Homeಅಂಕಣಗಳುನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ 'ಬುದ್ಧ ಬಾಬಾಸಾಹೇಬ ಮತ್ತು ನಾನು'

ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ ‘ಬುದ್ಧ ಬಾಬಾಸಾಹೇಬ ಮತ್ತು ನಾನು’

- Advertisement -
- Advertisement -

ಒಂದು ದಿನ ಸಂಜೆ ಮಹಾಲಕ್ಷ್ಮಿ ದಂತ ಚಿಕಿತ್ಸಾಲಯದ ಡಾಕ್ಟರ್ ಮತ್ತು ಕವಿ ಮಿತ್ರರಾದ ಶಿವಕುಮಾರ್ ಮಾಲಿಪಾಟೀಲ್‌ರವರ ಚೇಂಬರ್ ಪ್ರವೇಶಿಸಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡೆ. ಶೀರ್ಷಿಕೆ ಗಮನಸೆಳೆಯಿತು: ’ಬುದ್ಧ ಬಾಬಾಸಾಹೇಬ ಮತ್ತು ನಾನು’. ಅವರಿಂದ ಪುಸ್ತಕ ಪಡೆದು ಪುಟ ತಿರುವುತ್ತಾ ಹೋದೆ. ಕನ್ನಡ ನಾಡಿನ ಖ್ಯಾತ ನಟರಲ್ಲಿ ಒಬ್ಬರಾದ ಅಶೋಕ್ ಅವರಿಗೆ ಬುದ್ಧ ಮತ್ತು ಬಾಬಾಸಾಹೇಬರು ಹೇಗೆ ಅವಾಹಿಸಿಕೊಂಡಿರಬಹುದು, ನನ್ನ ಪ್ರೀತಿಯ ನಟನೊಬ್ಬನ ಮನದೊಳಗೆ ಬುದ್ಧ ಭೀಮರ ಪ್ರವೇಶ ಹೇಗಿರಬಹುದೆಂದು ಕುತೂಹಲದಿಂದ ಓದಲು ತೊಡಗಿದೆ.

ಶೂಟಿಂಗ್ ಸ್ಪಾಟ್ ಹಗಲು ಸ್ಟುಡಿಯೋ

ಶೂಟಿಂಗ್ ಸ್ಪಾಟ್‌ನಲ್ಲಿ ಪಾತ್ರಧಾರಿಯಾದ ಲೇಖಕರ ಪ್ರವೇಶದ ಜೊತೆಗೇ ಬುದ್ಧರ ಮತ್ತು ಪರಿವ್ರಾಜಕರ ಸಂಭಾಷಣೆ ಆರಂಭವಾಗುತ್ತದೆ. ಈ ಸಂಭಾಷಣೆಯನ್ನು ಹಲವು ಲೇಖಕರು ಬೇರೆಬೇರೆ ಪುಸ್ತಕಗಳಲ್ಲಿ ಬರೆದಿದ್ದಾರೆ. ಸ್ವತಃ ಅಂಬೇಡ್ಕರರು ತಮ್ಮ ಕೃತಿ ’ಬುದ್ಧ ಮತ್ತು ಆತನ ಧಮ್ಮ’ದಲ್ಲಿಯೂ ಬರೆದಿದ್ದಾರೆ. ಇಲ್ಲಿ ಬುದ್ಧ ಪರಿವ್ರಾಜಕರೊಡನೆ ಮಾತಾಡುತ್ತಿಲ್ಲ, ಬದಲಾಗಿ ಲೇಖಕರ ಒಳಗಿನ ಬುದ್ಧ ಜಾಗೃತನಾಗಿ, ಪಾತ್ರವಾಗಿ ಆವಾಹಿಸಿಕೊಂಡು ಮಾತನಾಡುವ ಬಗೆ ಮತ್ತು ಅಲ್ಲಿ ಕಟ್ಟಿಕೊಡುವ ಸನ್ನಿವೇಶಗಳಿಂದ, ಅಲ್ಲಿನ ಒಂದಷ್ಟು ಮಾತುಗಳು ಅತ್ಯುತ್ತಮವಾದ ಪ್ರವಚನದ ಹಿತ ನೀಡುತ್ತವೆ. ಮಹಾಜ್ಞಾನಿ ಬುದ್ಧನಿಗೆ ತಕ್ಕಂತೆ ಪಾತ್ರ ಮತ್ತು ಅದರ ವಿಚಾರಗಳನ್ನು ಇಲ್ಲಿ ಚರ್ಚೆ ಮಾಡಿಸಿರುವುದು ’ಬುದ್ಧ ಅಂಡ್ ಹಿಸ್ ಧಮ್ಮ’ವನ್ನು ಬಹಳ ಸರಳವಾಗಿ ವಿವರಿಸುತ್ತದೆ. ಈ ಮಾತುಗಳನ್ನು ಬರೆಯುವಾಗ ಲೇಖಕರು ಬಾಬಾಸಾಹೇಬರ ಸಂಪೂರ್ಣ ಮಾರ್ಗದ ಬಗ್ಗೆ ಸ್ಪಷ್ಟತೆಯನ್ನು ಹೊಂದಿ, ಅದನ್ನ ಮತ್ತೆ ಹೇಳುತ್ತಾ ತಮ್ಮ ಮಾರ್ಗವೂ ಸಹ ಇದೇ ಎಂಬುದನ್ನು ಇಲ್ಲಿ ಓದುಗರಿಗೆ ವಿಶದಪಡಿಸುತ್ತಾರೆ.

