Homeಮುಖಪುಟಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

- Advertisement -
- Advertisement -

ಇತ್ತೀಚಿಗೆ ಎನ್‌ಸಿಇಆರ್‌ಟಿಯ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳಿಂದ ಸೃಷ್ಟಿಯಾದ ವಿವಾದವು ಒಂದು ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಭಾರತವನ್ನು ಪ್ರಜಾಪ್ರಭುತ್ವದ ಜನನಿ ಎಂದು ಸಾಬೀತುಪಡಿಸುವ ಅತ್ಯುತ್ಸಾಹದಲ್ಲಿ, ಈ ಸರಕಾರ, ಪ್ರಜಾಪ್ರಭುತ್ವವನ್ನು ಕೊಲೆಗೈದ ಹೊಸ ಮಾದರಿಯ ಜನನಿ ಭಾರತ ಎಂದು ಸಾಬೀತುಪಡಿಸುತ್ತಿದೆಯೇ? ಪಠ್ಯಪುಸ್ತಕಗಳಲ್ಲಿ ಯಾವ ರೀತಿಯಲ್ಲಿ ಯಾವ ಪ್ರಕಾರ ಹಾಗೂ ಯಾವ ನೀತಿಯಿಂದ ಕತ್ತರಿ ಹಾಕಲಾಗಿದೆಯೆಂದರೆ ಈ ಕತ್ತರಿ ಪ್ರಯೋಗಗಳು ಮೇಲೆ ಹೇಳಿದ ಅನುಮಾನವನ್ನು ಗಟ್ಟಿಗೊಳಿಸುತ್ತವೆ. ರಾಜಕೀಯ ಶಾಸ್ತ್ರದ ಪುಸ್ತಕಗಳಲ್ಲಿ ಮಾಡಲಾದ ಬದಲಾವಣೆಗಳು ಭಾರತೀಯ ಪ್ರಜಾಪ್ರಭುತ್ವ ಕುಸಿಯುತ್ತಿರುವ ಬಗ್ಗೆ ಆತ್ಮವಿಶ್ವಾಸದ ಚಿಹ್ನೆಯಾಗಿವೆ.

ಇಲ್ಲಿ ನಾನು ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳ ಮೇಲೆ ವಿಶೇಷ ಲಕ್ಷ್ಯ ನೀಡುತ್ತಿದ್ದೇನೆ. ಇತಿಹಾಸ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳು ಎಲ್ಲರ ಗಮನ ಸೆಳೆದಿವೆ ಹಾಗೂ ಇತಿಹಾಸಕಾರರು ವಿಸ್ತಾರವಾಗಿ ಚರ್ಚೆ ನಡೆಸಿದ್ದಾರೆ. ಎನ್‌ಸಿಇಆರ್‌ಟಿಯದ್ದೇ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳ ಬಗ್ಗೆ ಅಷ್ಟೊಂದು ಚರ್ಚೆ ಆಗಿಲ್ಲ. ನನಗೆ ಇದರಲ್ಲಿ ವಿಶೇಷ ಆಸಕ್ತಿ ಹೊಂದಿರಲು ಇನ್ನೊಂದು ಕಾರಣ, ಪ್ರೊ ಸುಹಾಸ್ ಪಳಶೀಕರ್ ಮತ್ತು ನನಗೆ 9, 10, 11 ಹಾಗೂ 12ನೆಯ ತರಗತಿಯ ರಾಜಕೀಯ ಶಾಸ್ತ್ರದ ಪುಸ್ತಕಗಳ ಮುಖ್ಯ ಸಲಹಾಕಾರರ ಹೊಣೆಗಾರಿಕೆ ನೀಡಲಾಗಿದೆ. ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಂಬರುವ ತಲೆಮಾರಿಗೆ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಯ ಬಗ್ಗೆ ಎಂತಹ ಶಿಕ್ಷಣ ನೀಡಬೇಕು, ವಿದ್ಯಾರ್ಥಿಗಳಿಗೆ ರಾಜಕೀಯದಲ್ಲಿ ಹೇಗೆ ಆಸಕ್ತಿ ಕೆರಳಿಸಬೇಕು, ಹೇಗೆ ನಮ್ಮ ಪಠ್ಯಪುಸ್ತಕಗಳು ಆಡಳಿತದಲ್ಲಿರುವ ಪಕ್ಷದ ಅಥವಾ ಅದರ ವಿಚಾರಧಾರೆಯ ವಾಹಕವಾಗದೇ, ಪ್ರಜಾಪ್ರಭುತ್ವದ ಮತ್ತು ಸಾಂವಿಧಾನಿಕ ಮೌಲ್ಯಗಳ ವಾಹಕಗಳಾಗಬಲ್ಲವು ಎಂಬುದರ ಬಗ್ಗೆ ಯೋಚಿಸುವುದರಲ್ಲಿಯೇ ನನ್ನ ಜೀವನದ ಎರಡು ವರ್ಷಗಳನ್ನು ನಾನು ಕಳೆದಿದ್ದೇನೆ.

