Homeಅಂಕಣಗಳುನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ 'ಬುದ್ಧ ಬಾಬಾಸಾಹೇಬ ಮತ್ತು ನಾನು'

ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ ‘ಬುದ್ಧ ಬಾಬಾಸಾಹೇಬ ಮತ್ತು ನಾನು’

- Advertisement -
- Advertisement -

ಒಂದು ದಿನ ಸಂಜೆ ಮಹಾಲಕ್ಷ್ಮಿ ದಂತ ಚಿಕಿತ್ಸಾಲಯದ ಡಾಕ್ಟರ್ ಮತ್ತು ಕವಿ ಮಿತ್ರರಾದ ಶಿವಕುಮಾರ್ ಮಾಲಿಪಾಟೀಲ್‌ರವರ ಚೇಂಬರ್ ಪ್ರವೇಶಿಸಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡೆ. ಶೀರ್ಷಿಕೆ ಗಮನಸೆಳೆಯಿತು: ’ಬುದ್ಧ ಬಾಬಾಸಾಹೇಬ ಮತ್ತು ನಾನು’. ಅವರಿಂದ ಪುಸ್ತಕ ಪಡೆದು ಪುಟ ತಿರುವುತ್ತಾ ಹೋದೆ. ಕನ್ನಡ ನಾಡಿನ ಖ್ಯಾತ ನಟರಲ್ಲಿ ಒಬ್ಬರಾದ ಅಶೋಕ್ ಅವರಿಗೆ ಬುದ್ಧ ಮತ್ತು ಬಾಬಾಸಾಹೇಬರು ಹೇಗೆ ಅವಾಹಿಸಿಕೊಂಡಿರಬಹುದು, ನನ್ನ ಪ್ರೀತಿಯ ನಟನೊಬ್ಬನ ಮನದೊಳಗೆ ಬುದ್ಧ ಭೀಮರ ಪ್ರವೇಶ ಹೇಗಿರಬಹುದೆಂದು ಕುತೂಹಲದಿಂದ ಓದಲು ತೊಡಗಿದೆ.

ಶೂಟಿಂಗ್ ಸ್ಪಾಟ್ ಹಗಲು ಸ್ಟುಡಿಯೋ

ಶೂಟಿಂಗ್ ಸ್ಪಾಟ್‌ನಲ್ಲಿ ಪಾತ್ರಧಾರಿಯಾದ ಲೇಖಕರ ಪ್ರವೇಶದ ಜೊತೆಗೇ ಬುದ್ಧರ ಮತ್ತು ಪರಿವ್ರಾಜಕರ ಸಂಭಾಷಣೆ ಆರಂಭವಾಗುತ್ತದೆ. ಈ ಸಂಭಾಷಣೆಯನ್ನು ಹಲವು ಲೇಖಕರು ಬೇರೆಬೇರೆ ಪುಸ್ತಕಗಳಲ್ಲಿ ಬರೆದಿದ್ದಾರೆ. ಸ್ವತಃ ಅಂಬೇಡ್ಕರರು ತಮ್ಮ ಕೃತಿ ’ಬುದ್ಧ ಮತ್ತು ಆತನ ಧಮ್ಮ’ದಲ್ಲಿಯೂ ಬರೆದಿದ್ದಾರೆ. ಇಲ್ಲಿ ಬುದ್ಧ ಪರಿವ್ರಾಜಕರೊಡನೆ ಮಾತಾಡುತ್ತಿಲ್ಲ, ಬದಲಾಗಿ ಲೇಖಕರ ಒಳಗಿನ ಬುದ್ಧ ಜಾಗೃತನಾಗಿ, ಪಾತ್ರವಾಗಿ ಆವಾಹಿಸಿಕೊಂಡು ಮಾತನಾಡುವ ಬಗೆ ಮತ್ತು ಅಲ್ಲಿ ಕಟ್ಟಿಕೊಡುವ ಸನ್ನಿವೇಶಗಳಿಂದ, ಅಲ್ಲಿನ ಒಂದಷ್ಟು ಮಾತುಗಳು ಅತ್ಯುತ್ತಮವಾದ ಪ್ರವಚನದ ಹಿತ ನೀಡುತ್ತವೆ. ಮಹಾಜ್ಞಾನಿ ಬುದ್ಧನಿಗೆ ತಕ್ಕಂತೆ ಪಾತ್ರ ಮತ್ತು ಅದರ ವಿಚಾರಗಳನ್ನು ಇಲ್ಲಿ ಚರ್ಚೆ ಮಾಡಿಸಿರುವುದು ’ಬುದ್ಧ ಅಂಡ್ ಹಿಸ್ ಧಮ್ಮ’ವನ್ನು ಬಹಳ ಸರಳವಾಗಿ ವಿವರಿಸುತ್ತದೆ. ಈ ಮಾತುಗಳನ್ನು ಬರೆಯುವಾಗ ಲೇಖಕರು ಬಾಬಾಸಾಹೇಬರ ಸಂಪೂರ್ಣ ಮಾರ್ಗದ ಬಗ್ಗೆ ಸ್ಪಷ್ಟತೆಯನ್ನು ಹೊಂದಿ, ಅದನ್ನ ಮತ್ತೆ ಹೇಳುತ್ತಾ ತಮ್ಮ ಮಾರ್ಗವೂ ಸಹ ಇದೇ ಎಂಬುದನ್ನು ಇಲ್ಲಿ ಓದುಗರಿಗೆ ವಿಶದಪಡಿಸುತ್ತಾರೆ.

