Homeಮುಖಪುಟಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

- Advertisement -
- Advertisement -

ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಹತ್ತಿರದಿಂದ ಬಲ್ಲವರಿಗೆ ಅಥವಾ ಕಳೆದ ಕೆಲ ದಶಕಗಳಿಂದ ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವವರಿಗೆ ಆಗಾಗ ಕೆಲವೊಂದು ಪ್ರಶ್ನೆಗಳು ಅಥವಾ ಕುತೂಹಲಗಳು ಮೂಡುತ್ತವೆ; ಅವು ಗೊಂದಲವನ್ನೂ ಮೂಡಿಸುತ್ತವೆ. ಅದರಲ್ಲಿ ಮುಖ್ಯವಾದದ್ದು ಈ ಕೊಲಿಜಿಯಂ ಎಂಬ ಪ್ರಕ್ರಿಯೆಯದ್ದು. ಅದರ ರಚನೆ, ಪ್ರಸ್ತುತತೆ ಎಲ್ಲವೂ ಗೊಂದಲಮಯವೇ. ಪ್ರತಿಯೊಂದು ಬಾರಿ ಕೊಲಿಜಿಯಂ ಪದ್ಧತಿಯ ಮೇಲೆ ಮತ್ತು ಪರೋಕ್ಷವಾಗಿ ನ್ಯಾಯಮೂರ್ತಿಗಳ ಆಯ್ಕೆಯ ಬಗ್ಗೆ ಜಿಜ್ಞಾಸೆಗಳು ಬಂದಾಗ ಅಥವಾ ನ್ಯಾಯಾಂಗದ ಮೇಲೆ ಶಾಸಕಾಂಗ ಅಥವಾ ಕಾರ್ಯಾಂಗಗಳು ಹೆಚ್ಚು ಹಸ್ತಕ್ಷೇಪ ನಡೆಸಿದಾಗ ಜನರ ಈ ಗೊಂದಲ ಇನ್ನೂ ತೀವ್ರವಾಗುತ್ತದೆ.

ಕೊಲಿಜಿಯಂ ಎಂದರೆ ಸರಳ ಅರ್ಥದಲ್ಲಿ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಅಥವಾ ವರ್ಗಾವಣೆ ಮಾಡಲು ಚಾಲ್ತಿಯಲ್ಲಿರುವ ಒಂದು ಪ್ರಕ್ರಿಯೆ. ಇದು ಕಾಲಕಾಲಕ್ಕೆ ತಾನೇ ತನ್ನ ಕೆಲವೊಂದು ತೀರ್ಮಾನಗಳ ಮೂಲಕ ಹುಟ್ಟುಹಾಕಿದ ಒಂದು ವ್ಯವಸ್ಥೆ. ಇದಕ್ಕೆ ಯಾವ ಕಾಯ್ದೆ, ಕಾನೂನುಗಳ ಅಡಿಪಾಯವಿಲ್ಲ ಮತ್ತು ಸಂವಿಧಾನದಲ್ಲಿ ಇದರ ಪ್ರಸ್ತಾಪವೂ ಇಲ್ಲ. ಆದರೆ, ಸಂವಿಧಾನ ಈ ವಿಷಯದಲ್ಲಿ ಸಂಕುಚಿತವಾಗಿಯೂ ಇಲ್ಲ. ಹಾಗೆ ನೋಡಿದರೆ, ಸಂವಿಧಾನದಲ್ಲಿ ’ಬಜೆಟ್’ ಎಂಬ ಶಬ್ದವೂ ಇಲ್ಲ. ಆದರೂ, ದಶಕಗಳಿಂದ ನಿರಂತರ ಬಜೆಟ್ ಮಂಡನೆ ಆಗುತ್ತಿರುವ ಹಾಗೆಯೇ ಕೊಲಿಜಿಯಂನ ಅಸ್ತಿತ್ವವೂ ಕೂಡ ಇದೆ.

