Homeಮುಖಪುಟಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

- Advertisement -
- Advertisement -

ಇತ್ತೀಚಿಗೆ ಎನ್‌ಸಿಇಆರ್‌ಟಿಯ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳಿಂದ ಸೃಷ್ಟಿಯಾದ ವಿವಾದವು ಒಂದು ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಭಾರತವನ್ನು ಪ್ರಜಾಪ್ರಭುತ್ವದ ಜನನಿ ಎಂದು ಸಾಬೀತುಪಡಿಸುವ ಅತ್ಯುತ್ಸಾಹದಲ್ಲಿ, ಈ ಸರಕಾರ, ಪ್ರಜಾಪ್ರಭುತ್ವವನ್ನು ಕೊಲೆಗೈದ ಹೊಸ ಮಾದರಿಯ ಜನನಿ ಭಾರತ ಎಂದು ಸಾಬೀತುಪಡಿಸುತ್ತಿದೆಯೇ? ಪಠ್ಯಪುಸ್ತಕಗಳಲ್ಲಿ ಯಾವ ರೀತಿಯಲ್ಲಿ ಯಾವ ಪ್ರಕಾರ ಹಾಗೂ ಯಾವ ನೀತಿಯಿಂದ ಕತ್ತರಿ ಹಾಕಲಾಗಿದೆಯೆಂದರೆ ಈ ಕತ್ತರಿ ಪ್ರಯೋಗಗಳು ಮೇಲೆ ಹೇಳಿದ ಅನುಮಾನವನ್ನು ಗಟ್ಟಿಗೊಳಿಸುತ್ತವೆ. ರಾಜಕೀಯ ಶಾಸ್ತ್ರದ ಪುಸ್ತಕಗಳಲ್ಲಿ ಮಾಡಲಾದ ಬದಲಾವಣೆಗಳು ಭಾರತೀಯ ಪ್ರಜಾಪ್ರಭುತ್ವ ಕುಸಿಯುತ್ತಿರುವ ಬಗ್ಗೆ ಆತ್ಮವಿಶ್ವಾಸದ ಚಿಹ್ನೆಯಾಗಿವೆ.

ಇಲ್ಲಿ ನಾನು ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳ ಮೇಲೆ ವಿಶೇಷ ಲಕ್ಷ್ಯ ನೀಡುತ್ತಿದ್ದೇನೆ. ಇತಿಹಾಸ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳು ಎಲ್ಲರ ಗಮನ ಸೆಳೆದಿವೆ ಹಾಗೂ ಇತಿಹಾಸಕಾರರು ವಿಸ್ತಾರವಾಗಿ ಚರ್ಚೆ ನಡೆಸಿದ್ದಾರೆ. ಎನ್‌ಸಿಇಆರ್‌ಟಿಯದ್ದೇ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳ ಬಗ್ಗೆ ಅಷ್ಟೊಂದು ಚರ್ಚೆ ಆಗಿಲ್ಲ. ನನಗೆ ಇದರಲ್ಲಿ ವಿಶೇಷ ಆಸಕ್ತಿ ಹೊಂದಿರಲು ಇನ್ನೊಂದು ಕಾರಣ, ಪ್ರೊ ಸುಹಾಸ್ ಪಳಶೀಕರ್ ಮತ್ತು ನನಗೆ 9, 10, 11 ಹಾಗೂ 12ನೆಯ ತರಗತಿಯ ರಾಜಕೀಯ ಶಾಸ್ತ್ರದ ಪುಸ್ತಕಗಳ ಮುಖ್ಯ ಸಲಹಾಕಾರರ ಹೊಣೆಗಾರಿಕೆ ನೀಡಲಾಗಿದೆ. ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಂಬರುವ ತಲೆಮಾರಿಗೆ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಯ ಬಗ್ಗೆ ಎಂತಹ ಶಿಕ್ಷಣ ನೀಡಬೇಕು, ವಿದ್ಯಾರ್ಥಿಗಳಿಗೆ ರಾಜಕೀಯದಲ್ಲಿ ಹೇಗೆ ಆಸಕ್ತಿ ಕೆರಳಿಸಬೇಕು, ಹೇಗೆ ನಮ್ಮ ಪಠ್ಯಪುಸ್ತಕಗಳು ಆಡಳಿತದಲ್ಲಿರುವ ಪಕ್ಷದ ಅಥವಾ ಅದರ ವಿಚಾರಧಾರೆಯ ವಾಹಕವಾಗದೇ, ಪ್ರಜಾಪ್ರಭುತ್ವದ ಮತ್ತು ಸಾಂವಿಧಾನಿಕ ಮೌಲ್ಯಗಳ ವಾಹಕಗಳಾಗಬಲ್ಲವು ಎಂಬುದರ ಬಗ್ಗೆ ಯೋಚಿಸುವುದರಲ್ಲಿಯೇ ನನ್ನ ಜೀವನದ ಎರಡು ವರ್ಷಗಳನ್ನು ನಾನು ಕಳೆದಿದ್ದೇನೆ.

