Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

ಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

- Advertisement -
- Advertisement -

ನಾನು ಮುಂಬೈ ಹೋದಾಗಲೆಲ್ಲ ಅಲ್ಲಿನ ಅನೇಕ ಜೀವನೋತ್ಸಾಹದ ಮಹಿಳೆಯರನ್ನು ಕಾಣುತ್ತೇನೆ. ಇವರೆಲ್ಲರೂ ಗೃಹಿಣಿಯರು ಅಥವಾ ಮತ್ತಿತರ ಉದ್ಯೋಗದಲ್ಲಿರುವವರು. ಬರೆಹ ಅವರ ಪ್ರವೃತ್ತಿ. ಇವರಲ್ಲಿ ಅನೇಕರು ಪಿಎಚ್.ಡಿ. ಪದವಿ ಪಡೆದವರು. ಕೆಲವರು ಜಗತ್ತಿನ ಸಾಹಿತ್ಯದಿಂದ ಕನ್ನಡಕ್ಕೆ ಅಗತ್ಯವಾದ ಕೃತಿಗಳನ್ನು ಅನುವಾದ ಮಾಡಿದವರು. ಇವರಲ್ಲಿ ಸೋಮೇಶ್ವರ ಉಚ್ಚಿಲ ಮೂಲದ ಶಾಮಲಾ ಮಾಧವ ಕೂಡ ಒಬ್ಬರು. ಇವರ ಪುಸ್ತಕ ಬಿಡುಗಡೆಗೊಮ್ಮೆ ನಾನು ಮುಂಬೈ ಹೋಗಿದ್ದೆ. ಕಾರ್ಯಕ್ರಮ ಮುಗಿಸಿ ಪುಣೆಗೆ ಹೋಗಿ ಅಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಮೀರಬಾಯಿ ಕರ್ನಾಟಕಿ ಬಗ್ಗೆ ಮಾಹಿತಿ ಹುಡುಕಬೇಕಿತ್ತು. ಆಗ ಶ್ಯಾಮಲಾ ಅವರು ಪುಣೆವಾಸಿಯೂ ಸಾಫ್ಟ್‌ವೇರ್ ಇಂಜಿನಿಯರನೂ ಆದ ತಮ್ಮ ಮಗ ತುಷಾರನ ಜತೆಮಾಡಿ ನನಗೆ ಕಳಿಸಿಕೊಟ್ಟರು. ತುಷಾರ ನನ್ನನ್ನು ಫಿಲ್ಮ ಇನ್ಸ್ಟಿಟ್ಯೂಟ್‌ಗೆ ಕರೆದುಕೊಂಡು ಹೋದರು. ನಾನಲ್ಲಿ ಇದ್ದಷ್ಟೂ ದಿನ ನನಗೆ ಬಗೆಬಗೆಯ ಸಹಾಯ ನೀಡಿದರು. ನನಗೆ ನೆನಪಿರುವಂತೆ, ಅವರಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿತ್ತು. ದಾರ್ಶನಿಕ ಮನೋಭಾವವಿತ್ತು.

ಹೀಗಿರುತ್ತ ಒಂದು ದಿನ ಶ್ಯಾಮಲಾ ಅವರು ನನಗೆ ನೋವಿನಿಂದ ಪತ್ರ ಬರೆದರು: “ನನ್ನ ಮಗು ತುಷಾರನಿಗೆ ಹುಶಾರಿಲ್ಲ. ನನ್ನ ಹೃದಯ ಚಡಪಡಿಸುತ್ತಿದೆ. ಕ್ಯಾನ್ಸರಂತೆ. ಏನು ಮಾಡಲಿ ರಹಮತ್? ದಿಕ್ಕೇ ತೋಚುತ್ತಿಲ್ಲ”. ಇದಾದ ಬಳಿಕ ಅವರು ಸಾವಿನೊಂದಿಗೆ ಸೆಣಸಾಟ ಮಾಡುತ್ತಿರುವ ದಾರುಣ ಸನ್ನಿವೇಶವನ್ನು ಈಮೇಲಲ್ಲಿ ವಾಟ್ಸಾಪಿನಲ್ಲಿ ಹಂಚಿಕೊಳ್ಳುತ್ತಿದ್ದರು. ತುಷಾರ ನಮದು ಜೀವಬಿಟ್ಟ ದಿನ, ಹತಾಶೆಯಿಂದ ಎದೆ ಬಿರಿವಂತೆ ತಮ್ಮ ಶೋಕ ತೋಡಿಕೊಂಡಿದ್ದರು. ಈಗ ಅವರು ತುಷಾರನ ಆರೈಕೆಯಲ್ಲಿ ಪಟ್ಟ ಪಾಡು ಪುಸ್ತಕವಾಗಿ ಹೊರಬಂದಿದೆ. ತಾಯ ಅಳಲೆಲ್ಲವೂ ಹೆಪ್ಪುಗಟ್ಟಿದಂತೆ ಅದರೊಳಗೆ ಬಂದಿದೆ.