ಕಿರಣ್ ರಿಜಿಜು

ಇತ್ತೀಚೆಗೆ ಕೇಂದ್ರ ಕಾನೂನು ಮಂತ್ರಿ ಕಿರಣ್ ರಿಜಿಜು ಅವರು “ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯ ಬಗ್ಗೆ ಕೆಲವು ಪ್ರಶ್ನೆಗಳು ಇರುವ ಕಾರಣ ಕೊಲಿಜಿಯಂ ಪದ್ಧತಿಯ ಬಗ್ಗೆ ಮರುಚಿಂತನೆ ಮಾಡುವ ಅಗತ್ಯವಿದೆ” ಎಂದು ಹೇಳಿ ಮತ್ತೆ ಚರ್ಚೆಯ ಕಿಡಿ ಹಾರಿಸಿದರು. ಅಷ್ಟೇ ಅಲ್ಲದೇ, ’ಈ ಪದ್ಧತಿಯಲ್ಲಿ ಲೋಪದೋಷಗಳಿವೆ ಎಂಬುದು ಎಲ್ಲರಿಗೂ ಗೊತ್ತು; ಇದು ಅನೇಕ ತೊಂದರೆಗಳನ್ನು ಉಂಟುಮಾಡುತ್ತದೆ. ಆದ್ದರಿಂದ ಇದನ್ನು ಬದಲಾಯಿಸಬೇಕು. ನ್ಯಾಯಮೂರ್ತಿಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ಹೆಚ್ಚಿನ ಮತ್ತು ಅನಗತ್ಯ ವಿಳಂಬ ಕೊಲಿಜಿಯಂನಿಂದ ಆಗುತ್ತಿದೆ’ ಎಂದು ನ್ಯಾಯಾಂಗದ ಮೇಲೆ ನೇರ ದಾಳಿ ನಡೆಸಿದ್ದಾರೆ.

ಈ ತರಹದ ದಾಳಿಗಳು ನ್ಯಾಯಾಂಗದ ಮೇಲೆ ಇದೇ ಮೊದಲೇನಲ್ಲ. ನ್ಯಾಯಾಂಗವನ್ನು ತನ್ನ ಹತೋಟಿಗೆ ತೆಗೆದುಕೊಳ್ಳುವ ಕಾರ್ಯಾಂಗದ ಈ ನಿರಂತರ ಪ್ರಯತ್ನ ಇತಿಹಾಸದುದ್ದಕ್ಕೂ ನೋಡಲು ಸಿಗುತ್ತದೆ. ಆದರೆ, ಅಷ್ಟೇ ಬಲಿಷ್ಠವಾಗಿ ನ್ಯಾಯಾಂಗ ಇದನ್ನು ವಿರೋಧಿಸುತ್ತಾ ಬಂದಿದ್ದು, ತನ್ನ ಸ್ವಾಯತ್ತತೆಯನ್ನು ಕಾಯ್ದುಕೊಳ್ಳಲು ಕಾಲಕಾಲಕ್ಕೆ ಅನೇಕ ಸಂವಿಧಾನ ಪೀಠಗಳನ್ನು ರಚಿಸಿ ತೀರ್ಪುಗಳನ್ನು ನೀಡಿದೆ.

ಸಂವಿಧಾನದಲ್ಲಿ ಏನಿದೆ?

ಸಂವಿಧಾನದ 124ನೇ ಅನುಚ್ಛೇದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ನೇಮಕದ ಬಗ್ಗೆ ಹೇಳುತ್ತದೆ. ಅದರ ಪ್ರಕಾರ ದೇಶದ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಸಲಹೆಯ ಜೊತೆಗೆ, ಪ್ರತಿ ನೇಮಕಾತಿಯಲ್ಲಿ ಸುಪ್ರೀಂ ಕೋರ್ಟಿನ ಮತ್ತು ಹೈಕೋರ್ಟಿನ ನ್ಯಾಯಮೂರ್ತಿಗಳನ್ನು ಸಂಪರ್ಕಿಸಿ ತೀರ್ಮಾನ ತೆಗೆದುಕೊಳ್ಳಬೇಕು.

