Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

ಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

- Advertisement -
- Advertisement -

ನಾನು ಮುಂಬೈ ಹೋದಾಗಲೆಲ್ಲ ಅಲ್ಲಿನ ಅನೇಕ ಜೀವನೋತ್ಸಾಹದ ಮಹಿಳೆಯರನ್ನು ಕಾಣುತ್ತೇನೆ. ಇವರೆಲ್ಲರೂ ಗೃಹಿಣಿಯರು ಅಥವಾ ಮತ್ತಿತರ ಉದ್ಯೋಗದಲ್ಲಿರುವವರು. ಬರೆಹ ಅವರ ಪ್ರವೃತ್ತಿ. ಇವರಲ್ಲಿ ಅನೇಕರು ಪಿಎಚ್.ಡಿ. ಪದವಿ ಪಡೆದವರು. ಕೆಲವರು ಜಗತ್ತಿನ ಸಾಹಿತ್ಯದಿಂದ ಕನ್ನಡಕ್ಕೆ ಅಗತ್ಯವಾದ ಕೃತಿಗಳನ್ನು ಅನುವಾದ ಮಾಡಿದವರು. ಇವರಲ್ಲಿ ಸೋಮೇಶ್ವರ ಉಚ್ಚಿಲ ಮೂಲದ ಶಾಮಲಾ ಮಾಧವ ಕೂಡ ಒಬ್ಬರು. ಇವರ ಪುಸ್ತಕ ಬಿಡುಗಡೆಗೊಮ್ಮೆ ನಾನು ಮುಂಬೈ ಹೋಗಿದ್ದೆ. ಕಾರ್ಯಕ್ರಮ ಮುಗಿಸಿ ಪುಣೆಗೆ ಹೋಗಿ ಅಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಮೀರಬಾಯಿ ಕರ್ನಾಟಕಿ ಬಗ್ಗೆ ಮಾಹಿತಿ ಹುಡುಕಬೇಕಿತ್ತು. ಆಗ ಶ್ಯಾಮಲಾ ಅವರು ಪುಣೆವಾಸಿಯೂ ಸಾಫ್ಟ್‌ವೇರ್ ಇಂಜಿನಿಯರನೂ ಆದ ತಮ್ಮ ಮಗ ತುಷಾರನ ಜತೆಮಾಡಿ ನನಗೆ ಕಳಿಸಿಕೊಟ್ಟರು. ತುಷಾರ ನನ್ನನ್ನು ಫಿಲ್ಮ ಇನ್ಸ್ಟಿಟ್ಯೂಟ್‌ಗೆ ಕರೆದುಕೊಂಡು ಹೋದರು. ನಾನಲ್ಲಿ ಇದ್ದಷ್ಟೂ ದಿನ ನನಗೆ ಬಗೆಬಗೆಯ ಸಹಾಯ ನೀಡಿದರು. ನನಗೆ ನೆನಪಿರುವಂತೆ, ಅವರಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿತ್ತು. ದಾರ್ಶನಿಕ ಮನೋಭಾವವಿತ್ತು.

ಹೀಗಿರುತ್ತ ಒಂದು ದಿನ ಶ್ಯಾಮಲಾ ಅವರು ನನಗೆ ನೋವಿನಿಂದ ಪತ್ರ ಬರೆದರು: “ನನ್ನ ಮಗು ತುಷಾರನಿಗೆ ಹುಶಾರಿಲ್ಲ. ನನ್ನ ಹೃದಯ ಚಡಪಡಿಸುತ್ತಿದೆ. ಕ್ಯಾನ್ಸರಂತೆ. ಏನು ಮಾಡಲಿ ರಹಮತ್? ದಿಕ್ಕೇ ತೋಚುತ್ತಿಲ್ಲ”. ಇದಾದ ಬಳಿಕ ಅವರು ಸಾವಿನೊಂದಿಗೆ ಸೆಣಸಾಟ ಮಾಡುತ್ತಿರುವ ದಾರುಣ ಸನ್ನಿವೇಶವನ್ನು ಈಮೇಲಲ್ಲಿ ವಾಟ್ಸಾಪಿನಲ್ಲಿ ಹಂಚಿಕೊಳ್ಳುತ್ತಿದ್ದರು. ತುಷಾರ ನಮದು ಜೀವಬಿಟ್ಟ ದಿನ, ಹತಾಶೆಯಿಂದ ಎದೆ ಬಿರಿವಂತೆ ತಮ್ಮ ಶೋಕ ತೋಡಿಕೊಂಡಿದ್ದರು. ಈಗ ಅವರು ತುಷಾರನ ಆರೈಕೆಯಲ್ಲಿ ಪಟ್ಟ ಪಾಡು ಪುಸ್ತಕವಾಗಿ ಹೊರಬಂದಿದೆ. ತಾಯ ಅಳಲೆಲ್ಲವೂ ಹೆಪ್ಪುಗಟ್ಟಿದಂತೆ ಅದರೊಳಗೆ ಬಂದಿದೆ.

