Homeಅಂಕಣಗಳುಪುಸ್ತಕ ಪರಿಚಯ; 'ನೀಲವ್ವ': ಆಗುವಿಕೆಯನ್ನು ತೋರುವ ಕತೆಗಳು

ಪುಸ್ತಕ ಪರಿಚಯ; ‘ನೀಲವ್ವ’: ಆಗುವಿಕೆಯನ್ನು ತೋರುವ ಕತೆಗಳು

- Advertisement -
- Advertisement -

’ನೀಲವ್ವ’ ಸಂಕಲನದ ಕತೆಗಳು ಒಂದು ಸಹಜ ಮಾನವ ಸಂಬಂಧ, ಜೀವಸಂಬಂಧಕ್ಕೂ ಎಡೆಯಿಲ್ಲದಿರುವ ಬದುಕಿನ ವಿಕಾರವನ್ನು ಚಿತ್ರಿಸುತ್ತಲೇ, ಇದಕ್ಕೆ ಮದ್ದರೆಯುವ ಜೀವಸೆಲೆಯನ್ನು ಹುಡುಕುತ್ತಾ ಹೋಗುತ್ತದೆ. ’ನೀಲಿ’ ಎನ್ನುವುದು ಅರಿವು ಮತ್ತು ಎಚ್ಚರ ಸಂಕೇತದಂತೆ ಕಾಣುತ್ತದೆ. ಇಲ್ಲಿನ ಕತೆಗಳಿಗೆ, ನೇರ ಪ್ರತಿರೋಧಕ್ಕಿಂತ ಹೆಚ್ಚಾಗಿ ಆತ್ಮಸಾಕ್ಷಿಯನ್ನು ಕಲಕುವ ಗುಣವಿದೆ. ಬದಲಾವಣೆ, ಕ್ರಾಂತಿಯ ದಾರಿಯ ಹಾಗೆಯೇ ನಿರಂತರ ಎಚ್ಚರದ, ಸಾವಧಾನದ ಹಾದಿಯಿದೆ. ಈ ಹಾದಿಯಲ್ಲಿ ನೋವಿದೆ, ಆಕ್ರೋಶ ಇದೆ, ಎಚ್ಚರ ಇದೆ, ವಿವೇಕ ಇದೆ, ಬದಲಾಗಬಲ್ಲದೆಂಬ ಭರವಸೆ ಇದೆ. ‘ನೀಲವ್ವ’ ಸಂಕಲನದ ಕತೆಗಳು ನಮ್ಮನ್ನು ಆವರಿಸಿಬಿಡುವುದು ಹೀಗೇ.