ರಾಜಕೀಯ ಶಾಸ್ತ್ರದ ಬಗ್ಗೆಯಂತೂ, ಈ ಪಠ್ಯಪುಸ್ತಕಗಳಲ್ಲಿ ರಾಜಕೀಯ ನಿಷ್ಪಕ್ಷಪಾತದ ನಿಯಮ ಪಾಲಿಸುತ್ತ, ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ತೊಂದರೆ ಆಗುವಂತಹ ಅನೇಕ ಸತ್ಯಗಳನ್ನು ಹೇಳಿದ್ದೇವೆ ಎಂದು ನಾನು ವಿಶ್ವಾಸದಿಂದ ನುಡಿಯಬಲ್ಲೆ. 12ನೆಯ ತರಗತಿಯ ಪಠ್ಯಪುಸ್ತಕದಲ್ಲಂತೂ ಇಡೀ ಒಂದು ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೇರ ಪದಗಳಲ್ಲಿ ನೀಡಲಾಗಿತ್ತು. ಮೊದಲ ಬಾರಿ ಭಾರತೀಯ ಜನಸಂಘಕ್ಕೆ ಪಠ್ಯಪುಸ್ತಕದಲ್ಲಿ ಜಾಗ ಸಿಕ್ಕಿತು, ಅದರೊಂದಿಗೆ ನಕ್ಸಲ್ ಚಳವಳಿ ಬಗ್ಗೆಯೂ ಪಠ್ಯಪುಸ್ತಕಗಳಲ್ಲಿ ಉಲ್ಲೇಖ ಕಾಣಿಸಿಕೊಂಡಿತು. ಗುಜರಾತಿನ ದಂಗೆಗಳಲ್ಲಿ ಆದ ಮುಸ್ಲಿಂ ವಿರೋಧಿ ಹಿಂಸೆಯ ಬಗ್ಗೆ ಉಲ್ಲೇಖವಿದ್ದರೆ, 1984ರಲ್ಲಿ ದೆಹಲಿಯಲ್ಲಿ ಸಿಖ್ಖರ ಮಾರಣಹೋಮದ ಉಲ್ಲೇಖವೂ ಇತ್ತು. ಒಂದು ಆರೋಗ್ಯವಂತ ಮತ್ತು ಆತ್ಮವಿಶ್ವಾಸದಿಂದ ಕೂಡಿದ ಪ್ರಜಾಪ್ರಭುತ್ವವು, ಬೆಳಕಿನಿಂದ ಕೂಡಿದ ಮತ್ತು ಕತ್ತಲೆಯಾವರಿಸಿದ ತನ್ನ ಬಗೆಗಿನ ಎರಡೂ ಅಂಶಗಳ ಬಗ್ಗೆ ಮಾತನಾಡಬಲ್ಲದು; ಆಡಳಿತದಲ್ಲಿರುವ ಶಕ್ತಿಗಳನ್ನು ಮತ್ತು ವಿಚಾರಗಳನ್ನು ಹೊರತುಪಡಿಸಿ ವಿರೋಧಿ ಶಕ್ತಿಗಳ ಬಗ್ಗೆಯೂ ಮಾತನಾಡಬಲ್ಲದು ಎಂಬ ವಿಶ್ವಾಸದೊಂದಿಗೆ ಈ ಪಠ್ಯಪುಸ್ತಕಗಳನ್ನು ರೂಪಿಸಲಾಗಿತ್ತು.