ಅದೇ ರೀತಿ, 217ನೇ ಅನುಚ್ಛೇದದ ಅಡಿಯಲ್ಲಿ ಹೈಕೋರ್ಟಿನ ನ್ಯಾಯಮೂರ್ತಿಗಳ ನೇಮಕದ ಸಂದರ್ಭದಲ್ಲಿ ಮೇಲೆ ಹೇಳಿದವರಲ್ಲದೇ ಆಯಾ ರಾಜ್ಯದ ರಾಜ್ಯಪಾಲರನ್ನು ಸಂಪರ್ಕಿಸಬೇಕು.

ಇದನ್ನೂ ಓದಿ: ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಕೊಲಿಜಿಯಂ ವ್ಯವಸ್ಥೆ ಅತ್ಯಗತ್ಯ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್

ಸಂವಿಧಾನದಲ್ಲಿ ಎಲ್ಲಿಯೂ ಎಷ್ಟು ಜನ ನ್ಯಾಯಮೂರ್ತಿಗಳನ್ನು ಸಂಪರ್ಕಿಸಬೇಕು, ಹೇಗೆ ಸಲಹೆ ಪಡೆಯಬೇಕು ಎಂಬ ಬಗ್ಗೆ ವಿವರಗಳಿಲ್ಲ. ಬಹುಶಃ ಅಂದು ನ್ಯಾಯಾಂಗದಂತಹ ಒಂದು ದಕ್ಷ, ಸ್ವಾಯತ್ತ ಅಂಗದ ಬಗ್ಗೆ ಚರ್ಚಿಸುವಾಗ ಅದರ ಪ್ರಬುದ್ಧತೆಗೆ ಕಡಿವಾಣ ಹಾಕುವುದು ಬೇಡ ಎಂದುಕೊಂಡಿರಬಹುದು. ಸಂವಿಧಾನವನ್ನೇ ಅರ್ಥೈಸುವ ಕೆಲಸವನ್ನು ನ್ಯಾಯಾಂಗ ಮಾಡಬೇಕಾದರೆ, ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ಅದರ ವಿವೇಚನೆಗೆ ಬಿಟ್ಟಿದ್ದು. ಇದು ಯಾವುದೋ ಅಚಾತುರ್ಯದಿಂದ ಅಥವಾ ಕಣ್‌ತಪ್ಪಿನಿಂದಾಗಿದ್ದಲ್ಲ ಎಂಬುದು ಅನೇಕರ ಅಭಿಮತ.

ಕೊಲಿಜಿಯಂ ಬೆಳೆದು ಬಂದದ್ದು ಅನೇಕ ಸುಪ್ರೀಂ ಕೋರ್ಟಿನ ತೀರ್ಪುಗಳು ಹಾಗೂ ನಿರ್ಧಾರಗಳಿಂದ; ಅವುಗಳನ್ನು ಮೂರು ಪ್ರಮುಖ ತೀರ್ಪುಗಳಲ್ಲಿ ಕಾಣಬಹುದು:

1. ಎಸ್‌ಪಿ ಗುಪ್ತಾ ಕೇಸ್, 1981: ಈ ತೀರ್ಪಿನ ಪ್ರಕಾರ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಯ ಬಗ್ಗೆ ರಾಷ್ಟ್ರಪತಿಗೆ ನೀಡುವ ಶಿಫಾರಸ್ಸುಗಳನ್ನು ರಾಷ್ಟ್ರಪತಿಗಳು ತಿರಸ್ಕರಿಸಬಹುದು. ಈ ತೀರ್ಪಿನಲ್ಲಿ ಕಾರ್ಯಾಂಗಕ್ಕೆ ಹೆಚ್ಚಿನ ಅಧಿಕಾರವನ್ನು ವರ್ಗಾಯಿಸಿದ್ದರಿಂದ ಮುಂದಿನ ಒಂದು ದಶಕಕ್ಕೂ ಅಧಿಕ ಕಾಲ ನೇಮಕಾತಿ ಕಾರ್ಯಾಂಗದ ಅಧೀನದಲ್ಲಿತ್ತು.