ಇಲ್ಲಿ ಜಡೆಪ್ಪ, ಹುಲುಗ, ಸುಂಕ, ಭರಮಪ್ಪನ ಮಗ, ಉಮಾಶಂಕರ್ ಮುಂತಾದ ಪಾತ್ರಗಳು ತಾವು ಅನುಭವಿಸುತ್ತಿರುವ ಅಪಮಾನ, ಹಸಿವು, ನೋವುಗಳಿಂದ ಅನೇಕ ಸವಾಲುಗಳಿಗೆ ಎದುರಾಗುತ್ತಾ ಹೊಸಬದುಕಿನತ್ತ ಮುಖಮಾಡುತ್ತವೆ. ಇದು ಅವರ ವೈಯಕ್ತಿಕ ಬಿಡುಗಡೆಯ ಹಾದಿಯಷ್ಟೇ ಅಲ್ಲ ಅಥವಾ ಕೇವಲ ಅವರ ಸಮುದಾಯದ ಬಿಡುಗಡೆಯ ದಾರಿಯಷ್ಟೇ ಅಲ್ಲ; ಬದಲಿಗೆ ಒಟ್ಟು ಸಮಾಜವೇ ತನಗಂಟಿದ ಕ್ರೌರ್ಯದಿಂದ ಮುಕ್ತಗೊಳ್ಳುವ ದಾರಿಯೂ ಆಗಿದೆ. ‘ಒಂದು ಹೆಜ್ಜೆ’ ಕತೆಯಲ್ಲಿ ಬರುವ ಈಶ್ವರ್ ಸರ್, ‘ತೆರೆಮರೆಯ ಯೋಧ’ದ ದಿನೇಶ್, ‘ದೇವರಬಾವಿ’ಯ ವೈದ್ಯ ಇವರೆಲ್ಲ ತಮ್ಮನ್ನು ಕವಿದುಕೊಂಡಿದ್ದ ಮೌಢ್ಯದ ಪೊರೆ ಹರಿದು ಮಿಡಿಯುವುದು ಇದನ್ನು ಸಾಬೀತುಪಡಿಸುತ್ತದೆ. ‘ನೀಲವ್ವ’ಳ ಪ್ರಖರ ನ್ಯಾಯಪ್ರಜ್ಞೆ, ದೌರ್ಜನ್ಯವನ್ನು ಎದುರಾಗಬೇಕಾದ ಬಗೆಯನ್ನು ಕಾಣಿಸುವ ರೀತಿ ವಿಶಿಷ್ಟವಾಗಿದೆ. ಹೀಗಾಗಿ ಇಲ್ಲಿನ ಕತೆಗಳು ಚಲನೆಯನ್ನು, ಆಗುತ್ತಿರುವ ಬಗೆಯನ್ನು ಹಿಡಿದಿಡುವ ಕತೆಗಳಾಗಿ ನಮ್ಮೊಳಗನ್ನೂ ಕಲಕಿ ಪ್ರಶ್ನಿಸಿ ಜೊತೆಗೆ ಒಯ್ಯುತ್ತವೆ.

ಬದಲಾಗುತ್ತಿರುವ ಪರಿಸರದಲ್ಲಿ ಶೋಷಣೆಯ ಆಯಾಮಗಳೂ ಬದಲಾಗಿರುವುದನ್ನು ಇಲ್ಲಿನ ಕೆಲವು ಕತೆಗಳು ಸೂಕ್ಷ್ಮವಾಗಿ ಹಿಡಿದಿಟ್ಟಿವೆ. ’ಒಂದು ಹೆಜ್ಜೆ’ ಕತೆಯ ಉಮಾಶಂಕರ್, ವಿದ್ಯೆ, ಉದ್ಯೋಗ ಗಳಿಸುವ ಮೂಲಕ ಹಿಂದಿನ ತಲೆಮಾರಿಗಿಂತ ಭಿನ್ನವಾಗಿದ್ದಾನೆ. ಜೊತೆಗೆ ಅದೇ ತಾರತಮ್ಯ ಹೊಸ ರೂಪದಲ್ಲಿ ಅವನನ್ನು ಹಿಂಡುತ್ತಿದೆ. ಇದನ್ನು ತನ್ನದೇ ಆದ ರೀತಿಯಲ್ಲಿ ಎದುರಿಸುವ ಉಮಾಶಂಕರ್ ಹಾಗೂ ಅವನ ತಾಯಿಯ ನಡೆ ನಾವು ಈಗ ತಾರತಮ್ಯದ ನೆಲೆಗಳನ್ನು ಹೊಸ ಬಗೆಯಲ್ಲಿ ಎದುರಾಗಬೇಕು ಎನ್ನುವುದನ್ನು ಸೂಚಿಸುವಂತಿದೆ. ಶೋಷಕರ ಹೊಸ ಮುಖವಾಡಗಳಂತೆಯೇ ಶೋಷಣೆಯನ್ನು ರಮ್ಯಗೊಳಿಸುವ ಪರಿಭಾಷೆಯೂ ನಮ್ಮ ನಡುವೆ ಇದೆ. ‘ತೆರೆಮರೆಯ ಯೋಧ’ ಕತೆಯ ಕೊನೆಯಲ್ಲಿ ಯೋಧ ದಿನೇಶ್ ಪೌರಕಾರ್ಮಿಕನಾದ ಭರಮಪ್ಪನನ್ನು ‘ಕಾಣದ ಶತ್ರುಗಳನ್ನು ನಿವಾರಿಸುವ ತೆರೆಮರೆಯ ಯೋಧ’ ಎಂದು ಅಭಿನಂದಿಸಿದ ಸಂದರ್ಭಲ್ಲಿ ಭರಮಪ್ಪ ಮೈಕ್ ತೆಗೆದುಕೊಂಡು ‘ನನ್ನ ಮಗನಿಗೆ ಕೆಲಸ ಸಿಕ್ಕೈತೆ. ನಾಳೆಯಿಂದ ಈ ಕೆಲ್ಸ ಮಾಡಕ್ಕಿಲ್ಲ’ ಎನ್ನುವುದು ನಮ್ಮೆಲ್ಲರ ಒಳಗನ್ನೂ ಚುಚ್ಚುತ್ತದೆ.

