Homeಮುಖಪುಟಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

- Advertisement -
- Advertisement -

ಮದ್ರಾಸ್ ಹೈಕೋರ್ಟಿನ ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆಸ್ತಿ ಮೇಲಿನ ವಿವಾಹಿತ ಮಹಿಳೆಯ ಹಕ್ಕಿನ ಬಗ್ಗೆ ಉಲ್ಲೇಖ ಮಾಡುತ್ತ ಕುಟುಂಬದಲ್ಲಿ ಹೆಂಡತಿಯ ಕೊಡುಗೆಗಳನ್ನು ಗುರುತಿಸುವಂತಹ ಯಾವುದೇ ವಿಧಾನಗಳು ಲಭ್ಯವಿಲ್ಲ ಆದರೆ ನ್ಯಾಯಾಲಯಗಳು ಅದನ್ನು ಗುರುತಿಸಬಹುದು ಎಂದು ಹೇಳುವ ಮೂಲಕ ಮಹಿಳಾ ಸಶಕ್ತೀಕರಣದತ್ತ ಒಂದು ಬಲವಾದ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದುವರೆಗೂ ಆಸ್ತಿ ಮೇಲಿನ ಹೆಣ್ಣುಮಕ್ಕಳ ಹಕ್ಕಿಗೆ ಸಂಬಂಧಿಸಿ ಬಂದಿರುವ ಪ್ರತಿಯೊಂದು ತೀರ್ಪುಗಳು ಕಾಲಕಾಲಕ್ಕೆ ಸಮಾನತೆಯ ಕಡೆಗೆ ಹೆಜ್ಜೆಹಾಕುವ ನಿರ್ದಿಷ್ಟ ಘಟ್ಟಗಳಂತೆ ಕೆಲಸ ಮಾಡಿವೆ, ಆದರೆ ಅನೇಕಬಾರಿ ಕೆಲವೊಂದು ಗೊಂದಲ ಅನಿರ್ದಿಷ್ಟತೆಗಳಿಗೂ ಅವಕಾಶ ಮಾಡಿಕೊಟ್ಟಿದ್ದವು. ತೀರ ಇತ್ತೀಚಿನವರೆಗೂ ಹೆಣ್ಣುಮಕ್ಕಳ ಆಸ್ತಿಯ ಮೇಲಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಮಗಳಿಗೆ ತಂದೆಯ ಆಸ್ತಿಯಲ್ಲಿ ಅಥವಾ ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡುಮಕ್ಕಳಿಗೆ ಸಮವಾದ ಹಕ್ಕುಗಳ ಬಗ್ಗೆ ಮಾತ್ರ ಪ್ರಸ್ತಾಪವಾಗುತ್ತಿತ್ತು. ಅದಕ್ಕೆ ಕಾರಣವೂ ಇದೆ; ಅದೇನೆಂದರೆ ತಂದೆಯ ಆಸ್ತಿಯಲ್ಲಿ ಹಕ್ಕು ಪಡೆದ ಮಹಿಳೆ ಅದೇ ಕಾಲಕ್ಕೆ ಇನ್ನೊಬ್ಬರ ಹೆಂಡತಿಯೂ ಆಗಿರುತ್ತಾಳೆ ಎಂಬುದು ವಾದ. ಅಂದರೆ ಒಬ್ಬ ವಿವಾಹಿತ ಹೆಣ್ಣುಮಗಳ ಗಂಡ ತನ್ನ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಸಹೋದರಿಯರ ಜೊತೆ ಹಂಚಿಕೊಂಡಿರುತ್ತಾನೆ ಎಂಬುದು ಊಹೆ.