ಕಪಿಲವಸ್ತು ಅಧ್ಯಾಯದಲ್ಲಿ ಅಂಬೇಡ್ಕರ್‌ರವರು ತಮ್ಮ ಪತ್ನಿಯ ಜೊತೆ ಸಂಭಾಷಿಸುತ್ತಾ ಬುದ್ಧನ ಪ್ರಸ್ತುತತೆಯನ್ನು ಓದುಗರಿಗೆ ತಿಳಿಸುತ್ತಾರೆ. ಇಲ್ಲಿ ಲೇಖಕರ ಬದ್ಧತೆ ಸ್ವಲ್ಪವೂ ಅಲುಗಾಡದೆ ಸ್ಥಿರವಾಗಿದೆ. ಬುದ್ಧ ಯಾಕೆ ಈಗ ನಮಗೆ ಪ್ರಸ್ತುತ ಎಂದು ಹೇಳುತ್ತಾ “ಬುದ್ಧನ ಚಿಂತನೆಗಳು ಧಾರ್ಮಿಕವಲ್ಲ, ಅವು ಸಮಾಜಮುಖಿ” ಎನ್ನುವಾಗ ಲೇಖಕರು ವರ್ತಮಾನದ ಎಲ್ಲಾ ತಾಕಲಾಟಗಳಿಗೂ ಮಧ್ಯಮ ಮಾರ್ಗವನ್ನು ಸೂಚಿಸುತ್ತಾರೆ. ದೃಶ್ಯಮಾಧ್ಯಮದಲ್ಲಿ ಬುದ್ಧನನ್ನು ತರುವ ಬಗ್ಗೆ ಯೋಚಿಸುತ್ತಲೇ ಆರಂಭವಾಗುವ ಕಪಿಲವಸ್ತು ಅಧ್ಯಾಯ, ಬುದ್ಧನ ಬಾಲ್ಯದಿಂದ ಆತ ಮನೆ ಬಿಟ್ಟು ಹೋಗುವವರೆಗಿನ ಘಟನೆಗಳು ಸಂಕಲಿಸಿಕೊಳ್ಳುವಾಗ ಸಂಪ್ರದಾಯವಾದಿಗಳು ಬರೆದ ಪಠ್ಯಗಳನ್ನು ಮತ್ತು ಬಾಬಾಸಾಹೇಬರ ಸಂಶೋಧನಾತ್ಮಕ ಪಠ್ಯಗಳನ್ನು ಮುಖಾಮುಖಿಯಾಗಿಸುತ್ತಾರೆ.

