Homeಅಂಕಣಗಳುನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ 'ಬುದ್ಧ ಬಾಬಾಸಾಹೇಬ ಮತ್ತು ನಾನು'

ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ ‘ಬುದ್ಧ ಬಾಬಾಸಾಹೇಬ ಮತ್ತು ನಾನು’

- Advertisement -
- Advertisement -

ಒಂದು ದಿನ ಸಂಜೆ ಮಹಾಲಕ್ಷ್ಮಿ ದಂತ ಚಿಕಿತ್ಸಾಲಯದ ಡಾಕ್ಟರ್ ಮತ್ತು ಕವಿ ಮಿತ್ರರಾದ ಶಿವಕುಮಾರ್ ಮಾಲಿಪಾಟೀಲ್‌ರವರ ಚೇಂಬರ್ ಪ್ರವೇಶಿಸಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡೆ. ಶೀರ್ಷಿಕೆ ಗಮನಸೆಳೆಯಿತು: ’ಬುದ್ಧ ಬಾಬಾಸಾಹೇಬ ಮತ್ತು ನಾನು’. ಅವರಿಂದ ಪುಸ್ತಕ ಪಡೆದು ಪುಟ ತಿರುವುತ್ತಾ ಹೋದೆ. ಕನ್ನಡ ನಾಡಿನ ಖ್ಯಾತ ನಟರಲ್ಲಿ ಒಬ್ಬರಾದ ಅಶೋಕ್ ಅವರಿಗೆ ಬುದ್ಧ ಮತ್ತು ಬಾಬಾಸಾಹೇಬರು ಹೇಗೆ ಅವಾಹಿಸಿಕೊಂಡಿರಬಹುದು, ನನ್ನ ಪ್ರೀತಿಯ ನಟನೊಬ್ಬನ ಮನದೊಳಗೆ ಬುದ್ಧ ಭೀಮರ ಪ್ರವೇಶ ಹೇಗಿರಬಹುದೆಂದು ಕುತೂಹಲದಿಂದ ಓದಲು ತೊಡಗಿದೆ.

ಶೂಟಿಂಗ್ ಸ್ಪಾಟ್ ಹಗಲು ಸ್ಟುಡಿಯೋ

ಶೂಟಿಂಗ್ ಸ್ಪಾಟ್‌ನಲ್ಲಿ ಪಾತ್ರಧಾರಿಯಾದ ಲೇಖಕರ ಪ್ರವೇಶದ ಜೊತೆಗೇ ಬುದ್ಧರ ಮತ್ತು ಪರಿವ್ರಾಜಕರ ಸಂಭಾಷಣೆ ಆರಂಭವಾಗುತ್ತದೆ. ಈ ಸಂಭಾಷಣೆಯನ್ನು ಹಲವು ಲೇಖಕರು ಬೇರೆಬೇರೆ ಪುಸ್ತಕಗಳಲ್ಲಿ ಬರೆದಿದ್ದಾರೆ. ಸ್ವತಃ ಅಂಬೇಡ್ಕರರು ತಮ್ಮ ಕೃತಿ ’ಬುದ್ಧ ಮತ್ತು ಆತನ ಧಮ್ಮ’ದಲ್ಲಿಯೂ ಬರೆದಿದ್ದಾರೆ. ಇಲ್ಲಿ ಬುದ್ಧ ಪರಿವ್ರಾಜಕರೊಡನೆ ಮಾತಾಡುತ್ತಿಲ್ಲ, ಬದಲಾಗಿ ಲೇಖಕರ ಒಳಗಿನ ಬುದ್ಧ ಜಾಗೃತನಾಗಿ, ಪಾತ್ರವಾಗಿ ಆವಾಹಿಸಿಕೊಂಡು ಮಾತನಾಡುವ ಬಗೆ ಮತ್ತು ಅಲ್ಲಿ ಕಟ್ಟಿಕೊಡುವ ಸನ್ನಿವೇಶಗಳಿಂದ, ಅಲ್ಲಿನ ಒಂದಷ್ಟು ಮಾತುಗಳು ಅತ್ಯುತ್ತಮವಾದ ಪ್ರವಚನದ ಹಿತ ನೀಡುತ್ತವೆ. ಮಹಾಜ್ಞಾನಿ ಬುದ್ಧನಿಗೆ ತಕ್ಕಂತೆ ಪಾತ್ರ ಮತ್ತು ಅದರ ವಿಚಾರಗಳನ್ನು ಇಲ್ಲಿ ಚರ್ಚೆ ಮಾಡಿಸಿರುವುದು ’ಬುದ್ಧ ಅಂಡ್ ಹಿಸ್ ಧಮ್ಮ’ವನ್ನು ಬಹಳ ಸರಳವಾಗಿ ವಿವರಿಸುತ್ತದೆ. ಈ ಮಾತುಗಳನ್ನು ಬರೆಯುವಾಗ ಲೇಖಕರು ಬಾಬಾಸಾಹೇಬರ ಸಂಪೂರ್ಣ ಮಾರ್ಗದ ಬಗ್ಗೆ ಸ್ಪಷ್ಟತೆಯನ್ನು ಹೊಂದಿ, ಅದನ್ನ ಮತ್ತೆ ಹೇಳುತ್ತಾ ತಮ್ಮ ಮಾರ್ಗವೂ ಸಹ ಇದೇ ಎಂಬುದನ್ನು ಇಲ್ಲಿ ಓದುಗರಿಗೆ ವಿಶದಪಡಿಸುತ್ತಾರೆ.

