Homeಮುಖಪುಟಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

- Advertisement -
- Advertisement -

ಮದ್ರಾಸ್ ಹೈಕೋರ್ಟಿನ ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆಸ್ತಿ ಮೇಲಿನ ವಿವಾಹಿತ ಮಹಿಳೆಯ ಹಕ್ಕಿನ ಬಗ್ಗೆ ಉಲ್ಲೇಖ ಮಾಡುತ್ತ ಕುಟುಂಬದಲ್ಲಿ ಹೆಂಡತಿಯ ಕೊಡುಗೆಗಳನ್ನು ಗುರುತಿಸುವಂತಹ ಯಾವುದೇ ವಿಧಾನಗಳು ಲಭ್ಯವಿಲ್ಲ ಆದರೆ ನ್ಯಾಯಾಲಯಗಳು ಅದನ್ನು ಗುರುತಿಸಬಹುದು ಎಂದು ಹೇಳುವ ಮೂಲಕ ಮಹಿಳಾ ಸಶಕ್ತೀಕರಣದತ್ತ ಒಂದು ಬಲವಾದ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದುವರೆಗೂ ಆಸ್ತಿ ಮೇಲಿನ ಹೆಣ್ಣುಮಕ್ಕಳ ಹಕ್ಕಿಗೆ ಸಂಬಂಧಿಸಿ ಬಂದಿರುವ ಪ್ರತಿಯೊಂದು ತೀರ್ಪುಗಳು ಕಾಲಕಾಲಕ್ಕೆ ಸಮಾನತೆಯ ಕಡೆಗೆ ಹೆಜ್ಜೆಹಾಕುವ ನಿರ್ದಿಷ್ಟ ಘಟ್ಟಗಳಂತೆ ಕೆಲಸ ಮಾಡಿವೆ, ಆದರೆ ಅನೇಕಬಾರಿ ಕೆಲವೊಂದು ಗೊಂದಲ ಅನಿರ್ದಿಷ್ಟತೆಗಳಿಗೂ ಅವಕಾಶ ಮಾಡಿಕೊಟ್ಟಿದ್ದವು. ತೀರ ಇತ್ತೀಚಿನವರೆಗೂ ಹೆಣ್ಣುಮಕ್ಕಳ ಆಸ್ತಿಯ ಮೇಲಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಮಗಳಿಗೆ ತಂದೆಯ ಆಸ್ತಿಯಲ್ಲಿ ಅಥವಾ ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡುಮಕ್ಕಳಿಗೆ ಸಮವಾದ ಹಕ್ಕುಗಳ ಬಗ್ಗೆ ಮಾತ್ರ ಪ್ರಸ್ತಾಪವಾಗುತ್ತಿತ್ತು. ಅದಕ್ಕೆ ಕಾರಣವೂ ಇದೆ; ಅದೇನೆಂದರೆ ತಂದೆಯ ಆಸ್ತಿಯಲ್ಲಿ ಹಕ್ಕು ಪಡೆದ ಮಹಿಳೆ ಅದೇ ಕಾಲಕ್ಕೆ ಇನ್ನೊಬ್ಬರ ಹೆಂಡತಿಯೂ ಆಗಿರುತ್ತಾಳೆ ಎಂಬುದು ವಾದ. ಅಂದರೆ ಒಬ್ಬ ವಿವಾಹಿತ ಹೆಣ್ಣುಮಗಳ ಗಂಡ ತನ್ನ ಪಿತ್ರಾರ್ಜಿತ ಆಸ್ತಿಯನ್ನು ತನ್ನ ಸಹೋದರಿಯರ ಜೊತೆ ಹಂಚಿಕೊಂಡಿರುತ್ತಾನೆ ಎಂಬುದು ಊಹೆ.

