Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

ಪುಸ್ತಕ ಪರಿಚಯ: ’ತುಷಾರ ಹಾರ’ವೆಂಬ ಅನುಭವ ಕಥನ

- Advertisement -
- Advertisement -

ನಾನು ಮುಂಬೈ ಹೋದಾಗಲೆಲ್ಲ ಅಲ್ಲಿನ ಅನೇಕ ಜೀವನೋತ್ಸಾಹದ ಮಹಿಳೆಯರನ್ನು ಕಾಣುತ್ತೇನೆ. ಇವರೆಲ್ಲರೂ ಗೃಹಿಣಿಯರು ಅಥವಾ ಮತ್ತಿತರ ಉದ್ಯೋಗದಲ್ಲಿರುವವರು. ಬರೆಹ ಅವರ ಪ್ರವೃತ್ತಿ. ಇವರಲ್ಲಿ ಅನೇಕರು ಪಿಎಚ್.ಡಿ. ಪದವಿ ಪಡೆದವರು. ಕೆಲವರು ಜಗತ್ತಿನ ಸಾಹಿತ್ಯದಿಂದ ಕನ್ನಡಕ್ಕೆ ಅಗತ್ಯವಾದ ಕೃತಿಗಳನ್ನು ಅನುವಾದ ಮಾಡಿದವರು. ಇವರಲ್ಲಿ ಸೋಮೇಶ್ವರ ಉಚ್ಚಿಲ ಮೂಲದ ಶಾಮಲಾ ಮಾಧವ ಕೂಡ ಒಬ್ಬರು. ಇವರ ಪುಸ್ತಕ ಬಿಡುಗಡೆಗೊಮ್ಮೆ ನಾನು ಮುಂಬೈ ಹೋಗಿದ್ದೆ. ಕಾರ್ಯಕ್ರಮ ಮುಗಿಸಿ ಪುಣೆಗೆ ಹೋಗಿ ಅಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ಅಮೀರಬಾಯಿ ಕರ್ನಾಟಕಿ ಬಗ್ಗೆ ಮಾಹಿತಿ ಹುಡುಕಬೇಕಿತ್ತು. ಆಗ ಶ್ಯಾಮಲಾ ಅವರು ಪುಣೆವಾಸಿಯೂ ಸಾಫ್ಟ್‌ವೇರ್ ಇಂಜಿನಿಯರನೂ ಆದ ತಮ್ಮ ಮಗ ತುಷಾರನ ಜತೆಮಾಡಿ ನನಗೆ ಕಳಿಸಿಕೊಟ್ಟರು. ತುಷಾರ ನನ್ನನ್ನು ಫಿಲ್ಮ ಇನ್ಸ್ಟಿಟ್ಯೂಟ್‌ಗೆ ಕರೆದುಕೊಂಡು ಹೋದರು. ನಾನಲ್ಲಿ ಇದ್ದಷ್ಟೂ ದಿನ ನನಗೆ ಬಗೆಬಗೆಯ ಸಹಾಯ ನೀಡಿದರು. ನನಗೆ ನೆನಪಿರುವಂತೆ, ಅವರಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿತ್ತು. ದಾರ್ಶನಿಕ ಮನೋಭಾವವಿತ್ತು.

ಹೀಗಿರುತ್ತ ಒಂದು ದಿನ ಶ್ಯಾಮಲಾ ಅವರು ನನಗೆ ನೋವಿನಿಂದ ಪತ್ರ ಬರೆದರು: “ನನ್ನ ಮಗು ತುಷಾರನಿಗೆ ಹುಶಾರಿಲ್ಲ. ನನ್ನ ಹೃದಯ ಚಡಪಡಿಸುತ್ತಿದೆ. ಕ್ಯಾನ್ಸರಂತೆ. ಏನು ಮಾಡಲಿ ರಹಮತ್? ದಿಕ್ಕೇ ತೋಚುತ್ತಿಲ್ಲ”. ಇದಾದ ಬಳಿಕ ಅವರು ಸಾವಿನೊಂದಿಗೆ ಸೆಣಸಾಟ ಮಾಡುತ್ತಿರುವ ದಾರುಣ ಸನ್ನಿವೇಶವನ್ನು ಈಮೇಲಲ್ಲಿ ವಾಟ್ಸಾಪಿನಲ್ಲಿ ಹಂಚಿಕೊಳ್ಳುತ್ತಿದ್ದರು. ತುಷಾರ ನಮದು ಜೀವಬಿಟ್ಟ ದಿನ, ಹತಾಶೆಯಿಂದ ಎದೆ ಬಿರಿವಂತೆ ತಮ್ಮ ಶೋಕ ತೋಡಿಕೊಂಡಿದ್ದರು. ಈಗ ಅವರು ತುಷಾರನ ಆರೈಕೆಯಲ್ಲಿ ಪಟ್ಟ ಪಾಡು ಪುಸ್ತಕವಾಗಿ ಹೊರಬಂದಿದೆ. ತಾಯ ಅಳಲೆಲ್ಲವೂ ಹೆಪ್ಪುಗಟ್ಟಿದಂತೆ ಅದರೊಳಗೆ ಬಂದಿದೆ.