ಈ ಪುಸ್ತಕವನ್ನು ಕೇವಲ ಶಾಮಲಾ ಅವರು ಬರೆದಿಲ್ಲ. ಇದರಲ್ಲಿ ತುಷಾರನ ಗೆಳೆಯರಾದ ಸಂಜಯ ಮುಖರ್ಜಿ, ಪ್ರಸಾದ ನಾಯ್ಕರ ಬರೆಹಗಳಿವೆ. ಶ್ಯಾಮಲಾ ಅವರ ಗೆಳತಿ, ಕನ್ನಡ ಲೇಖಕಿ ನೇಮಿಚಂದ್ರ ಅವರ ಬರೆಹವಿದೆ. ಎಲ್ಲವೂ ತುಷಾರನ ಜೀವನ ಪ್ರೀತಿಯ ಬಗೆಗಿನ ಬರೆಹಗಳು. ಬೇನೆ ನೋವು ಸಾವಿನ ದಾರುಣತೆಯನ್ನು ಕುರಿತವು.

ಇವುಗಳಲ್ಲೆಲ್ಲ ಹೆತ್ತತಾಯಿ ಶ್ಯಾಮಲಾ ಅವರ ಬರೆಹವು ದೀರ್ಘವಾಗಿದೆ. ಅವರ ಬರೆಹದ ವಿಶೇಷತೆ ಎಂದರೆ, ತುಷಾರನ ಹುಟ್ಟು, ಬಾಲ್ಯದ ಆಟೋಟ, ತಾರುಣ್ಯದ ಚಟುವಟಿಕೆ, ಯೌವನದ ಚಿಂತನಶೀಲತೆ, ಬೇನೆಯ ಜತೆ ಮಾಡಿದ ಸೆಣಸಾಟ ಎಲ್ಲವೂ ಒಟ್ಟೊಟ್ಟಿಗೆ ಬಂದಿರುವುದು. ಇದು, ಕಾಲಾನುಕ್ರಮಣಿಕೆ ಇದ್ದೂ ಅದನ್ನು ಮುರಿದಿರುವ ವಿಶಿಷ್ಟ ಕಥನಕ್ರಮ. ಕಾಲ ಎಂದರೆ ಸಮಯ ಮಾತ್ರವಲ್ಲ, ಸಾವು ಎಂದೂ ಅರ್ಥವಿದೆಯಷ್ಟೆ. ಈ ಕಾಲಕ್ರಮವನ್ನು ಬೆರೆಸುವ ಕ್ರಮವು, ಜೀವವೊಂದು ಲೋಕಕ್ಕೆ ಆಗಮಿಸುವ ಮತ್ತು ತೆರಳುವ ನಡುವಿನ ಕಾಲದ ಬದುಕನ್ನು ಹಿಡಿಯುವುದಕ್ಕೆ ಲೇಖಕಿ ಕಂಡುಕೊಂಡಿರುವ ದಾರ್ಶನಿಕ ಕ್ರಮದಂತೆಯೂ ತೋರುವುದು.

