Homeಅಂಕಣಗಳುಪುಸ್ತಕ ಪರಿಚಯ; 'ನೀಲವ್ವ': ಆಗುವಿಕೆಯನ್ನು ತೋರುವ ಕತೆಗಳು

ಪುಸ್ತಕ ಪರಿಚಯ; ‘ನೀಲವ್ವ’: ಆಗುವಿಕೆಯನ್ನು ತೋರುವ ಕತೆಗಳು

- Advertisement -
- Advertisement -

’ನೀಲವ್ವ’ ಸಂಕಲನದ ಕತೆಗಳು ಒಂದು ಸಹಜ ಮಾನವ ಸಂಬಂಧ, ಜೀವಸಂಬಂಧಕ್ಕೂ ಎಡೆಯಿಲ್ಲದಿರುವ ಬದುಕಿನ ವಿಕಾರವನ್ನು ಚಿತ್ರಿಸುತ್ತಲೇ, ಇದಕ್ಕೆ ಮದ್ದರೆಯುವ ಜೀವಸೆಲೆಯನ್ನು ಹುಡುಕುತ್ತಾ ಹೋಗುತ್ತದೆ. ’ನೀಲಿ’ ಎನ್ನುವುದು ಅರಿವು ಮತ್ತು ಎಚ್ಚರ ಸಂಕೇತದಂತೆ ಕಾಣುತ್ತದೆ. ಇಲ್ಲಿನ ಕತೆಗಳಿಗೆ, ನೇರ ಪ್ರತಿರೋಧಕ್ಕಿಂತ ಹೆಚ್ಚಾಗಿ ಆತ್ಮಸಾಕ್ಷಿಯನ್ನು ಕಲಕುವ ಗುಣವಿದೆ. ಬದಲಾವಣೆ, ಕ್ರಾಂತಿಯ ದಾರಿಯ ಹಾಗೆಯೇ ನಿರಂತರ ಎಚ್ಚರದ, ಸಾವಧಾನದ ಹಾದಿಯಿದೆ. ಈ ಹಾದಿಯಲ್ಲಿ ನೋವಿದೆ, ಆಕ್ರೋಶ ಇದೆ, ಎಚ್ಚರ ಇದೆ, ವಿವೇಕ ಇದೆ, ಬದಲಾಗಬಲ್ಲದೆಂಬ ಭರವಸೆ ಇದೆ. ‘ನೀಲವ್ವ’ ಸಂಕಲನದ ಕತೆಗಳು ನಮ್ಮನ್ನು ಆವರಿಸಿಬಿಡುವುದು ಹೀಗೇ.