ರಾಜಕೀಯ ಶಾಸ್ತ್ರದ ಬಗ್ಗೆಯಂತೂ, ಈ ಪಠ್ಯಪುಸ್ತಕಗಳಲ್ಲಿ ರಾಜಕೀಯ ನಿಷ್ಪಕ್ಷಪಾತದ ನಿಯಮ ಪಾಲಿಸುತ್ತ, ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ತೊಂದರೆ ಆಗುವಂತಹ ಅನೇಕ ಸತ್ಯಗಳನ್ನು ಹೇಳಿದ್ದೇವೆ ಎಂದು ನಾನು ವಿಶ್ವಾಸದಿಂದ ನುಡಿಯಬಲ್ಲೆ. 12ನೆಯ ತರಗತಿಯ ಪಠ್ಯಪುಸ್ತಕದಲ್ಲಂತೂ ಇಡೀ ಒಂದು ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೇರ ಪದಗಳಲ್ಲಿ ನೀಡಲಾಗಿತ್ತು. ಮೊದಲ ಬಾರಿ ಭಾರತೀಯ ಜನಸಂಘಕ್ಕೆ ಪಠ್ಯಪುಸ್ತಕದಲ್ಲಿ ಜಾಗ ಸಿಕ್ಕಿತು, ಅದರೊಂದಿಗೆ ನಕ್ಸಲ್ ಚಳವಳಿ ಬಗ್ಗೆಯೂ ಪಠ್ಯಪುಸ್ತಕಗಳಲ್ಲಿ ಉಲ್ಲೇಖ ಕಾಣಿಸಿಕೊಂಡಿತು. ಗುಜರಾತಿನ ದಂಗೆಗಳಲ್ಲಿ ಆದ ಮುಸ್ಲಿಂ ವಿರೋಧಿ ಹಿಂಸೆಯ ಬಗ್ಗೆ ಉಲ್ಲೇಖವಿದ್ದರೆ, 1984ರಲ್ಲಿ ದೆಹಲಿಯಲ್ಲಿ ಸಿಖ್ಖರ ಮಾರಣಹೋಮದ ಉಲ್ಲೇಖವೂ ಇತ್ತು. ಒಂದು ಆರೋಗ್ಯವಂತ ಮತ್ತು ಆತ್ಮವಿಶ್ವಾಸದಿಂದ ಕೂಡಿದ ಪ್ರಜಾಪ್ರಭುತ್ವವು, ಬೆಳಕಿನಿಂದ ಕೂಡಿದ ಮತ್ತು ಕತ್ತಲೆಯಾವರಿಸಿದ ತನ್ನ ಬಗೆಗಿನ ಎರಡೂ ಅಂಶಗಳ ಬಗ್ಗೆ ಮಾತನಾಡಬಲ್ಲದು; ಆಡಳಿತದಲ್ಲಿರುವ ಶಕ್ತಿಗಳನ್ನು ಮತ್ತು ವಿಚಾರಗಳನ್ನು ಹೊರತುಪಡಿಸಿ ವಿರೋಧಿ ಶಕ್ತಿಗಳ ಬಗ್ಗೆಯೂ ಮಾತನಾಡಬಲ್ಲದು ಎಂಬ ವಿಶ್ವಾಸದೊಂದಿಗೆ ಈ ಪಠ್ಯಪುಸ್ತಕಗಳನ್ನು ರೂಪಿಸಲಾಗಿತ್ತು.

