Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

ಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

- Advertisement -
- Advertisement -

ನಾನು ಮುಂಬೈ ಹೋದಾಗಲೆಲ್ಲ ಅಲ್ಲಿನ ಅನೇಕ ಜೀವನೋತ್ಸಾಹದ ಮಹಿಳೆಯರನ್ನು ಕಾಣುತ್ತೇನೆ. ಇವರೆಲ್ಲರೂ ಗೃಹಿಣಿಯರು ಅಥವಾ ಮತ್ತಿತರ ಉದ್ಯೋಗದಲ್ಲಿರುವವರು. ಬರೆಹ ಅವರ ಪ್ರವೃತ್ತಿ. ಇವರಲ್ಲಿ ಅನೇಕರು ಪಿಎಚ್.ಡಿ. ಪದವಿ ಪಡೆದವರು. ಕೆಲವರು ಜಗತ್ತಿನ ಸಾಹಿತ್ಯದಿಂದ ಕನ್ನಡಕ್ಕೆ ಅಗತ್ಯವಾದ ಕೃತಿಗಳನ್ನು ಅನುವಾದ ಮಾಡಿದವರು. ಇವರಲ್ಲಿ ಸೋಮೇಶ್ವರ ಉಚ್ಚಿಲ ಮೂಲದ ಶಾಮಲಾ ಮಾಧವ ಕೂಡ ಒಬ್ಬರು. ಇವರ ಪುಸ್ತಕ ಬಿಡುಗಡೆಗೊಮ್ಮೆ ನಾನು ಮುಂಬೈ ಹೋಗಿದ್ದೆ. ಕಾರ್ಯಕ್ರಮ ಮುಗಿಸಿ ಪುಣೆಗೆ ಹೋಗಿ ಅಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಮೀರಬಾಯಿ ಕರ್ನಾಟಕಿ ಬಗ್ಗೆ ಮಾಹಿತಿ ಹುಡುಕಬೇಕಿತ್ತು. ಆಗ ಶ್ಯಾಮಲಾ ಅವರು ಪುಣೆವಾಸಿಯೂ ಸಾಫ್ಟ್‌ವೇರ್ ಇಂಜಿನಿಯರನೂ ಆದ ತಮ್ಮ ಮಗ ತುಷಾರನ ಜತೆಮಾಡಿ ನನಗೆ ಕಳಿಸಿಕೊಟ್ಟರು. ತುಷಾರ ನನ್ನನ್ನು ಫಿಲ್ಮ ಇನ್ಸ್ಟಿಟ್ಯೂಟ್‌ಗೆ ಕರೆದುಕೊಂಡು ಹೋದರು. ನಾನಲ್ಲಿ ಇದ್ದಷ್ಟೂ ದಿನ ನನಗೆ ಬಗೆಬಗೆಯ ಸಹಾಯ ನೀಡಿದರು. ನನಗೆ ನೆನಪಿರುವಂತೆ, ಅವರಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿತ್ತು. ದಾರ್ಶನಿಕ ಮನೋಭಾವವಿತ್ತು.

ಹೀಗಿರುತ್ತ ಒಂದು ದಿನ ಶ್ಯಾಮಲಾ ಅವರು ನನಗೆ ನೋವಿನಿಂದ ಪತ್ರ ಬರೆದರು: “ನನ್ನ ಮಗು ತುಷಾರನಿಗೆ ಹುಶಾರಿಲ್ಲ. ನನ್ನ ಹೃದಯ ಚಡಪಡಿಸುತ್ತಿದೆ. ಕ್ಯಾನ್ಸರಂತೆ. ಏನು ಮಾಡಲಿ ರಹಮತ್? ದಿಕ್ಕೇ ತೋಚುತ್ತಿಲ್ಲ”. ಇದಾದ ಬಳಿಕ ಅವರು ಸಾವಿನೊಂದಿಗೆ ಸೆಣಸಾಟ ಮಾಡುತ್ತಿರುವ ದಾರುಣ ಸನ್ನಿವೇಶವನ್ನು ಈಮೇಲಲ್ಲಿ ವಾಟ್ಸಾಪಿನಲ್ಲಿ ಹಂಚಿಕೊಳ್ಳುತ್ತಿದ್ದರು. ತುಷಾರ ನಮದು ಜೀವಬಿಟ್ಟ ದಿನ, ಹತಾಶೆಯಿಂದ ಎದೆ ಬಿರಿವಂತೆ ತಮ್ಮ ಶೋಕ ತೋಡಿಕೊಂಡಿದ್ದರು. ಈಗ ಅವರು ತುಷಾರನ ಆರೈಕೆಯಲ್ಲಿ ಪಟ್ಟ ಪಾಡು ಪುಸ್ತಕವಾಗಿ ಹೊರಬಂದಿದೆ. ತಾಯ ಅಳಲೆಲ್ಲವೂ ಹೆಪ್ಪುಗಟ್ಟಿದಂತೆ ಅದರೊಳಗೆ ಬಂದಿದೆ.

