Homeಮುಖಪುಟಗರ್ಭಪಾತ ಕಾನೂನು: ಮತ್ತೆ ಚರ್ಚೆಯ ಮುನ್ನಲೆಯಲ್ಲಿ..

ಗರ್ಭಪಾತ ಕಾನೂನು: ಮತ್ತೆ ಚರ್ಚೆಯ ಮುನ್ನಲೆಯಲ್ಲಿ..

- Advertisement -
- Advertisement -

ದೇಹ ನಿನ್ನದು, ಗರ್ಭ ನಿನ್ನದು ಆದರೆ ಗರ್ಭಪಾತ ಮಾಡುವ/ಮಾಡಿಸುವ ಅಧಿಕಾರ ನಿನಗಿಲ್ಲ. ಅಂದರೆ ಹೆಣ್ಣಿನ ದೇಹ ಅವಳದಾದರೂ ಅದರ ಮೇಲೆ ಅವಳಿಗೆ ಸಂಪೂರ್ಣ ಹಕ್ಕಿಲ್ಲ. ಈ ಗರ್ಭಪಾತ ಎಂಬುದು ಮುಂದುವರಿದ, ಮುಂದುವರಿಯುತ್ತಿರುವ ಅಥವಾ ಅತ್ಯಂತ ಸಂಪ್ರದಾಯಸ್ಥ ದೇಶಗಳು ಎನಿಸಿಕೊಂಡಲ್ಲಿ ಕೂಡ ಸಮಾನವಾಗಿ ಅಗಾಗ ಚರ್ಚೆಗೆ ಗ್ರಾಸವಾಗುವ ವಿಷಯ.

ಮನುಷ್ಯರು ಎಚ್ಟೇ ಮುಂದುವರಿದರೂ Reproduction ಅಥವಾ ಸಂತಾನೋತ್ಪತ್ತಿ ಕ್ರಿಯೆಯನ್ನು ಧಾರ್ಮಿಕ ಮತ್ತು ಸಾಮಾಜಿಕ ದೃಷ್ಟಿಕೋನದಿಂದಲೇ ಹೆಚ್ಚಾಗಿ ನೋಡುವುದರಿಂದ ಆ ಕ್ರಿಯೆಯ ಸುತ್ತ ನೂರಾರು ಚರ್ಚೆಗಳು ಮತ್ತು ವಿವಾದಗಳು ಹೆಣೆದುಕೊಂಡಿರುತ್ತವೆ. ಅಂಥ ಚರ್ಚೆ ಮತ್ತು ವಿವಾದಗಳು ಆಯಾ ಕಾಲ ದೇಶದ ಗಡಿಗಳನ್ನು ದಾಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದರೆ ಅದರ ಪ್ರಸ್ತುತತೆ ಮತ್ತು ಅಗತ್ಯಗಳ ಬಗ್ಗೆ ಮುಕ್ತ ಚರ್ಚೆಯಾಗುವ ಅವಶ್ಯಕತೆ ಹೆಚ್ಚಾಗಿದೆ ಎಂದರ್ಥ.