ವಿಕಾಸ್‌ ಆರ್‌.ಮೌರ್ಯ

ಸಂಕಲನದಲ್ಲಿ ನಮ್ಮನ್ನು ಹಿಡಿದಿಡುವ ಇನ್ನೊಂದು ಕತೆ ‘ಚಿನ್ನದ ಕನ್ನಡಕ’. ಅಂಬೇಡ್ಕರ್ ಜಯಂತಿಯಂದು ಅವರ ಮೂರ್ತಿಗೆ ಚಿನ್ನದ ಕನ್ನಡಕ ತೊಡಿಸುವ ಸಂಭ್ರಮ, ಮೆರವಣಿಗೆಯ ಹಿನ್ನೆಲೆಯಲ್ಲಿ ಈ ಸಂಭ್ರಮದ ಅಸಂಗತತೆ, ಬದಲಾಗದ ಬದುಕುಗಳನ್ನು ಕಾಣಿಸುತ್ತಾ ಹೋಗುತ್ತದೆ. ಆಶಯ ಮತ್ತು ವಸ್ತುಸ್ಥಿತಿಗಳ ನಡುವಣ ಬಿರುಕನ್ನು ಕತೆಗಾರ ವಿಕಾಸ್ ಶಕ್ತವಾಗಿ ಹಿಡಿದಿಡುತ್ತಾ ಹೋಗುತ್ತಾರೆ. ಅಂಬೇಡ್ಕರ್ ಜಯಂತಿಗೆ ಶುಭಕೋರುವ ಬ್ಯಾನರ್‌ನಲ್ಲಿ ಮುಂಡವಿಲ್ಲದ ರುಂಡಗಳಂತೆ ಕಾಣುವ ಶುಭಕೋರುವವರ ಚಿತ್ರಗಳು, ಸ್ವಾಧೀನ ಕಳೆದುಕೊಂಡ ನೀಲವ್ವ, ಭಾರ ಕಳೆದುಕೊಳ್ಳದ ಊಟದ ಬುತ್ತಿ, ಜನರ ಮುಗಿಯದ ನೋವಿನ ನಡುವೆಯೇ ಅಂಬೇಡ್ಕರ್‌ಗೆ ಹಾಕಿದ ಚಿನ್ನದ ಕನ್ನಡಕ ಮುಂತಾದ ಪ್ರತಿಮೆಗಳು ವರ್ತಮಾನದ ವ್ಯಂಗ್ಯವನ್ನು ಸಮರ್ಥವಾಗಿ ಹಿಡಿದಿಟ್ಟಿವೆ. ‘ತಲೆ ತಲಾಂತರ’ ಕತೆ ಬೇರುಗಳನ್ನು ಕಳೆದುಕೊಂಡ ಸಮುದಾಯ, ತನ್ನ ಅಧೀನತೆಯನ್ನು ತೊರೆದು ಮೂಲಸಂಸ್ಕೃತಿಗೆ ಮರಳುವ ಮೂಲಕ ನೀಗಿಕೊಳ್ಳುವ ಹಾದಿ ತೋರುತ್ತದೆ.

