Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

ಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

- Advertisement -
- Advertisement -

ನಾನು ಮುಂಬೈ ಹೋದಾಗಲೆಲ್ಲ ಅಲ್ಲಿನ ಅನೇಕ ಜೀವನೋತ್ಸಾಹದ ಮಹಿಳೆಯರನ್ನು ಕಾಣುತ್ತೇನೆ. ಇವರೆಲ್ಲರೂ ಗೃಹಿಣಿಯರು ಅಥವಾ ಮತ್ತಿತರ ಉದ್ಯೋಗದಲ್ಲಿರುವವರು. ಬರೆಹ ಅವರ ಪ್ರವೃತ್ತಿ. ಇವರಲ್ಲಿ ಅನೇಕರು ಪಿಎಚ್.ಡಿ. ಪದವಿ ಪಡೆದವರು. ಕೆಲವರು ಜಗತ್ತಿನ ಸಾಹಿತ್ಯದಿಂದ ಕನ್ನಡಕ್ಕೆ ಅಗತ್ಯವಾದ ಕೃತಿಗಳನ್ನು ಅನುವಾದ ಮಾಡಿದವರು. ಇವರಲ್ಲಿ ಸೋಮೇಶ್ವರ ಉಚ್ಚಿಲ ಮೂಲದ ಶಾಮಲಾ ಮಾಧವ ಕೂಡ ಒಬ್ಬರು. ಇವರ ಪುಸ್ತಕ ಬಿಡುಗಡೆಗೊಮ್ಮೆ ನಾನು ಮುಂಬೈ ಹೋಗಿದ್ದೆ. ಕಾರ್ಯಕ್ರಮ ಮುಗಿಸಿ ಪುಣೆಗೆ ಹೋಗಿ ಅಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಮೀರಬಾಯಿ ಕರ್ನಾಟಕಿ ಬಗ್ಗೆ ಮಾಹಿತಿ ಹುಡುಕಬೇಕಿತ್ತು. ಆಗ ಶ್ಯಾಮಲಾ ಅವರು ಪುಣೆವಾಸಿಯೂ ಸಾಫ್ಟ್‌ವೇರ್ ಇಂಜಿನಿಯರನೂ ಆದ ತಮ್ಮ ಮಗ ತುಷಾರನ ಜತೆಮಾಡಿ ನನಗೆ ಕಳಿಸಿಕೊಟ್ಟರು. ತುಷಾರ ನನ್ನನ್ನು ಫಿಲ್ಮ ಇನ್ಸ್ಟಿಟ್ಯೂಟ್‌ಗೆ ಕರೆದುಕೊಂಡು ಹೋದರು. ನಾನಲ್ಲಿ ಇದ್ದಷ್ಟೂ ದಿನ ನನಗೆ ಬಗೆಬಗೆಯ ಸಹಾಯ ನೀಡಿದರು. ನನಗೆ ನೆನಪಿರುವಂತೆ, ಅವರಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿತ್ತು. ದಾರ್ಶನಿಕ ಮನೋಭಾವವಿತ್ತು.

ಹೀಗಿರುತ್ತ ಒಂದು ದಿನ ಶ್ಯಾಮಲಾ ಅವರು ನನಗೆ ನೋವಿನಿಂದ ಪತ್ರ ಬರೆದರು: “ನನ್ನ ಮಗು ತುಷಾರನಿಗೆ ಹುಶಾರಿಲ್ಲ. ನನ್ನ ಹೃದಯ ಚಡಪಡಿಸುತ್ತಿದೆ. ಕ್ಯಾನ್ಸರಂತೆ. ಏನು ಮಾಡಲಿ ರಹಮತ್? ದಿಕ್ಕೇ ತೋಚುತ್ತಿಲ್ಲ”. ಇದಾದ ಬಳಿಕ ಅವರು ಸಾವಿನೊಂದಿಗೆ ಸೆಣಸಾಟ ಮಾಡುತ್ತಿರುವ ದಾರುಣ ಸನ್ನಿವೇಶವನ್ನು ಈಮೇಲಲ್ಲಿ ವಾಟ್ಸಾಪಿನಲ್ಲಿ ಹಂಚಿಕೊಳ್ಳುತ್ತಿದ್ದರು. ತುಷಾರ ನಮದು ಜೀವಬಿಟ್ಟ ದಿನ, ಹತಾಶೆಯಿಂದ ಎದೆ ಬಿರಿವಂತೆ ತಮ್ಮ ಶೋಕ ತೋಡಿಕೊಂಡಿದ್ದರು. ಈಗ ಅವರು ತುಷಾರನ ಆರೈಕೆಯಲ್ಲಿ ಪಟ್ಟ ಪಾಡು ಪುಸ್ತಕವಾಗಿ ಹೊರಬಂದಿದೆ. ತಾಯ ಅಳಲೆಲ್ಲವೂ ಹೆಪ್ಪುಗಟ್ಟಿದಂತೆ ಅದರೊಳಗೆ ಬಂದಿದೆ.