ಇತ್ತೀಚೆಗೆ ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತ ಕಾನೂನನ್ನು ತೆಗೆದು ಹಾಕಿದಾಗ ಎಷ್ಟೋ ಜನ ’ಅಮೆರಿಕದಂತಹ ದೇಶದಲ್ಲಿ ಇದು ಸಾಧ್ಯವೇ?’ ಎಂದು ಆಶ್ಚರ್ಯಪಟ್ಟರು. ಅದಕ್ಕೆ ಕಾರಣವೂ ಇದೆ. ಒಂದು ಅತ್ಯಂತ ಮುಂದುವರೆದ ದೇಶ, ಉತ್ತಮ ಆಧುನಿಕ ಜೀವನಶೈಲಿಗೆ ಹೆಸರಾದ ದೇಶ ಎಂದು ಗುರುತಿಸಲ್ಪಡುವ ಅಮೆರಿಕದಲ್ಲಿ ಇಂಥ ಪುರೋಗಾಮಿ ಕಾನೂನು ಬರಬಹುದೇ ಎಂದು ಜನ ಆಶ್ಚರ್ಯಪಡುವುದು ಸಹಜ. ಆದರೆ ಈ ಬದಲಾವಣೆಗೆ ಮುನ್ನುಡಿ ಬರೆದಿದ್ದು 2016ರಲ್ಲಿ ಅಮೆರಿಕ ಅಧ್ಯಕ್ಷ ಚುನಾವಣೆಯ ಸಮಯದಲ್ಲಿ. ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಅಧ್ಯಕ್ಷೀಯ ಚುನಾವಣಾ ಪ್ರಣಾಳಿಕೆಯಲ್ಲಿ 1973ರಿಂದ ಜಾರಿಗೆ ಬಂದ ಗರ್ಭಪಾತ ಕಾನೂನನ್ನು ತೆಗೆದುಹಾಕುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೇ ಅಧಿಕಾರಕ್ಕೆ ಬಂದ ಕೂಡಲೇ ಸುಪ್ರೀಂಕೋರ್ಟಿಗೆ 3 ಹೊಸ ಜಡ್ಜ್‌ಗಳ ನೇಮಕ ಮಾಡಿದ್ದರು. ಅದರ ಪರಿಣಾಮವಾಗಿಯೇ ಇತ್ತೀಚೆಗೆ 1973ರಲ್ಲಿ ರೋ ವರ್ಸಸ್ ವೇಡ್ ಕೇಸಿನ ಮೂಲಕ ನೀಡಲಾಗಿದ್ದ ಗರ್ಭಪಾತದ ಸ್ವಾತಂತ್ರ್ಯವನ್ನು ತಿರಸ್ಕರಿಸಿ ಪರಿಸ್ಥಿತಿಯನ್ನು ದಶಕಗಳಷ್ಟು ಹಿಂದಕ್ಕೆ ಒಯ್ಯಲಾಗಿದೆ.

ಅಮೆರಿಕದಲ್ಲಿ ಮೊದಲಿನಿಂದಲೂ ಗರ್ಭಪಾತ ಎಂಬುದು ಅತ್ಯಂತ ಚರ್ಚಾಹ ವಸ್ತು. ಸಂಪ್ರದಾಯವಾದಿಗಳು ಮತ್ತು ಲಿಬರಲ್ಸ್‌ಗಳ ನಡುವೆ ಈ ಚರ್ಚೆ ನಡೆಯುತ್ತಲೇ ಇರುತ್ತದೆ. ಸಂಪ್ರದಾಯವಾದಿಗಳು ಮಕ್ಕಳನ್ನು/ಗರ್ಭವನ್ನು ದೇವರ ಆಶೀರ್ವಾದ ಎಂದು ಬಗೆದರೆ, ಲಿಬರಲ್ಸ್ ’ಮಹಿಳೆಗೆ ಸಂವಿಧಾನಾತ್ಮಕವಾಗಿ ತನ್ನ ದೇಹದ ಮೇಲೆ ಸಂಪೂರ್ಣ ಹಕ್ಕಿದೆ’ ಎನ್ನುತ್ತಾರೆ.

ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತಕ್ಕೆ ಅವಕಾಶ ನೀಡಿದ ಹಳೆಯ ತೀರ್ಪನ್ನು ತೆಗೆದು ಹಾಕಿದ ಕೂಡಲೇ 13 ರಾಜ್ಯಗಳು ಈ ತೀರ್ಪನ್ನು ತಕ್ಷಣವೇ ಒಪ್ಪಿಕೊಂಡು ಅನುಷ್ಠಾನಕ್ಕೂ ತಂದವು. ಸಂಪ್ರದಾಯವಾದಿಗಳಾದ ರಿಪಬ್ಲಿಕನ್ ಬಹುಮತ ಇರುವ ರಾಜ್ಯಗಳು ಬಹುತೇಕ ಇದನ್ನು ಇರುವಂತೆಯೇ ಸ್ವೀಕರಿಸಿ ತಕ್ಷಣದಿಂದಲೇ ಜಾರಿಗೆ ತಂದವು.

ಅಮೆರಿಕದ ಮಹಿಳಾ ಹೋರಾಟಗಾರರು, ಲಿಬರಲ್ಸ್ ಹಾಗೂ ತೀರ್ಪಿನ ಬಗ್ಗೆ ಅಸಮಾಧಾನವಿರುವವರೆಲ್ಲ ’ನನ್ನ ದೇಹ ನನ್ನ ಸ್ವಾತಂತ್ರ್ಯ’ ಎಂಬ ಘೋಷಣೆಯೊಂದಿಗೆ ವಿಶ್ವದಾದ್ಯಂತ ತಮ್ಮ ಈ ನಿಲುವಿಗೆ ಸಮರ್ಥನೆಯನ್ನು ಮತ್ತು ಬೆಂಬಲವನ್ನು ಬಯಸುತ್ತಿದ್ದಾರೆ. ಒಟ್ಟಿನಲ್ಲಿ ಗರ್ಭಪಾತ ಎಂಬ ವಿಷಯ ವೈಜ್ಞಾನಿಕ ಮತ್ತು ವೈಯಕ್ತಿಕ ಪರಿಧಿಯನ್ನು ಬಿಟ್ಟು ಬೇರೆಯದೇ ಲೋಕ ಪ್ರವೇಶಿಸಿದೆ.

