Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

ಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

- Advertisement -
- Advertisement -

ನಾನು ಮುಂಬೈ ಹೋದಾಗಲೆಲ್ಲ ಅಲ್ಲಿನ ಅನೇಕ ಜೀವನೋತ್ಸಾಹದ ಮಹಿಳೆಯರನ್ನು ಕಾಣುತ್ತೇನೆ. ಇವರೆಲ್ಲರೂ ಗೃಹಿಣಿಯರು ಅಥವಾ ಮತ್ತಿತರ ಉದ್ಯೋಗದಲ್ಲಿರುವವರು. ಬರೆಹ ಅವರ ಪ್ರವೃತ್ತಿ. ಇವರಲ್ಲಿ ಅನೇಕರು ಪಿಎಚ್.ಡಿ. ಪದವಿ ಪಡೆದವರು. ಕೆಲವರು ಜಗತ್ತಿನ ಸಾಹಿತ್ಯದಿಂದ ಕನ್ನಡಕ್ಕೆ ಅಗತ್ಯವಾದ ಕೃತಿಗಳನ್ನು ಅನುವಾದ ಮಾಡಿದವರು. ಇವರಲ್ಲಿ ಸೋಮೇಶ್ವರ ಉಚ್ಚಿಲ ಮೂಲದ ಶಾಮಲಾ ಮಾಧವ ಕೂಡ ಒಬ್ಬರು. ಇವರ ಪುಸ್ತಕ ಬಿಡುಗಡೆಗೊಮ್ಮೆ ನಾನು ಮುಂಬೈ ಹೋಗಿದ್ದೆ. ಕಾರ್ಯಕ್ರಮ ಮುಗಿಸಿ ಪುಣೆಗೆ ಹೋಗಿ ಅಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಮೀರಬಾಯಿ ಕರ್ನಾಟಕಿ ಬಗ್ಗೆ ಮಾಹಿತಿ ಹುಡುಕಬೇಕಿತ್ತು. ಆಗ ಶ್ಯಾಮಲಾ ಅವರು ಪುಣೆವಾಸಿಯೂ ಸಾಫ್ಟ್‌ವೇರ್ ಇಂಜಿನಿಯರನೂ ಆದ ತಮ್ಮ ಮಗ ತುಷಾರನ ಜತೆಮಾಡಿ ನನಗೆ ಕಳಿಸಿಕೊಟ್ಟರು. ತುಷಾರ ನನ್ನನ್ನು ಫಿಲ್ಮ ಇನ್ಸ್ಟಿಟ್ಯೂಟ್‌ಗೆ ಕರೆದುಕೊಂಡು ಹೋದರು. ನಾನಲ್ಲಿ ಇದ್ದಷ್ಟೂ ದಿನ ನನಗೆ ಬಗೆಬಗೆಯ ಸಹಾಯ ನೀಡಿದರು. ನನಗೆ ನೆನಪಿರುವಂತೆ, ಅವರಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿತ್ತು. ದಾರ್ಶನಿಕ ಮನೋಭಾವವಿತ್ತು.

ಹೀಗಿರುತ್ತ ಒಂದು ದಿನ ಶ್ಯಾಮಲಾ ಅವರು ನನಗೆ ನೋವಿನಿಂದ ಪತ್ರ ಬರೆದರು: “ನನ್ನ ಮಗು ತುಷಾರನಿಗೆ ಹುಶಾರಿಲ್ಲ. ನನ್ನ ಹೃದಯ ಚಡಪಡಿಸುತ್ತಿದೆ. ಕ್ಯಾನ್ಸರಂತೆ. ಏನು ಮಾಡಲಿ ರಹಮತ್? ದಿಕ್ಕೇ ತೋಚುತ್ತಿಲ್ಲ”. ಇದಾದ ಬಳಿಕ ಅವರು ಸಾವಿನೊಂದಿಗೆ ಸೆಣಸಾಟ ಮಾಡುತ್ತಿರುವ ದಾರುಣ ಸನ್ನಿವೇಶವನ್ನು ಈಮೇಲಲ್ಲಿ ವಾಟ್ಸಾಪಿನಲ್ಲಿ ಹಂಚಿಕೊಳ್ಳುತ್ತಿದ್ದರು. ತುಷಾರ ನಮದು ಜೀವಬಿಟ್ಟ ದಿನ, ಹತಾಶೆಯಿಂದ ಎದೆ ಬಿರಿವಂತೆ ತಮ್ಮ ಶೋಕ ತೋಡಿಕೊಂಡಿದ್ದರು. ಈಗ ಅವರು ತುಷಾರನ ಆರೈಕೆಯಲ್ಲಿ ಪಟ್ಟ ಪಾಡು ಪುಸ್ತಕವಾಗಿ ಹೊರಬಂದಿದೆ. ತಾಯ ಅಳಲೆಲ್ಲವೂ ಹೆಪ್ಪುಗಟ್ಟಿದಂತೆ ಅದರೊಳಗೆ ಬಂದಿದೆ.