2. ಅಡ್ವೋಕೇಟ್ ಆನ್ ರೆಕಾರ್ಡ್ ಅಸೋಸಿಯೇಷನ್ ವರ್ಸಸ್ ಭಾರತ ಒಕ್ಕೂಟ, 1993: ಈ ಕೇಸಿನಲ್ಲಿ 9 ಜನ ನ್ಯಾಯಮೂರ್ತಿಗಳ ಸಂವಿಧಾನ ಪೀಠ, ಜಸ್ಟಿಸ್ ಜೆಎಸ್ ವರ್ಮಾ ಅವರ ಬಹುಸಂಖ್ಯಾತ ತೀರ್ಪಿನಂತೆ ನೇಮಕಾತಿಯ ಪ್ರಮುಖ ಜವಾಬ್ದಾರಿ ಹಾಗೂ ಪ್ರಾಮುಖ್ಯತೆಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿತು. ಮತ್ತು ಮುಖ್ಯ ನ್ಯಾಯಮೂರ್ತಿಗಳ ತೀರ್ಮಾನವೇ ಮುಖ್ಯ ಎಂದು ಕಾರ್ಯಾಂಗದಿಂದ ಜವಾಬ್ದಾರಿ ವಾಪಸ್ಸು ಪಡೆಯಿತು. ಆದರೆ, ಈ ಹಂತದಲ್ಲಿ ಉಳಿದ ನ್ಯಾಯಮೂರ್ತಿಗಳ ಪಾತ್ರವನ್ನು ಇದು ನಗಣ್ಯವಾಗಿಸಿತ್ತು. ಈ ತೀರ್ಮಾನಕ್ಕೆ ಅದೇ ಪೀಠದಲ್ಲಿದ್ದ ನ್ಯಾಯಮೂರ್ತಿಗಳ ವಿರೋಧವೂ ವ್ಯಕ್ತವಾಗಿತ್ತು.

3. 1998ರಲ್ಲಿ ರಾಷ್ಟ್ರಪತಿ ಕೆ ಆರ್ ನಾರಾಯಣ್ ಅವರು ಸುಪ್ರೀಂ ಕೋರ್ಟಿಗೆ ಒಂದು ಸಮಜಾಯಿಷಿ ಕೋರಿ ಪತ್ರ ಬರೆದರು. ಅದರಲ್ಲಿ ಸಂವಿಧಾನದ 124, 217 ಮತ್ತು 222 ಅನುಚ್ಛೇದದ ಪ್ರಕಾರ ಸಲಹೆ ಪಡೆಯುವುದು ಅಂದರೆ ಏನು? ಮುಖ್ಯ ನ್ಯಾಯಮೂರ್ತಿ ಒಂದು ತೀರ್ಮಾನಕ್ಕೆ ಬರುವಂತೆ ಸಲಹೆ ನೀಡಿ ಅವರಿಗೆ ತೀರ್ಮಾನ ಕೈಗೊಳ್ಳಲು ಸಹಾಯ ಮಾಡುವುದೋ ಅಥವಾ ಕೇವಲ ಮುಖ್ಯ ನ್ಯಾಯಮೂರ್ತಿಗಳ ಏಕಾಂಗಿ ನಿರ್ಧಾರಕ್ಕೆ ತಕ್ಕಂತೆ ಅರ್ಥೈಸಬಹುದೋ ಎಂಬ ಪ್ರಶ್ನೆಗಳನ್ನು ಹಾಕಿದ್ದರು. ಇದೇ ಸಮಯದಲ್ಲಿ ಮತ್ತೊಂದು ತೀರ್ಪು ಕೂಡ ಬಂದು ವಿವರಣೆ ಮತ್ತು ಅರ್ಥೈಸುವಿಕೆ ಅಗತ್ಯಗಳು ಬಹಳ ಹೆಚ್ಚಾಗಿದ್ದವು. ಹೀಗಾಗಿ ಸುಪ್ರೀಂ ಕೋರ್ಟ್ ಕೆಲವು ಮಾರ್ಗದರ್ಶಿಗಳನ್ನು ತಯಾರಿಸಿತು. ಅವುಗಳಲ್ಲಿ ಪ್ರಮುಖವಾಗಿ ಮುಖ್ಯ ನ್ಯಾಯಮೂರ್ತಿಯ ವೈಯಕ್ತಿಕ ಅಭಿಪ್ರಾಯಕ್ಕಿಂತ ಒಪ್ಪಿತ ತೀರ್ಮಾನಕ್ಕೆ ಪ್ರಾಶಸ್ತ್ಯವನ್ನು ನೀಡಲಾಯಿತು.