ಕೆಲವೊಂದು ಪ್ರಕರಣಗಳಲ್ಲಿ ದಶಕಗಳ ಹಿಂದೆಯೇ ಮದುವೆ ಆಗಿಹೋದ ಹೆಣ್ಣುಮಕ್ಕಳು ವರದಕ್ಷಿಣೆ ರೂಪದಲ್ಲಿ ಗಂಡನಿಗೆ ಅಪಾರ ಹಣ ನೀಡಿದ ನಂತರವೂ, ಹೊಸ ಕಾನೂನಿನ ಅಡಿಯಲ್ಲಿ ತಮ್ಮ ಸಹೋದರರಿಂದ ಸಮಾನ ಅಧಿಕಾರಗಳನ್ನು ಕೇಳಲು ನ್ಯಾಯಾಲಯದ ಮೊರೆ ಹೋದಾಗ ಈ ಹಕ್ಕುಗಳ ವಿರುದ್ಧ ಒಂದು ದೊಡ್ಡ ನೆಗೆಟಿವ್ ಪ್ರಚಾರವೇ ಶುರುವಾದಂತೆ ಇತ್ತು. ಇದು ಕೇವಲ ಈ ಒಂದು ಕಾನೂನಿಗೆ ಮಾತ್ರ ಅಲ್ಲ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯುವ ಯಾವುದೇ ಹೊಸ ಕಾನೂನು ಬಂದರೂ ಇಂತಹ ಅಪಸ್ವರಗಳು ಸಾಮಾನ್ಯ.

ಈಗ ಒಂದು ವಿಶ್ಲೇಷಣಾತ್ಮಕ ದೃಷ್ಟಿಕೋನದಿಂದ ಇದನ್ನು ನೋಡಲು ಪ್ರಯತ್ನಿಸೋಣ. ಹಿಂದೂ ವಾರಸುದಾರ ಕಾಯ್ದೆ ಜಾರಿಯಾದಾಗಿನಿಂದ (1956) ಇಲ್ಲಿಯವರೆಗೂ ಪಿತ್ರಾರ್ಜಿತ ಆಸ್ತಿಗಳು ಭಾಗವಾಗದೇ ಇರುವ ಸಾಧ್ಯತೆಗಳು ಎಷ್ಟಿರುತ್ತವೆ? ಏಕೆಂದರೆ ಈಗಾಗಲೇ ವಿಭಾಗವಾಗಿರುವ ಆಸ್ತಿಗಳಿಗೆ ಇದು ಅನ್ವಯವಾಗುವುದಿಲ್ಲ. ಅಂದರೆ ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ಎಂದು ಕಾಯ್ದೆ ಬಂದಾಗ ಆ ಮಹಿಳೆಯ ಕುಟುಂಬಕ್ಕೆ ಸಂಬಂಧಿಸಿದ ಪಿತ್ರಾರ್ಜಿತ ಆಸ್ತಿ ವಿಭಾಗ ಆಗದೇ ಇದ್ದ ಪಕ್ಷದಲ್ಲಿ ಮಾತ್ರ ಅವಳಿಗೆ ಹಕ್ಕು ಸಿಗುತ್ತಿತ್ತು. ಇಂತಹ ಒಂದು ಅವಕಾಶವನ್ನು ತಪ್ಪಿಸಲು ಬಾಯಿಮಾತಿನ ವಿಭಾಗ ಅಥವಾ ನೋಂದಣಿ ಆಗದ ಹಳೆಯ ದಿನಾಂಕದ ಕರಾರುಪತ್ರಗಳನ್ನು ಎಷ್ಟೋ ಜನ ಸೃಷ್ಟಿಸಿದರು. ಅದಕ್ಕೆಂದೇ ನ್ಯಾಯಾಲಯ ಮತ್ತೆ ಮಧ್ಯಪ್ರವೇಶಿಸಿ ಈ ತರಹದ ವಿಭಾಗ ಪತ್ರಗಳಿಗೆ ಮಾನ್ಯತೆಯನ್ನು ನೀಡಲಿಲ್ಲ. ಇನ್ನು ಕೆಲವೊಂದು ಪ್ರದೇಶಗಳಲ್ಲಿ ಹೆಣ್ಣುಮಕ್ಕಳನ್ನು ಮದುವೆ ಮಾಡಿ ಕಳಿಸುವ ಮೊದಲು ಆಸ್ತಿ ಹಕ್ಕು ಬಿಡುಗಡೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಭಾರತದಂತಹ ಸಾಂಪ್ರದಾಯಿಕ ಸಮಾಜದಲ್ಲಿ ಮದುವೆಯಾಗಿ ಇನ್ನೂ ತಂದೆ ತಾಯಿ ಹಾಗೂ ಸಹೋದರರನ್ನೇ ನಂಬಿರುವ ಹೆಣ್ಣುಮಕ್ಕಳು ಸಹಿ ಹಾಕುವುದಿಲ್ಲ ಎಂದು ಹೇಳುವ ಸಾಧ್ಯತೆಗಳು ಎಷ್ಟಿವೆ? ಇನ್ನು ವರದಕ್ಷಿಣೆ ಎನ್ನುವುದು ಗಂಡನಿಗೆ ಸಲ್ಲುವಂಥದ್ದು, ಅದರಿಂದ ಆ ಹೆಣ್ಣುಮಕ್ಕಳಿಗೆ ಏನು ಲಾಭ? ಈ ಎಲ್ಲ ಹಿನ್ನೆಲೆಗಳಲ್ಲಿ ಆಸ್ತಿಯ ಸಮಾನ ಹಕ್ಕಿನ ಲಾಭ ಪಡೆದ ಹೆಂಗಸರು ಎಷ್ಟಿರಬಹುದು ಎಂದು ನೋಡಿದಾಗ ವಸ್ತುಸ್ಥಿತಿ ನಿರಾಶಾದಾಯಕವೇ ಆಗಿರುತ್ತದೆ.

