Homeಮುಖಪುಟಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

- Advertisement -
- Advertisement -

ಮದ್ರಾಸ್ ಹೈಕೋರ್ಟಿನ ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆಸ್ತಿ ಮೇಲಿನ ವಿವಾಹಿತ ಮಹಿಳೆಯ ಹಕ್ಕಿನ ಬಗ್ಗೆ ಉಲ್ಲೇಖ ಮಾಡುತ್ತ ಕುಟುಂಬದಲ್ಲಿ ಹೆಂಡತಿಯ ಕೊಡುಗೆಗಳನ್ನು ಗುರುತಿಸುವಂತಹ ಯಾವುದೇ ವಿಧಾನಗಳು ಲಭ್ಯವಿಲ್ಲ ಆದರೆ ನ್ಯಾಯಾಲಯಗಳು ಅದನ್ನು ಗುರುತಿಸಬಹುದು ಎಂದು ಹೇಳುವ ಮೂಲಕ ಮಹಿಳಾ ಸಶಕ್ತೀಕರಣದತ್ತ ಒಂದು ಬಲವಾದ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದುವರೆಗೂ ಆಸ್ತಿ ಮೇಲಿನ ಹೆಣ್ಣುಮಕ್ಕಳ ಹಕ್ಕಿಗೆ ಸಂಬಂಧಿಸಿ ಬಂದಿರುವ ಪ್ರತಿಯೊಂದು ತೀರ್ಪುಗಳು ಕಾಲಕಾಲಕ್ಕೆ ಸಮಾನತೆಯ ಕಡೆಗೆ ಹೆಜ್ಜೆಹಾಕುವ ನಿರ್ದಿಷ್ಟ ಘಟ್ಟಗಳಂತೆ ಕೆಲಸ ಮಾಡಿವೆ, ಆದರೆ ಅನೇಕಬಾರಿ ಕೆಲವೊಂದು ಗೊಂದಲ ಅನಿರ್ದಿಷ್ಟತೆಗಳಿಗೂ ಅವಕಾಶ ಮಾಡಿಕೊಟ್ಟಿದ್ದವು. ತೀರ ಇತ್ತೀಚಿನವರೆಗೂ ಹೆಣ್ಣುಮಕ್ಕಳ ಆಸ್ತಿಯ ಮೇಲಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಮಗಳಿಗೆ ತಂದೆಯ ಆಸ್ತಿಯಲ್ಲಿ ಅಥವಾ ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡುಮಕ್ಕಳಿಗೆ ಸಮವಾದ ಹಕ್ಕುಗಳ ಬಗ್ಗೆ ಮಾತ್ರ ಪ್ರಸ್ತಾಪವಾಗುತ್ತಿತ್ತು. ಅದಕ್ಕೆ ಕಾರಣವೂ ಇದೆ; ಅದೇನೆಂದರೆ ತಂದೆಯ ಆಸ್ತಿಯಲ್ಲಿ ಹಕ್ಕು ಪಡೆದ ಮಹಿಳೆ ಅದೇ ಕಾಲಕ್ಕೆ ಇನ್ನೊಬ್ಬರ ಹೆಂಡತಿಯೂ ಆಗಿರುತ್ತಾಳೆ ಎಂಬುದು ವಾದ. ಅಂದರೆ ಒಬ್ಬ ವಿವಾಹಿತ ಹೆಣ್ಣುಮಗಳ ಗಂಡ ತನ್ನ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಸಹೋದರಿಯರ ಜೊತೆ ಹಂಚಿಕೊಂಡಿರುತ್ತಾನೆ ಎಂಬುದು ಊಹೆ.