ಇದನ್ನೂ ಓದಿ: ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಈ ಅನುಭವ ಕಥನದಲ್ಲಿ ಕಾಣುವ ವಿಶೇಷತೆ ಎಂದರೆ, ಮಹಾನಗರದ ಹೊಸ ಔದ್ಯೋಗಿಕ ಜಗತ್ತಿನಲ್ಲಿ, ಏರ್ಪಡುವ ಭಾಷಾತೀತ ಧರ್ಮಾತೀತ ಜಾತ್ಯತೀತ ಮಾನವ ಸಂಬಂಧಗಳು. ತುಷಾರನ ಗೆಳೆಯ ಗೆಳತಿಯರು, ವೈದ್ಯರು, ಕಷ್ಟಕ್ಕೆ ಮಿಡಿವ ಲೇಖಕಿಯ ಗೆಳತಿಯರು, ಶಿಕ್ಷಕರು, ಸಹಾಯಕರು- ಎಲ್ಲರೂ ಕೇವಲ ಮನುಷ್ಯರು. ಹೀಗಾಗಿ ಈ ಕೃತಿ ಬೇನೆಗೆ ಒಳಗಾಗಿ ಒಬ್ಬ ಯುವಕ ಅಕಾಲಿಕವಾಗಿ ಮೃತ್ಯುವಶವಾದ, ಅವನ ತಾಯಿ ಮಗನನ್ನು ಉಳಿಸಿಕೊಳ್ಳಲು ಸೆಣಸಾಟ ಮಾಡುವ ಕಥನ ಮಾತ್ರವಲ್ಲ; ಮನುಷ್ಯರ ನೋವು ನಲಿವುಗಳಲ್ಲಿ ಕೇವಲ ಪ್ರೀತಿ ಅಂತಃಕರಣದಿಂದ ಒದಗುವ ಲೋಕದ ಕಾರುಣ್ಯದ ಕಥನವೂ ಆಗಿದೆ.

ಇಡೀ ಕೃತಿಯಲ್ಲಿ ಇರುವ ಅನುಭವವು ಸಾವಿನಂತಹ ಕಠೋರ ಸತ್ಯದ ಮುಖಾಮುಖಿಯಲ್ಲಿ ಹುಟ್ಟುವುದರಿಂದ, ಅದರ ನಿರೂಪಣೆಯಲ್ಲಿ ಒಂದು ಬಗೆಯ ದಾರ್ಶನಿಕ ಎನ್ನಬಹುದಾದ ನೋಟಗಳಿವೆ, ಮಾತುಗಳಿವೆ. ಇದು ದುಃಖದ ಒಡಲಲ್ಲೇ ಹುಟ್ಟುವ ಅಧ್ಯಾತ್ಮ.

ಕನ್ನಡದಲ್ಲಿ ಈ ಬಗೆಯ ಕೃತಿಗಳು ಬಹಳ ಇಲ್ಲ. ನಾನು ಓದಿರುವ ಎರಡು ಕೃತಿಗಳೆಂದರೆ, ನನಗೆ ಪಾಠ ಹೇಳಿದ ಶಿಕ್ಷಕ ಸಣ್ಣರಾಮ ಅವರು (ಅಳುನುಂಗಿ ನಗುವೊಮ್ಮೆ) ಹಾಗೂ ಬೀದರಿನ ಮಿತ್ರರಾದ ಶಂಭುಲಿಂಗ ವಾಲ್ದೊಡ್ಡಿಯವರು (ಮಹಾತಾಯಿ) ತಮ್ಮತಮ್ಮ ಮಡದಿಯರ ಕ್ಯಾನ್ಸರ್ ಕಾಯಿಲೆಯೊಂದಿಗೆ, ದವಾಖಾನೆ ಮತ್ತು ಮನೆಯಲ್ಲಿ ಮಾಡಿದ ಹೋರಾಟ ಕುರಿತ ಅನುಭವ ಕಥನಗಳು. ಶ್ಯಾಮಲಾ ಅವರ ಪುಸ್ತಕವನ್ನೂ ಒಳಗೊಂಡಂತೆ ಇವೆಲ್ಲವೂ ಕೇವಲ ವೇದನೆಯ ಕಥನಗಳಾಗಿಲ್ಲ. ಸಾವನ್ನು ಸ್ವೀಕರಿಸಿದ ವ್ಯಕ್ತಿ ಬದುಕಿದ್ದಾಗ ಬಾಳಿದ ದೊಡ್ಡ ಬದುಕಿನ ಚಿತ್ರಗಳೂ ಆಗಿವೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...