ಈ ಪುಸ್ತಕವನ್ನು ಕೇವಲ ಶಾಮಲಾ ಅವರು ಬರೆದಿಲ್ಲ. ಇದರಲ್ಲಿ ತುಷಾರನ ಗೆಳೆಯರಾದ ಸಂಜಯ ಮುಖರ್ಜಿ, ಪ್ರಸಾದ ನಾಯ್ಕರ ಬರೆಹಗಳಿವೆ. ಶ್ಯಾಮಲಾ ಅವರ ಗೆಳತಿ, ಕನ್ನಡ ಲೇಖಕಿ ನೇಮಿಚಂದ್ರ ಅವರ ಬರೆಹವಿದೆ. ಎಲ್ಲವೂ ತುಷಾರನ ಜೀವನ ಪ್ರೀತಿಯ ಬಗೆಗಿನ ಬರೆಹಗಳು. ಬೇನೆ ನೋವು ಸಾವಿನ ದಾರುಣತೆಯನ್ನು ಕುರಿತವು.

ಇವುಗಳಲ್ಲೆಲ್ಲ ಹೆತ್ತತಾಯಿ ಶ್ಯಾಮಲಾ ಅವರ ಬರೆಹವು ದೀರ್ಘವಾಗಿದೆ. ಅವರ ಬರೆಹದ ವಿಶೇಷತೆ ಎಂದರೆ, ತುಷಾರನ ಹುಟ್ಟು, ಬಾಲ್ಯದ ಆಟೋಟ, ತಾರುಣ್ಯದ ಚಟುವಟಿಕೆ, ಯೌವನದ ಚಿಂತನಶೀಲತೆ, ಬೇನೆಯ ಜತೆ ಮಾಡಿದ ಸೆಣಸಾಟ ಎಲ್ಲವೂ ಒಟ್ಟೊಟ್ಟಿಗೆ ಬಂದಿರುವುದು. ಇದು, ಕಾಲಾನುಕ್ರಮಣಿಕೆ ಇದ್ದೂ ಅದನ್ನು ಮುರಿದಿರುವ ವಿಶಿಷ್ಟ ಕಥನಕ್ರಮ. ಕಾಲ ಎಂದರೆ ಸಮಯ ಮಾತ್ರವಲ್ಲ, ಸಾವು ಎಂದೂ ಅರ್ಥವಿದೆಯಷ್ಟೆ. ಈ ಕಾಲಕ್ರಮವನ್ನು ಬೆರೆಸುವ ಕ್ರಮವು, ಜೀವವೊಂದು ಲೋಕಕ್ಕೆ ಆಗಮಿಸುವ ಮತ್ತು ತೆರಳುವ ನಡುವಿನ ಕಾಲದ ಬದುಕನ್ನು ಹಿಡಿಯುವುದಕ್ಕೆ ಲೇಖಕಿ ಕಂಡುಕೊಂಡಿರುವ ದಾರ್ಶನಿಕ ಕ್ರಮದಂತೆಯೂ ತೋರುವುದು.