ಕೆಲವೊಂದು ಪ್ರಕರಣಗಳಲ್ಲಿ ದಶಕಗಳ ಹಿಂದೆಯೇ ಮದುವೆ ಆಗಿಹೋದ ಹೆಣ್ಣುಮಕ್ಕಳು ವರದಕ್ಷಿಣೆ ರೂಪದಲ್ಲಿ ಗಂಡನಿಗೆ ಅಪಾರ ಹಣ ನೀಡಿದ ನಂತರವೂ, ಹೊಸ ಕಾನೂನಿನ ಅಡಿಯಲ್ಲಿ ತಮ್ಮ ಸಹೋದರರಿಂದ ಸಮಾನ ಅಧಿಕಾರಗಳನ್ನು ಕೇಳಲು ನ್ಯಾಯಾಲಯದ ಮೊರೆ ಹೋದಾಗ ಈ ಹಕ್ಕುಗಳ ವಿರುದ್ಧ ಒಂದು ದೊಡ್ಡ ನೆಗೆಟಿವ್ ಪ್ರಚಾರವೇ ಶುರುವಾದಂತೆ ಇತ್ತು. ಇದು ಕೇವಲ ಈ ಒಂದು ಕಾನೂನಿಗೆ ಮಾತ್ರ ಅಲ್ಲ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯುವ ಯಾವುದೇ ಹೊಸ ಕಾನೂನು ಬಂದರೂ ಇಂತಹ ಅಪಸ್ವರಗಳು ಸಾಮಾನ್ಯ.

ಈಗ ಒಂದು ವಿಶ್ಲೇಷಣಾತ್ಮಕ ದೃಷ್ಟಿಕೋನದಿಂದ ಇದನ್ನು ನೋಡಲು ಪ್ರಯತ್ನಿಸೋಣ. ಹಿಂದೂ ವಾರಸುದಾರ ಕಾಯ್ದೆ ಜಾರಿಯಾದಾಗಿನಿಂದ (1956) ಇಲ್ಲಿಯವರೆಗೂ ಪಿತ್ರಾರ್ಜಿತ ಆಸ್ತಿಗಳು ಭಾಗವಾಗದೇ ಇರುವ ಸಾಧ್ಯತೆಗಳು ಎಷ್ಟಿರುತ್ತವೆ? ಏಕೆಂದರೆ ಈಗಾಗಲೇ ವಿಭಾಗವಾಗಿರುವ ಆಸ್ತಿಗಳಿಗೆ ಇದು ಅನ್ವಯವಾಗುವುದಿಲ್ಲ. ಅಂದರೆ ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ಎಂದು ಕಾಯ್ದೆ ಬಂದಾಗ ಆ ಮಹಿಳೆಯ ಕುಟುಂಬಕ್ಕೆ ಸಂಬಂಧಿಸಿದ ಪಿತ್ರಾರ್ಜಿತ ಆಸ್ತಿ ವಿಭಾಗ ಆಗದೇ ಇದ್ದ ಪಕ್ಷದಲ್ಲಿ ಮಾತ್ರ ಅವಳಿಗೆ ಹಕ್ಕು ಸಿಗುತ್ತಿತ್ತು. ಇಂತಹ ಒಂದು ಅವಕಾಶವನ್ನು ತಪ್ಪಿಸಲು ಬಾಯಿಮಾತಿನ ವಿಭಾಗ ಅಥವಾ ನೋಂದಣಿ ಆಗದ ಹಳೆಯ ದಿನಾಂಕದ ಕರಾರುಪತ್ರಗಳನ್ನು ಎಷ್ಟೋ ಜನ ಸೃಷ್ಟಿಸಿದರು. ಅದಕ್ಕೆಂದೇ ನ್ಯಾಯಾಲಯ ಮತ್ತೆ ಮಧ್ಯಪ್ರವೇಶಿಸಿ ಈ ತರಹದ ವಿಭಾಗ ಪತ್ರಗಳಿಗೆ ಮಾನ್ಯತೆಯನ್ನು ನೀಡಲಿಲ್ಲ. ಇನ್ನು ಕೆಲವೊಂದು ಪ್ರದೇಶಗಳಲ್ಲಿ ಹೆಣ್ಣುಮಕ್ಕಳನ್ನು ಮದುವೆ ಮಾಡಿ ಕಳಿಸುವ ಮೊದಲು ಆಸ್ತಿ ಹಕ್ಕು ಬಿಡುಗಡೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಭಾರತದಂತಹ ಸಾಂಪ್ರದಾಯಿಕ ಸಮಾಜದಲ್ಲಿ ಮದುವೆಯಾಗಿ ಇನ್ನೂ ತಂದೆ ತಾಯಿ ಹಾಗೂ ಸಹೋದರರನ್ನೇ ನಂಬಿರುವ ಹೆಣ್ಣುಮಕ್ಕಳು ಸಹಿ ಹಾಕುವುದಿಲ್ಲ ಎಂದು ಹೇಳುವ ಸಾಧ್ಯತೆಗಳು ಎಷ್ಟಿವೆ? ಇನ್ನು ವರದಕ್ಷಿಣೆ ಎನ್ನುವುದು ಗಂಡನಿಗೆ ಸಲ್ಲುವಂಥದ್ದು, ಅದರಿಂದ ಆ ಹೆಣ್ಣುಮಕ್ಕಳಿಗೆ ಏನು ಲಾಭ? ಈ ಎಲ್ಲ ಹಿನ್ನೆಲೆಗಳಲ್ಲಿ ಆಸ್ತಿಯ ಸಮಾನ ಹಕ್ಕಿನ ಲಾಭ ಪಡೆದ ಹೆಂಗಸರು ಎಷ್ಟಿರಬಹುದು ಎಂದು ನೋಡಿದಾಗ ವಸ್ತುಸ್ಥಿತಿ ನಿರಾಶಾದಾಯಕವೇ ಆಗಿರುತ್ತದೆ.