ಈ ಪುಸ್ತಕವನ್ನು ಕೇವಲ ಶಾಮಲಾ ಅವರು ಬರೆದಿಲ್ಲ. ಇದರಲ್ಲಿ ತುಷಾರನ ಗೆಳೆಯರಾದ ಸಂಜಯ ಮುಖರ್ಜಿ, ಪ್ರಸಾದ ನಾಯ್ಕರ ಬರೆಹಗಳಿವೆ. ಶ್ಯಾಮಲಾ ಅವರ ಗೆಳತಿ, ಕನ್ನಡ ಲೇಖಕಿ ನೇಮಿಚಂದ್ರ ಅವರ ಬರೆಹವಿದೆ. ಎಲ್ಲವೂ ತುಷಾರನ ಜೀವನ ಪ್ರೀತಿಯ ಬಗೆಗಿನ ಬರೆಹಗಳು. ಬೇನೆ ನೋವು ಸಾವಿನ ದಾರುಣತೆಯನ್ನು ಕುರಿತವು.

ಇವುಗಳಲ್ಲೆಲ್ಲ ಹೆತ್ತತಾಯಿ ಶ್ಯಾಮಲಾ ಅವರ ಬರೆಹವು ದೀರ್ಘವಾಗಿದೆ. ಅವರ ಬರೆಹದ ವಿಶೇಷತೆ ಎಂದರೆ, ತುಷಾರನ ಹುಟ್ಟು, ಬಾಲ್ಯದ ಆಟೋಟ, ತಾರುಣ್ಯದ ಚಟುವಟಿಕೆ, ಯೌವನದ ಚಿಂತನಶೀಲತೆ, ಬೇನೆಯ ಜತೆ ಮಾಡಿದ ಸೆಣಸಾಟ ಎಲ್ಲವೂ ಒಟ್ಟೊಟ್ಟಿಗೆ ಬಂದಿರುವುದು. ಇದು, ಕಾಲಾನುಕ್ರಮಣಿಕೆ ಇದ್ದೂ ಅದನ್ನು ಮುರಿದಿರುವ ವಿಶಿಷ್ಟ ಕಥನಕ್ರಮ. ಕಾಲ ಎಂದರೆ ಸಮಯ ಮಾತ್ರವಲ್ಲ, ಸಾವು ಎಂದೂ ಅರ್ಥವಿದೆಯಷ್ಟೆ. ಈ ಕಾಲಕ್ರಮವನ್ನು ಬೆರೆಸುವ ಕ್ರಮವು, ಜೀವವೊಂದು ಲೋಕಕ್ಕೆ ಆಗಮಿಸುವ ಮತ್ತು ತೆರಳುವ ನಡುವಿನ ಕಾಲದ ಬದುಕನ್ನು ಹಿಡಿಯುವುದಕ್ಕೆ ಲೇಖಕಿ ಕಂಡುಕೊಂಡಿರುವ ದಾರ್ಶನಿಕ ಕ್ರಮದಂತೆಯೂ ತೋರುವುದು.