ಕಪಿಲವಸ್ತು ಅಧ್ಯಾಯದಲ್ಲಿ ಅಂಬೇಡ್ಕರ್‌ರವರು ತಮ್ಮ ಪತ್ನಿಯ ಜೊತೆ ಸಂಭಾಷಿಸುತ್ತಾ ಬುದ್ಧನ ಪ್ರಸ್ತುತತೆಯನ್ನು ಓದುಗರಿಗೆ ತಿಳಿಸುತ್ತಾರೆ. ಇಲ್ಲಿ ಲೇಖಕರ ಬದ್ಧತೆ ಸ್ವಲ್ಪವೂ ಅಲುಗಾಡದೆ ಸ್ಥಿರವಾಗಿದೆ. ಬುದ್ಧ ಯಾಕೆ ಈಗ ನಮಗೆ ಪ್ರಸ್ತುತ ಎಂದು ಹೇಳುತ್ತಾ “ಬುದ್ಧನ ಚಿಂತನೆಗಳು ಧಾರ್ಮಿಕವಲ್ಲ, ಅವು ಸಮಾಜಮುಖಿ” ಎನ್ನುವಾಗ ಲೇಖಕರು ವರ್ತಮಾನದ ಎಲ್ಲಾ ತಾಕಲಾಟಗಳಿಗೂ ಮಧ್ಯಮ ಮಾರ್ಗವನ್ನು ಸೂಚಿಸುತ್ತಾರೆ. ದೃಶ್ಯಮಾಧ್ಯಮದಲ್ಲಿ ಬುದ್ಧನನ್ನು ತರುವ ಬಗ್ಗೆ ಯೋಚಿಸುತ್ತಲೇ ಆರಂಭವಾಗುವ ಕಪಿಲವಸ್ತು ಅಧ್ಯಾಯ, ಬುದ್ಧನ ಬಾಲ್ಯದಿಂದ ಆತ ಮನೆ ಬಿಟ್ಟು ಹೋಗುವವರೆಗಿನ ಘಟನೆಗಳು ಸಂಕಲಿಸಿಕೊಳ್ಳುವಾಗ ಸಂಪ್ರದಾಯವಾದಿಗಳು ಬರೆದ ಪಠ್ಯಗಳನ್ನು ಮತ್ತು ಬಾಬಾಸಾಹೇಬರ ಸಂಶೋಧನಾತ್ಮಕ ಪಠ್ಯಗಳನ್ನು ಮುಖಾಮುಖಿಯಾಗಿಸುತ್ತಾರೆ.