ಗಂಡನ ಮನೆಯಲ್ಲಿದ್ದು ಹೊರಗಡೆ ಕೆಲಸ ಮಾಡುವ ಬಹುತೇಕ ಹೆಣ್ಣುಮಕ್ಕಳು ಸಹ ತಮ್ಮ ತಿಂಗಳ ಸಂಬಳವನ್ನು ತಂದು ಗಂಡನ ಕೈಗೇ ಕೊಡುವ ಉದಾಹರಣೆಗಳು ಹೇರಳವಾಗಿವೆ. ಹಣವನ್ನು ಬೇರೆಬೇರೆ ಲಾಭದಾಯಕ ಸ್ಕೀಮ್‌ಗಳಲ್ಲಿ ತೊಡಗಿಸುವ ಕೆಲಸವನ್ನೆಲ್ಲಾ ಗಂಡಸರೇ ಮಾಡುತ್ತಾರೆ. ಹೀಗಿರುವಾಗ ಯಾವುದೇ ಉದ್ಯೋಗ ಮಾಡದೆ ಗೃಹಿಣಿ ಆಗಿದ್ದುಕೊಂಡು ತನ್ನ ಇಡೀ ಜೀವನವನ್ನು ಗಂಡ, ಮನೆ, ಮಕ್ಕಳು ಹಾಗೂ ಅವರ ಅಭಿವೃದ್ಧಿಗಾಗಿ ಶ್ರಮಿಸುವ ಹೆಣ್ಣುಮಕ್ಕಳಿಗೆ ತನ್ನ ಆಪತ್ಕಾಲದಲ್ಲಿ ಯಾರು ಆಸರೆ? ಉದ್ಯೋಗ ತೊರೆದು ಗೃಹಿಣಿ ಆದ ಹೆಣ್ಣುಮಕ್ಕಳಾಗಲೀ ಮೊದಲಿನಿಂದಲೂ ಮನೆ ನೋಡಿಕೊಂಡ ಮಹಿಳೆ ಆಗಲಿ ಅಕಸ್ಮಾತ್ ಮದುವೆ ಆಗಿ ದಶಕಗಳ ನಂತರ ಗಂಡನಿಂದ ದೂರಾಗುವ ಸಂದರ್ಭ ಬಂದರೆ ಕೇವಲ ಆತ ಕೊಡುವ ಜೀವನಾಂಶ ಅಥವಾ ಶಾಶ್ವತ ಪರಿಹಾರದ ರೂಪದಲ್ಲಿ ದೊರೆಯುವ ಮೊತ್ತವಷ್ಟೇ ಅವಳಿಗೆ ಆಧಾರವಾಗಿರುತ್ತಿತ್ತು. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟಿನ ಈ ತೀರ್ಪು ಮಹಿಳಾ ಸ್ವಾಭಿಮಾನದ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಾಗಿದೆ.

