Homeಮುಖಪುಟಗರ್ಭಪಾತ ಕಾನೂನು: ಮತ್ತೆ ಚರ್ಚೆಯ ಮುನ್ನಲೆಯಲ್ಲಿ..

ಗರ್ಭಪಾತ ಕಾನೂನು: ಮತ್ತೆ ಚರ್ಚೆಯ ಮುನ್ನಲೆಯಲ್ಲಿ..

- Advertisement -
- Advertisement -

ದೇಹ ನಿನ್ನದು, ಗರ್ಭ ನಿನ್ನದು ಆದರೆ ಗರ್ಭಪಾತ ಮಾಡುವ/ಮಾಡಿಸುವ ಅಧಿಕಾರ ನಿನಗಿಲ್ಲ. ಅಂದರೆ ಹೆಣ್ಣಿನ ದೇಹ ಅವಳದಾದರೂ ಅದರ ಮೇಲೆ ಅವಳಿಗೆ ಸಂಪೂರ್ಣ ಹಕ್ಕಿಲ್ಲ. ಈ ಗರ್ಭಪಾತ ಎಂಬುದು ಮುಂದುವರಿದ, ಮುಂದುವರಿಯುತ್ತಿರುವ ಅಥವಾ ಅತ್ಯಂತ ಸಂಪ್ರದಾಯಸ್ಥ ದೇಶಗಳು ಎನಿಸಿಕೊಂಡಲ್ಲಿ ಕೂಡ ಸಮಾನವಾಗಿ ಅಗಾಗ ಚರ್ಚೆಗೆ ಗ್ರಾಸವಾಗುವ ವಿಷಯ.

ಮನುಷ್ಯರು ಎಚ್ಟೇ ಮುಂದುವರಿದರೂ Reproduction ಅಥವಾ ಸಂತಾನೋತ್ಪತ್ತಿ ಕ್ರಿಯೆಯನ್ನು ಧಾರ್ಮಿಕ ಮತ್ತು ಸಾಮಾಜಿಕ ದೃಷ್ಟಿಕೋನದಿಂದಲೇ ಹೆಚ್ಚಾಗಿ ನೋಡುವುದರಿಂದ ಆ ಕ್ರಿಯೆಯ ಸುತ್ತ ನೂರಾರು ಚರ್ಚೆಗಳು ಮತ್ತು ವಿವಾದಗಳು ಹೆಣೆದುಕೊಂಡಿರುತ್ತವೆ. ಅಂಥ ಚರ್ಚೆ ಮತ್ತು ವಿವಾದಗಳು ಆಯಾ ಕಾಲ ದೇಶದ ಗಡಿಗಳನ್ನು ದಾಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದರೆ ಅದರ ಪ್ರಸ್ತುತತೆ ಮತ್ತು ಅಗತ್ಯಗಳ ಬಗ್ಗೆ ಮುಕ್ತ ಚರ್ಚೆಯಾಗುವ ಅವಶ್ಯಕತೆ ಹೆಚ್ಚಾಗಿದೆ ಎಂದರ್ಥ.

