Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

ಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

- Advertisement -
- Advertisement -

ನಾನು ಮುಂಬೈ ಹೋದಾಗಲೆಲ್ಲ ಅಲ್ಲಿನ ಅನೇಕ ಜೀವನೋತ್ಸಾಹದ ಮಹಿಳೆಯರನ್ನು ಕಾಣುತ್ತೇನೆ. ಇವರೆಲ್ಲರೂ ಗೃಹಿಣಿಯರು ಅಥವಾ ಮತ್ತಿತರ ಉದ್ಯೋಗದಲ್ಲಿರುವವರು. ಬರೆಹ ಅವರ ಪ್ರವೃತ್ತಿ. ಇವರಲ್ಲಿ ಅನೇಕರು ಪಿಎಚ್.ಡಿ. ಪದವಿ ಪಡೆದವರು. ಕೆಲವರು ಜಗತ್ತಿನ ಸಾಹಿತ್ಯದಿಂದ ಕನ್ನಡಕ್ಕೆ ಅಗತ್ಯವಾದ ಕೃತಿಗಳನ್ನು ಅನುವಾದ ಮಾಡಿದವರು. ಇವರಲ್ಲಿ ಸೋಮೇಶ್ವರ ಉಚ್ಚಿಲ ಮೂಲದ ಶಾಮಲಾ ಮಾಧವ ಕೂಡ ಒಬ್ಬರು. ಇವರ ಪುಸ್ತಕ ಬಿಡುಗಡೆಗೊಮ್ಮೆ ನಾನು ಮುಂಬೈ ಹೋಗಿದ್ದೆ. ಕಾರ್ಯಕ್ರಮ ಮುಗಿಸಿ ಪುಣೆಗೆ ಹೋಗಿ ಅಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಮೀರಬಾಯಿ ಕರ್ನಾಟಕಿ ಬಗ್ಗೆ ಮಾಹಿತಿ ಹುಡುಕಬೇಕಿತ್ತು. ಆಗ ಶ್ಯಾಮಲಾ ಅವರು ಪುಣೆವಾಸಿಯೂ ಸಾಫ್ಟ್‌ವೇರ್ ಇಂಜಿನಿಯರನೂ ಆದ ತಮ್ಮ ಮಗ ತುಷಾರನ ಜತೆಮಾಡಿ ನನಗೆ ಕಳಿಸಿಕೊಟ್ಟರು. ತುಷಾರ ನನ್ನನ್ನು ಫಿಲ್ಮ ಇನ್ಸ್ಟಿಟ್ಯೂಟ್‌ಗೆ ಕರೆದುಕೊಂಡು ಹೋದರು. ನಾನಲ್ಲಿ ಇದ್ದಷ್ಟೂ ದಿನ ನನಗೆ ಬಗೆಬಗೆಯ ಸಹಾಯ ನೀಡಿದರು. ನನಗೆ ನೆನಪಿರುವಂತೆ, ಅವರಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿತ್ತು. ದಾರ್ಶನಿಕ ಮನೋಭಾವವಿತ್ತು.

ಹೀಗಿರುತ್ತ ಒಂದು ದಿನ ಶ್ಯಾಮಲಾ ಅವರು ನನಗೆ ನೋವಿನಿಂದ ಪತ್ರ ಬರೆದರು: “ನನ್ನ ಮಗು ತುಷಾರನಿಗೆ ಹುಶಾರಿಲ್ಲ. ನನ್ನ ಹೃದಯ ಚಡಪಡಿಸುತ್ತಿದೆ. ಕ್ಯಾನ್ಸರಂತೆ. ಏನು ಮಾಡಲಿ ರಹಮತ್? ದಿಕ್ಕೇ ತೋಚುತ್ತಿಲ್ಲ”. ಇದಾದ ಬಳಿಕ ಅವರು ಸಾವಿನೊಂದಿಗೆ ಸೆಣಸಾಟ ಮಾಡುತ್ತಿರುವ ದಾರುಣ ಸನ್ನಿವೇಶವನ್ನು ಈಮೇಲಲ್ಲಿ ವಾಟ್ಸಾಪಿನಲ್ಲಿ ಹಂಚಿಕೊಳ್ಳುತ್ತಿದ್ದರು. ತುಷಾರ ನಮದು ಜೀವಬಿಟ್ಟ ದಿನ, ಹತಾಶೆಯಿಂದ ಎದೆ ಬಿರಿವಂತೆ ತಮ್ಮ ಶೋಕ ತೋಡಿಕೊಂಡಿದ್ದರು. ಈಗ ಅವರು ತುಷಾರನ ಆರೈಕೆಯಲ್ಲಿ ಪಟ್ಟ ಪಾಡು ಪುಸ್ತಕವಾಗಿ ಹೊರಬಂದಿದೆ. ತಾಯ ಅಳಲೆಲ್ಲವೂ ಹೆಪ್ಪುಗಟ್ಟಿದಂತೆ ಅದರೊಳಗೆ ಬಂದಿದೆ.