ಗಂಡನ ಮನೆಯಲ್ಲಿದ್ದು ಹೊರಗಡೆ ಕೆಲಸ ಮಾಡುವ ಬಹುತೇಕ ಹೆಣ್ಣುಮಕ್ಕಳು ಸಹ ತಮ್ಮ ತಿಂಗಳ ಸಂಬಳವನ್ನು ತಂದು ಗಂಡನ ಕೈಗೇ ಕೊಡುವ ಉದಾಹರಣೆಗಳು ಹೇರಳವಾಗಿವೆ. ಹಣವನ್ನು ಬೇರೆಬೇರೆ ಲಾಭದಾಯಕ ಸ್ಕೀಮ್‌ಗಳಲ್ಲಿ ತೊಡಗಿಸುವ ಕೆಲಸವನ್ನೆಲ್ಲಾ ಗಂಡಸರೇ ಮಾಡುತ್ತಾರೆ. ಹೀಗಿರುವಾಗ ಯಾವುದೇ ಉದ್ಯೋಗ ಮಾಡದೆ ಗೃಹಿಣಿ ಆಗಿದ್ದುಕೊಂಡು ತನ್ನ ಇಡೀ ಜೀವನವನ್ನು ಗಂಡ, ಮನೆ, ಮಕ್ಕಳು ಹಾಗೂ ಅವರ ಅಭಿವೃದ್ಧಿಗಾಗಿ ಶ್ರಮಿಸುವ ಹೆಣ್ಣುಮಕ್ಕಳಿಗೆ ತನ್ನ ಆಪತ್ಕಾಲದಲ್ಲಿ ಯಾರು ಆಸರೆ? ಉದ್ಯೋಗ ತೊರೆದು ಗೃಹಿಣಿ ಆದ ಹೆಣ್ಣುಮಕ್ಕಳಾಗಲೀ ಮೊದಲಿನಿಂದಲೂ ಮನೆ ನೋಡಿಕೊಂಡ ಮಹಿಳೆ ಆಗಲಿ ಅಕಸ್ಮಾತ್ ಮದುವೆ ಆಗಿ ದಶಕಗಳ ನಂತರ ಗಂಡನಿಂದ ದೂರಾಗುವ ಸಂದರ್ಭ ಬಂದರೆ ಕೇವಲ ಆತ ಕೊಡುವ ಜೀವನಾಂಶ ಅಥವಾ ಶಾಶ್ವತ ಪರಿಹಾರದ ರೂಪದಲ್ಲಿ ದೊರೆಯುವ ಮೊತ್ತವಷ್ಟೇ ಅವಳಿಗೆ ಆಧಾರವಾಗಿರುತ್ತಿತ್ತು. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟಿನ ಈ ತೀರ್ಪು ಮಹಿಳಾ ಸ್ವಾಭಿಮಾನದ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಾಗಿದೆ.