ಕೆಲವೊಂದು ಪ್ರಕರಣಗಳಲ್ಲಿ ದಶಕಗಳ ಹಿಂದೆಯೇ ಮದುವೆ ಆಗಿಹೋದ ಹೆಣ್ಣುಮಕ್ಕಳು ವರದಕ್ಷಿಣೆ ರೂಪದಲ್ಲಿ ಗಂಡನಿಗೆ ಅಪಾರ ಹಣ ನೀಡಿದ ನಂತರವೂ, ಹೊಸ ಕಾನೂನಿನ ಅಡಿಯಲ್ಲಿ ತಮ್ಮ ಸಹೋದರರಿಂದ ಸಮಾನ ಅಧಿಕಾರಗಳನ್ನು ಕೇಳಲು ನ್ಯಾಯಾಲಯದ ಮೊರೆ ಹೋದಾಗ ಈ ಹಕ್ಕುಗಳ ವಿರುದ್ಧ ಒಂದು ದೊಡ್ಡ ನೆಗೆಟಿವ್ ಪ್ರಚಾರವೇ ಶುರುವಾದಂತೆ ಇತ್ತು. ಇದು ಕೇವಲ ಈ ಒಂದು ಕಾನೂನಿಗೆ ಮಾತ್ರ ಅಲ್ಲ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯುವ ಯಾವುದೇ ಹೊಸ ಕಾನೂನು ಬಂದರೂ ಇಂತಹ ಅಪಸ್ವರಗಳು ಸಾಮಾನ್ಯ.

ಈಗ ಒಂದು ವಿಶ್ಲೇಷಣಾತ್ಮಕ ದೃಷ್ಟಿಕೋನದಿಂದ ಇದನ್ನು ನೋಡಲು ಪ್ರಯತ್ನಿಸೋಣ. ಹಿಂದೂ ವಾರಸುದಾರ ಕಾಯ್ದೆ ಜಾರಿಯಾದಾಗಿನಿಂದ (1956) ಇಲ್ಲಿಯವರೆಗೂ ಪಿತ್ರಾರ್ಜಿತ ಆಸ್ತಿಗಳು ಭಾಗವಾಗದೇ ಇರುವ ಸಾಧ್ಯತೆಗಳು ಎಷ್ಟಿರುತ್ತವೆ? ಏಕೆಂದರೆ ಈಗಾಗಲೇ ವಿಭಾಗವಾಗಿರುವ ಆಸ್ತಿಗಳಿಗೆ ಇದು ಅನ್ವಯವಾಗುವುದಿಲ್ಲ. ಅಂದರೆ ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ಎಂದು ಕಾಯ್ದೆ ಬಂದಾಗ ಆ ಮಹಿಳೆಯ ಕುಟುಂಬಕ್ಕೆ ಸಂಬಂಧಿಸಿದ ಪಿತ್ರಾರ್ಜಿತ ಆಸ್ತಿ ವಿಭಾಗ ಆಗದೇ ಇದ್ದ ಪಕ್ಷದಲ್ಲಿ ಮಾತ್ರ ಅವಳಿಗೆ ಹಕ್ಕು ಸಿಗುತ್ತಿತ್ತು. ಇಂತಹ ಒಂದು ಅವಕಾಶವನ್ನು ತಪ್ಪಿಸಲು ಬಾಯಿಮಾತಿನ ವಿಭಾಗ ಅಥವಾ ನೋಂದಣಿ ಆಗದ ಹಳೆಯ ದಿನಾಂಕದ ಕರಾರುಪತ್ರಗಳನ್ನು ಎಷ್ಟೋ ಜನ ಸೃಷ್ಟಿಸಿದರು. ಅದಕ್ಕೆಂದೇ ನ್ಯಾಯಾಲಯ ಮತ್ತೆ ಮಧ್ಯಪ್ರವೇಶಿಸಿ ಈ ತರಹದ ವಿಭಾಗ ಪತ್ರಗಳಿಗೆ ಮಾನ್ಯತೆಯನ್ನು ನೀಡಲಿಲ್ಲ. ಇನ್ನು ಕೆಲವೊಂದು ಪ್ರದೇಶಗಳಲ್ಲಿ ಹೆಣ್ಣುಮಕ್ಕಳನ್ನು ಮದುವೆ ಮಾಡಿ ಕಳಿಸುವ ಮೊದಲು ಆಸ್ತಿ ಹಕ್ಕು ಬಿಡುಗಡೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಭಾರತದಂತಹ ಸಾಂಪ್ರದಾಯಿಕ ಸಮಾಜದಲ್ಲಿ ಮದುವೆಯಾಗಿ ಇನ್ನೂ ತಂದೆ ತಾಯಿ ಹಾಗೂ ಸಹೋದರರನ್ನೇ ನಂಬಿರುವ ಹೆಣ್ಣುಮಕ್ಕಳು ಸಹಿ ಹಾಕುವುದಿಲ್ಲ ಎಂದು ಹೇಳುವ ಸಾಧ್ಯತೆಗಳು ಎಷ್ಟಿವೆ? ಇನ್ನು ವರದಕ್ಷಿಣೆ ಎನ್ನುವುದು ಗಂಡನಿಗೆ ಸಲ್ಲುವಂಥದ್ದು, ಅದರಿಂದ ಆ ಹೆಣ್ಣುಮಕ್ಕಳಿಗೆ ಏನು ಲಾಭ? ಈ ಎಲ್ಲ ಹಿನ್ನೆಲೆಗಳಲ್ಲಿ ಆಸ್ತಿಯ ಸಮಾನ ಹಕ್ಕಿನ ಲಾಭ ಪಡೆದ ಹೆಂಗಸರು ಎಷ್ಟಿರಬಹುದು ಎಂದು ನೋಡಿದಾಗ ವಸ್ತುಸ್ಥಿತಿ ನಿರಾಶಾದಾಯಕವೇ ಆಗಿರುತ್ತದೆ.