ಇದನ್ನೂ ಓದಿ: ಅಸ್ಪೃಶ್ಯ, ಅಸಹಾಯಕ ಲೋಕಕ್ಕೆ ಅಕ್ಷರ ಕಲಿಸಿದ ಸಾವಿತ್ರಮ್ಮನನ್ನೇ ಪಠ್ಯಪುಸ್ತಕದಿಂದ ಹೊರಗಿಟ್ಟ ಕಾಲದಲ್ಲಿ ಒಂದು ಸ್ಮರಣೆ

ಈ ಪಠ್ಯಪುಸ್ತಕಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿರುವ ಕತ್ತರಿ ಪ್ರಯೋಗದಿಂದ, ಇವುಗಳಲ್ಲಿದ್ದ ಆತ್ಮವಿಶ್ವಾಸದ ಚಹರೆಯನ್ನು ತಿರುಚಲಾಗಿದೆ. ಕಳೆದ ವಾರ ಎನ್‌ಸಿಇಆರ್‌ಟಿಯು ಮೊದಲು ಘೋಷಿಸಿದ ಬದಲಾವಣೆಗಳಷ್ಟೇ ಅಲ್ಲದೆ, ಇನ್ನೂ ಅನೇಕ ಅಘೋಷಿತ ರೂಪದಲ್ಲಿ ಈ ಪುಸ್ತಕಗಳಲ್ಲಿ ಹತ್ತುಹಲವು ಬದಲಾವಣೆಗಳನ್ನು ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಉದಾಹರಣೆಗೆ ಮಹಾತ್ಮ ಗಾಂಧಿಯ ಹತ್ಯೆಯ ನಂತರ ಆಗಿನ ಗೃಹ ಸಚಿವ ಸರದಾರ್ ಪಟೇಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ನಿರ್ಬಂಧ ಹೇರಿದ್ದರು ಎಂಬ ತಥ್ಯವು ಕಾಣೆಯಾಗಿದೆ. ಒಂದು ವೇಳೆ ಈ ಪುಟ್ಟ ದ್ರೋಹವನ್ನು ನಿರ್ಲಕ್ಷಿಸಿದರೂ, ಪಠ್ಯಪುಸ್ತಕಗಳ ಬದಲಾವಣೆಗಳ ಬಗ್ಗೆ ಒಂದು ಗಂಭೀರವಾದ ಪ್ರಶ್ನೆ ಉದ್ಭವಿಸುತ್ತದೆ; ಈ ಪಠ್ಯಪುಸ್ತಕಗಳ ಲೇಖಕರ ಅಭಿಪ್ರಾಯ ತೆಗೆದುಕೊಳ್ಳದೇ ಅವುಗಳಲ್ಲಿ ಬದಲಾವಣೆ ಮಾಡುವುದು ನ್ಯಾಯೋಚಿತವೇ? ಅಂದಹಾಗೆ ಇಂದಿಗೂ ಈ ಪಠ್ಯಪುಸ್ತಕಗಳಲ್ಲಿ ನನ್ನ ಹೆಸರು ಮುಖ್ಯ ಸಲಹಾಕಾರರು ಎಂಬ ರೂಪದಲ್ಲಿ ಪ್ರಕಟವಾಗುತ್ತಿದೆ; ಕಳೆದ ಒಂಬತ್ತು ವರ್ಷಗಳಲ್ಲಿ ನನ್ನ ಅಥವಾ ಪಠ್ಯಪುಸ್ತಕ ಸಮಿತಿಯ ಇತರ ಸದಸ್ಯರು ಅಥವಾ ಸಲಹಾಕಾರರಿಂದ ಪಠ್ಯಗಳಲ್ಲಿ ಮಾಡುತ್ತಿರುವ ಬದಲಾವಣೆಗಳ ಬಗ್ಗೆ ಎಂದೂ ಅಭಿಪ್ರಾಯ ಪಡೆದುಕೊಂಡಿಲ್ಲ. ಯಾವ ಪುಸ್ತಕಗಳನ್ನು ಬರೆಯುವುದರಲ್ಲಿ, ದೇಶದ ಹಲವಾರು ಅಗ್ರಗಣ್ಯ ರಾಜಕೀಯಶಾಸ್ತ್ರಜ್ಞರು ಆಳವಾದ ಪರಾಮರ್ಶೆ ಮಾಡಿ, ಪ್ರತಿಯೊಂದು ವಿಷಯ, ಪ್ರತಿಯೊಂದು ಅಂಶ, ಪ್ರತಿಯೊಂದು ಕಾಗುಣಿತವನ್ನು ಅನೇಕ ಬಾರಿ ಪರಿಶೀಲಿಸಿ ರಚಿಸಲಾಗಿದೆಯೋ, ಇಂತಹ ಪುಸ್ತಕಗಳನ್ನು ಒಂದೇ ಏಟಿನಲ್ಲಿ ಕೆಲವು ಅಜ್ಞಾತ ಜನರ ಸಮಿತಿಯ ಮೂಲಕ, ಯಾವುದೇ ಕಾರಣ ನೀಡದೇ ಬದಲಾವಣೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯದ ಬಗ್ಗೆ ಯಾವ ಸೂಚನೆ ನೀಡುತ್ತದೆ?

ಬದಲಾವಣೆಯ ಪ್ರಕ್ರಿಯೆಯನ್ನು ಹೊರತುಪಡಿಸಿ, ಪಠ್ಯಗಳಲ್ಲಿ ಆದ ಬದಲಾವಣೆಯ ವಿವರಗಳನ್ನು ನೋಡಿದರೆ ಅದು ಕೂಡ ಪ್ರಜಾಪ್ರಭುತ್ವದ ಬಗ್ಗೆ ಇನ್ನೂ ಆಳವಾದ ಮತ್ತು ಗಂಭೀರವಾದ ಆತಂಕ ಸೃಷ್ಟಿಸುತ್ತದೆ. ರಾಜಕೀಯ ಶಾಸ್ತ್ರದಲ್ಲಿ ಯಾವ ಅಂಶಗಳನ್ನು ತೆಗೆದುಹಾಕಲಾಗಿದೆಯೋ, ಅವುಗಳು ನೇರಾನೇರ ಆಡಳಿತಾರೂಢ ಪಕ್ಷ ಮತ್ತು ಅದರ ವಿಚಾರಧಾರೆಯ ಪ್ರತಿಬಿಂಬವಾಗಿವೆ. ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದಾದರೂ ದೇಶಕ್ಕೆ ಎಷ್ಟು ಘಾತಕವಾಗಬಲ್ಲದು ಎಂಬುದನ್ನು ಹೇಳಲು ಶ್ರೀಲಂಕಾ ಮತ್ತು ಬೆಲ್ಜಿಯಮ್ ದೇಶಗಳ ಉದಾಹರಣೆ ನೀಡಿದ್ದ, ಲೋಕತಂತ್ರ ಮತ್ತು ವೈವಿಧ್ಯದ ಬಗ್ಗೆ 10ನೆಯ ತರಗತಿಗೆ ಇದ್ದ ಅಧ್ಯಾಯವನ್ನು ತೆಗೆದುಹಾಕಲಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳನ್ನು ಹೊರತುಪಡಿಸಿ ಆಗುವ ಬದಲಾವಣೆಗಳ ಬಗ್ಗೆ ಒತ್ತು ನೀಡುವ 10 ಮತ್ತು 12ನೆಯ ಪಠ್ಯಪುಸ್ತಕಗಳಲ್ಲಿ ಇದ್ದ ಜನಾಂದೋಲನಗಳ ಅಧ್ಯಾಯವನ್ನು ತೆಗೆದುಹಾಕಲಾಗಿದೆ. ಗುಜರಾತಿನ ದಂಗೆಗಳ ಬಗ್ಗೆ ಇದ್ದ ಉಲ್ಲೇಖವನ್ನು ತೆಗೆದುಹಾಕಲಾಗಿದೆ ಆದರೆ ಸಿಕ್ಖರ ಮಾರಣಹೋಮದ ಭಾಗವನ್ನು ಹಾಗೇ ಉಳಿಸಿಕೊಳ್ಳಲಾಗಿದೆ. ಅದರೊಂದಿಗೆ ತುರ್ತು ಪರಿಸ್ಥಿತಿಯ ಔಪಚಾರಿಕ ವರ್ಣನೆ ಇದೆ ಆದರೆ ಆ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ನ್ಯಾಯಾಂಗ ಮತ್ತು ಮಾಧ್ಯಮದ ನಾಚಿಕೆಗೇಡಿನ ಪಾತ್ರದ ಬಗ್ಗೆ ಇದ್ದ ಭಾಗವನ್ನು ತೆಗೆದುಹಾಕಲಾಗಿದೆ. ಹಾಗಾಗಿ ಇಂದಿನ ಸರಕಾರ ಯಾವ ಪ್ರಶ್ನೆಗಳಿಂದ ಹೆದರಿಕೊಂಡಿದೆ, ಯಾವ ವಿಷಯಗಳ ಬಗ್ಗೆ ಮೌನವಾಗಿರಲು ಬಯಸುತ್ತದೆ ಎಂಬುದು ಈ ಕತ್ತರಿ ಪ್ರಯೋಗದಿಂದ ಸ್ಪಷ್ಟವಾಗುತ್ತದೆ.

ಯಾವ ವಿಷಯಗಳ ಬಗ್ಗೆ ಪಠ್ಯಪುಸ್ತಕಗಳು ಮೌನವಾಗಿರುತ್ತವೋ, ಆ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ಮರೆತುಬಿಡುತ್ತಾರೆ ಅಂತೇನಿಲ್ಲ. ಯಾವುದೇ ಪ್ರಜಾಪ್ರಭುತ್ವದಲ್ಲಿ ಜನರ ರಾಜಕೀಯ ಚಿಂತನೆ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳ ಆಧಾರದ ಮೇಲೆ ಸೃಷ್ಟಿಯಾಗುವುದಿಲ್ಲ; ವಿಶೇಷವಾಗಿ ಎಲ್ಲಿ ಪ್ರಜಾಪ್ರಭುತ್ವವನ್ನು ಮುಗಿಸುವ ಪ್ರಯತ್ನ ನಡೆದಿದೆಯೋ, ಎಲ್ಲಿ ಆಡಳಿತದಲ್ಲಿರುವ ಶಕ್ತಿಗಳು ಹೆದರಿಕೊಂಡಿರುತ್ತವೋ ಅಲ್ಲಂತೂ ಖಂಡಿತ ಇದು ಸಾಧ್ಯವಾಗುವುದಿಲ್ಲ. ಇಂತಹ ದೇಶಗಳಲ್ಲಿ ಆಡಳಿತವರ್ಗ ಸುಳ್ಳು ಹೇಳುತ್ತಿದೆ ಎಂದು ಜನರಿಗೆ ತಿಳಿದಿರುತ್ತದೆ ಹಾಗೂ ಸತ್ಯವನ್ನು ಅರಿಯಲು ತನ್ನದೇ ಆದ ರೀತಿಗಳನ್ನು ಹುಡುಕಿಕೊಳ್ಳುತ್ತಾರೆ. ಹಾಗಾಗಿಯೇ ರಾಜಕೀಯ ಶಾಸ್ತ್ರದಲ್ಲಿ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳಿಂದ ಆಡಳಿತದಲ್ಲಿರುವ ಪಕ್ಷ ಮತ್ತು ವಿಚಾರಧಾರೆಗೆ ಲಾಭವಾಗುತ್ತದೆ ಎಂಬುದು ಸತ್ಯವಲ್ಲ. ಆದರೆ ಈ ಕಸರತ್ತಿನಿಂದ ಭಾರತೀಯ ಪ್ರಜಾಪ್ರಭುತ್ವ ತನ್ನ ಹಾಗೂ ವಿಶ್ವದ ದೃಷ್ಟಿಯಲ್ಲಿ ಒಂದೆರಡು ಮೆಟ್ಟಿಲು ಕೆಳಗೆ ಕುಸಿದಿರುವುದಂತೂ ಖಂಡಿತ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...