂದೇ ನ್ಯಾಯಾಲಯ ಮತ್ತೆ ಮಧ್ಯಪ್ರವೇಶಿಸಿ ಈ ತರಹದ ವಿಭಾಗ ಪತ್ರಗಳಿಗೆ ಮಾನ್ಯತೆಯನ್ನು ನೀಡಲಿಲ್ಲ. ಇನ್ನು ಕೆಲವೊಂದು ಪ್ರದೇಶಗಳಲ್ಲಿ ಹೆಣ್ಣುಮಕ್ಕಳನ್ನು ಮದುವೆ ಮಾಡಿ ಕಳಿಸುವ ಮೊದಲು ಆಸ್ತಿ ಹಕ್ಕು ಬಿಡುಗಡೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಭಾರತದಂತಹ ಸಾಂಪ್ರದಾಯಿಕ ಸಮಾಜದಲ್ಲಿ ಮದುವೆಯಾಗಿ ಇನ್ನೂ ತಂದೆ ತಾಯಿ ಹಾಗೂ ಸಹೋದರರನ್ನೇ ನಂಬಿರುವ ಹೆಣ್ಣುಮಕ್ಕಳು ಸಹಿ ಹಾಕುವುದಿಲ್ಲ ಎಂದು ಹೇಳುವ ಸಾಧ್ಯತೆಗಳು ಎಷ್ಟಿವೆ? ಇನ್ನು ವರದಕ್ಷಿಣೆ ಎನ್ನುವುದು ಗಂಡನಿಗೆ ಸಲ್ಲುವಂಥದ್ದು, ಅದರಿಂದ ಆ ಹೆಣ್ಣುಮಕ್ಕಳಿಗೆ ಏನು ಲಾಭ? ಈ ಎಲ್ಲ ಹಿನ್ನೆಲೆಗಳಲ್ಲಿ ಆಸ್ತಿಯ ಸಮಾನ ಹಕ್ಕಿನ ಲಾಭ ಪಡೆದ ಹೆಂಗಸರು ಎಷ್ಟಿರಬಹುದು ಎಂದು ನೋಡಿದಾಗ ವಸ್ತುಸ್ಥಿತಿ ನಿರಾಶಾದಾಯಕವೇ ಆಗಿರುತ್ತದೆ.

ಗಂಡನ ಮನೆಯಲ್ಲಿದ್ದು ಹೊರಗಡೆ ಕೆಲಸ ಮಾಡುವ ಬಹುತೇಕ ಹೆಣ್ಣುಮಕ್ಕಳು ಸಹ ತಮ್ಮ ತಿಂಗಳ ಸಂಬಳವನ್ನು ತಂದು ಗಂಡನ ಕೈಗೇ ಕೊಡುವ ಉದಾಹರಣೆಗಳು ಹೇರಳವಾಗಿವೆ. ಹಣವನ್ನು ಬೇರೆಬೇರೆ ಲಾಭದಾಯಕ ಸ್ಕೀಮ್‌ಗಳಲ್ಲಿ ತೊಡಗಿಸುವ ಕೆಲಸವನ್ನೆಲ್ಲಾ ಗಂಡಸರೇ ಮಾಡುತ್ತಾರೆ. ಹೀಗಿರುವಾಗ ಯಾವುದೇ ಉದ್ಯೋಗ ಮಾಡದೆ ಗೃಹಿಣಿ ಆಗಿದ್ದುಕೊಂಡು ತನ್ನ ಇಡೀ ಜೀವನವನ್ನು ಗಂಡ, ಮನೆ, ಮಕ್ಕಳು ಹಾಗೂ ಅವರ ಅಭಿವೃದ್ಧಿಗಾಗಿ ಶ್ರಮಿಸುವ ಹೆಣ್ಣುಮಕ್ಕಳಿಗೆ ತನ್ನ ಆಪತ್ಕಾಲದಲ್ಲಿ ಯಾರು ಆಸರೆ? ಉದ್ಯೋಗ ತೊರೆದು ಗೃಹಿಣಿ ಆದ ಹೆಣ್ಣುಮಕ್ಕಳಾಗಲೀ ಮೊದಲಿನಿಂದಲೂ ಮನೆ ನೋಡಿಕೊಂಡ ಮಹಿಳೆ ಆಗಲಿ ಅಕಸ್ಮಾತ್ ಮದುವೆ ಆಗಿ ದಶಕಗಳ ನಂತರ ಗಂಡನಿಂದ ದೂರಾಗುವ ಸಂದರ್ಭ ಬಂದರೆ ಕೇವಲ ಆತ ಕೊಡುವ ಜೀವನಾಂಶ ಅಥವಾ ಶಾಶ್ವತ ಪರಿಹಾರದ ರೂಪದಲ್ಲಿ ದೊರೆಯುವ ಮೊತ್ತವಷ್ಟೇ ಅವಳಿಗೆ ಆಧಾರವಾಗಿರುತ್ತಿತ್ತು. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟಿನ ಈ ತೀರ್ಪು ಮಹಿಳಾ ಸ್ವಾಭಿಮಾನದ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಾಗಿದೆ.

ಕೃಷ್ಣನ್ ರಾಮಸ್ವಾಮಿ

ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ತಮ್ಮ ತೀರ್ಪಿನಲ್ಲಿ “ಗಂಡ ಆಸ್ತಿ ಖರೀದಿಸುವುದಕ್ಕೆ ಆತನಿಗೆ ಅನುಕೂಲ ಮಾಡಿಕೊಡುವಲ್ಲಿ ಹೆಂಡತಿ ನಿರ್ವಹಿಸುವ ಪಾತ್ರವನ್ನು ಗುರುತಿಸಲು ನ್ಯಾಯಾಲಯದ ಮೇಲೆ ಯಾವುದೇ ಕಾನೂನಿನ ಪ್ರತಿಬಂಧಗಳು ಇಲ್ಲ ಎಂದು ಹೇಳಿದ್ದಾರೆ. ಮುಂದುವರಿದು ’ಹೆಂಡತಿ ಮನೆಯ ಎಲ್ಲ ಕೆಲಸ ಹಾಗೂ ಜವಾಬ್ದಾರಿಗಳನ್ನು ತಾನೇ ತೆಗೆದುಕೊಂಡು, ಕುಟುಂಬದ ದಿನನಿತ್ಯದ ಜಂಜಾಟಗಳಿಂದ ಅವನನ್ನು ಮುಕ್ತಗೊಳಿಸಿದ್ದರಿಂದ ಆತ ಆರ್ಥಿಕವಾಗಿ ಸಶಕ್ತನಾಗಲು ಮತ್ತು ಆಸ್ತಿ ಹೊಂದಲು ಸಾಧ್ಯವಾಗುತ್ತದೆ; ಹಾಗಿರುವಾಗ ಆತ ಗಳಿಸಿದ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು ಕೊಡುವುದು ಸಮಂಜಸವಾಗಿದೆ’ ಎಂದು ಹೇಳಿದ್ದಾರೆ. ನಿತ್ಯ ಹೊರಗಡೆ ಹೋಗಿ 8 ಗಂಟೆ ಕೆಲಸ ಮಾಡುವ ಗಂಡನ ಜೊತೆ 24 ಗಂಟೆಯೂ ಗೃಹಿಣಿಯಾಗಿ ಜವಬ್ದಾರಿ ನಿರ್ವಹಿಸುವ ಹೆಚ್ಚಿನ ಕೊಡುಗೆಯನ್ನು ನಗಣ್ಯಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಗಂಡ ಸತ್ತಾಗ ಆತನ ಸ್ವಯಾರ್ಜಿತ ಆಸ್ತಿಯಲ್ಲಿ ಹೆಂಡತಿಗೆ ಒಂದು ಭಾಗ ಬರುವ ಕಾನೂನು ಈಗಾಗಲೇ ಇದ್ದರೂ ಈ ತೀರ್ಮಾನ ವಿಶೇಷವಾಗಿ ಕಾಣಲು ಕಾರಣವೆಂದರೆ, ಇಲ್ಲಿ ಹೆಣ್ಣಿನ ಕೊಡುಗೆಯನ್ನು ಮಾನ್ಯಮಾಡಿರುವ ರೀತಿ ಮತ್ತು ವಿಚ್ಚೇದನಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಈ ತೀರ್ಪಿನಿಂದ ಸ್ವಲ್ಪ ಲಾಭ ಆಗಬಹುದು ಎಂಬುದಕ್ಕೆ. ಪ್ರತಿಯೊಂದು ತೀರ್ಪುಗಳು ಆಯಾ ಪ್ರಕರಣಗಳಿಗೆ ಸೂಕ್ತವಾಗುವ ರೀತಿಯಲ್ಲಿ ಬಂದಿರುತ್ತವೆ. ಆದರೆ ಕೆಲವೊಂದು ವಿಶೇಷ ತೀರ್ಪುಗಳು ತಮ್ಮ ವಿಶೇಷ ದೃಷ್ಟಿಕೋನದಿಂದಾಗಿ ವಿಭಿನ್ನವಾಗಿ ನಿಲ್ಲುತ್ತವೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಂತಹ ಇನ್ನೂ ಹತ್ತಾರು ತೀರ್ಪುಗಳ ಅಗತ್ಯವಿದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...