ಈ ಪುಸ್ತಕವನ್ನು ಕೇವಲ ಶಾಮಲಾ ಅವರು ಬರೆದಿಲ್ಲ. ಇದರಲ್ಲಿ ತುಷಾರನ ಗೆಳೆಯರಾದ ಸಂಜಯ ಮುಖರ್ಜಿ, ಪ್ರಸಾದ ನಾಯ್ಕರ ಬರೆಹಗಳಿವೆ. ಶ್ಯಾಮಲಾ ಅವರ ಗೆಳತಿ, ಕನ್ನಡ ಲೇಖಕಿ ನೇಮಿಚಂದ್ರ ಅವರ ಬರೆಹವಿದೆ. ಎಲ್ಲವೂ ತುಷಾರನ ಜೀವನ ಪ್ರೀತಿಯ ಬಗೆಗಿನ ಬರೆಹಗಳು. ಬೇನೆ ನೋವು ಸಾವಿನ ದಾರುಣತೆಯನ್ನು ಕುರಿತವು.

ಇವುಗಳಲ್ಲೆಲ್ಲ ಹೆತ್ತತಾಯಿ ಶ್ಯಾಮಲಾ ಅವರ ಬರೆಹವು ದೀರ್ಘವಾಗಿದೆ. ಅವರ ಬರೆಹದ ವಿಶೇಷತೆ ಎಂದರೆ, ತುಷಾರನ ಹುಟ್ಟು, ಬಾಲ್ಯದ ಆಟೋಟ, ತಾರುಣ್ಯದ ಚಟುವಟಿಕೆ, ಯೌವನದ ಚಿಂತನಶೀಲತೆ, ಬೇನೆಯ ಜತೆ ಮಾಡಿದ ಸೆಣಸಾಟ ಎಲ್ಲವೂ ಒಟ್ಟೊಟ್ಟಿಗೆ ಬಂದಿರುವುದು. ಇದು, ಕಾಲಾನುಕ್ರಮಣಿಕೆ ಇದ್ದೂ ಅದನ್ನು ಮುರಿದಿರುವ ವಿಶಿಷ್ಟ ಕಥನಕ್ರಮ. ಕಾಲ ಎಂದರೆ ಸಮಯ ಮಾತ್ರವಲ್ಲ, ಸಾವು ಎಂದೂ ಅರ್ಥವಿದೆಯಷ್ಟೆ. ಈ ಕಾಲಕ್ರಮವನ್ನು ಬೆರೆಸುವ ಕ್ರಮವು, ಜೀವವೊಂದು ಲೋಕಕ್ಕೆ ಆಗಮಿಸುವ ಮತ್ತು ತೆರಳುವ ನಡುವಿನ ಕಾಲದ ಬದುಕನ್ನು ಹಿಡಿಯುವುದಕ್ಕೆ ಲೇಖಕಿ ಕಂಡುಕೊಂಡಿರುವ ದಾರ್ಶನಿಕ ಕ್ರಮದಂತೆಯೂ ತೋರುವುದು.