ಇತ್ತೀಚೆಗೆ ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತ ಕಾನೂನನ್ನು ತೆಗೆದು ಹಾಕಿದಾಗ ಎಷ್ಟೋ ಜನ ’ಅಮೆರಿಕದಂತಹ ದೇಶದಲ್ಲಿ ಇದು ಸಾಧ್ಯವೇ?’ ಎಂದು ಆಶ್ಚರ್ಯಪಟ್ಟರು. ಅದಕ್ಕೆ ಕಾರಣವೂ ಇದೆ. ಒಂದು ಅತ್ಯಂತ ಮುಂದುವರೆದ ದೇಶ, ಉತ್ತಮ ಆಧುನಿಕ ಜೀವನಶೈಲಿಗೆ ಹೆಸರಾದ ದೇಶ ಎಂದು ಗುರುತಿಸಲ್ಪಡುವ ಅಮೆರಿಕದಲ್ಲಿ ಇಂಥ ಪುರೋಗಾಮಿ ಕಾನೂನು ಬರಬಹುದೇ ಎಂದು ಜನ ಆಶ್ಚರ್ಯಪಡುವುದು ಸಹಜ. ಆದರೆ ಈ ಬದಲಾವಣೆಗೆ ಮುನ್ನುಡಿ ಬರೆದಿದ್ದು 2016ರಲ್ಲಿ ಅಮೆರಿಕ ಅಧ್ಯಕ್ಷ ಚುನಾವಣೆಯ ಸಮಯದಲ್ಲಿ. ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಅಧ್ಯಕ್ಷೀಯ ಚುನಾವಣಾ ಪ್ರಣಾಳಿಕೆಯಲ್ಲಿ 1973ರಿಂದ ಜಾರಿಗೆ ಬಂದ ಗರ್ಭಪಾತ ಕಾನೂನನ್ನು ತೆಗೆದುಹಾಕುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೇ ಅಧಿಕಾರಕ್ಕೆ ಬಂದ ಕೂಡಲೇ ಸುಪ್ರೀಂಕೋರ್ಟಿಗೆ 3 ಹೊಸ ಜಡ್ಜ್‌ಗಳ ನೇಮಕ ಮಾಡಿದ್ದರು. ಅದರ ಪರಿಣಾಮವಾಗಿಯೇ ಇತ್ತೀಚೆಗೆ 1973ರಲ್ಲಿ ರೋ ವರ್ಸಸ್ ವೇಡ್ ಕೇಸಿನ ಮೂಲಕ ನೀಡಲಾಗಿದ್ದ ಗರ್ಭಪಾತದ ಸ್ವಾತಂತ್ರ್ಯವನ್ನು ತಿರಸ್ಕರಿಸಿ ಪರಿಸ್ಥಿತಿಯನ್ನು ದಶಕಗಳಷ್ಟು ಹಿಂದಕ್ಕೆ ಒಯ್ಯಲಾಗಿದೆ.

ಅಮೆರಿಕದಲ್ಲಿ ಮೊದಲಿನಿಂದಲೂ ಗರ್ಭಪಾತ ಎಂಬುದು ಅತ್ಯಂತ ಚರ್ಚಾಹ ವಸ್ತು. ಸಂಪ್ರದಾಯವಾದಿಗಳು ಮತ್ತು ಲಿಬರಲ್ಸ್‌ಗಳ ನಡುವೆ ಈ ಚರ್ಚೆ ನಡೆಯುತ್ತಲೇ ಇರುತ್ತದೆ. ಸಂಪ್ರದಾಯವಾದಿಗಳು ಮಕ್ಕಳನ್ನು/ಗರ್ಭವನ್ನು ದೇವರ ಆಶೀರ್ವಾದ ಎಂದು ಬಗೆದರೆ, ಲಿಬರಲ್ಸ್ ’ಮಹಿಳೆಗೆ ಸಂವಿಧಾನಾತ್ಮಕವಾಗಿ ತನ್ನ ದೇಹದ ಮೇಲೆ ಸಂಪೂರ್ಣ ಹಕ್ಕಿದೆ’ ಎನ್ನುತ್ತಾರೆ.

ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತಕ್ಕೆ ಅವಕಾಶ ನೀಡಿದ ಹಳೆಯ ತೀರ್ಪನ್ನು ತೆಗೆದು ಹಾಕಿದ ಕೂಡಲೇ 13 ರಾಜ್ಯಗಳು ಈ ತೀರ್ಪನ್ನು ತಕ್ಷಣವೇ ಒಪ್ಪಿಕೊಂಡು ಅನುಷ್ಠಾನಕ್ಕೂ ತಂದವು. ಸಂಪ್ರದಾಯವಾದಿಗಳಾದ ರಿಪಬ್ಲಿಕನ್ ಬಹುಮತ ಇರುವ ರಾಜ್ಯಗಳು ಬಹುತೇಕ ಇದನ್ನು ಇರುವಂತೆಯೇ ಸ್ವೀಕರಿಸಿ ತಕ್ಷಣದಿಂದಲೇ ಜಾರಿಗೆ ತಂದವು.

ಅಮೆರಿಕದ ಮಹಿಳಾ ಹೋರಾಟಗಾರರು, ಲಿಬರಲ್ಸ್ ಹಾಗೂ ತೀರ್ಪಿನ ಬಗ್ಗೆ ಅಸಮಾಧಾನವಿರುವವರೆಲ್ಲ ’ನನ್ನ ದೇಹ ನನ್ನ ಸ್ವಾತಂತ್ರ್ಯ’ ಎಂಬ ಘೋಷಣೆಯೊಂದಿಗೆ ವಿಶ್ವದಾದ್ಯಂತ ತಮ್ಮ ಈ ನಿಲುವಿಗೆ ಸಮರ್ಥನೆಯನ್ನು ಮತ್ತು ಬೆಂಬಲವನ್ನು ಬಯಸುತ್ತಿದ್ದಾರೆ. ಒಟ್ಟಿನಲ್ಲಿ ಗರ್ಭಪಾತ ಎಂಬ ವಿಷಯ ವೈಜ್ಞಾನಿಕ ಮತ್ತು ವೈಯಕ್ತಿಕ ಪರಿಧಿಯನ್ನು ಬಿಟ್ಟು ಬೇರೆಯದೇ ಲೋಕ ಪ್ರವೇಶಿಸಿದೆ.

