Homeಅಂಕಣಗಳುನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ 'ಬುದ್ಧ ಬಾಬಾಸಾಹೇಬ ಮತ್ತು ನಾನು'

ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ ‘ಬುದ್ಧ ಬಾಬಾಸಾಹೇಬ ಮತ್ತು ನಾನು’

- Advertisement -
- Advertisement -

ಒಂದು ದಿನ ಸಂಜೆ ಮಹಾಲಕ್ಷ್ಮಿ ದಂತ ಚಿಕಿತ್ಸಾಲಯದ ಡಾಕ್ಟರ್ ಮತ್ತು ಕವಿ ಮಿತ್ರರಾದ ಶಿವಕುಮಾರ್ ಮಾಲಿಪಾಟೀಲ್‌ರವರ ಚೇಂಬರ್ ಪ್ರವೇಶಿಸಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡೆ. ಶೀರ್ಷಿಕೆ ಗಮನಸೆಳೆಯಿತು: ’ಬುದ್ಧ ಬಾಬಾಸಾಹೇಬ ಮತ್ತು ನಾನು’. ಅವರಿಂದ ಪುಸ್ತಕ ಪಡೆದು ಪುಟ ತಿರುವುತ್ತಾ ಹೋದೆ. ಕನ್ನಡ ನಾಡಿನ ಖ್ಯಾತ ನಟರಲ್ಲಿ ಒಬ್ಬರಾದ ಅಶೋಕ್ ಅವರಿಗೆ ಬುದ್ಧ ಮತ್ತು ಬಾಬಾಸಾಹೇಬರು ಹೇಗೆ ಅವಾಹಿಸಿಕೊಂಡಿರಬಹುದು, ನನ್ನ ಪ್ರೀತಿಯ ನಟನೊಬ್ಬನ ಮನದೊಳಗೆ ಬುದ್ಧ ಭೀಮರ ಪ್ರವೇಶ ಹೇಗಿರಬಹುದೆಂದು ಕುತೂಹಲದಿಂದ ಓದಲು ತೊಡಗಿದೆ.

ಶೂಟಿಂಗ್ ಸ್ಪಾಟ್ ಹಗಲು ಸ್ಟುಡಿಯೋ

ಶೂಟಿಂಗ್ ಸ್ಪಾಟ್‌ನಲ್ಲಿ ಪಾತ್ರಧಾರಿಯಾದ ಲೇಖಕರ ಪ್ರವೇಶದ ಜೊತೆಗೇ ಬುದ್ಧರ ಮತ್ತು ಪರಿವ್ರಾಜಕರ ಸಂಭಾಷಣೆ ಆರಂಭವಾಗುತ್ತದೆ. ಈ ಸಂಭಾಷಣೆಯನ್ನು ಹಲವು ಲೇಖಕರು ಬೇರೆಬೇರೆ ಪುಸ್ತಕಗಳಲ್ಲಿ ಬರೆದಿದ್ದಾರೆ. ಸ್ವತಃ ಅಂಬೇಡ್ಕರರು ತಮ್ಮ ಕೃತಿ ’ಬುದ್ಧ ಮತ್ತು ಆತನ ಧಮ್ಮ’ದಲ್ಲಿಯೂ ಬರೆದಿದ್ದಾರೆ. ಇಲ್ಲಿ ಬುದ್ಧ ಪರಿವ್ರಾಜಕರೊಡನೆ ಮಾತಾಡುತ್ತಿಲ್ಲ, ಬದಲಾಗಿ ಲೇಖಕರ ಒಳಗಿನ ಬುದ್ಧ ಜಾಗೃತನಾಗಿ, ಪಾತ್ರವಾಗಿ ಆವಾಹಿಸಿಕೊಂಡು ಮಾತನಾಡುವ ಬಗೆ ಮತ್ತು ಅಲ್ಲಿ ಕಟ್ಟಿಕೊಡುವ ಸನ್ನಿವೇಶಗಳಿಂದ, ಅಲ್ಲಿನ ಒಂದಷ್ಟು ಮಾತುಗಳು ಅತ್ಯುತ್ತಮವಾದ ಪ್ರವಚನದ ಹಿತ ನೀಡುತ್ತವೆ. ಮಹಾಜ್ಞಾನಿ ಬುದ್ಧನಿಗೆ ತಕ್ಕಂತೆ ಪಾತ್ರ ಮತ್ತು ಅದರ ವಿಚಾರಗಳನ್ನು ಇಲ್ಲಿ ಚರ್ಚೆ ಮಾಡಿಸಿರುವುದು ’ಬುದ್ಧ ಅಂಡ್ ಹಿಸ್ ಧಮ್ಮ’ವನ್ನು ಬಹಳ ಸರಳವಾಗಿ ವಿವರಿಸುತ್ತದೆ. ಈ ಮಾತುಗಳನ್ನು ಬರೆಯುವಾಗ ಲೇಖಕರು ಬಾಬಾಸಾಹೇಬರ ಸಂಪೂರ್ಣ ಮಾರ್ಗದ ಬಗ್ಗೆ ಸ್ಪಷ್ಟತೆಯನ್ನು ಹೊಂದಿ, ಅದನ್ನ ಮತ್ತೆ ಹೇಳುತ್ತಾ ತಮ್ಮ ಮಾರ್ಗವೂ ಸಹ ಇದೇ ಎಂಬುದನ್ನು ಇಲ್ಲಿ ಓದುಗರಿಗೆ ವಿಶದಪಡಿಸುತ್ತಾರೆ.