ಇದನ್ನೂ ಓದಿ: ಅಸ್ಪೃಶ್ಯ, ಅಸಹಾಯಕ ಲೋಕಕ್ಕೆ ಅಕ್ಷರ ಕಲಿಸಿದ ಸಾವಿತ್ರಮ್ಮನನ್ನೇ ಪಠ್ಯಪುಸ್ತಕದಿಂದ ಹೊರಗಿಟ್ಟ ಕಾಲದಲ್ಲಿ ಒಂದು ಸ್ಮರಣೆ

ಈ ಪಠ್ಯಪುಸ್ತಕಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿರುವ ಕತ್ತರಿ ಪ್ರಯೋಗದಿಂದ, ಇವುಗಳಲ್ಲಿದ್ದ ಆತ್ಮವಿಶ್ವಾಸದ ಚಹರೆಯನ್ನು ತಿರುಚಲಾಗಿದೆ. ಕಳೆದ ವಾರ ಎನ್‌ಸಿಇಆರ್‌ಟಿಯು ಮೊದಲು ಘೋಷಿಸಿದ ಬದಲಾವಣೆಗಳಷ್ಟೇ ಅಲ್ಲದೆ, ಇನ್ನೂ ಅನೇಕ ಅಘೋಷಿತ ರೂಪದಲ್ಲಿ ಈ ಪುಸ್ತಕಗಳಲ್ಲಿ ಹತ್ತುಹಲವು ಬದಲಾವಣೆಗಳನ್ನು ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಉದಾಹರಣೆಗೆ ಮಹಾತ್ಮ ಗಾಂಧಿಯ ಹತ್ಯೆಯ ನಂತರ ಆಗಿನ ಗೃಹ ಸಚಿವ ಸರದಾರ್ ಪಟೇಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ನಿರ್ಬಂಧ ಹೇರಿದ್ದರು ಎಂಬ ತಥ್ಯವು ಕಾಣೆಯಾಗಿದೆ. ಒಂದು ವೇಳೆ ಈ ಪುಟ್ಟ ದ್ರೋಹವನ್ನು ನಿರ್ಲಕ್ಷಿಸಿದರೂ, ಪಠ್ಯಪುಸ್ತಕಗಳ ಬದಲಾವಣೆಗಳ ಬಗ್ಗೆ ಒಂದು ಗಂಭೀರವಾದ ಪ್ರಶ್ನೆ ಉದ್ಭವಿಸುತ್ತದೆ; ಈ ಪಠ್ಯಪುಸ್ತಕಗಳ ಲೇಖಕರ ಅಭಿಪ್ರಾಯ ತೆಗೆದುಕೊಳ್ಳದೇ ಅವುಗಳಲ್ಲಿ ಬದಲಾವಣೆ ಮಾಡುವುದು ನ್ಯಾಯೋಚಿತವೇ? ಅಂದಹಾಗೆ ಇಂದಿಗೂ ಈ ಪಠ್ಯಪುಸ್ತಕಗಳಲ್ಲಿ ನನ್ನ ಹೆಸರು ಮುಖ್ಯ ಸಲಹಾಕಾರರು ಎಂಬ ರೂಪದಲ್ಲಿ ಪ್ರಕಟವಾಗುತ್ತಿದೆ; ಕಳೆದ ಒಂಬತ್ತು ವರ್ಷಗಳಲ್ಲಿ ನನ್ನ ಅಥವಾ ಪಠ್ಯಪುಸ್ತಕ ಸಮಿತಿಯ ಇತರ ಸದಸ್ಯರು ಅಥವಾ ಸಲಹಾಕಾರರಿಂದ ಪಠ್ಯಗಳಲ್ಲಿ ಮಾಡುತ್ತಿರುವ ಬದಲಾವಣೆಗಳ ಬಗ್ಗೆ ಎಂದೂ ಅಭಿಪ್ರಾಯ ಪಡೆದುಕೊಂಡಿಲ್ಲ. ಯಾವ ಪುಸ್ತಕಗಳನ್ನು ಬರೆಯುವುದರಲ್ಲಿ, ದೇಶದ ಹಲವಾರು ಅಗ್ರಗಣ್ಯ ರಾಜಕೀಯಶಾಸ್ತ್ರಜ್ಞರು ಆಳವಾದ ಪರಾಮರ್ಶೆ ಮಾಡಿ, ಪ್ರತಿಯೊಂದು ವಿಷಯ, ಪ್ರತಿಯೊಂದು ಅಂಶ, ಪ್ರತಿಯೊಂದು ಕಾಗುಣಿತವನ್ನು ಅನೇಕ ಬಾರಿ ಪರಿಶೀಲಿಸಿ ರಚಿಸಲಾಗಿದೆಯೋ, ಇಂತಹ ಪುಸ್ತಕಗಳನ್ನು ಒಂದೇ ಏಟಿನಲ್ಲಿ ಕೆಲವು ಅಜ್ಞಾತ ಜನರ ಸಮಿತಿಯ ಮೂಲಕ, ಯಾವುದೇ ಕಾರಣ ನೀಡದೇ ಬದಲಾವಣೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯದ ಬಗ್ಗೆ ಯಾವ ಸೂಚನೆ ನೀಡುತ್ತದೆ?