ಕೃಷ್ಣನ್ ರಾಮಸ್ವಾಮಿ

ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ತಮ್ಮ ತೀರ್ಪಿನಲ್ಲಿ “ಗಂಡ ಆಸ್ತಿ ಖರೀದಿಸುವುದಕ್ಕೆ ಆತನಿಗೆ ಅನುಕೂಲ ಮಾಡಿಕೊಡುವಲ್ಲಿ ಹೆಂಡತಿ ನಿರ್ವಹಿಸುವ ಪಾತ್ರವನ್ನು ಗುರುತಿಸಲು ನ್ಯಾಯಾಲಯದ ಮೇಲೆ ಯಾವುದೇ ಕಾನೂನಿನ ಪ್ರತಿಬಂಧಗಳು ಇಲ್ಲ ಎಂದು ಹೇಳಿದ್ದಾರೆ. ಮುಂದುವರಿದು ’ಹೆಂಡತಿ ಮನೆಯ ಎಲ್ಲ ಕೆಲಸ ಹಾಗೂ ಜವಾಬ್ದಾರಿಗಳನ್ನು ತಾನೇ ತೆಗೆದುಕೊಂಡು, ಕುಟುಂಬದ ದಿನನಿತ್ಯದ ಜಂಜಾಟಗಳಿಂದ ಅವನನ್ನು ಮುಕ್ತಗೊಳಿಸಿದ್ದರಿಂದ ಆತ ಆರ್ಥಿಕವಾಗಿ ಸಶಕ್ತನಾಗಲು ಮತ್ತು ಆಸ್ತಿ ಹೊಂದಲು ಸಾಧ್ಯವಾಗುತ್ತದೆ; ಹಾಗಿರುವಾಗ ಆತ ಗಳಿಸಿದ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು ಕೊಡುವುದು ಸಮಂಜಸವಾಗಿದೆ’ ಎಂದು ಹೇಳಿದ್ದಾರೆ. ನಿತ್ಯ ಹೊರಗಡೆ ಹೋಗಿ 8 ಗಂಟೆ ಕೆಲಸ ಮಾಡುವ ಗಂಡನ ಜೊತೆ 24 ಗಂಟೆಯೂ ಗೃಹಿಣಿಯಾಗಿ ಜವಬ್ದಾರಿ ನಿರ್ವಹಿಸುವ ಹೆಚ್ಚಿನ ಕೊಡುಗೆಯನ್ನು ನಗಣ್ಯಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಗಂಡ ಸತ್ತಾಗ ಆತನ ಸ್ವಯಾರ್ಜಿತ ಆಸ್ತಿಯಲ್ಲಿ ಹೆಂಡತಿಗೆ ಒಂದು ಭಾಗ ಬರುವ ಕಾನೂನು ಈಗಾಗಲೇ ಇದ್ದರೂ ಈ ತೀರ್ಮಾನ ವಿಶೇಷವಾಗಿ ಕಾಣಲು ಕಾರಣವೆಂದರೆ, ಇಲ್ಲಿ ಹೆಣ್ಣಿನ ಕೊಡುಗೆಯನ್ನು ಮಾನ್ಯಮಾಡಿರುವ ರೀತಿ ಮತ್ತು ವಿಚ್ಚೇದನಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಈ ತೀರ್ಪಿನಿಂದ ಸ್ವಲ್ಪ ಲಾಭ ಆಗಬಹುದು ಎಂಬುದಕ್ಕೆ. ಪ್ರತಿಯೊಂದು ತೀರ್ಪುಗಳು ಆಯಾ ಪ್ರಕರಣಗಳಿಗೆ ಸೂಕ್ತವಾಗುವ ರೀತಿಯಲ್ಲಿ ಬಂದಿರುತ್ತವೆ. ಆದರೆ ಕೆಲವೊಂದು ವಿಶೇಷ ತೀರ್ಪುಗಳು ತಮ್ಮ ವಿಶೇಷ ದೃಷ್ಟಿಕೋನದಿಂದಾಗಿ ವಿಭಿನ್ನವಾಗಿ ನಿಲ್ಲುತ್ತವೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇಂತಹ ಇನ್ನೂ ಹತ್ತಾರು ತೀರ್ಪುಗಳ ಅಗತ್ಯವಿದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...