ಕಪಿಲವಸ್ತು ಅಧ್ಯಾಯದಲ್ಲಿ ಅಂಬೇಡ್ಕರ್‌ರವರು ತಮ್ಮ ಪತ್ನಿಯ ಜೊತೆ ಸಂಭಾಷಿಸುತ್ತಾ ಬುದ್ಧನ ಪ್ರಸ್ತುತತೆಯನ್ನು ಓದುಗರಿಗೆ ತಿಳಿಸುತ್ತಾರೆ. ಇಲ್ಲಿ ಲೇಖಕರ ಬದ್ಧತೆ ಸ್ವಲ್ಪವೂ ಅಲುಗಾಡದೆ ಸ್ಥಿರವಾಗಿದೆ. ಬುದ್ಧ ಯಾಕೆ ಈಗ ನಮಗೆ ಪ್ರಸ್ತುತ ಎಂದು ಹೇಳುತ್ತಾ “ಬುದ್ಧನ ಚಿಂತನೆಗಳು ಧಾರ್ಮಿಕವಲ್ಲ, ಅವು ಸಮಾಜಮುಖಿ” ಎನ್ನುವಾಗ ಲೇಖಕರು ವರ್ತಮಾನದ ಎಲ್ಲಾ ತಾಕಲಾಟಗಳಿಗೂ ಮಧ್ಯಮ ಮಾರ್ಗವನ್ನು ಸೂಚಿಸುತ್ತಾರೆ. ದೃಶ್ಯಮಾಧ್ಯಮದಲ್ಲಿ ಬುದ್ಧನನ್ನು ತರುವ ಬಗ್ಗೆ ಯೋಚಿಸುತ್ತಲೇ ಆರಂಭವಾಗುವ ಕಪಿಲವಸ್ತು ಅಧ್ಯಾಯ, ಬುದ್ಧನ ಬಾಲ್ಯದಿಂದ ಆತ ಮನೆ ಬಿಟ್ಟು ಹೋಗುವವರೆಗಿನ ಘಟನೆಗಳು ಸಂಕಲಿಸಿಕೊಳ್ಳುವಾಗ ಸಂಪ್ರದಾಯವಾದಿಗಳು ಬರೆದ ಪಠ್ಯಗಳನ್ನು ಮತ್ತು ಬಾಬಾಸಾಹೇಬರ ಸಂಶೋಧನಾತ್ಮಕ ಪಠ್ಯಗಳನ್ನು ಮುಖಾಮುಖಿಯಾಗಿಸುತ್ತಾರೆ.

