Homeಮುಖಪುಟಗರ್ಭಪಾತ ಕಾನೂನು: ಮತ್ತೆ ಚರ್ಚೆಯ ಮುನ್ನಲೆಯಲ್ಲಿ..

ಗರ್ಭಪಾತ ಕಾನೂನು: ಮತ್ತೆ ಚರ್ಚೆಯ ಮುನ್ನಲೆಯಲ್ಲಿ..

- Advertisement -
- Advertisement -

ದೇಹ ನಿನ್ನದು, ಗರ್ಭ ನಿನ್ನದು ಆದರೆ ಗರ್ಭಪಾತ ಮಾಡುವ/ಮಾಡಿಸುವ ಅಧಿಕಾರ ನಿನಗಿಲ್ಲ. ಅಂದರೆ ಹೆಣ್ಣಿನ ದೇಹ ಅವಳದಾದರೂ ಅದರ ಮೇಲೆ ಅವಳಿಗೆ ಸಂಪೂರ್ಣ ಹಕ್ಕಿಲ್ಲ. ಈ ಗರ್ಭಪಾತ ಎಂಬುದು ಮುಂದುವರಿದ, ಮುಂದುವರಿಯುತ್ತಿರುವ ಅಥವಾ ಅತ್ಯಂತ ಸಂಪ್ರದಾಯಸ್ಥ ದೇಶಗಳು ಎನಿಸಿಕೊಂಡಲ್ಲಿ ಕೂಡ ಸಮಾನವಾಗಿ ಅಗಾಗ ಚರ್ಚೆಗೆ ಗ್ರಾಸವಾಗುವ ವಿಷಯ.

ಮನುಷ್ಯರು ಎಚ್ಟೇ ಮುಂದುವರಿದರೂ Reproduction ಅಥವಾ ಸಂತಾನೋತ್ಪತ್ತಿ ಕ್ರಿಯೆಯನ್ನು ಧಾರ್ಮಿಕ ಮತ್ತು ಸಾಮಾಜಿಕ ದೃಷ್ಟಿಕೋನದಿಂದಲೇ ಹೆಚ್ಚಾಗಿ ನೋಡುವುದರಿಂದ ಆ ಕ್ರಿಯೆಯ ಸುತ್ತ ನೂರಾರು ಚರ್ಚೆಗಳು ಮತ್ತು ವಿವಾದಗಳು ಹೆಣೆದುಕೊಂಡಿರುತ್ತವೆ. ಅಂಥ ಚರ್ಚೆ ಮತ್ತು ವಿವಾದಗಳು ಆಯಾ ಕಾಲ ದೇಶದ ಗಡಿಗಳನ್ನು ದಾಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದರೆ ಅದರ ಪ್ರಸ್ತುತತೆ ಮತ್ತು ಅಗತ್ಯಗಳ ಬಗ್ಗೆ ಮುಕ್ತ ಚರ್ಚೆಯಾಗುವ ಅವಶ್ಯಕತೆ ಹೆಚ್ಚಾಗಿದೆ ಎಂದರ್ಥ.