ಈ ಪುಸ್ತಕವನ್ನು ಕೇವಲ ಶಾಮಲಾ ಅವರು ಬರೆದಿಲ್ಲ. ಇದರಲ್ಲಿ ತುಷಾರನ ಗೆಳೆಯರಾದ ಸಂಜಯ ಮುಖರ್ಜಿ, ಪ್ರಸಾದ ನಾಯ್ಕರ ಬರೆಹಗಳಿವೆ. ಶ್ಯಾಮಲಾ ಅವರ ಗೆಳತಿ, ಕನ್ನಡ ಲೇಖಕಿ ನೇಮಿಚಂದ್ರ ಅವರ ಬರೆಹವಿದೆ. ಎಲ್ಲವೂ ತುಷಾರನ ಜೀವನ ಪ್ರೀತಿಯ ಬಗೆಗಿನ ಬರೆಹಗಳು. ಬೇನೆ ನೋವು ಸಾವಿನ ದಾರುಣತೆಯನ್ನು ಕುರಿತವು.

ಇವುಗಳಲ್ಲೆಲ್ಲ ಹೆತ್ತತಾಯಿ ಶ್ಯಾಮಲಾ ಅವರ ಬರೆಹವು ದೀರ್ಘವಾಗಿದೆ. ಅವರ ಬರೆಹದ ವಿಶೇಷತೆ ಎಂದರೆ, ತುಷಾರನ ಹುಟ್ಟು, ಬಾಲ್ಯದ ಆಟೋಟ, ತಾರುಣ್ಯದ ಚಟುವಟಿಕೆ, ಯೌವನದ ಚಿಂತನಶೀಲತೆ, ಬೇನೆಯ ಜತೆ ಮಾಡಿದ ಸೆಣಸಾಟ ಎಲ್ಲವೂ ಒಟ್ಟೊಟ್ಟಿಗೆ ಬಂದಿರುವುದು. ಇದು, ಕಾಲಾನುಕ್ರಮಣಿಕೆ ಇದ್ದೂ ಅದನ್ನು ಮುರಿದಿರುವ ವಿಶಿಷ್ಟ ಕಥನಕ್ರಮ. ಕಾಲ ಎಂದರೆ ಸಮಯ ಮಾತ್ರವಲ್ಲ, ಸಾವು ಎಂದೂ ಅರ್ಥವಿದೆಯಷ್ಟೆ. ಈ ಕಾಲಕ್ರಮವನ್ನು ಬೆರೆಸುವ ಕ್ರಮವು, ಜೀವವೊಂದು ಲೋಕಕ್ಕೆ ಆಗಮಿಸುವ ಮತ್ತು ತೆರಳುವ ನಡುವಿನ ಕಾಲದ ಬದುಕನ್ನು ಹಿಡಿಯುವುದಕ್ಕೆ ಲೇಖಕಿ ಕಂಡುಕೊಂಡಿರುವ ದಾರ್ಶನಿಕ ಕ್ರಮದಂತೆಯೂ ತೋರುವುದು.

ಇದನ್ನೂ ಓದಿ: ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಈ ಅನುಭವ ಕಥನದಲ್ಲಿ ಕಾಣುವ ವಿಶೇಷತೆ ಎಂದರೆ, ಮಹಾನಗರದ ಹೊಸ ಔದ್ಯೋಗಿಕ ಜಗತ್ತಿನಲ್ಲಿ, ಏರ್ಪಡುವ ಭಾಷಾತೀತ ಧರ್ಮಾತೀತ ಜಾತ್ಯತೀತ ಮಾನವ ಸಂಬಂಧಗಳು. ತುಷಾರನ ಗೆಳೆಯ ಗೆಳತಿಯರು, ವೈದ್ಯರು, ಕಷ್ಟಕ್ಕೆ ಮಿಡಿವ ಲೇಖಕಿಯ ಗೆಳತಿಯರು, ಶಿಕ್ಷಕರು, ಸಹಾಯಕರು- ಎಲ್ಲರೂ ಕೇವಲ ಮನುಷ್ಯರು. ಹೀಗಾಗಿ ಈ ಕೃತಿ ಬೇನೆಗೆ ಒಳಗಾಗಿ ಒಬ್ಬ ಯುವಕ ಅಕಾಲಿಕವಾಗಿ ಮೃತ್ಯುವಶವಾದ, ಅವನ ತಾಯಿ ಮಗನನ್ನು ಉಳಿಸಿಕೊಳ್ಳಲು ಸೆಣಸಾಟ ಮಾಡುವ ಕಥನ ಮಾತ್ರವಲ್ಲ; ಮನುಷ್ಯರ ನೋವು ನಲಿವುಗಳಲ್ಲಿ ಕೇವಲ ಪ್ರೀತಿ ಅಂತಃಕರಣದಿಂದ ಒದಗುವ ಲೋಕದ ಕಾರುಣ್ಯದ ಕಥನವೂ ಆಗಿದೆ.

ಇಡೀ ಕೃತಿಯಲ್ಲಿ ಇರುವ ಅನುಭವವು ಸಾವಿನಂತಹ ಕಠೋರ ಸತ್ಯದ ಮುಖಾಮುಖಿಯಲ್ಲಿ ಹುಟ್ಟುವುದರಿಂದ, ಅದರ ನಿರೂಪಣೆಯಲ್ಲಿ ಒಂದು ಬಗೆಯ ದಾರ್ಶನಿಕ ಎನ್ನಬಹುದಾದ ನೋಟಗಳಿವೆ, ಮಾತುಗಳಿವೆ. ಇದು ದುಃಖದ ಒಡಲಲ್ಲೇ ಹುಟ್ಟುವ ಅಧ್ಯಾತ್ಮ.

ಕನ್ನಡದಲ್ಲಿ ಈ ಬಗೆಯ ಕೃತಿಗಳು ಬಹಳ ಇಲ್ಲ. ನಾನು ಓದಿರುವ ಎರಡು ಕೃತಿಗಳೆಂದರೆ, ನನಗೆ ಪಾಠ ಹೇಳಿದ ಶಿಕ್ಷಕ ಸಣ್ಣರಾಮ ಅವರು (ಅಳುನುಂಗಿ ನಗುವೊಮ್ಮೆ) ಹಾಗೂ ಬೀದರಿನ ಮಿತ್ರರಾದ ಶಂಭುಲಿಂಗ ವಾಲ್ದೊಡ್ಡಿಯವರು (ಮಹಾತಾಯಿ) ತಮ್ಮತಮ್ಮ ಮಡದಿಯರ ಕ್ಯಾನ್ಸರ್ ಕಾಯಿಲೆಯೊಂದಿಗೆ, ದವಾಖಾನೆ ಮತ್ತು ಮನೆಯಲ್ಲಿ ಮಾಡಿದ ಹೋರಾಟ ಕುರಿತ ಅನುಭವ ಕಥನಗಳು. ಶ್ಯಾಮಲಾ ಅವರ ಪುಸ್ತಕವನ್ನೂ ಒಳಗೊಂಡಂತೆ ಇವೆಲ್ಲವೂ ಕೇವಲ ವೇದನೆಯ ಕಥನಗಳಾಗಿಲ್ಲ. ಸಾವನ್ನು ಸ್ವೀಕರಿಸಿದ ವ್ಯಕ್ತಿ ಬದುಕಿದ್ದಾಗ ಬಾಳಿದ ದೊಡ್ಡ ಬದುಕಿನ ಚಿತ್ರಗಳೂ ಆಗಿವೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...