ಗರ್ಭಪಾತ ವಿರೋಧಿ ಧೋರಣೆಗಳು ಸ್ಪಷ್ಟವಾಗಿ ಕಾಣಲು ಪ್ರಾರಂಭವಾಗುವುದು 19ನೇ ಶತಮಾನದಲ್ಲಿ. ಯುರೋಪಿನ ದೇಶಗಳು ವಿಶ್ವದಾದ್ಯಂತ ತಮ್ಮ ವಸಾಹತುಗಳನ್ನು ಸ್ಥಾಪಿಸುತ್ತ ಹೋದಂತೆ ತಮ್ಮ ಕಾನೂನು ವ್ಯವಸ್ಥೆಯನ್ನೂ ಕೊಂಡೊಯ್ದರು. ಆ ಕಾನೂನುಗಳಲ್ಲಿ ಕೆಲವೊಂದು ಅವರ ಧಾರ್ಮಿಕ ವಿಚಾರಧಾರೆಗಳಿಗೆ ಪೂರಕವಾಗಿದ್ದು ಅದಕ್ಕೆ ಕಾನೂನಿನ ಚೌಕಟ್ಟನ್ನು ಒದಗಿಸಲಾಯಿತು. ಆದರೆ ಕ್ರಮೇಣ ಜನ ಹಾಗೂ ದೇಶಗಳ ಬದಲಾದ ರಾಜಕೀಯ ಮೌಲ್ಯಗಳ ಹಿನ್ನೆಲೆಯಲ್ಲಿ ಸುರಕ್ಷಿತ ಗರ್ಭಪಾತ ಎನ್ನುವ ಹೊಸ ತತ್ವ ರೂಪುಗೊಂಡಿತು. ಆದರೆ ಹೆಚ್ಚುಕಮ್ಮಿ ಕ್ರಿಶ್ಚಿಯಾನಿಟಿ ತರಹವೇ ಆದರೂ ಅದಕ್ಕಿಂತ ತೀವ್ರವಾಗಿ ಗರ್ಭಪಾತವನ್ನು ವಿರೋಧಿಸುವ ಧರ್ಮವೆಂದರೆ ಇಸ್ಲಾಂ. ಕೇವಲ ’ಟ್ಯುನಿಸಿಯಾ ಮತ್ತು ಯುಎಇ’ಗಳಲ್ಲಿ ಮಾತ್ರ 120 ದಿನಗಳ ಒಳಗಿನ ಗರ್ಭವನ್ನು ತೆಗೆಸಬಹುದು. ಇದನ್ನು ಹೊರತುಪಡಿಸಿ ಯಾವುದೇ ಇಸ್ಲಾಮಿಕ್ ದೇಶಗಳಲ್ಲಿ ಗರ್ಭಪಾತಕ್ಕೆ ಅವಕಾಶವಿಲ್ಲ. ಕೆಲವು ವರ್ಷಗಳ ಹಿಂದೆ ಐರ್ಲೆಂಡಿನಲ್ಲಿ ಭಾರತದ ದಂತ ವೈದ್ಯೆ ಸವಿತಾ ಹಾಲಪ್ಪನವರ್ ಎಂಬುವವರು ಗರ್ಭಧಾರಣೆಯಲ್ಲಿ ತೊಂದರೆಯಾಗಿ ಗರ್ಭಪಾತಕ್ಕೆ ಅರ್ಜಿ ಸಲ್ಲಿಸಿದಾಗ ಅದು ಇಂಥದೇ ಕಾನೂನಿನ ತೊಡಕುಗಳಿಗೆ ಸಿಕ್ಕು ಅದಕ್ಕೆ ಅವಕಾಶ ಸಿಗದೆ ಗರ್ಭದಲ್ಲಿ ನಂಜು ಹರಡಿ ಅವರು ಮೃತಪಟ್ಟ ಘಟನೆ ನಡೆದಿತ್ತು. ಇದು ಗರ್ಭಪಾತ ಕಾನೂನುಗಳನ್ನು ಬಹಳ ಚರ್ಚೆಗೆ ಒಳಪಡುವಂತೆ ಮಾಡಿತ್ತು. ಆದರೆ ಅದರ ಕಾನೂನು ಪರಿಹಾರಕ್ಕೆ ಬಹಳ ಕಾಲ ಬೇಕಾಯಿತು.