ಗಂಡನ ಮನೆಯಲ್ಲಿದ್ದು ಹೊರಗಡೆ ಕೆಲಸ ಮಾಡುವ ಬಹುತೇಕ ಹೆಣ್ಣುಮಕ್ಕಳು ಸಹ ತಮ್ಮ ತಿಂಗಳ ಸಂಬಳವನ್ನು ತಂದು ಗಂಡನ ಕೈಗೇ ಕೊಡುವ ಉದಾಹರಣೆಗಳು ಹೇರಳವಾಗಿವೆ. ಹಣವನ್ನು ಬೇರೆಬೇರೆ ಲಾಭದಾಯಕ ಸ್ಕೀಮ್‌ಗಳಲ್ಲಿ ತೊಡಗಿಸುವ ಕೆಲಸವನ್ನೆಲ್ಲಾ ಗಂಡಸರೇ ಮಾಡುತ್ತಾರೆ. ಹೀಗಿರುವಾಗ ಯಾವುದೇ ಉದ್ಯೋಗ ಮಾಡದೆ ಗೃಹಿಣಿ ಆಗಿದ್ದುಕೊಂಡು ತನ್ನ ಇಡೀ ಜೀವನವನ್ನು ಗಂಡ, ಮನೆ, ಮಕ್ಕಳು ಹಾಗೂ ಅವರ ಅಭಿವೃದ್ಧಿಗಾಗಿ ಶ್ರಮಿಸುವ ಹೆಣ್ಣುಮಕ್ಕಳಿಗೆ ತನ್ನ ಆಪತ್ಕಾಲದಲ್ಲಿ ಯಾರು ಆಸರೆ? ಉದ್ಯೋಗ ತೊರೆದು ಗೃಹಿಣಿ ಆದ ಹೆಣ್ಣುಮಕ್ಕಳಾಗಲೀ ಮೊದಲಿನಿಂದಲೂ ಮನೆ ನೋಡಿಕೊಂಡ ಮಹಿಳೆ ಆಗಲಿ ಅಕಸ್ಮಾತ್ ಮದುವೆ ಆಗಿ ದಶಕಗಳ ನಂತರ ಗಂಡನಿಂದ ದೂರಾಗುವ ಸಂದರ್ಭ ಬಂದರೆ ಕೇವಲ ಆತ ಕೊಡುವ ಜೀವನಾಂಶ ಅಥವಾ ಶಾಶ್ವತ ಪರಿಹಾರದ ರೂಪದಲ್ಲಿ ದೊರೆಯುವ ಮೊತ್ತವಷ್ಟೇ ಅವಳಿಗೆ ಆಧಾರವಾಗಿರುತ್ತಿತ್ತು. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟಿನ ಈ ತೀರ್ಪು ಮಹಿಳಾ ಸ್ವಾಭಿಮಾನದ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಾಗಿದೆ.