ಇದನ್ನೂ ಓದಿ: ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಈ ಅನುಭವ ಕಥನದಲ್ಲಿ ಕಾಣುವ ವಿಶೇಷತೆ ಎಂದರೆ, ಮಹಾನಗರದ ಹೊಸ ಔದ್ಯೋಗಿಕ ಜಗತ್ತಿನಲ್ಲಿ, ಏರ್ಪಡುವ ಭಾಷಾತೀತ ಧರ್ಮಾತೀತ ಜಾತ್ಯತೀತ ಮಾನವ ಸಂಬಂಧಗಳು. ತುಷಾರನ ಗೆಳೆಯ ಗೆಳತಿಯರು, ವೈದ್ಯರು, ಕಷ್ಟಕ್ಕೆ ಮಿಡಿವ ಲೇಖಕಿಯ ಗೆಳತಿಯರು, ಶಿಕ್ಷಕರು, ಸಹಾಯಕರು- ಎಲ್ಲರೂ ಕೇವಲ ಮನುಷ್ಯರು. ಹೀಗಾಗಿ ಈ ಕೃತಿ ಬೇನೆಗೆ ಒಳಗಾಗಿ ಒಬ್ಬ ಯುವಕ ಅಕಾಲಿಕವಾಗಿ ಮೃತ್ಯುವಶವಾದ, ಅವನ ತಾಯಿ ಮಗನನ್ನು ಉಳಿಸಿಕೊಳ್ಳಲು ಸೆಣಸಾಟ ಮಾಡುವ ಕಥನ ಮಾತ್ರವಲ್ಲ; ಮನುಷ್ಯರ ನೋವು ನಲಿವುಗಳಲ್ಲಿ ಕೇವಲ ಪ್ರೀತಿ ಅಂತಃಕರಣದಿಂದ ಒದಗುವ ಲೋಕದ ಕಾರುಣ್ಯದ ಕಥನವೂ ಆಗಿದೆ.

ಇಡೀ ಕೃತಿಯಲ್ಲಿ ಇರುವ ಅನುಭವವು ಸಾವಿನಂತಹ ಕಠೋರ ಸತ್ಯದ ಮುಖಾಮುಖಿಯಲ್ಲಿ ಹುಟ್ಟುವುದರಿಂದ, ಅದರ ನಿರೂಪಣೆಯಲ್ಲಿ ಒಂದು ಬಗೆಯ ದಾರ್ಶನಿಕ ಎನ್ನಬಹುದಾದ ನೋಟಗಳಿವೆ, ಮಾತುಗಳಿವೆ. ಇದು ದುಃಖದ ಒಡಲಲ್ಲೇ ಹುಟ್ಟುವ ಅಧ್ಯಾತ್ಮ.

ಕನ್ನಡದಲ್ಲಿ ಈ ಬಗೆಯ ಕೃತಿಗಳು ಬಹಳ ಇಲ್ಲ. ನಾನು ಓದಿರುವ ಎರಡು ಕೃತಿಗಳೆಂದರೆ, ನನಗೆ ಪಾಠ ಹೇಳಿದ ಶಿಕ್ಷಕ ಸಣ್ಣರಾಮ ಅವರು (ಅಳುನುಂಗಿ ನಗುವೊಮ್ಮೆ) ಹಾಗೂ ಬೀದರಿನ ಮಿತ್ರರಾದ ಶಂಭುಲಿಂಗ ವಾಲ್ದೊಡ್ಡಿಯವರು (ಮಹಾತಾಯಿ) ತಮ್ಮತಮ್ಮ ಮಡದಿಯರ ಕ್ಯಾನ್ಸರ್ ಕಾಯಿಲೆಯೊಂದಿಗೆ, ದವಾಖಾನೆ ಮತ್ತು ಮನೆಯಲ್ಲಿ ಮಾಡಿದ ಹೋರಾಟ ಕುರಿತ ಅನುಭವ ಕಥನಗಳು. ಶ್ಯಾಮಲಾ ಅವರ ಪುಸ್ತಕವನ್ನೂ ಒಳಗೊಂಡಂತೆ ಇವೆಲ್ಲವೂ ಕೇವಲ ವೇದನೆಯ ಕಥನಗಳಾಗಿಲ್ಲ. ಸಾವನ್ನು ಸ್ವೀಕರಿಸಿದ ವ್ಯಕ್ತಿ ಬದುಕಿದ್ದಾಗ ಬಾಳಿದ ದೊಡ್ಡ ಬದುಕಿನ ಚಿತ್ರಗಳೂ ಆಗಿವೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...