ಗರ್ಭಪಾತ ವಿರೋಧಿ ಧೋರಣೆಗಳು ಸ್ಪಷ್ಟವಾಗಿ ಕಾಣಲು ಪ್ರಾರಂಭವಾಗುವುದು 19ನೇ ಶತಮಾನದಲ್ಲಿ. ಯುರೋಪಿನ ದೇಶಗಳು ವಿಶ್ವದಾದ್ಯಂತ ತಮ್ಮ ವಸಾಹತುಗಳನ್ನು ಸ್ಥಾಪಿಸುತ್ತ ಹೋದಂತೆ ತಮ್ಮ ಕಾನೂನು ವ್ಯವಸ್ಥೆಯನ್ನೂ ಕೊಂಡೊಯ್ದರು. ಆ ಕಾನೂನುಗಳಲ್ಲಿ ಕೆಲವೊಂದು ಅವರ ಧಾರ್ಮಿಕ ವಿಚಾರಧಾರೆಗಳಿಗೆ ಪೂರಕವಾಗಿದ್ದು ಅದಕ್ಕೆ ಕಾನೂನಿನ ಚೌಕಟ್ಟನ್ನು ಒದಗಿಸಲಾಯಿತು. ಆದರೆ ಕ್ರಮೇಣ ಜನ ಹಾಗೂ ದೇಶಗಳ ಬದಲಾದ ರಾಜಕೀಯ ಮೌಲ್ಯಗಳ ಹಿನ್ನೆಲೆಯಲ್ಲಿ ಸುರಕ್ಷಿತ ಗರ್ಭಪಾತ ಎನ್ನುವ ಹೊಸ ತತ್ವ ರೂಪುಗೊಂಡಿತು. ಆದರೆ ಹೆಚ್ಚುಕಮ್ಮಿ ಕ್ರಿಶ್ಚಿಯಾನಿಟಿ ತರಹವೇ ಆದರೂ ಅದಕ್ಕಿಂತ ತೀವ್ರವಾಗಿ ಗರ್ಭಪಾತವನ್ನು ವಿರೋಧಿಸುವ ಧರ್ಮವೆಂದರೆ ಇಸ್ಲಾಂ. ಕೇವಲ ’ಟ್ಯುನಿಸಿಯಾ ಮತ್ತು ಯುಎಇ’ಗಳಲ್ಲಿ ಮಾತ್ರ 120 ದಿನಗಳ ಒಳಗಿನ ಗರ್ಭವನ್ನು ತೆಗೆಸಬಹುದು. ಇದನ್ನು ಹೊರತುಪಡಿಸಿ ಯಾವುದೇ ಇಸ್ಲಾಮಿಕ್ ದೇಶಗಳಲ್ಲಿ ಗರ್ಭಪಾತಕ್ಕೆ ಅವಕಾಶವಿಲ್ಲ. ಕೆಲವು ವರ್ಷಗಳ ಹಿಂದೆ ಐರ್ಲೆಂಡಿನಲ್ಲಿ ಭಾರತದ ದಂತ ವೈದ್ಯೆ ಸವಿತಾ ಹಾಲಪ್ಪನವರ್ ಎಂಬುವವರು ಗರ್ಭಧಾರಣೆಯಲ್ಲಿ ತೊಂದರೆಯಾಗಿ ಗರ್ಭಪಾತಕ್ಕೆ ಅರ್ಜಿ ಸಲ್ಲಿಸಿದಾಗ ಅದು ಇಂಥದೇ ಕಾನೂನಿನ ತೊಡಕುಗಳಿಗೆ ಸಿಕ್ಕು ಅದಕ್ಕೆ ಅವಕಾಶ ಸಿಗದೆ ಗರ್ಭದಲ್ಲಿ ನಂಜು ಹರಡಿ ಅವರು ಮೃತಪಟ್ಟ ಘಟನೆ ನಡೆದಿತ್ತು. ಇದು ಗರ್ಭಪಾತ ಕಾನೂನುಗಳನ್ನು ಬಹಳ ಚರ್ಚೆಗೆ ಒಳಪಡುವಂತೆ ಮಾಡಿತ್ತು. ಆದರೆ ಅದರ ಕಾನೂನು ಪರಿಹಾರಕ್ಕೆ ಬಹಳ ಕಾಲ ಬೇಕಾಯಿತು.