ಹೊಸಪಟ್ಟುಗಳ ಮೂಲಕ ಶೋಷಣೆಯ ಹಿಡಿತವನ್ನು ಬಿಗಿಮಾಡುತ್ತಿರುವ ವ್ಯವಸ್ಥೆ, ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವುದಕ್ಕೆ ಸುಂಕ ಬಾವಿಗೆ ಹಾರಿ ಶಾರದೆಯ ಮಗುವನ್ನು ಕಾಪಾಡಲು ಅನುವು ಮಾಡಿಕೊಟ್ಟು ಅದಕ್ಕೆ ಪ್ರಾಯಶ್ಚಿತ್ತವನ್ನೂ ಮಾಡುತ್ತದೆ. ಅದೇ ಸುಂಕನನ್ನು ಮನುಷ್ಯನೆಂದು ನೋಡಲು ನಿರಾಕರಿಸುತ್ತದೆ. ಎಲ್ಲವನ್ನೂ ಸಂಕೇತಗಳನ್ನಾಗಿಸಿಕೊಂಡು ಅವುಗಳ ವಿಜೃಂಭಣೆಯಲ್ಲೇ ಆಶಯಗಳನ್ನು ಮರೆತ ಜನಸಮೂಹವೂ ಇದೆ. ಈ ಎಲ್ಲದರ ನಡುವೆ ಸುಂಕ, ಗಂಟಪ್ಪ, ನೀಲವ್ವ ಎಲ್ಲ ನೋವುಗಳನ್ನು ನುಂಗಿಯೂ ಎಲ್ಲೂ ಎಚ್ಚರ ಕಳೆದುಕೊಳ್ಳುವುದಿಲ್ಲ. ‘ತೆರೆಮರೆಯ ಯೋಧ’ ಕತೆಯಲ್ಲಿ ಭರಮಪ್ಪನ ಮಗ ಓದಿ ಕೆಲಸ ತೆಗೆದುಕೊಳ್ಳುವುದು, ‘ಒಂದು ಹೆಜ್ಜೆ’ ಕತೆಯಲ್ಲಿ ಪೂರ್ಣಿಮಾ ಮೇಡಂಗೆ ಉಮಾಶಂಕರ್ ಹೋಳಿಗೆಯ ಬಾಕ್ಸ್ ಕೊಡುವುದು, ‘ದೇವರ ಬಾವಿ’ ಕತೆಯಲ್ಲಿ ಶಾರದೆ ಸುಂಕರಿಗೆ ನೆರವಾಗುವ ವೈದ್ಯರು ಎಲ್ಲದರ ಮಧ್ಯೆ ಭರವಸೆಯಂತೆ ಕಾಣುತ್ತಾರೆ.

ಬೆಳಗಿನ ವಾಕ್‌ಗೆ ಉಳ್ಳವರು ನಡೆದು ಬರುವ ಬಗೆಯನ್ನು ‘ದಢೂತಿ ದೇಹಗಳು ನೀರು ತುಂಬಿದ ಪ್ಲಾಸ್ಟಿಕ್ ಕವರುಗಳಂತೆ ತುಳುಕುತ್ತಾ ನಡೆದು ಬರುತ್ತಿದ್ದವು’ ಎಂದು ವಿಕಾಸ್ ಬರೆಯುತ್ತಾರೆ. ಜಡೆಪ್ಪ ಪಾಟಿಚೀಲ ಹೊತ್ತು ಬರುತ್ತಿರುವುದನ್ನು ನೋಡಿದ ರಮ್ಯ ಮತ್ತು ಲಚುಮಿಯ ಮೊಗಗಳು ‘ಬಾಡು ಕಂಡಂತಾದವು’ ಎಂಬ ಸೊಗಸಾದ ಹೋಲಿಕೆ ನೀಡುತ್ತಾರೆ. ಕತೆಗಳ ಹೆಣಿಗೆ ಅಲ್ಲಲ್ಲಿ ಸಡಿಲವಾದಂತೆನಿಸಿದರೂ ಸುತ್ತಲಿನ ಪರಿವೇಶವನ್ನು ಕತೆಗೆ ಪೂರಕವಾಗಿ ಕಟ್ಟಿಕೊಡುವ ಪ್ರಯತ್ನದಿಂದ ಇವರು ಇದನ್ನು ಮೀರುವ ಯತ್ನದಲ್ಲಿದ್ದಾರೆ.