ಕೃಷ್ಣನ್ ರಾಮಸ್ವಾಮಿ

ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ತಮ್ಮ ತೀರ್ಪಿನಲ್ಲಿ “ಗಂಡ ಆಸ್ತಿ ಖರೀದಿಸುವುದಕ್ಕೆ ಆತನಿಗೆ ಅನುಕೂಲ ಮಾಡಿಕೊಡುವಲ್ಲಿ ಹೆಂಡತಿ ನಿರ್ವಹಿಸುವ ಪಾತ್ರವನ್ನು ಗುರುತಿಸಲು ನ್ಯಾಯಾಲಯದ ಮೇಲೆ ಯಾವುದೇ ಕಾನೂನಿನ ಪ್ರತಿಬಂಧಗಳು ಇಲ್ಲ ಎಂದು ಹೇಳಿದ್ದಾರೆ. ಮುಂದುವರಿದು ’ಹೆಂಡತಿ ಮನೆಯ ಎಲ್ಲ ಕೆಲಸ ಹಾಗೂ ಜವಾಬ್ದಾರಿಗಳನ್ನು ತಾನೇ ತೆಗೆದುಕೊಂಡು, ಕುಟುಂಬದ ದಿನನಿತ್ಯದ ಜಂಜಾಟಗಳಿಂದ ಅವನನ್ನು ಮುಕ್ತಗೊಳಿಸಿದ್ದರಿಂದ ಆತ ಆರ್ಥಿಕವಾಗಿ ಸಶಕ್ತನಾಗಲು ಮತ್ತು ಆಸ್ತಿ ಹೊಂದಲು ಸಾಧ್ಯವಾಗುತ್ತದೆ; ಹಾಗಿರುವಾಗ ಆತ ಗಳಿಸಿದ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು ಕೊಡುವುದು ಸಮಂಜಸವಾಗಿದೆ’ ಎಂದು ಹೇಳಿದ್ದಾರೆ. ನಿತ್ಯ ಹೊರಗಡೆ ಹೋಗಿ 8 ಗಂಟೆ ಕೆಲಸ ಮಾಡುವ ಗಂಡನ ಜೊತೆ 24 ಗಂಟೆಯೂ ಗೃಹಿಣಿಯಾಗಿ ಜವಬ್ದಾರಿ ನಿರ್ವಹಿಸುವ ಹೆಚ್ಚಿನ ಕೊಡುಗೆಯನ್ನು ನಗಣ್ಯಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಗಂಡ ಸತ್ತಾಗ ಆತನ ಸ್ವಯಾರ್ಜಿತ ಆಸ್ತಿಯಲ್ಲಿ ಹೆಂಡತಿಗೆ ಒಂದು ಭಾಗ ಬರುವ ಕಾನೂನು ಈಗಾಗಲೇ ಇದ್ದರೂ ಈ ತೀರ್ಮಾನ ವಿಶೇಷವಾಗಿ ಕಾಣಲು ಕಾರಣವೆಂದರೆ, ಇಲ್ಲಿ ಹೆಣ್ಣಿನ ಕೊಡುಗೆಯನ್ನು ಮಾನ್ಯಮಾಡಿರುವ ರೀತಿ ಮತ್ತು ವಿಚ್ಚೇದನಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಈ ತೀರ್ಪಿನಿಂದ ಸ್ವಲ್ಪ ಲಾಭ ಆಗಬಹುದು ಎಂಬುದಕ್ಕೆ. ಪ್ರತಿಯೊಂದು ತೀರ್ಪುಗಳು ಆಯಾ ಪ್ರಕರಣಗಳಿಗೆ ಸೂಕ್ತವಾಗುವ ರೀತಿಯಲ್ಲಿ ಬಂದಿರುತ್ತವೆ. ಆದರೆ ಕೆಲವೊಂದು ವಿಶೇಷ ತೀರ್ಪುಗಳು ತಮ್ಮ ವಿಶೇಷ ದೃಷ್ಟಿಕೋನದಿಂದಾಗಿ ವಿಭಿನ್ನವಾಗಿ ನಿಲ್ಲುತ್ತವೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಂತಹ ಇನ್ನೂ ಹತ್ತಾರು ತೀರ್ಪುಗಳ ಅಗತ್ಯವಿದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...