Homeಮುಖಪುಟಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

- Advertisement -
- Advertisement -

ಇತ್ತೀಚಿಗೆ ಎನ್‌ಸಿಇಆರ್‌ಟಿಯ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳಿಂದ ಸೃಷ್ಟಿಯಾದ ವಿವಾದವು ಒಂದು ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಭಾರತವನ್ನು ಪ್ರಜಾಪ್ರಭುತ್ವದ ಜನನಿ ಎಂದು ಸಾಬೀತುಪಡಿಸುವ ಅತ್ಯುತ್ಸಾಹದಲ್ಲಿ, ಈ ಸರಕಾರ, ಪ್ರಜಾಪ್ರಭುತ್ವವನ್ನು ಕೊಲೆಗೈದ ಹೊಸ ಮಾದರಿಯ ಜನನಿ ಭಾರತ ಎಂದು ಸಾಬೀತುಪಡಿಸುತ್ತಿದೆಯೇ? ಪಠ್ಯಪುಸ್ತಕಗಳಲ್ಲಿ ಯಾವ ರೀತಿಯಲ್ಲಿ ಯಾವ ಪ್ರಕಾರ ಹಾಗೂ ಯಾವ ನೀತಿಯಿಂದ ಕತ್ತರಿ ಹಾಕಲಾಗಿದೆಯೆಂದರೆ ಈ ಕತ್ತರಿ ಪ್ರಯೋಗಗಳು ಮೇಲೆ ಹೇಳಿದ ಅನುಮಾನವನ್ನು ಗಟ್ಟಿಗೊಳಿಸುತ್ತವೆ. ರಾಜಕೀಯ ಶಾಸ್ತ್ರದ ಪುಸ್ತಕಗಳಲ್ಲಿ ಮಾಡಲಾದ ಬದಲಾವಣೆಗಳು ಭಾರತೀಯ ಪ್ರಜಾಪ್ರಭುತ್ವ ಕುಸಿಯುತ್ತಿರುವ ಬಗ್ಗೆ ಆತ್ಮವಿಶ್ವಾಸದ ಚಿಹ್ನೆಯಾಗಿವೆ.

ಇಲ್ಲಿ ನಾನು ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳ ಮೇಲೆ ವಿಶೇಷ ಲಕ್ಷ್ಯ ನೀಡುತ್ತಿದ್ದೇನೆ. ಇತಿಹಾಸ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳು ಎಲ್ಲರ ಗಮನ ಸೆಳೆದಿವೆ ಹಾಗೂ ಇತಿಹಾಸಕಾರರು ವಿಸ್ತಾರವಾಗಿ ಚರ್ಚೆ ನಡೆಸಿದ್ದಾರೆ. ಎನ್‌ಸಿಇಆರ್‌ಟಿಯದ್ದೇ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳ ಬಗ್ಗೆ ಅಷ್ಟೊಂದು ಚರ್ಚೆ ಆಗಿಲ್ಲ. ನನಗೆ ಇದರಲ್ಲಿ ವಿಶೇಷ ಆಸಕ್ತಿ ಹೊಂದಿರಲು ಇನ್ನೊಂದು ಕಾರಣ, ಪ್ರೊ ಸುಹಾಸ್ ಪಳಶೀಕರ್ ಮತ್ತು ನನಗೆ 9, 10, 11 ಹಾಗೂ 12ನೆಯ ತರಗತಿಯ ರಾಜಕೀಯ ಶಾಸ್ತ್ರದ ಪುಸ್ತಕಗಳ ಮುಖ್ಯ ಸಲಹಾಕಾರರ ಹೊಣೆಗಾರಿಕೆ ನೀಡಲಾಗಿದೆ. ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಂಬರುವ ತಲೆಮಾರಿಗೆ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಯ ಬಗ್ಗೆ ಎಂತಹ ಶಿಕ್ಷಣ ನೀಡಬೇಕು, ವಿದ್ಯಾರ್ಥಿಗಳಿಗೆ ರಾಜಕೀಯದಲ್ಲಿ ಹೇಗೆ ಆಸಕ್ತಿ ಕೆರಳಿಸಬೇಕು, ಹೇಗೆ ನಮ್ಮ ಪಠ್ಯಪುಸ್ತಕಗಳು ಆಡಳಿತದಲ್ಲಿರುವ ಪಕ್ಷದ ಅಥವಾ ಅದರ ವಿಚಾರಧಾರೆಯ ವಾಹಕವಾಗದೇ, ಪ್ರಜಾಪ್ರಭುತ್ವದ ಮತ್ತು ಸಾಂವಿಧಾನಿಕ ಮೌಲ್ಯಗಳ ವಾಹಕಗಳಾಗಬಲ್ಲವು ಎಂಬುದರ ಬಗ್ಗೆ ಯೋಚಿಸುವುದರಲ್ಲಿಯೇ ನನ್ನ ಜೀವನದ ಎರಡು ವರ್ಷಗಳನ್ನು ನಾನು ಕಳೆದಿದ್ದೇನೆ.