ಎಪಿಸೋಡ್ ಮೂರರಲ್ಲಿ ಲೇಖಕರು ಒಂದು ಕುತೂಹಲಕರವಾದ ಸನ್ನಿವೇಶವನ್ನು ಕಟ್ಟಿಕೊಡುತ್ತಾರೆ. ಅದು ಕರ್ನಾಟಕದಲ್ಲಿ ನಡೆದ ಬಹುಮುಖ್ಯ ಘಟನೆಯೊಂದಿಗೆ ಆರಂಭವಾಗುತ್ತದೆ ಮತ್ತು ವರ್ತಮಾನಕ್ಕೆ ತಳುಕು ಹಾಕುತ್ತ ಸಾಗುತ್ತದೆ. ಆ ಭಾಗದಲ್ಲಿ ಮೂಡಿರುವ, ಸಶಸ್ತ್ರ ಹೋರಾಟ ಮಾಡುವ ತಂಡವನ್ನು ಮುಖ್ಯವಾಹಿನಿಗೆ ತರುವುದರೊಂದಿಗಿನ ಮಾತುಕತೆ ಕುತೂಹಲಕರವಾಗಿದೆ. ಈ ಸಂಭಾಷಣೆ ಓದುವಾಗಲೆಲ್ಲ ನನಗೆ ಬುದ್ಧನನ್ನು ಎದುರುಗೊಂಡ ಅಂಗುಲಿಮಾಲ ನೆನಪಾಗುತ್ತಾನೆ. ಲೇಖಕರು ಇಲ್ಲಿನ ಸೂಕ್ಷ್ಮ ಸನ್ನಿವೇಶವನ್ನು, ಬುದ್ಧ ಮಾಡಿದ ಬದಲಾವಣೆಯಂತೆಯೇ ಕಟ್ಟಿಕೊಡಲು, ತಾವು ಒಂದು ಪಾತ್ರವಾಗಿ ಮೂಡಿಬಂದು, ಘಟನೆಯನ್ನು ಜೋಡಿಸಿಕೊಂಡು ಓದುಗರಿಗೆ ಕುತೂಹಲವನ್ನೂ, ತಿಳಿವಳಿಕೆಯನ್ನೂ ಮೂಡಿಸುತ್ತಾರೆ.

ಪ್ರಗತಿಪರ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಮತ್ತು ಅವರ ಹಿಂದೆ ಬಿದ್ದ ಪೊಲೀಸರ ನಡುವೆ ಸಮನ್ವಯ ಸಾಧಿಸುವ ಲೇಖಕರು, ಹೋರಾಟಗಾರರು ಮುಖ್ಯವಾಹಿನಿಗೆ ಬಂದ ನಂತರದ ಮುಂದಿನ ಯೋಜನೆಯನ್ನು ಜಾರಿಯಲ್ಲಿಡುವ ಭಾಗವಾಗಿ ಆರಂಭಿಕ ಸಭೆಗಳನ್ನು ನಡೆಸುತ್ತಾರೆ. ಅವರೇ ಕೊನೆಯಲ್ಲಿ ಹೇಳುವಂತೆ ಸಿದ್ಧತಾ ಪರ್ವ ಮುಗಿಯಿತೆಂದು ಕಥೆಯನ್ನು ಸಮಾಪ್ತಿ ಮಾಡುತ್ತಾರೆ. ಹೀಗೆ ಹೇಳುವಾಗ ಓದುಗನಿಗೆ ಧಾರಾವಾಹಿ ಎಪಿಸೋಡ್‌ಗಳ ಕಾಯುವಿಕೆಯ ಭಾಸವಾಗುತ್ತದೆ. ವರ್ತಮಾನದೊಂದಿಗೆ ಭೂತ ಮತ್ತು ಭವಿಷ್ಯತ್ತು ಬೆಸೆಯುವ ಈ ಭಾಗದಲ್ಲಿ ಲೇಖಕರ ವಿಶಿಷ್ಟ ನಿರೂಪಣೆ ಗಮನ ಸೆಳೆಯುತ್ತದೆ. ಎಪಿಸೋಡ್ 3 ಓದುವಾಗಲೆಲ್ಲಾ ನನ್ನೊಳಗಿನ ವಿಚಾರಗಳಿಗೆ ಪುಷ್ಟಿ ಸಿಗುತ್ತದೆ ಮತ್ತು ಸ್ಪಷ್ಟತೆ ದೊರಕುತ್ತದೆ. ಭ್ರಷ್ಟ ರಾಜಕಾರಣವನ್ನು ಕೊನೆಗಾಣಿಸಿ ಮತ್ತೊಂದು ಹೊಸ ಪಡೆಯನ್ನು ಕಟ್ಟುವ ಕನಸುಗಳ ಭಾಗವಾಗಿ ನಮ್ಮನ್ನು ಅದರಲ್ಲಿ ಸೇರಿಸಿಕೊಂಡು ಓದಿಸಿಕೊಂಡು ಹೋಗುತ್ತದೆ.