ಇದನ್ನೂ ಓದಿ: ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಈ ಅನುಭವ ಕಥನದಲ್ಲಿ ಕಾಣುವ ವಿಶೇಷತೆ ಎಂದರೆ, ಮಹಾನಗರದ ಹೊಸ ಔದ್ಯೋಗಿಕ ಜಗತ್ತಿನಲ್ಲಿ, ಏರ್ಪಡುವ ಭಾಷಾತೀತ ಧರ್ಮಾತೀತ ಜಾತ್ಯತೀತ ಮಾನವ ಸಂಬಂಧಗಳು. ತುಷಾರನ ಗೆಳೆಯ ಗೆಳತಿಯರು, ವೈದ್ಯರು, ಕಷ್ಟಕ್ಕೆ ಮಿಡಿವ ಲೇಖಕಿಯ ಗೆಳತಿಯರು, ಶಿಕ್ಷಕರು, ಸಹಾಯಕರು- ಎಲ್ಲರೂ ಕೇವಲ ಮನುಷ್ಯರು. ಹೀಗಾಗಿ ಈ ಕೃತಿ ಬೇನೆಗೆ ಒಳಗಾಗಿ ಒಬ್ಬ ಯುವಕ ಅಕಾಲಿಕವಾಗಿ ಮೃತ್ಯುವಶವಾದ, ಅವನ ತಾಯಿ ಮಗನನ್ನು ಉಳಿಸಿಕೊಳ್ಳಲು ಸೆಣಸಾಟ ಮಾಡುವ ಕಥನ ಮಾತ್ರವಲ್ಲ; ಮನುಷ್ಯರ ನೋವು ನಲಿವುಗಳಲ್ಲಿ ಕೇವಲ ಪ್ರೀತಿ ಅಂತಃಕರಣದಿಂದ ಒದಗುವ ಲೋಕದ ಕಾರುಣ್ಯದ ಕಥನವೂ ಆಗಿದೆ.

ಇಡೀ ಕೃತಿಯಲ್ಲಿ ಇರುವ ಅನುಭವವು ಸಾವಿನಂತಹ ಕಠೋರ ಸತ್ಯದ ಮುಖಾಮುಖಿಯಲ್ಲಿ ಹುಟ್ಟುವುದರಿಂದ, ಅದರ ನಿರೂಪಣೆಯಲ್ಲಿ ಒಂದು ಬಗೆಯ ದಾರ್ಶನಿಕ ಎನ್ನಬಹುದಾದ ನೋಟಗಳಿವೆ, ಮಾತುಗಳಿವೆ. ಇದು ದುಃಖದ ಒಡಲಲ್ಲೇ ಹುಟ್ಟುವ ಅಧ್ಯಾತ್ಮ.

ಕನ್ನಡದಲ್ಲಿ ಈ ಬಗೆಯ ಕೃತಿಗಳು ಬಹಳ ಇಲ್ಲ. ನಾನು ಓದಿರುವ ಎರಡು ಕೃತಿಗಳೆಂದರೆ, ನನಗೆ ಪಾಠ ಹೇಳಿದ ಶಿಕ್ಷಕ ಸಣ್ಣರಾಮ ಅವರು (ಅಳುನುಂಗಿ ನಗುವೊಮ್ಮೆ) ಹಾಗೂ ಬೀದರಿನ ಮಿತ್ರರಾದ ಶಂಭುಲಿಂಗ ವಾಲ್ದೊಡ್ಡಿಯವರು (ಮಹಾತಾಯಿ) ತಮ್ಮತಮ್ಮ ಮಡದಿಯರ ಕ್ಯಾನ್ಸರ್ ಕಾಯಿಲೆಯೊಂದಿಗೆ, ದವಾಖಾನೆ ಮತ್ತು ಮನೆಯಲ್ಲಿ ಮಾಡಿದ ಹೋರಾಟ ಕುರಿತ ಅನುಭವ ಕಥನಗಳು. ಶ್ಯಾಮಲಾ ಅವರ ಪುಸ್ತಕವನ್ನೂ ಒಳಗೊಂಡಂತೆ ಇವೆಲ್ಲವೂ ಕೇವಲ ವೇದನೆಯ ಕಥನಗಳಾಗಿಲ್ಲ. ಸಾವನ್ನು ಸ್ವೀಕರಿಸಿದ ವ್ಯಕ್ತಿ ಬದುಕಿದ್ದಾಗ ಬಾಳಿದ ದೊಡ್ಡ ಬದುಕಿನ ಚಿತ್ರಗಳೂ ಆಗಿವೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...