ರಾಜಕೀಯ ಶಾಸ್ತ್ರದ ಬಗ್ಗೆಯಂತೂ, ಈ ಪಠ್ಯಪುಸ್ತಕಗಳಲ್ಲಿ ರಾಜಕೀಯ ನಿಷ್ಪಕ್ಷಪಾತದ ನಿಯಮ ಪಾಲಿಸುತ್ತ, ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ತೊಂದರೆ ಆಗುವಂತಹ ಅನೇಕ ಸತ್ಯಗಳನ್ನು ಹೇಳಿದ್ದೇವೆ ಎಂದು ನಾನು ವಿಶ್ವಾಸದಿಂದ ನುಡಿಯಬಲ್ಲೆ. 12ನೆಯ ತರಗತಿಯ ಪಠ್ಯಪುಸ್ತಕದಲ್ಲಂತೂ ಇಡೀ ಒಂದು ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೇರ ಪದಗಳಲ್ಲಿ ನೀಡಲಾಗಿತ್ತು. ಮೊದಲ ಬಾರಿ ಭಾರತೀಯ ಜನಸಂಘಕ್ಕೆ ಪಠ್ಯಪುಸ್ತಕದಲ್ಲಿ ಜಾಗ ಸಿಕ್ಕಿತು, ಅದರೊಂದಿಗೆ ನಕ್ಸಲ್ ಚಳವಳಿ ಬಗ್ಗೆಯೂ ಪಠ್ಯಪುಸ್ತಕಗಳಲ್ಲಿ ಉಲ್ಲೇಖ ಕಾಣಿಸಿಕೊಂಡಿತು. ಗುಜರಾತಿನ ದಂಗೆಗಳಲ್ಲಿ ಆದ ಮುಸ್ಲಿಂ ವಿರೋಧಿ ಹಿಂಸೆಯ ಬಗ್ಗೆ ಉಲ್ಲೇಖವಿದ್ದರೆ, 1984ರಲ್ಲಿ ದೆಹಲಿಯಲ್ಲಿ ಸಿಖ್ಖರ ಮಾರಣಹೋಮದ ಉಲ್ಲೇಖವೂ ಇತ್ತು. ಒಂದು ಆರೋಗ್ಯವಂತ ಮತ್ತು ಆತ್ಮವಿಶ್ವಾಸದಿಂದ ಕೂಡಿದ ಪ್ರಜಾಪ್ರಭುತ್ವವು, ಬೆಳಕಿನಿಂದ ಕೂಡಿದ ಮತ್ತು ಕತ್ತಲೆಯಾವರಿಸಿದ ತನ್ನ ಬಗೆಗಿನ ಎರಡೂ ಅಂಶಗಳ ಬಗ್ಗೆ ಮಾತನಾಡಬಲ್ಲದು; ಆಡಳಿತದಲ್ಲಿರುವ ಶಕ್ತಿಗಳನ್ನು ಮತ್ತು ವಿಚಾರಗಳನ್ನು ಹೊರತುಪಡಿಸಿ ವಿರೋಧಿ ಶಕ್ತಿಗಳ ಬಗ್ಗೆಯೂ ಮಾತನಾಡಬಲ್ಲದು ಎಂಬ ವಿಶ್ವಾಸದೊಂದಿಗೆ ಈ ಪಠ್ಯಪುಸ್ತಕಗಳನ್ನು ರೂಪಿಸಲಾಗಿತ್ತು.