ಇದನ್ನೂ ಓದಿ: ಪುಸ್ತಕ ಪರಿಚಯ; ಬಿ.ಎ. ಮೊಹಿದೀನ್ ಅವರ ’ನನ್ನೊಳಗಿನ ನಾನು’

ಈ ಅನುಭವ ಕಥನದಲ್ಲಿ ಕಾಣುವ ವಿಶೇಷತೆ ಎಂದರೆ, ಮಹಾನಗರದ ಹೊಸ ಔದ್ಯೋಗಿಕ ಜಗತ್ತಿನಲ್ಲಿ, ಏರ್ಪಡುವ ಭಾಷಾತೀತ ಧರ್ಮಾತೀತ ಜಾತ್ಯತೀತ ಮಾನವ ಸಂಬಂಧಗಳು. ತುಷಾರನ ಗೆಳೆಯ ಗೆಳತಿಯರು, ವೈದ್ಯರು, ಕಷ್ಟಕ್ಕೆ ಮಿಡಿವ ಲೇಖಕಿಯ ಗೆಳತಿಯರು, ಶಿಕ್ಷಕರು, ಸಹಾಯಕರು- ಎಲ್ಲರೂ ಕೇವಲ ಮನುಷ್ಯರು. ಹೀಗಾಗಿ ಈ ಕೃತಿ ಬೇನೆಗೆ ಒಳಗಾಗಿ ಒಬ್ಬ ಯುವಕ ಅಕಾಲಿಕವಾಗಿ ಮೃತ್ಯುವಶವಾದ, ಅವನ ತಾಯಿ ಮಗನನ್ನು ಉಳಿಸಿಕೊಳ್ಳಲು ಸೆಣಸಾಟ ಮಾಡುವ ಕಥನ ಮಾತ್ರವಲ್ಲ; ಮನುಷ್ಯರ ನೋವು ನಲಿವುಗಳಲ್ಲಿ ಕೇವಲ ಪ್ರೀತಿ ಅಂತಃಕರಣದಿಂದ ಒದಗುವ ಲೋಕದ ಕಾರುಣ್ಯದ ಕಥನವೂ ಆಗಿದೆ.

ಇಡೀ ಕೃತಿಯಲ್ಲಿ ಇರುವ ಅನುಭವವು ಸಾವಿನಂತಹ ಕಠೋರ ಸತ್ಯದ ಮುಖಾಮುಖಿಯಲ್ಲಿ ಹುಟ್ಟುವುದರಿಂದ, ಅದರ ನಿರೂಪಣೆಯಲ್ಲಿ ಒಂದು ಬಗೆಯ ದಾರ್ಶನಿಕ ಎನ್ನಬಹುದಾದ ನೋಟಗಳಿವೆ, ಮಾತುಗಳಿವೆ. ಇದು ದುಃಖದ ಒಡಲಲ್ಲೇ ಹುಟ್ಟುವ ಅಧ್ಯಾತ್ಮ.

ಕನ್ನಡದಲ್ಲಿ ಈ ಬಗೆಯ ಕೃತಿಗಳು ಬಹಳ ಇಲ್ಲ. ನಾನು ಓದಿರುವ ಎರಡು ಕೃತಿಗಳೆಂದರೆ, ನನಗೆ ಪಾಠ ಹೇಳಿದ ಶಿಕ್ಷಕ ಸಣ್ಣರಾಮ ಅವರು (ಅಳುನುಂಗಿ ನಗುವೊಮ್ಮೆ) ಹಾಗೂ ಬೀದರಿನ ಮಿತ್ರರಾದ ಶಂಭುಲಿಂಗ ವಾಲ್ದೊಡ್ಡಿಯವರು (ಮಹಾತಾಯಿ) ತಮ್ಮತಮ್ಮ ಮಡದಿಯರ ಕ್ಯಾನ್ಸರ್ ಕಾಯಿಲೆಯೊಂದಿಗೆ, ದವಾಖಾನೆ ಮತ್ತು ಮನೆಯಲ್ಲಿ ಮಾಡಿದ ಹೋರಾಟ ಕುರಿತ ಅನುಭವ ಕಥನಗಳು. ಶ್ಯಾಮಲಾ ಅವರ ಪುಸ್ತಕವನ್ನೂ ಒಳಗೊಂಡಂತೆ ಇವೆಲ್ಲವೂ ಕೇವಲ ವೇದನೆಯ ಕಥನಗಳಾಗಿಲ್ಲ. ಸಾವನ್ನು ಸ್ವೀಕರಿಸಿದ ವ್ಯಕ್ತಿ ಬದುಕಿದ್ದಾಗ ಬಾಳಿದ ದೊಡ್ಡ ಬದುಕಿನ ಚಿತ್ರಗಳೂ ಆಗಿವೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...