ಆ ಮಾರ್ಗದರ್ಶಿ ಸೂತ್ರಗಳಲ್ಲಿ ಪ್ರಮುಖವಾದವು:

* ಮುಖ್ಯ ನ್ಯಾಯಮೂರ್ತಿಗಳು ಮಾಡುವ ಶಿಫಾರಸ್ಸುಗಳು ಸುಪ್ರೀಂ ಕೋರ್ಟಿನ ಇತರ ಇಬ್ಬರು ಅತ್ಯಂತ ಹಿರಿಯ ನ್ಯಾಯಮೂರ್ತಿಗಳ ಸಲಹೆಯ ಮೇರೆಗೆ ತೆಗೆದುಕೊಂಡಿದ್ದಾಗಿರಬೇಕು.

* ಅಕಸ್ಮಾತ್ ಸೇವಾ ಹಿರಿತನವನ್ನು ಕಡೆಗಣಿಸಿ ಯಾರಿಗಾದರೂ ಮುಂಚೂಣಿಗೆ ತರುವ ನಿರ್ಧಾರ ಕೈಗೊಂಡಿದ್ದರೆ, ಅದಕ್ಕೆ ಅತ್ಯಂತ ಬಲಿಷ್ಠ ಕಾರಣಗಳನ್ನು ನೀಡಬೇಕು. ಸಂಪರ್ಕಿಸಿದ ಮತ್ತು ಸಲಹೆಯ ಎಲ್ಲ ವಿವರಗಳು ಬರವಣಿಗೆಯಲ್ಲಿ ಇರಬೇಕು ಇತ್ಯಾದಿ.

ಈ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವ ಜನರನ್ನೆಲ್ಲ ಸೇರಿಸಿ ಕೊಲಿಜಿಯಂ ರಚನೆ ಆಗುತ್ತದೆ. ಹಾಗಾದರೆ, ಆಗಾಗ ಅದರ ವಿರುದ್ಧ ಅಪಸ್ವರಗಳು ಏಳಲು ಕಾರಣಗಳೇನು?

* ನ್ಯಾಯಾಂಗದಲ್ಲಿ ನೇಮಕಾತಿ ಮತ್ತು ವರ್ಗಾವಣೆಗಳನ್ನು ನೋಡಿಕೊಳ್ಳಲು ಒಂದು ಪ್ರತ್ಯೇಕ ವ್ಯವಸ್ಥೆ ಇಲ್ಲ. ಆದ್ದರಿಂದ, ಇದು ಹೆಚ್ಚಿನ ಜವಾಬ್ದಾರಿ ಆಗಿ ನ್ಯಾಯದಾನ ವ್ಯವಸ್ಥೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ.