ಎಪಿಸೋಡ್ ಮೂರರಲ್ಲಿ ಲೇಖಕರು ಒಂದು ಕುತೂಹಲಕರವಾದ ಸನ್ನಿವೇಶವನ್ನು ಕಟ್ಟಿಕೊಡುತ್ತಾರೆ. ಅದು ಕರ್ನಾಟಕದಲ್ಲಿ ನಡೆದ ಬಹುಮುಖ್ಯ ಘಟನೆಯೊಂದಿಗೆ ಆರಂಭವಾಗುತ್ತದೆ ಮತ್ತು ವರ್ತಮಾನಕ್ಕೆ ತಳುಕು ಹಾಕುತ್ತ ಸಾಗುತ್ತದೆ. ಆ ಭಾಗದಲ್ಲಿ ಮೂಡಿರುವ, ಸಶಸ್ತ್ರ ಹೋರಾಟ ಮಾಡುವ ತಂಡವನ್ನು ಮುಖ್ಯವಾಹಿನಿಗೆ ತರುವುದರೊಂದಿಗಿನ ಮಾತುಕತೆ ಕುತೂಹಲಕರವಾಗಿದೆ. ಈ ಸಂಭಾಷಣೆ ಓದುವಾಗಲೆಲ್ಲ ನನಗೆ ಬುದ್ಧನನ್ನು ಎದುರುಗೊಂಡ ಅಂಗುಲಿಮಾಲ ನೆನಪಾಗುತ್ತಾನೆ. ಲೇಖಕರು ಇಲ್ಲಿನ ಸೂಕ್ಷ್ಮ ಸನ್ನಿವೇಶವನ್ನು, ಬುದ್ಧ ಮಾಡಿದ ಬದಲಾವಣೆಯಂತೆಯೇ ಕಟ್ಟಿಕೊಡಲು, ತಾವು ಒಂದು ಪಾತ್ರವಾಗಿ ಮೂಡಿಬಂದು, ಘಟನೆಯನ್ನು ಜೋಡಿಸಿಕೊಂಡು ಓದುಗರಿಗೆ ಕುತೂಹಲವನ್ನೂ, ತಿಳಿವಳಿಕೆಯನ್ನೂ ಮೂಡಿಸುತ್ತಾರೆ.

ಪ್ರಗತಿಪರ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಮತ್ತು ಅವರ ಹಿಂದೆ ಬಿದ್ದ ಪೊಲೀಸರ ನಡುವೆ ಸಮನ್ವಯ ಸಾಧಿಸುವ ಲೇಖಕರು, ಹೋರಾಟಗಾರರು ಮುಖ್ಯವಾಹಿನಿಗೆ ಬಂದ ನಂತರದ ಮುಂದಿನ ಯೋಜನೆಯನ್ನು ಜಾರಿಯಲ್ಲಿಡುವ ಭಾಗವಾಗಿ ಆರಂಭಿಕ ಸಭೆಗಳನ್ನು ನಡೆಸುತ್ತಾರೆ. ಅವರೇ ಕೊನೆಯಲ್ಲಿ ಹೇಳುವಂತೆ ಸಿದ್ಧತಾ ಪರ್ವ ಮುಗಿಯಿತೆಂದು ಕಥೆಯನ್ನು ಸಮಾಪ್ತಿ ಮಾಡುತ್ತಾರೆ. ಹೀಗೆ ಹೇಳುವಾಗ ಓದುಗನಿಗೆ ಧಾರಾವಾಹಿ ಎಪಿಸೋಡ್‌ಗಳ ಕಾಯುವಿಕೆಯ ಭಾಸವಾಗುತ್ತದೆ. ವರ್ತಮಾನದೊಂದಿಗೆ ಭೂತ ಮತ್ತು ಭವಿಷ್ಯತ್ತು ಬೆಸೆಯುವ ಈ ಭಾಗದಲ್ಲಿ ಲೇಖಕರ ವಿಶಿಷ್ಟ ನಿರೂಪಣೆ ಗಮನ ಸೆಳೆಯುತ್ತದೆ. ಎಪಿಸೋಡ್ 3 ಓದುವಾಗಲೆಲ್ಲಾ ನನ್ನೊಳಗಿನ ವಿಚಾರಗಳಿಗೆ ಪುಷ್ಟಿ ಸಿಗುತ್ತದೆ ಮತ್ತು ಸ್ಪಷ್ಟತೆ ದೊರಕುತ್ತದೆ. ಭ್ರಷ್ಟ ರಾಜಕಾರಣವನ್ನು ಕೊನೆಗಾಣಿಸಿ ಮತ್ತೊಂದು ಹೊಸ ಪಡೆಯನ್ನು ಕಟ್ಟುವ ಕನಸುಗಳ ಭಾಗವಾಗಿ ನಮ್ಮನ್ನು ಅದರಲ್ಲಿ ಸೇರಿಸಿಕೊಂಡು ಓದಿಸಿಕೊಂಡು ಹೋಗುತ್ತದೆ.