ಇಲ್ಲಿ ಜಡೆಪ್ಪ, ಹುಲುಗ, ಸುಂಕ, ಭರಮಪ್ಪನ ಮಗ, ಉಮಾಶಂಕರ್ ಮುಂತಾದ ಪಾತ್ರಗಳು ತಾವು ಅನುಭವಿಸುತ್ತಿರುವ ಅಪಮಾನ, ಹಸಿವು, ನೋವುಗಳಿಂದ ಅನೇಕ ಸವಾಲುಗಳಿಗೆ ಎದುರಾಗುತ್ತಾ ಹೊಸಬದುಕಿನತ್ತ ಮುಖಮಾಡುತ್ತವೆ. ಇದು ಅವರ ವೈಯಕ್ತಿಕ ಬಿಡುಗಡೆಯ ಹಾದಿಯಷ್ಟೇ ಅಲ್ಲ ಅಥವಾ ಕೇವಲ ಅವರ ಸಮುದಾಯದ ಬಿಡುಗಡೆಯ ದಾರಿಯಷ್ಟೇ ಅಲ್ಲ; ಬದಲಿಗೆ ಒಟ್ಟು ಸಮಾಜವೇ ತನಗಂಟಿದ ಕ್ರೌರ್ಯದಿಂದ ಮುಕ್ತಗೊಳ್ಳುವ ದಾರಿಯೂ ಆಗಿದೆ. ‘ಒಂದು ಹೆಜ್ಜೆ’ ಕತೆಯಲ್ಲಿ ಬರುವ ಈಶ್ವರ್ ಸರ್, ‘ತೆರೆಮರೆಯ ಯೋಧ’ದ ದಿನೇಶ್, ‘ದೇವರಬಾವಿ’ಯ ವೈದ್ಯ ಇವರೆಲ್ಲ ತಮ್ಮನ್ನು ಕವಿದುಕೊಂಡಿದ್ದ ಮೌಢ್ಯದ ಪೊರೆ ಹರಿದು ಮಿಡಿಯುವುದು ಇದನ್ನು ಸಾಬೀತುಪಡಿಸುತ್ತದೆ. ‘ನೀಲವ್ವ’ಳ ಪ್ರಖರ ನ್ಯಾಯಪ್ರಜ್ಞೆ, ದೌರ್ಜನ್ಯವನ್ನು ಎದುರಾಗಬೇಕಾದ ಬಗೆಯನ್ನು ಕಾಣಿಸುವ ರೀತಿ ವಿಶಿಷ್ಟವಾಗಿದೆ. ಹೀಗಾಗಿ ಇಲ್ಲಿನ ಕತೆಗಳು ಚಲನೆಯನ್ನು, ಆಗುತ್ತಿರುವ ಬಗೆಯನ್ನು ಹಿಡಿದಿಡುವ ಕತೆಗಳಾಗಿ ನಮ್ಮೊಳಗನ್ನೂ ಕಲಕಿ ಪ್ರಶ್ನಿಸಿ ಜೊತೆಗೆ ಒಯ್ಯುತ್ತವೆ.

ಬದಲಾಗುತ್ತಿರುವ ಪರಿಸರದಲ್ಲಿ ಶೋಷಣೆಯ ಆಯಾಮಗಳೂ ಬದಲಾಗಿರುವುದನ್ನು ಇಲ್ಲಿನ ಕೆಲವು ಕತೆಗಳು ಸೂಕ್ಷ್ಮವಾಗಿ ಹಿಡಿದಿಟ್ಟಿವೆ. ’ಒಂದು ಹೆಜ್ಜೆ’ ಕತೆಯ ಉಮಾಶಂಕರ್, ವಿದ್ಯೆ, ಉದ್ಯೋಗ ಗಳಿಸುವ ಮೂಲಕ ಹಿಂದಿನ ತಲೆಮಾರಿಗಿಂತ ಭಿನ್ನವಾಗಿದ್ದಾನೆ. ಜೊತೆಗೆ ಅದೇ ತಾರತಮ್ಯ ಹೊಸ ರೂಪದಲ್ಲಿ ಅವನನ್ನು ಹಿಂಡುತ್ತಿದೆ. ಇದನ್ನು ತನ್ನದೇ ಆದ ರೀತಿಯಲ್ಲಿ ಎದುರಿಸುವ ಉಮಾಶಂಕರ್ ಹಾಗೂ ಅವನ ತಾಯಿಯ ನಡೆ ನಾವು ಈಗ ತಾರತಮ್ಯದ ನೆಲೆಗಳನ್ನು ಹೊಸ ಬಗೆಯಲ್ಲಿ ಎದುರಾಗಬೇಕು ಎನ್ನುವುದನ್ನು ಸೂಚಿಸುವಂತಿದೆ. ಶೋಷಕರ ಹೊಸ ಮುಖವಾಡಗಳಂತೆಯೇ ಶೋಷಣೆಯನ್ನು ರಮ್ಯಗೊಳಿಸುವ ಪರಿಭಾಷೆಯೂ ನಮ್ಮ ನಡುವೆ ಇದೆ. ‘ತೆರೆಮರೆಯ ಯೋಧ’ ಕತೆಯ ಕೊನೆಯಲ್ಲಿ ಯೋಧ ದಿನೇಶ್ ಪೌರಕಾರ್ಮಿಕನಾದ ಭರಮಪ್ಪನನ್ನು ‘ಕಾಣದ ಶತ್ರುಗಳನ್ನು ನಿವಾರಿಸುವ ತೆರೆಮರೆಯ ಯೋಧ’ ಎಂದು ಅಭಿನಂದಿಸಿದ ಸಂದರ್ಭಲ್ಲಿ ಭರಮಪ್ಪ ಮೈಕ್ ತೆಗೆದುಕೊಂಡು ‘ನನ್ನ ಮಗನಿಗೆ ಕೆಲಸ ಸಿಕ್ಕೈತೆ. ನಾಳೆಯಿಂದ ಈ ಕೆಲ್ಸ ಮಾಡಕ್ಕಿಲ್ಲ’ ಎನ್ನುವುದು ನಮ್ಮೆಲ್ಲರ ಒಳಗನ್ನೂ ಚುಚ್ಚುತ್ತದೆ.