* ಇದೊಂದು ಪಾರದರ್ಶಕವಲ್ಲದ ಪ್ರಕ್ರಿಯೆ ಆಗಿರುವುದರಿಂದ ಹೆಚ್ಚಿನ ಪಕ್ಷಪಾತಕ್ಕೆ ಅವಕಾಶ ಉಂಟಾಗುತ್ತದೆ.

* ಪ್ರತಿ ರಾಜ್ಯಗಳಿಂದ ಕೆಲ ಹಿರಿಯ ನ್ಯಾಯಮೂರ್ತಿಗಳು ಆಯ್ಕೆಯಾಗುವುದರಿಂದ ಪ್ರತಿಭಾಶಾಲಿಯಾದ ಕೆಲವು ಕಿರಿಯ ನ್ಯಾಯಮೂರ್ತಿಗಳು ಅವಕಾಶವಂಚಿತರಾಗುತ್ತಾರೆ ಎಂಬುದು.

ಇದೇ ಹಿನ್ನೆಲೆಯಲ್ಲಿ 214ನೇ ಕಾನೂನು ಆಯೋಗ ಸಲ್ಲಿಸಿದ ವರದಿಯಲ್ಲಿ ಈ ಮೊದಲು ಹೇಳಿದ ತೀರ್ಮಾನಗಳನ್ನು ಪುನಃ ಪರಿಶೀಲಿಸುವಂತೆ ಮತ್ತು ಕಾರ್ಯಾಂಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವಂತೆ ಹೇಳಲಾಗಿದೆ.

ಯು.ಯು ಲಲಿತ್

2003ರಲ್ಲಿ ಎನ್‌ಡಿಎ ಸರ್ಕಾರ ಬಂದಾಗ ಸಂವಿಧಾನದ 98ನೇ ತಿದ್ದುಪಡಿ ಮಸೂದೆಯನ್ನು ಮಂಡಿಸಿ, ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯನ್ನು ರಚಿಸುವ ಪ್ರಸ್ತಾಪ ಮಾಡಲಾಯಿತು. ಈ ಪ್ರಕ್ರಿಯೆಯಲ್ಲಿ ಕಾನೂನು ಮಂತ್ರಿಗಳ ಜೊತೆಗೆ ಕೆಲವು ಪ್ರತಿಷ್ಠಿತ ನಾಗರಿಕರು ಸೇರಬೇಕು ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ತೀವ್ರವಾದ ವಿರೋಧಗಳು ಬಂದಿದ್ದರಿಂದ ಅದು ಅಲ್ಲಿಗೆ ಕೊನೆಯಾಗಿತ್ತು. ಆದರೆ, ನ್ಯಾಯಾಂಗದ ಸ್ವಾಯತ್ತತೆಯ ಮೇಲೆ ಆಕ್ರಮಣಗಳು ಮಾತ್ರ ಇಂದಿಗೂ ನಿಂತಿಲ್ಲ.

ಕೆಲವು ವರ್ಷಗಳ ಹಿಂದೆ 5 ಜನ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿ ನ್ಯಾಯಾಂಗದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಹೇಳಿದ್ದರು. ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಇದೊಂದು ವಿರಳ ಘಟನೆ. ಆದರೆ, ಅದರ ತೀವ್ರತೆಯನ್ನು ಗ್ರಹಿಸುವಲ್ಲಿ ಬಹಳ ಜನ ವಿಫಲರಾದರು. ಈಗ ಕಾನೂನು ಮಂತ್ರಿ ಕಿರಣ್ ರಿಜಿಜು ಅವರು ನೀಡಿರುವ ಹೇಳಿಕೆ ಮತ್ತದೇ ಹಳೆ ಪ್ರಯತ್ನದ ಮುಂದುವರಿದ ಭಾಗವಾಗಿ ಕಾಣುತ್ತಿದೆ.

ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿಗಳಾದ ಲೋಕುರ್ ಮತ್ತು ದೀಪಕ್ ಗುಪ್ತಾ ಅವರು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ, ತಮ್ಮ ಆತಂಕಗಳು ಹಾಗೂ ನ್ಯಾಯಾಂಗದ ಮುಂದಿನ ಸವಾಲುಗಳನ್ನು ಬಿಡಿಸಿಟ್ಟಿದ್ದಾರೆ.

ಇದನ್ನೂ ಓದಿ: ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಅವರ ಪ್ರಕಾರ ಕೊಲಿಜಿಯಂ ಪದ್ಧತಿಯಲ್ಲಿ ಕೆಲವು ನ್ಯೂನತೆಗಳಿವೆ; ಅವನ್ನು ಸರಿಪಡಿಸುವ ಮತ್ತು ಬಲಪಡಿಸುವ ಪ್ರಯತ್ನಗಳಾಗಬೇಕೇ ಹೊರತಾಗಿ ಅದನ್ನು ತೆಗೆದುಹಾಕುವ ಅವಾಂತರದ ತೀರ್ಮಾನಗಳು ಆಗಬಾರದು. ಮುಂದುವರಿದು ಹೇಳುತ್ತಾ, ಅವರು ಹೇಗೆ ಸರ್ಕಾರ ನ್ಯಾಯಾಂಗದ ಶಿಫಾರಸುಗಳನ್ನು ಕಡೆಗಣಿಸುತ್ತಿದೆ; ಮತ್ತು ಪರೋಕ್ಷವಾಗಿ ತನ್ನ ನಿರ್ಧಾರಗಳನ್ನು ಹೇರುತ್ತಿದೆ. ಇದು ಹೀಗೆಯೇ ಮುಂದುವರಿದರೆ ನ್ಯಾಯಾಂಗಕ್ಕೆ ಹೇಗೆ ಮಾರಕವಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ನಿವೃತ್ತಿ ಹೊಂದಿದ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಅವರು ತಮ್ಮ ಅತ್ಯಂತ ಅಲ್ಪ ಅವಧಿಯ ಅಧಿಕಾರದಲ್ಲಿಯೂ ತೆಗೆದುಕೊಂಡ ಕೆಲವು ದಿಟ್ಟ ನಿರ್ಧಾರಗಳು ಮುಂದಿನ ನ್ಯಾಯಮೂರ್ತಿಗಳಿಗೆ ಒಂದು ಮಾರ್ಗದರ್ಶನದಂತಿವೆ. ಲಲಿತ್ ಅವರು ಕೊಲಿಜಿಯಂಗೆ ಸದ್ಯಕ್ಕೆ ಪರ್ಯಾಯವಿಲ್ಲ. ಇದು ಒಂದು ಒಳ್ಳೆಯ ವ್ಯವಸ್ಥೆ. ಕೆಲವು ಬದಲಾವಣೆಗಳೊಂದಿಗೆ ಇದನ್ನು ಉಳಿಸಿಕೊಳ್ಳಬೇಕು ಎಂದಿದ್ದಾರೆ.

ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯಿಂದಾಗಿ ದೇಶದಲ್ಲಿ ಎಷ್ಟೋ ಪ್ರಗತಿಪರ ತೀರ್ಪುಗಳು ಹೊರಬಿದ್ದು ನಾಗರಿಕರ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತಿವೆ. ಸರಿಯಾದ ಪರಾಮರ್ಶೆಯಿಲ್ಲದೇ, ಮುನ್ನೋಟಗಳಿಲ್ಲದೇ ನ್ಯಾಯಾಂಗದ ಮೇಲೆ ನಡೆಯುತ್ತಿರುವ ಪ್ರಹಾರಗಳು ಇಡೀ ವ್ಯವಸ್ಥೆಗೆ ಮಾರಕವಾಗುತ್ತವೆ. ಈ ನಿಟ್ಟಿನಲ್ಲಿ ಕಿರಣ್ ರಿಜಿಜು ಅವರ ಹೇಳಿಕೆ ದುರದೃಷ್ಟಕರವಾದದ್ದು.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....