ಇತ್ತೀಚೆಗೆ ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತ ಕಾನೂನನ್ನು ತೆಗೆದು ಹಾಕಿದಾಗ ಎಷ್ಟೋ ಜನ ’ಅಮೆರಿಕದಂತಹ ದೇಶದಲ್ಲಿ ಇದು ಸಾಧ್ಯವೇ?’ ಎಂದು ಆಶ್ಚರ್ಯಪಟ್ಟರು. ಅದಕ್ಕೆ ಕಾರಣವೂ ಇದೆ. ಒಂದು ಅತ್ಯಂತ ಮುಂದುವರೆದ ದೇಶ, ಉತ್ತಮ ಆಧುನಿಕ ಜೀವನಶೈಲಿಗೆ ಹೆಸರಾದ ದೇಶ ಎಂದು ಗುರುತಿಸಲ್ಪಡುವ ಅಮೆರಿಕದಲ್ಲಿ ಇಂಥ ಪುರೋಗಾಮಿ ಕಾನೂನು ಬರಬಹುದೇ ಎಂದು ಜನ ಆಶ್ಚರ್ಯಪಡುವುದು ಸಹಜ. ಆದರೆ ಈ ಬದಲಾವಣೆಗೆ ಮುನ್ನುಡಿ ಬರೆದಿದ್ದು 2016ರಲ್ಲಿ ಅಮೆರಿಕ ಅಧ್ಯಕ್ಷ ಚುನಾವಣೆಯ ಸಮಯದಲ್ಲಿ. ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಅಧ್ಯಕ್ಷೀಯ ಚುನಾವಣಾ ಪ್ರಣಾಳಿಕೆಯಲ್ಲಿ 1973ರಿಂದ ಜಾರಿಗೆ ಬಂದ ಗರ್ಭಪಾತ ಕಾನೂನನ್ನು ತೆಗೆದುಹಾಕುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೇ ಅಧಿಕಾರಕ್ಕೆ ಬಂದ ಕೂಡಲೇ ಸುಪ್ರೀಂಕೋರ್ಟಿಗೆ 3 ಹೊಸ ಜಡ್ಜ್‌ಗಳ ನೇಮಕ ಮಾಡಿದ್ದರು. ಅದರ ಪರಿಣಾಮವಾಗಿಯೇ ಇತ್ತೀಚೆಗೆ 1973ರಲ್ಲಿ ರೋ ವರ್ಸಸ್ ವೇಡ್ ಕೇಸಿನ ಮೂಲಕ ನೀಡಲಾಗಿದ್ದ ಗರ್ಭಪಾತದ ಸ್ವಾತಂತ್ರ್ಯವನ್ನು ತಿರಸ್ಕರಿಸಿ ಪರಿಸ್ಥಿತಿಯನ್ನು ದಶಕಗಳಷ್ಟು ಹಿಂದಕ್ಕೆ ಒಯ್ಯಲಾಗಿದೆ.

ಅಮೆರಿಕದಲ್ಲಿ ಮೊದಲಿನಿಂದಲೂ ಗರ್ಭಪಾತ ಎಂಬುದು ಅತ್ಯಂತ ಚರ್ಚಾಹ ವಸ್ತು. ಸಂಪ್ರದಾಯವಾದಿಗಳು ಮತ್ತು ಲಿಬರಲ್ಸ್‌ಗಳ ನಡುವೆ ಈ ಚರ್ಚೆ ನಡೆಯುತ್ತಲೇ ಇರುತ್ತದೆ. ಸಂಪ್ರದಾಯವಾದಿಗಳು ಮಕ್ಕಳನ್ನು/ಗರ್ಭವನ್ನು ದೇವರ ಆಶೀರ್ವಾದ ಎಂದು ಬಗೆದರೆ, ಲಿಬರಲ್ಸ್ ’ಮಹಿಳೆಗೆ ಸಂವಿಧಾನಾತ್ಮಕವಾಗಿ ತನ್ನ ದೇಹದ ಮೇಲೆ ಸಂಪೂರ್ಣ ಹಕ್ಕಿದೆ’ ಎನ್ನುತ್ತಾರೆ.

ಅಮೆರಿಕದ ಸುಪ್ರೀಂಕೋರ್ಟ್ ಗರ್ಭಪಾತಕ್ಕೆ ಅವಕಾಶ ನೀಡಿದ ಹಳೆಯ ತೀರ್ಪನ್ನು ತೆಗೆದು ಹಾಕಿದ ಕೂಡಲೇ 13 ರಾಜ್ಯಗಳು ಈ ತೀರ್ಪನ್ನು ತಕ್ಷಣವೇ ಒಪ್ಪಿಕೊಂಡು ಅನುಷ್ಠಾನಕ್ಕೂ ತಂದವು. ಸಂಪ್ರದಾಯವಾದಿಗಳಾದ ರಿಪಬ್ಲಿಕನ್ ಬಹುಮತ ಇರುವ ರಾಜ್ಯಗಳು ಬಹುತೇಕ ಇದನ್ನು ಇರುವಂತೆಯೇ ಸ್ವೀಕರಿಸಿ ತಕ್ಷಣದಿಂದಲೇ ಜಾರಿಗೆ ತಂದವು.

ಅಮೆರಿಕದ ಮಹಿಳಾ ಹೋರಾಟಗಾರರು, ಲಿಬರಲ್ಸ್ ಹಾಗೂ ತೀರ್ಪಿನ ಬಗ್ಗೆ ಅಸಮಾಧಾನವಿರುವವರೆಲ್ಲ ’ನನ್ನ ದೇಹ ನನ್ನ ಸ್ವಾತಂತ್ರ್ಯ’ ಎಂಬ ಘೋಷಣೆಯೊಂದಿಗೆ ವಿಶ್ವದಾದ್ಯಂತ ತಮ್ಮ ಈ ನಿಲುವಿಗೆ ಸಮರ್ಥನೆಯನ್ನು ಮತ್ತು ಬೆಂಬಲವನ್ನು ಬಯಸುತ್ತಿದ್ದಾರೆ. ಒಟ್ಟಿನಲ್ಲಿ ಗರ್ಭಪಾತ ಎಂಬ ವಿಷಯ ವೈಜ್ಞಾನಿಕ ಮತ್ತು ವೈಯಕ್ತಿಕ ಪರಿಧಿಯನ್ನು ಬಿಟ್ಟು ಬೇರೆಯದೇ ಲೋಕ ಪ್ರವೇಶಿಸಿದೆ.