ಎಪಿಸೋಡ್ ಮೂರರಲ್ಲಿ ಲೇಖಕರು ಒಂದು ಕುತೂಹಲಕರವಾದ ಸನ್ನಿವೇಶವನ್ನು ಕಟ್ಟಿಕೊಡುತ್ತಾರೆ. ಅದು ಕರ್ನಾಟಕದಲ್ಲಿ ನಡೆದ ಬಹುಮುಖ್ಯ ಘಟನೆಯೊಂದಿಗೆ ಆರಂಭವಾಗುತ್ತದೆ ಮತ್ತು ವರ್ತಮಾನಕ್ಕೆ ತಳುಕು ಹಾಕುತ್ತ ಸಾಗುತ್ತದೆ. ಆ ಭಾಗದಲ್ಲಿ ಮೂಡಿರುವ, ಸಶಸ್ತ್ರ ಹೋರಾಟ ಮಾಡುವ ತಂಡವನ್ನು ಮುಖ್ಯವಾಹಿನಿಗೆ ತರುವುದರೊಂದಿಗಿನ ಮಾತುಕತೆ ಕುತೂಹಲಕರವಾಗಿದೆ. ಈ ಸಂಭಾಷಣೆ ಓದುವಾಗಲೆಲ್ಲ ನನಗೆ ಬುದ್ಧನನ್ನು ಎದುರುಗೊಂಡ ಅಂಗುಲಿಮಾಲ ನೆನಪಾಗುತ್ತಾನೆ. ಲೇಖಕರು ಇಲ್ಲಿನ ಸೂಕ್ಷ್ಮ ಸನ್ನಿವೇಶವನ್ನು, ಬುದ್ಧ ಮಾಡಿದ ಬದಲಾವಣೆಯಂತೆಯೇ ಕಟ್ಟಿಕೊಡಲು, ತಾವು ಒಂದು ಪಾತ್ರವಾಗಿ ಮೂಡಿಬಂದು, ಘಟನೆಯನ್ನು ಜೋಡಿಸಿಕೊಂಡು ಓದುಗರಿಗೆ ಕುತೂಹಲವನ್ನೂ, ತಿಳಿವಳಿಕೆಯನ್ನೂ ಮೂಡಿಸುತ್ತಾರೆ.

ಪ್ರಗತಿಪರ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಮತ್ತು ಅವರ ಹಿಂದೆ ಬಿದ್ದ ಪೊಲೀಸರ ನಡುವೆ ಸಮನ್ವಯ ಸಾಧಿಸುವ ಲೇಖಕರು, ಹೋರಾಟಗಾರರು ಮುಖ್ಯವಾಹಿನಿಗೆ ಬಂದ ನಂತರದ ಮುಂದಿನ ಯೋಜನೆಯನ್ನು ಜಾರಿಯಲ್ಲಿಡುವ ಭಾಗವಾಗಿ ಆರಂಭಿಕ ಸಭೆಗಳನ್ನು ನಡೆಸುತ್ತಾರೆ. ಅವರೇ ಕೊನೆಯಲ್ಲಿ ಹೇಳುವಂತೆ ಸಿದ್ಧತಾ ಪರ್ವ ಮುಗಿಯಿತೆಂದು ಕಥೆಯನ್ನು ಸಮಾಪ್ತಿ ಮಾಡುತ್ತಾರೆ. ಹೀಗೆ ಹೇಳುವಾಗ ಓದುಗನಿಗೆ ಧಾರಾವಾಹಿ ಎಪಿಸೋಡ್‌ಗಳ ಕಾಯುವಿಕೆಯ ಭಾಸವಾಗುತ್ತದೆ. ವರ್ತಮಾನದೊಂದಿಗೆ ಭೂತ ಮತ್ತು ಭವಿಷ್ಯತ್ತು ಬೆಸೆಯುವ ಈ ಭಾಗದಲ್ಲಿ ಲೇಖಕರ ವಿಶಿಷ್ಟ ನಿರೂಪಣೆ ಗಮನ ಸೆಳೆಯುತ್ತದೆ. ಎಪಿಸೋಡ್ 3 ಓದುವಾಗಲೆಲ್ಲಾ ನನ್ನೊಳಗಿನ ವಿಚಾರಗಳಿಗೆ ಪುಷ್ಟಿ ಸಿಗುತ್ತದೆ ಮತ್ತು ಸ್ಪಷ್ಟತೆ ದೊರಕುತ್ತದೆ. ಭ್ರಷ್ಟ ರಾಜಕಾರಣವನ್ನು ಕೊನೆಗಾಣಿಸಿ ಮತ್ತೊಂದು ಹೊಸ ಪಡೆಯನ್ನು ಕಟ್ಟುವ ಕನಸುಗಳ ಭಾಗವಾಗಿ ನಮ್ಮನ್ನು ಅದರಲ್ಲಿ ಸೇರಿಸಿಕೊಂಡು ಓದಿಸಿಕೊಂಡು ಹೋಗುತ್ತದೆ.