ಜಗತ್ತಿನ ಬಹುತೇಕ ದೇಶಗಳು ಕೆಲವೊಂದು ನಿರ್ದಿಷ್ಟ ಕಾರಣಗಳಿಗಾಗಿ ಗರ್ಭಪಾತಕ್ಕೆ ಅವಕಾಶ ನೀಡುತ್ತವೆ ಮತ್ತು ಕೆಲವು ನಿರ್ದಿಷ್ಟ ಅವಧಿಯವರೆಗೆ ನೀಡುತ್ತವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾದದ್ದು ಎಂದರೆ ತಾಯಿಯ ಜೀವಕ್ಕೆ ಅಪಾಯವಿದ್ದಲ್ಲಿ ಎಂಬುದು; ಇನ್ನುಳಿದಂತೆ ಹುಟ್ಟಲಿರುವ ಮಗುವಿನ ಅಂಗವೈಕಲ್ಯ, ಬೆಳವಣಿಗೆಯ ಕೊರತೆ, ಸಾಮಾಜಿಕ ಆರ್ಥಿಕ ಕಾರಣಗಳು ಮುಂತಾದವು.

ಆದರೆ ಈ ರೀತಿಯ ನಿರ್ಬಂಧಗಳು ಕಾನೂನುಬಾಹಿರ ಗರ್ಭಪಾತಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಸರ್ವೆಗಳು ಹೇಳುತ್ತವೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸರ್ವೇ ಪ್ರಕಾರ ಯಾವುದೇ ಪ್ರತಿಬಂಧಗಳಿಲ್ಲದೆ ಗರ್ಭಪಾತಕ್ಕೆ ಅವಕಾಶವಿರುವ ಮತ್ತು ಅದನ್ನು ಅಪರಾಧಿತವಲ್ಲದ (Decriminalised) ಕ್ರಿಯೆ ಎಂದು ಪರಿಗಣಿಸಿರುವ ದೇಶಗಳಲ್ಲಿ ’ಗರ್ಭಪಾತದ ಸಮಯದಲ್ಲಿ ಮಹಿಳೆಯ ಸಾವಿನ ಸಂಖ್ಯೆ ’೦’ (ಶೂನ್ಯ) ಇದೆ. ಕೆನಡಾ ಅಂಥ ಒಂದು ದೇಶ. ಗರ್ಭಪಾತಕ್ಕೆ ಕಾನೂನಿನ ಸುರಕ್ಷೆ ಇರುವುದರಿಂದ ಅಲ್ಲಿ ಕದ್ದು ಮುಚ್ಚಿ ಗರ್ಭ ಎಸಗುವ ಅಥವಾ ಅನಾರೋಗ್ಯಕರವಾದ ಹಾಗೂ ಸುರಕ್ಷಿತವಲ್ಲದ ಕಾನೂನುಬಾಹಿರ ಗರ್ಭಪಾತ ಕೇಂದ್ರಗಳಿಗೆ ಹೋಗುವ ಪ್ರಮೇಯವೇ ಇರುವುದಿಲ್ಲ.

ಇನ್ನು ಭಾರತದ ಮಟ್ಟಿಗೆ ಹೇಳುವುದಾದರೆ ಇಲ್ಲಿಯೂ ಗರ್ಭಪಾತಕ್ಕೆ ಮೇಲೆ ಹೇಳಿದ ಕಾರಣಗಳ ರೀತಿಯಲ್ಲಿಯೇ ಅವಕಾಶವಿದೆ. ಗರ್ಭಧಾರಣೆಯ ಮೊದಲ ಕೆಲವಾರಗಳಲ್ಲಿ ನಿರ್ದಿಷ್ಟವಾದ ಕಾರಣಗಳಿದ್ದರೆ ಗರ್ಭಪಾತವನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ ಮಾಡಬಹುದು. 20 ವಾರಗಳಿಗಿಂತ ಹೆಚ್ಚಿದ್ದರೆ ನ್ಯಾಯಾಲಯದ ಅನುಮತಿಯಿಂದಲೇ ಮಾಡಬೇಕು.

ಇಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಏಳುವ ಪ್ರಶ್ನೆ ಎಂದರೆ ಈ ಎಲ್ಲ ಪ್ರಕ್ರಿಯೆಲ್ಲಿ ಗರ್ಭ ಧರಿಸಿದ ಮಹಿಳೆಯ ಪಾತ್ರ ಏನು? ಮೂಲಭೂತ ಸ್ವಾತಂತ್ರ್ಯ ಎಂಬ ಪರಿಕಲ್ಪನೆಯಲ್ಲಿ ಅವಳಿಗೆ ತನ್ನ ದೇಹದ ಮೇಲೆ ಹಕ್ಕಿಲ್ಲವೆ? ಎಂಬುದು.

ಇನ್ನೊಂದು ಪ್ರಶ್ನೆ, ಕೇವಲ ಗರ್ಭಪಾತಕ್ಕೆ ಅವಕಾಶ ಇದೆ ಎಂಬ ಕಾರಣಕ್ಕೆ ಜನ ಅನವಶ್ಯಕವಾಗಿ ಗರ್ಭಪಾತ ಮಾಡಿಸುತ್ತಾರಾ? ಎಂಬುದು.

ಈ ಎರಡನೇ ಪ್ರಶ್ನೆಯನ್ನೇ ಮೊದಲು ನಮ್ಮ ದೇಶದ ಹಿನ್ನೆಲೆಯಲ್ಲಿ ನೋಡಿದರೆ “ಹೌದು ದುರುಪಯೋಗ ಆಗುತ್ತದೆ” ಎನ್ನಬಹುದು. ಗಂಡು ಮಕ್ಕಳಿಂದಲೇ ವಂಶೋದ್ಧಾರ ಎನ್ನುವ ಜನರ ಮಧ್ಯೆ ಹೆಣ್ಣು ಭ್ರೂಣವನ್ನು ತೆಗೆಸುವ ಲಕ್ಷಾಂತರ ಪ್ರಕರಣಗಳು ನಮ್ಮ ಎದುರಿಗಿವೆ. ಗರ್ಭಧರಿಸಿದ ಮಹಿಳೆಯ ಆರೋಗ್ಯ ಕೆಲವು ಬಾರಿ ಪ್ರಾಣಕ್ಕೆ ಕುತ್ತು ಉಂಟಾಗುವ ಸಂದರ್ಭಗಳೂ ಇವೆ. ಭಾರತದಂತಹ ದೇಶದಲ್ಲಿ ಇದಕ್ಕೆ ಕಾನೂನಿನ ಸ್ಪಷ್ಟ ಚೌಕಟ್ಟು ಮತ್ತು ಪರಿಭಾಷೆಯ ಅಗತ್ಯ ಖಂಡಿತವಾಗಿಯೂ ಇದೆ. ಇನ್ನು ಮೊದಲನೆಯ ಪ್ರಶ್ನೆಗೆ ಬಂದರೆ ಮಹಿಳೆಗೆ ಖಂಡಿತವಾಗಿಯೂ ಈ ಮೇಲೆ ಹೇಳಲಾದ ಕಾರಣಗಳ ಹೊರತಾಗಿಯೂ ತನ್ನ ದೇಹದ ಮೇಲೆ ಸ್ವಾತಂತ್ರ್ಯ ಹೊಂದುವ ಅಗತ್ಯವಿದೆ. ಗರ್ಭಧಾರಣೆಯನ್ನು ಕೇವಲ ಪುರುಷಪ್ರಧಾನ ವ್ಯವಸ್ಥೆಯ ಕಣ್ಣಿನಿಂದ ನೋಡುವುದನ್ನು ಬಿಟ್ಟು ಬದಲಾಗುತ್ತಿರುವ ಕಾಲಮಾನದಲ್ಲಿ ಮಹಿಳೆಯ ಅಗತ್ಯ ಮತ್ತು ಮನಸ್ಥಿತಿಗಳ ಹಿನ್ನೆಲೆಯಲ್ಲಿ ವಿಶ್ಲೇಷಿಸುವ ಅಗತ್ಯ ಹಿಂದೆಗಿಂತಲೂ ಹೆಚ್ಚಿದೆ.,

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಕಾನೂನು ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.


ಇದನ್ನೂ ಓದಿ: ತಂದೆ ಮತ್ತು ಮೂವರು ಹೆಣ್ಣುಮಕ್ಕಳು; ದ್ವೇಷದ ರಂಗಭೂಮಿಯಲ್ಲಿ ಒಂದು ಹಳೆಯ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...