ಗರ್ಭಪಾತ ವಿರೋಧಿ ಧೋರಣೆಗಳು ಸ್ಪಷ್ಟವಾಗಿ ಕಾಣಲು ಪ್ರಾರಂಭವಾಗುವುದು 19ನೇ ಶತಮಾನದಲ್ಲಿ. ಯುರೋಪಿನ ದೇಶಗಳು ವಿಶ್ವದಾದ್ಯಂತ ತಮ್ಮ ವಸಾಹತುಗಳನ್ನು ಸ್ಥಾಪಿಸುತ್ತ ಹೋದಂತೆ ತಮ್ಮ ಕಾನೂನು ವ್ಯವಸ್ಥೆಯನ್ನೂ ಕೊಂಡೊಯ್ದರು. ಆ ಕಾನೂನುಗಳಲ್ಲಿ ಕೆಲವೊಂದು ಅವರ ಧಾರ್ಮಿಕ ವಿಚಾರಧಾರೆಗಳಿಗೆ ಪೂರಕವಾಗಿದ್ದು ಅದಕ್ಕೆ ಕಾನೂನಿನ ಚೌಕಟ್ಟನ್ನು ಒದಗಿಸಲಾಯಿತು. ಆದರೆ ಕ್ರಮೇಣ ಜನ ಹಾಗೂ ದೇಶಗಳ ಬದಲಾದ ರಾಜಕೀಯ ಮೌಲ್ಯಗಳ ಹಿನ್ನೆಲೆಯಲ್ಲಿ ಸುರಕ್ಷಿತ ಗರ್ಭಪಾತ ಎನ್ನುವ ಹೊಸ ತತ್ವ ರೂಪುಗೊಂಡಿತು. ಆದರೆ ಹೆಚ್ಚುಕಮ್ಮಿ ಕ್ರಿಶ್ಚಿಯಾನಿಟಿ ತರಹವೇ ಆದರೂ ಅದಕ್ಕಿಂತ ತೀವ್ರವಾಗಿ ಗರ್ಭಪಾತವನ್ನು ವಿರೋಧಿಸುವ ಧರ್ಮವೆಂದರೆ ಇಸ್ಲಾಂ. ಕೇವಲ ’ಟ್ಯುನಿಸಿಯಾ ಮತ್ತು ಯುಎಇ’ಗಳಲ್ಲಿ ಮಾತ್ರ 120 ದಿನಗಳ ಒಳಗಿನ ಗರ್ಭವನ್ನು ತೆಗೆಸಬಹುದು. ಇದನ್ನು ಹೊರತುಪಡಿಸಿ ಯಾವುದೇ ಇಸ್ಲಾಮಿಕ್ ದೇಶಗಳಲ್ಲಿ ಗರ್ಭಪಾತಕ್ಕೆ ಅವಕಾಶವಿಲ್ಲ. ಕೆಲವು ವರ್ಷಗಳ ಹಿಂದೆ ಐರ್ಲೆಂಡಿನಲ್ಲಿ ಭಾರತದ ದಂತ ವೈದ್ಯೆ ಸವಿತಾ ಹಾಲಪ್ಪನವರ್ ಎಂಬುವವರು ಗರ್ಭಧಾರಣೆಯಲ್ಲಿ ತೊಂದರೆಯಾಗಿ ಗರ್ಭಪಾತಕ್ಕೆ ಅರ್ಜಿ ಸಲ್ಲಿಸಿದಾಗ ಅದು ಇಂಥದೇ ಕಾನೂನಿನ ತೊಡಕುಗಳಿಗೆ ಸಿಕ್ಕು ಅದಕ್ಕೆ ಅವಕಾಶ ಸಿಗದೆ ಗರ್ಭದಲ್ಲಿ ನಂಜು ಹರಡಿ ಅವರು ಮೃತಪಟ್ಟ ಘಟನೆ ನಡೆದಿತ್ತು. ಇದು ಗರ್ಭಪಾತ ಕಾನೂನುಗಳನ್ನು ಬಹಳ ಚರ್ಚೆಗೆ ಒಳಪಡುವಂತೆ ಮಾಡಿತ್ತು. ಆದರೆ ಅದರ ಕಾನೂನು ಪರಿಹಾರಕ್ಕೆ ಬಹಳ ಕಾಲ ಬೇಕಾಯಿತು.