ವಿಕಾಸ್‌ ಆರ್‌.ಮೌರ್ಯ

ಸಂಕಲನದಲ್ಲಿ ನಮ್ಮನ್ನು ಹಿಡಿದಿಡುವ ಇನ್ನೊಂದು ಕತೆ ‘ಚಿನ್ನದ ಕನ್ನಡಕ’. ಅಂಬೇಡ್ಕರ್ ಜಯಂತಿಯಂದು ಅವರ ಮೂರ್ತಿಗೆ ಚಿನ್ನದ ಕನ್ನಡಕ ತೊಡಿಸುವ ಸಂಭ್ರಮ, ಮೆರವಣಿಗೆಯ ಹಿನ್ನೆಲೆಯಲ್ಲಿ ಈ ಸಂಭ್ರಮದ ಅಸಂಗತತೆ, ಬದಲಾಗದ ಬದುಕುಗಳನ್ನು ಕಾಣಿಸುತ್ತಾ ಹೋಗುತ್ತದೆ. ಆಶಯ ಮತ್ತು ವಸ್ತುಸ್ಥಿತಿಗಳ ನಡುವಣ ಬಿರುಕನ್ನು ಕತೆಗಾರ ವಿಕಾಸ್ ಶಕ್ತವಾಗಿ ಹಿಡಿದಿಡುತ್ತಾ ಹೋಗುತ್ತಾರೆ. ಅಂಬೇಡ್ಕರ್ ಜಯಂತಿಗೆ ಶುಭಕೋರುವ ಬ್ಯಾನರ್‌ನಲ್ಲಿ ಮುಂಡವಿಲ್ಲದ ರುಂಡಗಳಂತೆ ಕಾಣುವ ಶುಭಕೋರುವವರ ಚಿತ್ರಗಳು, ಸ್ವಾಧೀನ ಕಳೆದುಕೊಂಡ ನೀಲವ್ವ, ಭಾರ ಕಳೆದುಕೊಳ್ಳದ ಊಟದ ಬುತ್ತಿ, ಜನರ ಮುಗಿಯದ ನೋವಿನ ನಡುವೆಯೇ ಅಂಬೇಡ್ಕರ್‌ಗೆ ಹಾಕಿದ ಚಿನ್ನದ ಕನ್ನಡಕ ಮುಂತಾದ ಪ್ರತಿಮೆಗಳು ವರ್ತಮಾನದ ವ್ಯಂಗ್ಯವನ್ನು ಸಮರ್ಥವಾಗಿ ಹಿಡಿದಿಟ್ಟಿವೆ. ‘ತಲೆ ತಲಾಂತರ’ ಕತೆ ಬೇರುಗಳನ್ನು ಕಳೆದುಕೊಂಡ ಸಮುದಾಯ, ತನ್ನ ಅಧೀನತೆಯನ್ನು ತೊರೆದು ಮೂಲಸಂಸ್ಕೃತಿಗೆ ಮರಳುವ ಮೂಲಕ ನೀಗಿಕೊಳ್ಳುವ ಹಾದಿ ತೋರುತ್ತದೆ.