ಈ ಪುಸ್ತಕವನ್ನು ಕೇವಲ ಶಾಮಲಾ ಅವರು ಬರೆದಿಲ್ಲ. ಇದರಲ್ಲಿ ತುಷಾರನ ಗೆಳೆಯರಾದ ಸಂಜಯ ಮುಖರ್ಜಿ, ಪ್ರಸಾದ ನಾಯ್ಕರ ಬರೆಹಗಳಿವೆ. ಶ್ಯಾಮಲಾ ಅವರ ಗೆಳತಿ, ಕನ್ನಡ ಲೇಖಕಿ ನೇಮಿಚಂದ್ರ ಅವರ ಬರೆಹವಿದೆ. ಎಲ್ಲವೂ ತುಷಾರನ ಜೀವನ ಪ್ರೀತಿಯ ಬಗೆಗಿನ ಬರೆಹಗಳು. ಬೇನೆ ನೋವು ಸಾವಿನ ದಾರುಣತೆಯನ್ನು ಕುರಿತವು.

ಇವುಗಳಲ್ಲೆಲ್ಲ ಹೆತ್ತತಾಯಿ ಶ್ಯಾಮಲಾ ಅವರ ಬರೆಹವು ದೀರ್ಘವಾಗಿದೆ. ಅವರ ಬರೆಹದ ವಿಶೇಷತೆ ಎಂದರೆ, ತುಷಾರನ ಹುಟ್ಟು, ಬಾಲ್ಯದ ಆಟೋಟ, ತಾರುಣ್ಯದ ಚಟುವಟಿಕೆ, ಯೌವನದ ಚಿಂತನಶೀಲತೆ, ಬೇನೆಯ ಜತೆ ಮಾಡಿದ ಸೆಣಸಾಟ ಎಲ್ಲವೂ ಒಟ್ಟೊಟ್ಟಿಗೆ ಬಂದಿರುವುದು. ಇದು, ಕಾಲಾನುಕ್ರಮಣಿಕೆ ಇದ್ದೂ ಅದನ್ನು ಮುರಿದಿರುವ ವಿಶಿಷ್ಟ ಕಥನಕ್ರಮ. ಕಾಲ ಎಂದರೆ ಸಮಯ ಮಾತ್ರವಲ್ಲ, ಸಾವು ಎಂದೂ ಅರ್ಥವಿದೆಯಷ್ಟೆ. ಈ ಕಾಲಕ್ರಮವನ್ನು ಬೆರೆಸುವ ಕ್ರಮವು, ಜೀವವೊಂದು ಲೋಕಕ್ಕೆ ಆಗಮಿಸುವ ಮತ್ತು ತೆರಳುವ ನಡುವಿನ ಕಾಲದ ಬದುಕನ್ನು ಹಿಡಿಯುವುದಕ್ಕೆ ಲೇಖಕಿ ಕಂಡುಕೊಂಡಿರುವ ದಾರ್ಶನಿಕ ಕ್ರಮದಂತೆಯೂ ತೋರುವುದು.