ಜಗತ್ತಿನ ಬಹುತೇಕ ದೇಶಗಳು ಕೆಲವೊಂದು ನಿರ್ದಿಷ್ಟ ಕಾರಣಗಳಿಗಾಗಿ ಗರ್ಭಪಾತಕ್ಕೆ ಅವಕಾಶ ನೀಡುತ್ತವೆ ಮತ್ತು ಕೆಲವು ನಿರ್ದಿಷ್ಟ ಅವಧಿಯವರೆಗೆ ನೀಡುತ್ತವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾದದ್ದು ಎಂದರೆ ತಾಯಿಯ ಜೀವಕ್ಕೆ ಅಪಾಯವಿದ್ದಲ್ಲಿ ಎಂಬುದು; ಇನ್ನುಳಿದಂತೆ ಹುಟ್ಟಲಿರುವ ಮಗುವಿನ ಅಂಗವೈಕಲ್ಯ, ಬೆಳವಣಿಗೆಯ ಕೊರತೆ, ಸಾಮಾಜಿಕ ಆರ್ಥಿಕ ಕಾರಣಗಳು ಮುಂತಾದವು.

ಆದರೆ ಈ ರೀತಿಯ ನಿರ್ಬಂಧಗಳು ಕಾನೂನುಬಾಹಿರ ಗರ್ಭಪಾತಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಸರ್ವೆಗಳು ಹೇಳುತ್ತವೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸರ್ವೇ ಪ್ರಕಾರ ಯಾವುದೇ ಪ್ರತಿಬಂಧಗಳಿಲ್ಲದೆ ಗರ್ಭಪಾತಕ್ಕೆ ಅವಕಾಶವಿರುವ ಮತ್ತು ಅದನ್ನು ಅಪರಾಧಿತವಲ್ಲದ (Decriminalised) ಕ್ರಿಯೆ ಎಂದು ಪರಿಗಣಿಸಿರುವ ದೇಶಗಳಲ್ಲಿ ’ಗರ್ಭಪಾತದ ಸಮಯದಲ್ಲಿ ಮಹಿಳೆಯ ಸಾವಿನ ಸಂಖ್ಯೆ ’೦’ (ಶೂನ್ಯ) ಇದೆ. ಕೆನಡಾ ಅಂಥ ಒಂದು ದೇಶ. ಗರ್ಭಪಾತಕ್ಕೆ ಕಾನೂನಿನ ಸುರಕ್ಷೆ ಇರುವುದರಿಂದ ಅಲ್ಲಿ ಕದ್ದು ಮುಚ್ಚಿ ಗರ್ಭ ಎಸಗುವ ಅಥವಾ ಅನಾರೋಗ್ಯಕರವಾದ ಹಾಗೂ ಸುರಕ್ಷಿತವಲ್ಲದ ಕಾನೂನುಬಾಹಿರ ಗರ್ಭಪಾತ ಕೇಂದ್ರಗಳಿಗೆ ಹೋಗುವ ಪ್ರಮೇಯವೇ ಇರುವುದಿಲ್ಲ.

ಇನ್ನು ಭಾರತದ ಮಟ್ಟಿಗೆ ಹೇಳುವುದಾದರೆ ಇಲ್ಲಿಯೂ ಗರ್ಭಪಾತಕ್ಕೆ ಮೇಲೆ ಹೇಳಿದ ಕಾರಣಗಳ ರೀತಿಯಲ್ಲಿಯೇ ಅವಕಾಶವಿದೆ. ಗರ್ಭಧಾರಣೆಯ ಮೊದಲ ಕೆಲವಾರಗಳಲ್ಲಿ ನಿರ್ದಿಷ್ಟವಾದ ಕಾರಣಗಳಿದ್ದರೆ ಗರ್ಭಪಾತವನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ ಮಾಡಬಹುದು. 20 ವಾರಗಳಿಗಿಂತ ಹೆಚ್ಚಿದ್ದರೆ ನ್ಯಾಯಾಲಯದ ಅನುಮತಿಯಿಂದಲೇ ಮಾಡಬೇಕು.

ಇಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಏಳುವ ಪ್ರಶ್ನೆ ಎಂದರೆ ಈ ಎಲ್ಲ ಪ್ರಕ್ರಿಯೆಲ್ಲಿ ಗರ್ಭ ಧರಿಸಿದ ಮಹಿಳೆಯ ಪಾತ್ರ ಏನು? ಮೂಲಭೂತ ಸ್ವಾತಂತ್ರ್ಯ ಎಂಬ ಪರಿಕಲ್ಪನೆಯಲ್ಲಿ ಅವಳಿಗೆ ತನ್ನ ದೇಹದ ಮೇಲೆ ಹಕ್ಕಿಲ್ಲವೆ? ಎಂಬುದು.

ಇನ್ನೊಂದು ಪ್ರಶ್ನೆ, ಕೇವಲ ಗರ್ಭಪಾತಕ್ಕೆ ಅವಕಾಶ ಇದೆ ಎಂಬ ಕಾರಣಕ್ಕೆ ಜನ ಅನವಶ್ಯಕವಾಗಿ ಗರ್ಭಪಾತ ಮಾಡಿಸುತ್ತಾರಾ? ಎಂಬುದು.

ಈ ಎರಡನೇ ಪ್ರಶ್ನೆಯನ್ನೇ ಮೊದಲು ನಮ್ಮ ದೇಶದ ಹಿನ್ನೆಲೆಯಲ್ಲಿ ನೋಡಿದರೆ “ಹೌದು ದುರುಪಯೋಗ ಆಗುತ್ತದೆ” ಎನ್ನಬಹುದು. ಗಂಡು ಮಕ್ಕಳಿಂದಲೇ ವಂಶೋದ್ಧಾರ ಎನ್ನುವ ಜನರ ಮಧ್ಯೆ ಹೆಣ್ಣು ಭ್ರೂಣವನ್ನು ತೆಗೆಸುವ ಲಕ್ಷಾಂತರ ಪ್ರಕರಣಗಳು ನಮ್ಮ ಎದುರಿಗಿವೆ. ಗರ್ಭಧರಿಸಿದ ಮಹಿಳೆಯ ಆರೋಗ್ಯ ಕೆಲವು ಬಾರಿ ಪ್ರಾಣಕ್ಕೆ ಕುತ್ತು ಉಂಟಾಗುವ ಸಂದರ್ಭಗಳೂ ಇವೆ. ಭಾರತದಂತಹ ದೇಶದಲ್ಲಿ ಇದಕ್ಕೆ ಕಾನೂನಿನ ಸ್ಪಷ್ಟ ಚೌಕಟ್ಟು ಮತ್ತು ಪರಿಭಾಷೆಯ ಅಗತ್ಯ ಖಂಡಿತವಾಗಿಯೂ ಇದೆ. ಇನ್ನು ಮೊದಲನೆಯ ಪ್ರಶ್ನೆಗೆ ಬಂದರೆ ಮಹಿಳೆಗೆ ಖಂಡಿತವಾಗಿಯೂ ಈ ಮೇಲೆ ಹೇಳಲಾದ ಕಾರಣಗಳ ಹೊರತಾಗಿಯೂ ತನ್ನ ದೇಹದ ಮೇಲೆ ಸ್ವಾತಂತ್ರ್ಯ ಹೊಂದುವ ಅಗತ್ಯವಿದೆ. ಗರ್ಭಧಾರಣೆಯನ್ನು ಕೇವಲ ಪುರುಷಪ್ರಧಾನ ವ್ಯವಸ್ಥೆಯ ಕಣ್ಣಿನಿಂದ ನೋಡುವುದನ್ನು ಬಿಟ್ಟು ಬದಲಾಗುತ್ತಿರುವ ಕಾಲಮಾನದಲ್ಲಿ ಮಹಿಳೆಯ ಅಗತ್ಯ ಮತ್ತು ಮನಸ್ಥಿತಿಗಳ ಹಿನ್ನೆಲೆಯಲ್ಲಿ ವಿಶ್ಲೇಷಿಸುವ ಅಗತ್ಯ ಹಿಂದೆಗಿಂತಲೂ ಹೆಚ್ಚಿದೆ.,

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಕಾನೂನು ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.


ಇದನ್ನೂ ಓದಿ: ತಂದೆ ಮತ್ತು ಮೂವರು ಹೆಣ್ಣುಮಕ್ಕಳು; ದ್ವೇಷದ ರಂಗಭೂಮಿಯಲ್ಲಿ ಒಂದು ಹಳೆಯ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...