ವಿಕಾಸ್ ಮೌರ್ಯ ಅವರದು ಒಬ್ಬ ಹೋರಾಟಗಾರನ ಮನಸ್ಸು. ಅವರು ಸುತ್ತಲಿನ ಪರಿಸರವನ್ನು ನೋಡುವ ಬಗೆ, ದಾಖಲಿಸುವ ಬಗೆ ಒಂದು ಸೃಜನಶೀಲ ಅಭಿವ್ಯಕ್ತಿಯಾಗಿರುವಂತೆಯೇ, ಇದು ಯಾಕೆ ಇನ್ನೂ ಹೀಗಿದೆ, ಬದಲಾಗುವ ಬಗೆಯೆಂತು ಎಂಬ ವ್ಯಗ್ರತೆಯನ್ನು ಎಳೆಯಾಗಿ ಹೊಂದಿದೆ. ಹೀಗಾಗಿ ಇವರ ಕತೆಗಳ ಆಶಯ ನಿಚ್ಚಳವಾಗಿದೆ. ವಿಕಾಸ್ ಅವರೊಳಗಿನ ತಲ್ಲಣ, ವ್ಯಗ್ರತೆ ಬರಹಕ್ಕೆ ಒಂದು ಶಕ್ತಿ ಕೊಟ್ಟಹಾಗೆಯೇ, ಹೇಳುವ ಧಾವಂತ ಮೂಡಿಸುತ್ತವೆ. ಕತೆಯ ಮೂಲಕ ಕಾಣಿಸುವುದಕ್ಕಿಂತ ಒಳಗೇ ಕುದಿಯುತ್ತಿರುವ ವಿಚಾರವನ್ನು ಹೊರಹಾಕಬೇಕು ಎಂಬ ತುಡಿತದಲ್ಲಿ ಇಲ್ಲಿನ ಕತೆಗಳು ಮೂಡಿವೆ. ಹೀಗಾಗಿ ಇಲ್ಲಿನ ಪಾತ್ರಗಳ ರೂಪುರೇಷೆ ಸ್ಪಷ್ಟ. ಬದುಕಿನ ಸಂಕೀರ್ಣತೆ, ಅನಿರೀಕ್ಷಿತತೆ ಇಲ್ಲಿ ಕಾಣುವುದಿಲ್ಲ. ಆದರೆ ಇಷ್ಟೆಲ್ಲ ಹೋರಾಟಗಳ ನಡುವೆಯೂ ಅವೇ ವಿಕಾರಗಳು ಎಲ್ಲೆಡೆಯಲ್ಲಿಯೂ ಮತ್ತೆ ಮತ್ತೆ ಢಾಳಾಗಿ ಕಾಣುತ್ತಿರುವ ಸಂದರ್ಭದಲ್ಲಿ ಅದು ಒಳಗೇ ಚುಚ್ಚಿದ ಮುಳ್ಳಿನಂತೆ ಬಾಧಿಸುವುದರಿಂದ ಬಿಡುಗಡೆಯಿಲ್ಲ. ಬದುಕಿನಲ್ಲಿ, ಸಮಾಜದಲ್ಲಿ ಮಾಯದ ಗಾಯಗಳಿರುವವರೆಗೂ ಬರೆಯುತ್ತಲೇ ಇರಬೇಕಾಗುತ್ತದೆ.

ಡಾ. ಭಾರತೀದೇವಿ.ಪಿ

ಡಾ. ಭಾರತೀದೇವಿ.ಪಿ
ಭಾರತೀದೇವಿ ಅವರು ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕಿಯಾಗಿದ್ದು ಈ ಸದ್ಯ ಹಾಸನದಲ್ಲಿ ನೆಲೆಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ನಡೆ-ನುಡಿಗಳಲ್ಲಿ ಪ್ರಖರ ಬದ್ಧತೆ ತೋರಿದ ಹೋರಾಟಗಾರನ ಸಾಂಸ್ಕೃತಿಕ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...