ಹೊಸಪಟ್ಟುಗಳ ಮೂಲಕ ಶೋಷಣೆಯ ಹಿಡಿತವನ್ನು ಬಿಗಿಮಾಡುತ್ತಿರುವ ವ್ಯವಸ್ಥೆ, ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವುದಕ್ಕೆ ಸುಂಕ ಬಾವಿಗೆ ಹಾರಿ ಶಾರದೆಯ ಮಗುವನ್ನು ಕಾಪಾಡಲು ಅನುವು ಮಾಡಿಕೊಟ್ಟು ಅದಕ್ಕೆ ಪ್ರಾಯಶ್ಚಿತ್ತವನ್ನೂ ಮಾಡುತ್ತದೆ. ಅದೇ ಸುಂಕನನ್ನು ಮನುಷ್ಯನೆಂದು ನೋಡಲು ನಿರಾಕರಿಸುತ್ತದೆ. ಎಲ್ಲವನ್ನೂ ಸಂಕೇತಗಳನ್ನಾಗಿಸಿಕೊಂಡು ಅವುಗಳ ವಿಜೃಂಭಣೆಯಲ್ಲೇ ಆಶಯಗಳನ್ನು ಮರೆತ ಜನಸಮೂಹವೂ ಇದೆ. ಈ ಎಲ್ಲದರ ನಡುವೆ ಸುಂಕ, ಗಂಟಪ್ಪ, ನೀಲವ್ವ ಎಲ್ಲ ನೋವುಗಳನ್ನು ನುಂಗಿಯೂ ಎಲ್ಲೂ ಎಚ್ಚರ ಕಳೆದುಕೊಳ್ಳುವುದಿಲ್ಲ. ‘ತೆರೆಮರೆಯ ಯೋಧ’ ಕತೆಯಲ್ಲಿ ಭರಮಪ್ಪನ ಮಗ ಓದಿ ಕೆಲಸ ತೆಗೆದುಕೊಳ್ಳುವುದು, ‘ಒಂದು ಹೆಜ್ಜೆ’ ಕತೆಯಲ್ಲಿ ಪೂರ್ಣಿಮಾ ಮೇಡಂಗೆ ಉಮಾಶಂಕರ್ ಹೋಳಿಗೆಯ ಬಾಕ್ಸ್ ಕೊಡುವುದು, ‘ದೇವರ ಬಾವಿ’ ಕತೆಯಲ್ಲಿ ಶಾರದೆ ಸುಂಕರಿಗೆ ನೆರವಾಗುವ ವೈದ್ಯರು ಎಲ್ಲದರ ಮಧ್ಯೆ ಭರವಸೆಯಂತೆ ಕಾಣುತ್ತಾರೆ.

ಬೆಳಗಿನ ವಾಕ್‌ಗೆ ಉಳ್ಳವರು ನಡೆದು ಬರುವ ಬಗೆಯನ್ನು ‘ದಢೂತಿ ದೇಹಗಳು ನೀರು ತುಂಬಿದ ಪ್ಲಾಸ್ಟಿಕ್ ಕವರುಗಳಂತೆ ತುಳುಕುತ್ತಾ ನಡೆದು ಬರುತ್ತಿದ್ದವು’ ಎಂದು ವಿಕಾಸ್ ಬರೆಯುತ್ತಾರೆ. ಜಡೆಪ್ಪ ಪಾಟಿಚೀಲ ಹೊತ್ತು ಬರುತ್ತಿರುವುದನ್ನು ನೋಡಿದ ರಮ್ಯ ಮತ್ತು ಲಚುಮಿಯ ಮೊಗಗಳು ‘ಬಾಡು ಕಂಡಂತಾದವು’ ಎಂಬ ಸೊಗಸಾದ ಹೋಲಿಕೆ ನೀಡುತ್ತಾರೆ. ಕತೆಗಳ ಹೆಣಿಗೆ ಅಲ್ಲಲ್ಲಿ ಸಡಿಲವಾದಂತೆನಿಸಿದರೂ ಸುತ್ತಲಿನ ಪರಿವೇಶವನ್ನು ಕತೆಗೆ ಪೂರಕವಾಗಿ ಕಟ್ಟಿಕೊಡುವ ಪ್ರಯತ್ನದಿಂದ ಇವರು ಇದನ್ನು ಮೀರುವ ಯತ್ನದಲ್ಲಿದ್ದಾರೆ.