ಇದನ್ನೂ ಓದಿ: ಅಸ್ಪೃಶ್ಯ, ಅಸಹಾಯಕ ಲೋಕಕ್ಕೆ ಅಕ್ಷರ ಕಲಿಸಿದ ಸಾವಿತ್ರಮ್ಮನನ್ನೇ ಪಠ್ಯಪುಸ್ತಕದಿಂದ ಹೊರಗಿಟ್ಟ ಕಾಲದಲ್ಲಿ ಒಂದು ಸ್ಮರಣೆ

ಈ ಪಠ್ಯಪುಸ್ತಕಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿರುವ ಕತ್ತರಿ ಪ್ರಯೋಗದಿಂದ, ಇವುಗಳಲ್ಲಿದ್ದ ಆತ್ಮವಿಶ್ವಾಸದ ಚಹರೆಯನ್ನು ತಿರುಚಲಾಗಿದೆ. ಕಳೆದ ವಾರ ಎನ್‌ಸಿಇಆರ್‌ಟಿಯು ಮೊದಲು ಘೋಷಿಸಿದ ಬದಲಾವಣೆಗಳಷ್ಟೇ ಅಲ್ಲದೆ, ಇನ್ನೂ ಅನೇಕ ಅಘೋಷಿತ ರೂಪದಲ್ಲಿ ಈ ಪುಸ್ತಕಗಳಲ್ಲಿ ಹತ್ತುಹಲವು ಬದಲಾವಣೆಗಳನ್ನು ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಉದಾಹರಣೆಗೆ ಮಹಾತ್ಮ ಗಾಂಧಿಯ ಹತ್ಯೆಯ ನಂತರ ಆಗಿನ ಗೃಹ ಸಚಿವ ಸರದಾರ್ ಪಟೇಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ನಿರ್ಬಂಧ ಹೇರಿದ್ದರು ಎಂಬ ತಥ್ಯವು ಕಾಣೆಯಾಗಿದೆ. ಒಂದು ವೇಳೆ ಈ ಪುಟ್ಟ ದ್ರೋಹವನ್ನು ನಿರ್ಲಕ್ಷಿಸಿದರೂ, ಪಠ್ಯಪುಸ್ತಕಗಳ ಬದಲಾವಣೆಗಳ ಬಗ್ಗೆ ಒಂದು ಗಂಭೀರವಾದ ಪ್ರಶ್ನೆ ಉದ್ಭವಿಸುತ್ತದೆ; ಈ ಪಠ್ಯಪುಸ್ತಕಗಳ ಲೇಖಕರ ಅಭಿಪ್ರಾಯ ತೆಗೆದುಕೊಳ್ಳದೇ ಅವುಗಳಲ್ಲಿ ಬದಲಾವಣೆ ಮಾಡುವುದು ನ್ಯಾಯೋಚಿತವೇ? ಅಂದಹಾಗೆ ಇಂದಿಗೂ ಈ ಪಠ್ಯಪುಸ್ತಕಗಳಲ್ಲಿ ನನ್ನ ಹೆಸರು ಮುಖ್ಯ ಸಲಹಾಕಾರರು ಎಂಬ ರೂಪದಲ್ಲಿ ಪ್ರಕಟವಾಗುತ್ತಿದೆ; ಕಳೆದ ಒಂಬತ್ತು ವರ್ಷಗಳಲ್ಲಿ ನನ್ನ ಅಥವಾ ಪಠ್ಯಪುಸ್ತಕ ಸಮಿತಿಯ ಇತರ ಸದಸ್ಯರು ಅಥವಾ ಸಲಹಾಕಾರರಿಂದ ಪಠ್ಯಗಳಲ್ಲಿ ಮಾಡುತ್ತಿರುವ ಬದಲಾವಣೆಗಳ ಬಗ್ಗೆ ಎಂದೂ ಅಭಿಪ್ರಾಯ ಪಡೆದುಕೊಂಡಿಲ್ಲ. ಯಾವ ಪುಸ್ತಕಗಳನ್ನು ಬರೆಯುವುದರಲ್ಲಿ, ದೇಶದ ಹಲವಾರು ಅಗ್ರಗಣ್ಯ ರಾಜಕೀಯಶಾಸ್ತ್ರಜ್ಞರು ಆಳವಾದ ಪರಾಮರ್ಶೆ ಮಾಡಿ, ಪ್ರತಿಯೊಂದು ವಿಷಯ, ಪ್ರತಿಯೊಂದು ಅಂಶ, ಪ್ರತಿಯೊಂದು ಕಾಗುಣಿತವನ್ನು ಅನೇಕ ಬಾರಿ ಪರಿಶೀಲಿಸಿ ರಚಿಸಲಾಗಿದೆಯೋ, ಇಂತಹ ಪುಸ್ತಕಗಳನ್ನು ಒಂದೇ ಏಟಿನಲ್ಲಿ ಕೆಲವು ಅಜ್ಞಾತ ಜನರ ಸಮಿತಿಯ ಮೂಲಕ, ಯಾವುದೇ ಕಾರಣ ನೀಡದೇ ಬದಲಾವಣೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯದ ಬಗ್ಗೆ ಯಾವ ಸೂಚನೆ ನೀಡುತ್ತದೆ?

ಬದಲಾವಣೆಯ ಪ್ರಕ್ರಿಯೆಯನ್ನು ಹೊರತುಪಡಿಸಿ, ಪಠ್ಯಗಳಲ್ಲಿ ಆದ ಬದಲಾವಣೆಯ ವಿವರಗಳನ್ನು ನೋಡಿದರೆ ಅದು ಕೂಡ ಪ್ರಜಾಪ್ರಭುತ್ವದ ಬಗ್ಗೆ ಇನ್ನೂ ಆಳವಾದ ಮತ್ತು ಗಂಭೀರವಾದ ಆತಂಕ ಸೃಷ್ಟಿಸುತ್ತದೆ. ರಾಜಕೀಯ ಶಾಸ್ತ್ರದಲ್ಲಿ ಯಾವ ಅಂಶಗಳನ್ನು ತೆಗೆದುಹಾಕಲಾಗಿದೆಯೋ, ಅವುಗಳು ನೇರಾನೇರ ಆಡಳಿತಾರೂಢ ಪಕ್ಷ ಮತ್ತು ಅದರ ವಿಚಾರಧಾರೆಯ ಪ್ರತಿಬಿಂಬವಾಗಿವೆ. ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದಾದರೂ ದೇಶಕ್ಕೆ ಎಷ್ಟು ಘಾತಕವಾಗಬಲ್ಲದು ಎಂಬುದನ್ನು ಹೇಳಲು ಶ್ರೀಲಂಕಾ ಮತ್ತು ಬೆಲ್ಜಿಯಮ್ ದೇಶಗಳ ಉದಾಹರಣೆ ನೀಡಿದ್ದ, ಲೋಕತಂತ್ರ ಮತ್ತು ವೈವಿಧ್ಯದ ಬಗ್ಗೆ 10ನೆಯ ತರಗತಿಗೆ ಇದ್ದ ಅಧ್ಯಾಯವನ್ನು ತೆಗೆದುಹಾಕಲಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳನ್ನು ಹೊರತುಪಡಿಸಿ ಆಗುವ ಬದಲಾವಣೆಗಳ ಬಗ್ಗೆ ಒತ್ತು ನೀಡುವ 10 ಮತ್ತು 12ನೆಯ ಪಠ್ಯಪುಸ್ತಕಗಳಲ್ಲಿ ಇದ್ದ ಜನಾಂದೋಲನಗಳ ಅಧ್ಯಾಯವನ್ನು ತೆಗೆದುಹಾಕಲಾಗಿದೆ. ಗುಜರಾತಿನ ದಂಗೆಗಳ ಬಗ್ಗೆ ಇದ್ದ ಉಲ್ಲೇಖವನ್ನು ತೆಗೆದುಹಾಕಲಾಗಿದೆ ಆದರೆ ಸಿಕ್ಖರ ಮಾರಣಹೋಮದ ಭಾಗವನ್ನು ಹಾಗೇ ಉಳಿಸಿಕೊಳ್ಳಲಾಗಿದೆ. ಅದರೊಂದಿಗೆ ತುರ್ತು ಪರಿಸ್ಥಿತಿಯ ಔಪಚಾರಿಕ ವರ್ಣನೆ ಇದೆ ಆದರೆ ಆ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ನ್ಯಾಯಾಂಗ ಮತ್ತು ಮಾಧ್ಯಮದ ನಾಚಿಕೆಗೇಡಿನ ಪಾತ್ರದ ಬಗ್ಗೆ ಇದ್ದ ಭಾಗವನ್ನು ತೆಗೆದುಹಾಕಲಾಗಿದೆ. ಹಾಗಾಗಿ ಇಂದಿನ ಸರಕಾರ ಯಾವ ಪ್ರಶ್ನೆಗಳಿಂದ ಹೆದರಿಕೊಂಡಿದೆ, ಯಾವ ವಿಷಯಗಳ ಬಗ್ಗೆ ಮೌನವಾಗಿರಲು ಬಯಸುತ್ತದೆ ಎಂಬುದು ಈ ಕತ್ತರಿ ಪ್ರಯೋಗದಿಂದ ಸ್ಪಷ್ಟವಾಗುತ್ತದೆ.

ಯಾವ ವಿಷಯಗಳ ಬಗ್ಗೆ ಪಠ್ಯಪುಸ್ತಕಗಳು ಮೌನವಾಗಿರುತ್ತವೋ, ಆ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ಮರೆತುಬಿಡುತ್ತಾರೆ ಅಂತೇನಿಲ್ಲ. ಯಾವುದೇ ಪ್ರಜಾಪ್ರಭುತ್ವದಲ್ಲಿ ಜನರ ರಾಜಕೀಯ ಚಿಂತನೆ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳ ಆಧಾರದ ಮೇಲೆ ಸೃಷ್ಟಿಯಾಗುವುದಿಲ್ಲ; ವಿಶೇಷವಾಗಿ ಎಲ್ಲಿ ಪ್ರಜಾಪ್ರಭುತ್ವವನ್ನು ಮುಗಿಸುವ ಪ್ರಯತ್ನ ನಡೆದಿದೆಯೋ, ಎಲ್ಲಿ ಆಡಳಿತದಲ್ಲಿರುವ ಶಕ್ತಿಗಳು ಹೆದರಿಕೊಂಡಿರುತ್ತವೋ ಅಲ್ಲಂತೂ ಖಂಡಿತ ಇದು ಸಾಧ್ಯವಾಗುವುದಿಲ್ಲ. ಇಂತಹ ದೇಶಗಳಲ್ಲಿ ಆಡಳಿತವರ್ಗ ಸುಳ್ಳು ಹೇಳುತ್ತಿದೆ ಎಂದು ಜನರಿಗೆ ತಿಳಿದಿರುತ್ತದೆ ಹಾಗೂ ಸತ್ಯವನ್ನು ಅರಿಯಲು ತನ್ನದೇ ಆದ ರೀತಿಗಳನ್ನು ಹುಡುಕಿಕೊಳ್ಳುತ್ತಾರೆ. ಹಾಗಾಗಿಯೇ ರಾಜಕೀಯ ಶಾಸ್ತ್ರದಲ್ಲಿ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳಿಂದ ಆಡಳಿತದಲ್ಲಿರುವ ಪಕ್ಷ ಮತ್ತು ವಿಚಾರಧಾರೆಗೆ ಲಾಭವಾಗುತ್ತದೆ ಎಂಬುದು ಸತ್ಯವಲ್ಲ. ಆದರೆ ಈ ಕಸರತ್ತಿನಿಂದ ಭಾರತೀಯ ಪ್ರಜಾಪ್ರಭುತ್ವ ತನ್ನ ಹಾಗೂ ವಿಶ್ವದ ದೃಷ್ಟಿಯಲ್ಲಿ ಒಂದೆರಡು ಮೆಟ್ಟಿಲು ಕೆಳಗೆ ಕುಸಿದಿರುವುದಂತೂ ಖಂಡಿತ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...