ಈ ಪುಸ್ತಕವನ್ನು ಕೇವಲ ಶಾಮಲಾ ಅವರು ಬರೆದಿಲ್ಲ. ಇದರಲ್ಲಿ ತುಷಾರನ ಗೆಳೆಯರಾದ ಸಂಜಯ ಮುಖರ್ಜಿ, ಪ್ರಸಾದ ನಾಯ್ಕರ ಬರೆಹಗಳಿವೆ. ಶ್ಯಾಮಲಾ ಅವರ ಗೆಳತಿ, ಕನ್ನಡ ಲೇಖಕಿ ನೇಮಿಚಂದ್ರ ಅವರ ಬರೆಹವಿದೆ. ಎಲ್ಲವೂ ತುಷಾರನ ಜೀವನ ಪ್ರೀತಿಯ ಬಗೆಗಿನ ಬರೆಹಗಳು. ಬೇನೆ ನೋವು ಸಾವಿನ ದಾರುಣತೆಯನ್ನು ಕುರಿತವು.

ಇವುಗಳಲ್ಲೆಲ್ಲ ಹೆತ್ತತಾಯಿ ಶ್ಯಾಮಲಾ ಅವರ ಬರೆಹವು ದೀರ್ಘವಾಗಿದೆ. ಅವರ ಬರೆಹದ ವಿಶೇಷತೆ ಎಂದರೆ, ತುಷಾರನ ಹುಟ್ಟು, ಬಾಲ್ಯದ ಆಟೋಟ, ತಾರುಣ್ಯದ ಚಟುವಟಿಕೆ, ಯೌವನದ ಚಿಂತನಶೀಲತೆ, ಬೇನೆಯ ಜತೆ ಮಾಡಿದ ಸೆಣಸಾಟ ಎಲ್ಲವೂ ಒಟ್ಟೊಟ್ಟಿಗೆ ಬಂದಿರುವುದು. ಇದು, ಕಾಲಾನುಕ್ರಮಣಿಕೆ ಇದ್ದೂ ಅದನ್ನು ಮುರಿದಿರುವ ವಿಶಿಷ್ಟ ಕಥನಕ್ರಮ. ಕಾಲ ಎಂದರೆ ಸಮಯ ಮಾತ್ರವಲ್ಲ, ಸಾವು ಎಂದೂ ಅರ್ಥವಿದೆಯಷ್ಟೆ. ಈ ಕಾಲಕ್ರಮವನ್ನು ಬೆರೆಸುವ ಕ್ರಮವು, ಜೀವವೊಂದು ಲೋಕಕ್ಕೆ ಆಗಮಿಸುವ ಮತ್ತು ತೆರಳುವ ನಡುವಿನ ಕಾಲದ ಬದುಕನ್ನು ಹಿಡಿಯುವುದಕ್ಕೆ ಲೇಖಕಿ ಕಂಡುಕೊಂಡಿರುವ ದಾರ್ಶನಿಕ ಕ್ರಮದಂತೆಯೂ ತೋರುವುದು.

ಇದನ್ನೂ ಓದಿ: ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಈ ಅನುಭವ ಕಥನದಲ್ಲಿ ಕಾಣುವ ವಿಶೇಷತೆ ಎಂದರೆ, ಮಹಾನಗರದ ಹೊಸ ಔದ್ಯೋಗಿಕ ಜಗತ್ತಿನಲ್ಲಿ, ಏರ್ಪಡುವ ಭಾಷಾತೀತ ಧರ್ಮಾತೀತ ಜಾತ್ಯತೀತ ಮಾನವ ಸಂಬಂಧಗಳು. ತುಷಾರನ ಗೆಳೆಯ ಗೆಳತಿಯರು, ವೈದ್ಯರು, ಕಷ್ಟಕ್ಕೆ ಮಿಡಿವ ಲೇಖಕಿಯ ಗೆಳತಿಯರು, ಶಿಕ್ಷಕರು, ಸಹಾಯಕರು- ಎಲ್ಲರೂ ಕೇವಲ ಮನುಷ್ಯರು. ಹೀಗಾಗಿ ಈ ಕೃತಿ ಬೇನೆಗೆ ಒಳಗಾಗಿ ಒಬ್ಬ ಯುವಕ ಅಕಾಲಿಕವಾಗಿ ಮೃತ್ಯುವಶವಾದ, ಅವನ ತಾಯಿ ಮಗನನ್ನು ಉಳಿಸಿಕೊಳ್ಳಲು ಸೆಣಸಾಟ ಮಾಡುವ ಕಥನ ಮಾತ್ರವಲ್ಲ; ಮನುಷ್ಯರ ನೋವು ನಲಿವುಗಳಲ್ಲಿ ಕೇವಲ ಪ್ರೀತಿ ಅಂತಃಕರಣದಿಂದ ಒದಗುವ ಲೋಕದ ಕಾರುಣ್ಯದ ಕಥನವೂ ಆಗಿದೆ.

ಇಡೀ ಕೃತಿಯಲ್ಲಿ ಇರುವ ಅನುಭವವು ಸಾವಿನಂತಹ ಕಠೋರ ಸತ್ಯದ ಮುಖಾಮುಖಿಯಲ್ಲಿ ಹುಟ್ಟುವುದರಿಂದ, ಅದರ ನಿರೂಪಣೆಯಲ್ಲಿ ಒಂದು ಬಗೆಯ ದಾರ್ಶನಿಕ ಎನ್ನಬಹುದಾದ ನೋಟಗಳಿವೆ, ಮಾತುಗಳಿವೆ. ಇದು ದುಃಖದ ಒಡಲಲ್ಲೇ ಹುಟ್ಟುವ ಅಧ್ಯಾತ್ಮ.

ಕನ್ನಡದಲ್ಲಿ ಈ ಬಗೆಯ ಕೃತಿಗಳು ಬಹಳ ಇಲ್ಲ. ನಾನು ಓದಿರುವ ಎರಡು ಕೃತಿಗಳೆಂದರೆ, ನನಗೆ ಪಾಠ ಹೇಳಿದ ಶಿಕ್ಷಕ ಸಣ್ಣರಾಮ ಅವರು (ಅಳುನುಂಗಿ ನಗುವೊಮ್ಮೆ) ಹಾಗೂ ಬೀದರಿನ ಮಿತ್ರರಾದ ಶಂಭುಲಿಂಗ ವಾಲ್ದೊಡ್ಡಿಯವರು (ಮಹಾತಾಯಿ) ತಮ್ಮತಮ್ಮ ಮಡದಿಯರ ಕ್ಯಾನ್ಸರ್ ಕಾಯಿಲೆಯೊಂದಿಗೆ, ದವಾಖಾನೆ ಮತ್ತು ಮನೆಯಲ್ಲಿ ಮಾಡಿದ ಹೋರಾಟ ಕುರಿತ ಅನುಭವ ಕಥನಗಳು. ಶ್ಯಾಮಲಾ ಅವರ ಪುಸ್ತಕವನ್ನೂ ಒಳಗೊಂಡಂತೆ ಇವೆಲ್ಲವೂ ಕೇವಲ ವೇದನೆಯ ಕಥನಗಳಾಗಿಲ್ಲ. ಸಾವನ್ನು ಸ್ವೀಕರಿಸಿದ ವ್ಯಕ್ತಿ ಬದುಕಿದ್ದಾಗ ಬಾಳಿದ ದೊಡ್ಡ ಬದುಕಿನ ಚಿತ್ರಗಳೂ ಆಗಿವೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...