ಇದನ್ನೂ ಓದಿ: ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಈ ಅನುಭವ ಕಥನದಲ್ಲಿ ಕಾಣುವ ವಿಶೇಷತೆ ಎಂದರೆ, ಮಹಾನಗರದ ಹೊಸ ಔದ್ಯೋಗಿಕ ಜಗತ್ತಿನಲ್ಲಿ, ಏರ್ಪಡುವ ಭಾಷಾತೀತ ಧರ್ಮಾತೀತ ಜಾತ್ಯತೀತ ಮಾನವ ಸಂಬಂಧಗಳು. ತುಷಾರನ ಗೆಳೆಯ ಗೆಳತಿಯರು, ವೈದ್ಯರು, ಕಷ್ಟಕ್ಕೆ ಮಿಡಿವ ಲೇಖಕಿಯ ಗೆಳತಿಯರು, ಶಿಕ್ಷಕರು, ಸಹಾಯಕರು- ಎಲ್ಲರೂ ಕೇವಲ ಮನುಷ್ಯರು. ಹೀಗಾಗಿ ಈ ಕೃತಿ ಬೇನೆಗೆ ಒಳಗಾಗಿ ಒಬ್ಬ ಯುವಕ ಅಕಾಲಿಕವಾಗಿ ಮೃತ್ಯುವಶವಾದ, ಅವನ ತಾಯಿ ಮಗನನ್ನು ಉಳಿಸಿಕೊಳ್ಳಲು ಸೆಣಸಾಟ ಮಾಡುವ ಕಥನ ಮಾತ್ರವಲ್ಲ; ಮನುಷ್ಯರ ನೋವು ನಲಿವುಗಳಲ್ಲಿ ಕೇವಲ ಪ್ರೀತಿ ಅಂತಃಕರಣದಿಂದ ಒದಗುವ ಲೋಕದ ಕಾರುಣ್ಯದ ಕಥನವೂ ಆಗಿದೆ.

ಇಡೀ ಕೃತಿಯಲ್ಲಿ ಇರುವ ಅನುಭವವು ಸಾವಿನಂತಹ ಕಠೋರ ಸತ್ಯದ ಮುಖಾಮುಖಿಯಲ್ಲಿ ಹುಟ್ಟುವುದರಿಂದ, ಅದರ ನಿರೂಪಣೆಯಲ್ಲಿ ಒಂದು ಬಗೆಯ ದಾರ್ಶನಿಕ ಎನ್ನಬಹುದಾದ ನೋಟಗಳಿವೆ, ಮಾತುಗಳಿವೆ. ಇದು ದುಃಖದ ಒಡಲಲ್ಲೇ ಹುಟ್ಟುವ ಅಧ್ಯಾತ್ಮ.

ಕನ್ನಡದಲ್ಲಿ ಈ ಬಗೆಯ ಕೃತಿಗಳು ಬಹಳ ಇಲ್ಲ. ನಾನು ಓದಿರುವ ಎರಡು ಕೃತಿಗಳೆಂದರೆ, ನನಗೆ ಪಾಠ ಹೇಳಿದ ಶಿಕ್ಷಕ ಸಣ್ಣರಾಮ ಅವರು (ಅಳುನುಂಗಿ ನಗುವೊಮ್ಮೆ) ಹಾಗೂ ಬೀದರಿನ ಮಿತ್ರರಾದ ಶಂಭುಲಿಂಗ ವಾಲ್ದೊಡ್ಡಿಯವರು (ಮಹಾತಾಯಿ) ತಮ್ಮತಮ್ಮ ಮಡದಿಯರ ಕ್ಯಾನ್ಸರ್ ಕಾಯಿಲೆಯೊಂದಿಗೆ, ದವಾಖಾನೆ ಮತ್ತು ಮನೆಯಲ್ಲಿ ಮಾಡಿದ ಹೋರಾಟ ಕುರಿತ ಅನುಭವ ಕಥನಗಳು. ಶ್ಯಾಮಲಾ ಅವರ ಪುಸ್ತಕವನ್ನೂ ಒಳಗೊಂಡಂತೆ ಇವೆಲ್ಲವೂ ಕೇವಲ ವೇದನೆಯ ಕಥನಗಳಾಗಿಲ್ಲ. ಸಾವನ್ನು ಸ್ವೀಕರಿಸಿದ ವ್ಯಕ್ತಿ ಬದುಕಿದ್ದಾಗ ಬಾಳಿದ ದೊಡ್ಡ ಬದುಕಿನ ಚಿತ್ರಗಳೂ ಆಗಿವೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...