ಜಗತ್ತಿನ ಬಹುತೇಕ ದೇಶಗಳು ಕೆಲವೊಂದು ನಿರ್ದಿಷ್ಟ ಕಾರಣಗಳಿಗಾಗಿ ಗರ್ಭಪಾತಕ್ಕೆ ಅವಕಾಶ ನೀಡುತ್ತವೆ ಮತ್ತು ಕೆಲವು ನಿರ್ದಿಷ್ಟ ಅವಧಿಯವರೆಗೆ ನೀಡುತ್ತವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾದದ್ದು ಎಂದರೆ ತಾಯಿಯ ಜೀವಕ್ಕೆ ಅಪಾಯವಿದ್ದಲ್ಲಿ ಎಂಬುದು; ಇನ್ನುಳಿದಂತೆ ಹುಟ್ಟಲಿರುವ ಮಗುವಿನ ಅಂಗವೈಕಲ್ಯ, ಬೆಳವಣಿಗೆಯ ಕೊರತೆ, ಸಾಮಾಜಿಕ ಆರ್ಥಿಕ ಕಾರಣಗಳು ಮುಂತಾದವು.

ಆದರೆ ಈ ರೀತಿಯ ನಿರ್ಬಂಧಗಳು ಕಾನೂನುಬಾಹಿರ ಗರ್ಭಪಾತಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಸರ್ವೆಗಳು ಹೇಳುತ್ತವೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸರ್ವೇ ಪ್ರಕಾರ ಯಾವುದೇ ಪ್ರತಿಬಂಧಗಳಿಲ್ಲದೆ ಗರ್ಭಪಾತಕ್ಕೆ ಅವಕಾಶವಿರುವ ಮತ್ತು ಅದನ್ನು ಅಪರಾಧಿತವಲ್ಲದ (Decriminalised) ಕ್ರಿಯೆ ಎಂದು ಪರಿಗಣಿಸಿರುವ ದೇಶಗಳಲ್ಲಿ ’ಗರ್ಭಪಾತದ ಸಮಯದಲ್ಲಿ ಮಹಿಳೆಯ ಸಾವಿನ ಸಂಖ್ಯೆ ’೦’ (ಶೂನ್ಯ) ಇದೆ. ಕೆನಡಾ ಅಂಥ ಒಂದು ದೇಶ. ಗರ್ಭಪಾತಕ್ಕೆ ಕಾನೂನಿನ ಸುರಕ್ಷೆ ಇರುವುದರಿಂದ ಅಲ್ಲಿ ಕದ್ದು ಮುಚ್ಚಿ ಗರ್ಭ ಎಸಗುವ ಅಥವಾ ಅನಾರೋಗ್ಯಕರವಾದ ಹಾಗೂ ಸುರಕ್ಷಿತವಲ್ಲದ ಕಾನೂನುಬಾಹಿರ ಗರ್ಭಪಾತ ಕೇಂದ್ರಗಳಿಗೆ ಹೋಗುವ ಪ್ರಮೇಯವೇ ಇರುವುದಿಲ್ಲ.

ಇನ್ನು ಭಾರತದ ಮಟ್ಟಿಗೆ ಹೇಳುವುದಾದರೆ ಇಲ್ಲಿಯೂ ಗರ್ಭಪಾತಕ್ಕೆ ಮೇಲೆ ಹೇಳಿದ ಕಾರಣಗಳ ರೀತಿಯಲ್ಲಿಯೇ ಅವಕಾಶವಿದೆ. ಗರ್ಭಧಾರಣೆಯ ಮೊದಲ ಕೆಲವಾರಗಳಲ್ಲಿ ನಿರ್ದಿಷ್ಟವಾದ ಕಾರಣಗಳಿದ್ದರೆ ಗರ್ಭಪಾತವನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ ಮಾಡಬಹುದು. 20 ವಾರಗಳಿಗಿಂತ ಹೆಚ್ಚಿದ್ದರೆ ನ್ಯಾಯಾಲಯದ ಅನುಮತಿಯಿಂದಲೇ ಮಾಡಬೇಕು.

ಇಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಏಳುವ ಪ್ರಶ್ನೆ ಎಂದರೆ ಈ ಎಲ್ಲ ಪ್ರಕ್ರಿಯೆಲ್ಲಿ ಗರ್ಭ ಧರಿಸಿದ ಮಹಿಳೆಯ ಪಾತ್ರ ಏನು? ಮೂಲಭೂತ ಸ್ವಾತಂತ್ರ್ಯ ಎಂಬ ಪರಿಕಲ್ಪನೆಯಲ್ಲಿ ಅವಳಿಗೆ ತನ್ನ ದೇಹದ ಮೇಲೆ ಹಕ್ಕಿಲ್ಲವೆ? ಎಂಬುದು.

ಇನ್ನೊಂದು ಪ್ರಶ್ನೆ, ಕೇವಲ ಗರ್ಭಪಾತಕ್ಕೆ ಅವಕಾಶ ಇದೆ ಎಂಬ ಕಾರಣಕ್ಕೆ ಜನ ಅನವಶ್ಯಕವಾಗಿ ಗರ್ಭಪಾತ ಮಾಡಿಸುತ್ತಾರಾ? ಎಂಬುದು.

ಈ ಎರಡನೇ ಪ್ರಶ್ನೆಯನ್ನೇ ಮೊದಲು ನಮ್ಮ ದೇಶದ ಹಿನ್ನೆಲೆಯಲ್ಲಿ ನೋಡಿದರೆ “ಹೌದು ದುರುಪಯೋಗ ಆಗುತ್ತದೆ” ಎನ್ನಬಹುದು. ಗಂಡು ಮಕ್ಕಳಿಂದಲೇ ವಂಶೋದ್ಧಾರ ಎನ್ನುವ ಜನರ ಮಧ್ಯೆ ಹೆಣ್ಣು ಭ್ರೂಣವನ್ನು ತೆಗೆಸುವ ಲಕ್ಷಾಂತರ ಪ್ರಕರಣಗಳು ನಮ್ಮ ಎದುರಿಗಿವೆ. ಗರ್ಭಧರಿಸಿದ ಮಹಿಳೆಯ ಆರೋಗ್ಯ ಕೆಲವು ಬಾರಿ ಪ್ರಾಣಕ್ಕೆ ಕುತ್ತು ಉಂಟಾಗುವ ಸಂದರ್ಭಗಳೂ ಇವೆ. ಭಾರತದಂತಹ ದೇಶದಲ್ಲಿ ಇದಕ್ಕೆ ಕಾನೂನಿನ ಸ್ಪಷ್ಟ ಚೌಕಟ್ಟು ಮತ್ತು ಪರಿಭಾಷೆಯ ಅಗತ್ಯ ಖಂಡಿತವಾಗಿಯೂ ಇದೆ. ಇನ್ನು ಮೊದಲನೆಯ ಪ್ರಶ್ನೆಗೆ ಬಂದರೆ ಮಹಿಳೆಗೆ ಖಂಡಿತವಾಗಿಯೂ ಈ ಮೇಲೆ ಹೇಳಲಾದ ಕಾರಣಗಳ ಹೊರತಾಗಿಯೂ ತನ್ನ ದೇಹದ ಮೇಲೆ ಸ್ವಾತಂತ್ರ್ಯ ಹೊಂದುವ ಅಗತ್ಯವಿದೆ. ಗರ್ಭಧಾರಣೆಯನ್ನು ಕೇವಲ ಪುರುಷಪ್ರಧಾನ ವ್ಯವಸ್ಥೆಯ ಕಣ್ಣಿನಿಂದ ನೋಡುವುದನ್ನು ಬಿಟ್ಟು ಬದಲಾಗುತ್ತಿರುವ ಕಾಲಮಾನದಲ್ಲಿ ಮಹಿಳೆಯ ಅಗತ್ಯ ಮತ್ತು ಮನಸ್ಥಿತಿಗಳ ಹಿನ್ನೆಲೆಯಲ್ಲಿ ವಿಶ್ಲೇಷಿಸುವ ಅಗತ್ಯ ಹಿಂದೆಗಿಂತಲೂ ಹೆಚ್ಚಿದೆ.,

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಕಾನೂನು ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.


ಇದನ್ನೂ ಓದಿ: ತಂದೆ ಮತ್ತು ಮೂವರು ಹೆಣ್ಣುಮಕ್ಕಳು; ದ್ವೇಷದ ರಂಗಭೂಮಿಯಲ್ಲಿ ಒಂದು ಹಳೆಯ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...