ಈ ಕೃತಿಯಲ್ಲಿ ಕಥೆಯನ್ನು ಜೋಡಿಸಿಕೊಂಡು ಹೊಸೆದಿರುವ ಬಗೆ ಹೊಸದು. ಇದು ಕಥೆಯೊಳಗಿನ ಕಾದಂಬರಿಯೋ, ಕಾದಂಬರಿಯೊಳಗಿನ ಅಧ್ಯಾಯವೋ, ಮಹಾ ಧಾರಾವಾಹಿಯ ಮೊದಲ ಕಂತೋ ಎಂಬ ಗೊಂದಲ ಉಂಟಾಗುತ್ತದೆ. ಆದರೆ, ಎಲ್ಲಿಯು ಬೋರಾಗದೆ ಓದಿಸಿಕೊಂಡುಹೋಗುವ, ಚರಿತ್ರೆಯೊಳಗಿನ ಹಲವು ಸಂಗತಿಗಳನ್ನು ವರ್ತಮಾನದ ಕನ್ನಡಿಯಲ್ಲಿ ನೋಡುವ ಬಗೆ ಆಪ್ತವಾಗಿಯೂ, ಗಹನವಾಗಿಯೂ ಮೂಡಿದೆ. ಮತ್ತೊಂದು ವಿಶೇಷವೇನೆಂದರೆ ಪೂನಾ ಒಪ್ಪಂದವನ್ನು ಬಹಳ ಸರಳವಾಗಿ ಹೇಳುತ್ತಾ ಲೇಖಕರು ನಮಗೆ ಆಪ್ತರಾಗಿಬಿಡುತ್ತಾರೆ. ಈ ಕೃತಿಯನ್ನು ಪೂರ್ಣ ಓದಿದನಂತರ ಲೇಖಕರ ಒಳಗಿನ ಬುದ್ಧತ್ವ ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸಿ ಬಾಬಾಸಾಹೇಬರ ಹಾದಿ ಎಂತಹುದು ಎಂದು ಅರಿವಿಗೆ ತರುತ್ತದೆ.

ಲೇಖಕರಾದ ಅಶೋಕ್‌ರವರ ಬದ್ಧತೆ ಮತ್ತು ವಿಷಯದ ಪ್ರಸ್ತುತತೆ ಜೊತೆಗೆ ಅವರು ಆರಿಸಿಕೊಂಡ ಪ್ರಕಾರ ನನಗಿಷ್ಟವಾಯಿತು. ಬುದ್ಧನ ಪ್ರೀತಿ ಇಲ್ಲಿದೆ ಎಂದುಕೊಳ್ಳುತ್ತೇನೆ…

ನಮೋ ಬುದ್ಧಾಯ, ಜೈಭೀಮ್

ರಮೇಶ್ ಗಬ್ಬೂರ್

ರಮೇಶ್ ಗಬ್ಬೂರ್
ಎದೆಯೊಳಗಿನ ಸಿಟ್ಟನ್ನು ಬಸಿದು ಅಕ್ಷರ ರೂಪ ಕೊಡುವ ರಮೇಶ್ ಗಬ್ಬೂರ್ ರವರು ಜನಕವಿ ಎಂದೇ ಪರಿಚಿತರು. ‘ಒಲಿದಂತೆ ಹಾಡುವೆ’ ಸೇರಿ ಹಲವು ಹೋರಾಟದ ಹಾಡುಗಳ ಪುಸ್ತಕ ರಚಿಸಿದ್ದಾರೆ. ಸದ್ಯಕ್ಕೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಅನಾರ್ಕಲಿಯ ಸೇಫ್ಟಿಪಿನ್: ಲಲಿತ ಪ್ರಬಂಧದ ಲಹರಿಗೆ ಬಿದ್ದ ಕತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...