ವಿಕಾಸ್ ಮೌರ್ಯ ಅವರದು ಒಬ್ಬ ಹೋರಾಟಗಾರನ ಮನಸ್ಸು. ಅವರು ಸುತ್ತಲಿನ ಪರಿಸರವನ್ನು ನೋಡುವ ಬಗೆ, ದಾಖಲಿಸುವ ಬಗೆ ಒಂದು ಸೃಜನಶೀಲ ಅಭಿವ್ಯಕ್ತಿಯಾಗಿರುವಂತೆಯೇ, ಇದು ಯಾಕೆ ಇನ್ನೂ ಹೀಗಿದೆ, ಬದಲಾಗುವ ಬಗೆಯೆಂತು ಎಂಬ ವ್ಯಗ್ರತೆಯನ್ನು ಎಳೆಯಾಗಿ ಹೊಂದಿದೆ. ಹೀಗಾಗಿ ಇವರ ಕತೆಗಳ ಆಶಯ ನಿಚ್ಚಳವಾಗಿದೆ. ವಿಕಾಸ್ ಅವರೊಳಗಿನ ತಲ್ಲಣ, ವ್ಯಗ್ರತೆ ಬರಹಕ್ಕೆ ಒಂದು ಶಕ್ತಿ ಕೊಟ್ಟಹಾಗೆಯೇ, ಹೇಳುವ ಧಾವಂತ ಮೂಡಿಸುತ್ತವೆ. ಕತೆಯ ಮೂಲಕ ಕಾಣಿಸುವುದಕ್ಕಿಂತ ಒಳಗೇ ಕುದಿಯುತ್ತಿರುವ ವಿಚಾರವನ್ನು ಹೊರಹಾಕಬೇಕು ಎಂಬ ತುಡಿತದಲ್ಲಿ ಇಲ್ಲಿನ ಕತೆಗಳು ಮೂಡಿವೆ. ಹೀಗಾಗಿ ಇಲ್ಲಿನ ಪಾತ್ರಗಳ ರೂಪುರೇಷೆ ಸ್ಪಷ್ಟ. ಬದುಕಿನ ಸಂಕೀರ್ಣತೆ, ಅನಿರೀಕ್ಷಿತತೆ ಇಲ್ಲಿ ಕಾಣುವುದಿಲ್ಲ. ಆದರೆ ಇಷ್ಟೆಲ್ಲ ಹೋರಾಟಗಳ ನಡುವೆಯೂ ಅವೇ ವಿಕಾರಗಳು ಎಲ್ಲೆಡೆಯಲ್ಲಿಯೂ ಮತ್ತೆ ಮತ್ತೆ ಢಾಳಾಗಿ ಕಾಣುತ್ತಿರುವ ಸಂದರ್ಭದಲ್ಲಿ ಅದು ಒಳಗೇ ಚುಚ್ಚಿದ ಮುಳ್ಳಿನಂತೆ ಬಾಧಿಸುವುದರಿಂದ ಬಿಡುಗಡೆಯಿಲ್ಲ. ಬದುಕಿನಲ್ಲಿ, ಸಮಾಜದಲ್ಲಿ ಮಾಯದ ಗಾಯಗಳಿರುವವರೆಗೂ ಬರೆಯುತ್ತಲೇ ಇರಬೇಕಾಗುತ್ತದೆ.

ಡಾ. ಭಾರತೀದೇವಿ.ಪಿ

ಡಾ. ಭಾರತೀದೇವಿ.ಪಿ
ಭಾರತೀದೇವಿ ಅವರು ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕಿಯಾಗಿದ್ದು ಈ ಸದ್ಯ ಹಾಸನದಲ್ಲಿ ನೆಲೆಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ನಡೆ-ನುಡಿಗಳಲ್ಲಿ ಪ್ರಖರ ಬದ್ಧತೆ ತೋರಿದ ಹೋರಾಟಗಾರನ ಸಾಂಸ್ಕೃತಿಕ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...