ಬದಲಾವಣೆಯ ಪ್ರಕ್ರಿಯೆಯನ್ನು ಹೊರತುಪಡಿಸಿ, ಪಠ್ಯಗಳಲ್ಲಿ ಆದ ಬದಲಾವಣೆಯ ವಿವರಗಳನ್ನು ನೋಡಿದರೆ ಅದು ಕೂಡ ಪ್ರಜಾಪ್ರಭುತ್ವದ ಬಗ್ಗೆ ಇನ್ನೂ ಆಳವಾದ ಮತ್ತು ಗಂಭೀರವಾದ ಆತಂಕ ಸೃಷ್ಟಿಸುತ್ತದೆ. ರಾಜಕೀಯ ಶಾಸ್ತ್ರದಲ್ಲಿ ಯಾವ ಅಂಶಗಳನ್ನು ತೆಗೆದುಹಾಕಲಾಗಿದೆಯೋ, ಅವುಗಳು ನೇರಾನೇರ ಆಡಳಿತಾರೂಢ ಪಕ್ಷ ಮತ್ತು ಅದರ ವಿಚಾರಧಾರೆಯ ಪ್ರತಿಬಿಂಬವಾಗಿವೆ. ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಮಾಡುವುದು ಯಾವುದಾದರೂ ದೇಶಕ್ಕೆ ಎಷ್ಟು ಘಾತಕವಾಗಬಲ್ಲದು ಎಂಬುದನ್ನು ಹೇಳಲು ಶ್ರೀಲಂಕಾ ಮತ್ತು ಬೆಲ್ಜಿಯಮ್ ದೇಶಗಳ ಉದಾಹರಣೆ ನೀಡಿದ್ದ, ಲೋಕತಂತ್ರ ಮತ್ತು ವೈವಿಧ್ಯದ ಬಗ್ಗೆ 10ನೆಯ ತರಗತಿಗೆ ಇದ್ದ ಅಧ್ಯಾಯವನ್ನು ತೆಗೆದುಹಾಕಲಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳನ್ನು ಹೊರತುಪಡಿಸಿ ಆಗುವ ಬದಲಾವಣೆಗಳ ಬಗ್ಗೆ ಒತ್ತು ನೀಡುವ 10 ಮತ್ತು 12ನೆಯ ಪಠ್ಯಪುಸ್ತಕಗಳಲ್ಲಿ ಇದ್ದ ಜನಾಂದೋಲನಗಳ ಅಧ್ಯಾಯವನ್ನು ತೆಗೆದುಹಾಕಲಾಗಿದೆ. ಗುಜರಾತಿನ ದಂಗೆಗಳ ಬಗ್ಗೆ ಇದ್ದ ಉಲ್ಲೇಖವನ್ನು ತೆಗೆದುಹಾಕಲಾಗಿದೆ ಆದರೆ ಸಿಕ್ಖರ ಮಾರಣಹೋಮದ ಭಾಗವನ್ನು ಹಾಗೇ ಉಳಿಸಿಕೊಳ್ಳಲಾಗಿದೆ. ಅದರೊಂದಿಗೆ ತುರ್ತು ಪರಿಸ್ಥಿತಿಯ ಔಪಚಾರಿಕ ವರ್ಣನೆ ಇದೆ ಆದರೆ ಆ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ನ್ಯಾಯಾಂಗ ಮತ್ತು ಮಾಧ್ಯಮದ ನಾಚಿಕೆಗೇಡಿನ ಪಾತ್ರದ ಬಗ್ಗೆ ಇದ್ದ ಭಾಗವನ್ನು ತೆಗೆದುಹಾಕಲಾಗಿದೆ. ಹಾಗಾಗಿ ಇಂದಿನ ಸರಕಾರ ಯಾವ ಪ್ರಶ್ನೆಗಳಿಂದ ಹೆದರಿಕೊಂಡಿದೆ, ಯಾವ ವಿಷಯಗಳ ಬಗ್ಗೆ ಮೌನವಾಗಿರಲು ಬಯಸುತ್ತದೆ ಎಂಬುದು ಈ ಕತ್ತರಿ ಪ್ರಯೋಗದಿಂದ ಸ್ಪಷ್ಟವಾಗುತ್ತದೆ.

ಯಾವ ವಿಷಯಗಳ ಬಗ್ಗೆ ಪಠ್ಯಪುಸ್ತಕಗಳು ಮೌನವಾಗಿರುತ್ತವೋ, ಆ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ಮರೆತುಬಿಡುತ್ತಾರೆ ಅಂತೇನಿಲ್ಲ. ಯಾವುದೇ ಪ್ರಜಾಪ್ರಭುತ್ವದಲ್ಲಿ ಜನರ ರಾಜಕೀಯ ಚಿಂತನೆ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕಗಳ ಆಧಾರದ ಮೇಲೆ ಸೃಷ್ಟಿಯಾಗುವುದಿಲ್ಲ; ವಿಶೇಷವಾಗಿ ಎಲ್ಲಿ ಪ್ರಜಾಪ್ರಭುತ್ವವನ್ನು ಮುಗಿಸುವ ಪ್ರಯತ್ನ ನಡೆದಿದೆಯೋ, ಎಲ್ಲಿ ಆಡಳಿತದಲ್ಲಿರುವ ಶಕ್ತಿಗಳು ಹೆದರಿಕೊಂಡಿರುತ್ತವೋ ಅಲ್ಲಂತೂ ಖಂಡಿತ ಇದು ಸಾಧ್ಯವಾಗುವುದಿಲ್ಲ. ಇಂತಹ ದೇಶಗಳಲ್ಲಿ ಆಡಳಿತವರ್ಗ ಸುಳ್ಳು ಹೇಳುತ್ತಿದೆ ಎಂದು ಜನರಿಗೆ ತಿಳಿದಿರುತ್ತದೆ ಹಾಗೂ ಸತ್ಯವನ್ನು ಅರಿಯಲು ತನ್ನದೇ ಆದ ರೀತಿಗಳನ್ನು ಹುಡುಕಿಕೊಳ್ಳುತ್ತಾರೆ. ಹಾಗಾಗಿಯೇ ರಾಜಕೀಯ ಶಾಸ್ತ್ರದಲ್ಲಿ ಪಠ್ಯಪುಸ್ತಕಗಳಲ್ಲಿ ಆದ ಬದಲಾವಣೆಗಳಿಂದ ಆಡಳಿತದಲ್ಲಿರುವ ಪಕ್ಷ ಮತ್ತು ವಿಚಾರಧಾರೆಗೆ ಲಾಭವಾಗುತ್ತದೆ ಎಂಬುದು ಸತ್ಯವಲ್ಲ. ಆದರೆ ಈ ಕಸರತ್ತಿನಿಂದ ಭಾರತೀಯ ಪ್ರಜಾಪ್ರಭುತ್ವ ತನ್ನ ಹಾಗೂ ವಿಶ್ವದ ದೃಷ್ಟಿಯಲ್ಲಿ ಒಂದೆರಡು ಮೆಟ್ಟಿಲು ಕೆಳಗೆ ಕುಸಿದಿರುವುದಂತೂ ಖಂಡಿತ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...