ಈ ಕೃತಿಯಲ್ಲಿ ಕಥೆಯನ್ನು ಜೋಡಿಸಿಕೊಂಡು ಹೊಸೆದಿರುವ ಬಗೆ ಹೊಸದು. ಇದು ಕಥೆಯೊಳಗಿನ ಕಾದಂಬರಿಯೋ, ಕಾದಂಬರಿಯೊಳಗಿನ ಅಧ್ಯಾಯವೋ, ಮಹಾ ಧಾರಾವಾಹಿಯ ಮೊದಲ ಕಂತೋ ಎಂಬ ಗೊಂದಲ ಉಂಟಾಗುತ್ತದೆ. ಆದರೆ, ಎಲ್ಲಿಯು ಬೋರಾಗದೆ ಓದಿಸಿಕೊಂಡುಹೋಗುವ, ಚರಿತ್ರೆಯೊಳಗಿನ ಹಲವು ಸಂಗತಿಗಳನ್ನು ವರ್ತಮಾನದ ಕನ್ನಡಿಯಲ್ಲಿ ನೋಡುವ ಬಗೆ ಆಪ್ತವಾಗಿಯೂ, ಗಹನವಾಗಿಯೂ ಮೂಡಿದೆ. ಮತ್ತೊಂದು ವಿಶೇಷವೇನೆಂದರೆ ಪೂನಾ ಒಪ್ಪಂದವನ್ನು ಬಹಳ ಸರಳವಾಗಿ ಹೇಳುತ್ತಾ ಲೇಖಕರು ನಮಗೆ ಆಪ್ತರಾಗಿಬಿಡುತ್ತಾರೆ. ಈ ಕೃತಿಯನ್ನು ಪೂರ್ಣ ಓದಿದನಂತರ ಲೇಖಕರ ಒಳಗಿನ ಬುದ್ಧತ್ವ ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸಿ ಬಾಬಾಸಾಹೇಬರ ಹಾದಿ ಎಂತಹುದು ಎಂದು ಅರಿವಿಗೆ ತರುತ್ತದೆ.

ಲೇಖಕರಾದ ಅಶೋಕ್‌ರವರ ಬದ್ಧತೆ ಮತ್ತು ವಿಷಯದ ಪ್ರಸ್ತುತತೆ ಜೊತೆಗೆ ಅವರು ಆರಿಸಿಕೊಂಡ ಪ್ರಕಾರ ನನಗಿಷ್ಟವಾಯಿತು. ಬುದ್ಧನ ಪ್ರೀತಿ ಇಲ್ಲಿದೆ ಎಂದುಕೊಳ್ಳುತ್ತೇನೆ…

ನಮೋ ಬುದ್ಧಾಯ, ಜೈಭೀಮ್

ರಮೇಶ್ ಗಬ್ಬೂರ್

ರಮೇಶ್ ಗಬ್ಬೂರ್
ಎದೆಯೊಳಗಿನ ಸಿಟ್ಟನ್ನು ಬಸಿದು ಅಕ್ಷರ ರೂಪ ಕೊಡುವ ರಮೇಶ್ ಗಬ್ಬೂರ್ ರವರು ಜನಕವಿ ಎಂದೇ ಪರಿಚಿತರು. ‘ಒಲಿದಂತೆ ಹಾಡುವೆ’ ಸೇರಿ ಹಲವು ಹೋರಾಟದ ಹಾಡುಗಳ ಪುಸ್ತಕ ರಚಿಸಿದ್ದಾರೆ. ಸದ್ಯಕ್ಕೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಅನಾರ್ಕಲಿಯ ಸೇಫ್ಟಿಪಿನ್: ಲಲಿತ ಪ್ರಬಂಧದ ಲಹರಿಗೆ ಬಿದ್ದ ಕತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...