ಕೃಷ್ಣನ್ ರಾಮಸ್ವಾಮಿ

ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ತಮ್ಮ ತೀರ್ಪಿನಲ್ಲಿ “ಗಂಡ ಆಸ್ತಿ ಖರೀದಿಸುವುದಕ್ಕೆ ಆತನಿಗೆ ಅನುಕೂಲ ಮಾಡಿಕೊಡುವಲ್ಲಿ ಹೆಂಡತಿ ನಿರ್ವಹಿಸುವ ಪಾತ್ರವನ್ನು ಗುರುತಿಸಲು ನ್ಯಾಯಾಲಯದ ಮೇಲೆ ಯಾವುದೇ ಕಾನೂನಿನ ಪ್ರತಿಬಂಧಗಳು ಇಲ್ಲ ಎಂದು ಹೇಳಿದ್ದಾರೆ. ಮುಂದುವರಿದು ’ಹೆಂಡತಿ ಮನೆಯ ಎಲ್ಲ ಕೆಲಸ ಹಾಗೂ ಜವಾಬ್ದಾರಿಗಳನ್ನು ತಾನೇ ತೆಗೆದುಕೊಂಡು, ಕುಟುಂಬದ ದಿನನಿತ್ಯದ ಜಂಜಾಟಗಳಿಂದ ಅವನನ್ನು ಮುಕ್ತಗೊಳಿಸಿದ್ದರಿಂದ ಆತ ಆರ್ಥಿಕವಾಗಿ ಸಶಕ್ತನಾಗಲು ಮತ್ತು ಆಸ್ತಿ ಹೊಂದಲು ಸಾಧ್ಯವಾಗುತ್ತದೆ; ಹಾಗಿರುವಾಗ ಆತ ಗಳಿಸಿದ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು ಕೊಡುವುದು ಸಮಂಜಸವಾಗಿದೆ’ ಎಂದು ಹೇಳಿದ್ದಾರೆ. ನಿತ್ಯ ಹೊರಗಡೆ ಹೋಗಿ 8 ಗಂಟೆ ಕೆಲಸ ಮಾಡುವ ಗಂಡನ ಜೊತೆ 24 ಗಂಟೆಯೂ ಗೃಹಿಣಿಯಾಗಿ ಜವಬ್ದಾರಿ ನಿರ್ವಹಿಸುವ ಹೆಚ್ಚಿನ ಕೊಡುಗೆಯನ್ನು ನಗಣ್ಯಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಗಂಡ ಸತ್ತಾಗ ಆತನ ಸ್ವಯಾರ್ಜಿತ ಆಸ್ತಿಯಲ್ಲಿ ಹೆಂಡತಿಗೆ ಒಂದು ಭಾಗ ಬರುವ ಕಾನೂನು ಈಗಾಗಲೇ ಇದ್ದರೂ ಈ ತೀರ್ಮಾನ ವಿಶೇಷವಾಗಿ ಕಾಣಲು ಕಾರಣವೆಂದರೆ, ಇಲ್ಲಿ ಹೆಣ್ಣಿನ ಕೊಡುಗೆಯನ್ನು ಮಾನ್ಯಮಾಡಿರುವ ರೀತಿ ಮತ್ತು ವಿಚ್ಚೇದನಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಈ ತೀರ್ಪಿನಿಂದ ಸ್ವಲ್ಪ ಲಾಭ ಆಗಬಹುದು ಎಂಬುದಕ್ಕೆ. ಪ್ರತಿಯೊಂದು ತೀರ್ಪುಗಳು ಆಯಾ ಪ್ರಕರಣಗಳಿಗೆ ಸೂಕ್ತವಾಗುವ ರೀತಿಯಲ್ಲಿ ಬಂದಿರುತ್ತವೆ. ಆದರೆ ಕೆಲವೊಂದು ವಿಶೇಷ ತೀರ್ಪುಗಳು ತಮ್ಮ ವಿಶೇಷ ದೃಷ್ಟಿಕೋನದಿಂದಾಗಿ ವಿಭಿನ್ನವಾಗಿ ನಿಲ್ಲುತ್ತವೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಂತಹ ಇನ್ನೂ ಹತ್ತಾರು ತೀರ್ಪುಗಳ ಅಗತ್ಯವಿದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...