ಈ ಕೃತಿಯಲ್ಲಿ ಕಥೆಯನ್ನು ಜೋಡಿಸಿಕೊಂಡು ಹೊಸೆದಿರುವ ಬಗೆ ಹೊಸದು. ಇದು ಕಥೆಯೊಳಗಿನ ಕಾದಂಬರಿಯೋ, ಕಾದಂಬರಿಯೊಳಗಿನ ಅಧ್ಯಾಯವೋ, ಮಹಾ ಧಾರಾವಾಹಿಯ ಮೊದಲ ಕಂತೋ ಎಂಬ ಗೊಂದಲ ಉಂಟಾಗುತ್ತದೆ. ಆದರೆ, ಎಲ್ಲಿಯು ಬೋರಾಗದೆ ಓದಿಸಿಕೊಂಡುಹೋಗುವ, ಚರಿತ್ರೆಯೊಳಗಿನ ಹಲವು ಸಂಗತಿಗಳನ್ನು ವರ್ತಮಾನದ ಕನ್ನಡಿಯಲ್ಲಿ ನೋಡುವ ಬಗೆ ಆಪ್ತವಾಗಿಯೂ, ಗಹನವಾಗಿಯೂ ಮೂಡಿದೆ. ಮತ್ತೊಂದು ವಿಶೇಷವೇನೆಂದರೆ ಪೂನಾ ಒಪ್ಪಂದವನ್ನು ಬಹಳ ಸರಳವಾಗಿ ಹೇಳುತ್ತಾ ಲೇಖಕರು ನಮಗೆ ಆಪ್ತರಾಗಿಬಿಡುತ್ತಾರೆ. ಈ ಕೃತಿಯನ್ನು ಪೂರ್ಣ ಓದಿದನಂತರ ಲೇಖಕರ ಒಳಗಿನ ಬುದ್ಧತ್ವ ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸಿ ಬಾಬಾಸಾಹೇಬರ ಹಾದಿ ಎಂತಹುದು ಎಂದು ಅರಿವಿಗೆ ತರುತ್ತದೆ.

ಲೇಖಕರಾದ ಅಶೋಕ್‌ರವರ ಬದ್ಧತೆ ಮತ್ತು ವಿಷಯದ ಪ್ರಸ್ತುತತೆ ಜೊತೆಗೆ ಅವರು ಆರಿಸಿಕೊಂಡ ಪ್ರಕಾರ ನನಗಿಷ್ಟವಾಯಿತು. ಬುದ್ಧನ ಪ್ರೀತಿ ಇಲ್ಲಿದೆ ಎಂದುಕೊಳ್ಳುತ್ತೇನೆ…

ನಮೋ ಬುದ್ಧಾಯ, ಜೈಭೀಮ್

ರಮೇಶ್ ಗಬ್ಬೂರ್

ರಮೇಶ್ ಗಬ್ಬೂರ್
ಎದೆಯೊಳಗಿನ ಸಿಟ್ಟನ್ನು ಬಸಿದು ಅಕ್ಷರ ರೂಪ ಕೊಡುವ ರಮೇಶ್ ಗಬ್ಬೂರ್ ರವರು ಜನಕವಿ ಎಂದೇ ಪರಿಚಿತರು. ‘ಒಲಿದಂತೆ ಹಾಡುವೆ’ ಸೇರಿ ಹಲವು ಹೋರಾಟದ ಹಾಡುಗಳ ಪುಸ್ತಕ ರಚಿಸಿದ್ದಾರೆ. ಸದ್ಯಕ್ಕೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಅನಾರ್ಕಲಿಯ ಸೇಫ್ಟಿಪಿನ್: ಲಲಿತ ಪ್ರಬಂಧದ ಲಹರಿಗೆ ಬಿದ್ದ ಕತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...