ಕಪಿಲವಸ್ತು ಅಧ್ಯಾಯದಲ್ಲಿ ಅಂಬೇಡ್ಕರ್‌ರವರು ತಮ್ಮ ಪತ್ನಿಯ ಜೊತೆ ಸಂಭಾಷಿಸುತ್ತಾ ಬುದ್ಧನ ಪ್ರಸ್ತುತತೆಯನ್ನು ಓದುಗರಿಗೆ ತಿಳಿಸುತ್ತಾರೆ. ಇಲ್ಲಿ ಲೇಖಕರ ಬದ್ಧತೆ ಸ್ವಲ್ಪವೂ ಅಲುಗಾಡದೆ ಸ್ಥಿರವಾಗಿದೆ. ಬುದ್ಧ ಯಾಕೆ ಈಗ ನಮಗೆ ಪ್ರಸ್ತುತ ಎಂದು ಹೇಳುತ್ತಾ “ಬುದ್ಧನ ಚಿಂತನೆಗಳು ಧಾರ್ಮಿಕವಲ್ಲ, ಅವು ಸಮಾಜಮುಖಿ” ಎನ್ನುವಾಗ ಲೇಖಕರು ವರ್ತಮಾನದ ಎಲ್ಲಾ ತಾಕಲಾಟಗಳಿಗೂ ಮಧ್ಯಮ ಮಾರ್ಗವನ್ನು ಸೂಚಿಸುತ್ತಾರೆ. ದೃಶ್ಯಮಾಧ್ಯಮದಲ್ಲಿ ಬುದ್ಧನನ್ನು ತರುವ ಬಗ್ಗೆ ಯೋಚಿಸುತ್ತಲೇ ಆರಂಭವಾಗುವ ಕಪಿಲವಸ್ತು ಅಧ್ಯಾಯ, ಬುದ್ಧನ ಬಾಲ್ಯದಿಂದ ಆತ ಮನೆ ಬಿಟ್ಟು ಹೋಗುವವರೆಗಿನ ಘಟನೆಗಳು ಸಂಕಲಿಸಿಕೊಳ್ಳುವಾಗ ಸಂಪ್ರದಾಯವಾದಿಗಳು ಬರೆದ ಪಠ್ಯಗಳನ್ನು ಮತ್ತು ಬಾಬಾಸಾಹೇಬರ ಸಂಶೋಧನಾತ್ಮಕ ಪಠ್ಯಗಳನ್ನು ಮುಖಾಮುಖಿಯಾಗಿಸುತ್ತಾರೆ.

ಎಪಿಸೋಡ್ ಮೂರರಲ್ಲಿ ಲೇಖಕರು ಒಂದು ಕುತೂಹಲಕರವಾದ ಸನ್ನಿವೇಶವನ್ನು ಕಟ್ಟಿಕೊಡುತ್ತಾರೆ. ಅದು ಕರ್ನಾಟಕದಲ್ಲಿ ನಡೆದ ಬಹುಮುಖ್ಯ ಘಟನೆಯೊಂದಿಗೆ ಆರಂಭವಾಗುತ್ತದೆ ಮತ್ತು ವರ್ತಮಾನಕ್ಕೆ ತಳುಕು ಹಾಕುತ್ತ ಸಾಗುತ್ತದೆ. ಆ ಭಾಗದಲ್ಲಿ ಮೂಡಿರುವ, ಸಶಸ್ತ್ರ ಹೋರಾಟ ಮಾಡುವ ತಂಡವನ್ನು ಮುಖ್ಯವಾಹಿನಿಗೆ ತರುವುದರೊಂದಿಗಿನ ಮಾತುಕತೆ ಕುತೂಹಲಕರವಾಗಿದೆ. ಈ ಸಂಭಾಷಣೆ ಓದುವಾಗಲೆಲ್ಲ ನನಗೆ ಬುದ್ಧನನ್ನು ಎದುರುಗೊಂಡ ಅಂಗುಲಿಮಾಲ ನೆನಪಾಗುತ್ತಾನೆ. ಲೇಖಕರು ಇಲ್ಲಿನ ಸೂಕ್ಷ್ಮ ಸನ್ನಿವೇಶವನ್ನು, ಬುದ್ಧ ಮಾಡಿದ ಬದಲಾವಣೆಯಂತೆಯೇ ಕಟ್ಟಿಕೊಡಲು, ತಾವು ಒಂದು ಪಾತ್ರವಾಗಿ ಮೂಡಿಬಂದು, ಘಟನೆಯನ್ನು ಜೋಡಿಸಿಕೊಂಡು ಓದುಗರಿಗೆ ಕುತೂಹಲವನ್ನೂ, ತಿಳಿವಳಿಕೆಯನ್ನೂ ಮೂಡಿಸುತ್ತಾರೆ.

ಪ್ರಗತಿಪರ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಮತ್ತು ಅವರ ಹಿಂದೆ ಬಿದ್ದ ಪೊಲೀಸರ ನಡುವೆ ಸಮನ್ವಯ ಸಾಧಿಸುವ ಲೇಖಕರು, ಹೋರಾಟಗಾರರು ಮುಖ್ಯವಾಹಿನಿಗೆ ಬಂದ ನಂತರದ ಮುಂದಿನ ಯೋಜನೆಯನ್ನು ಜಾರಿಯಲ್ಲಿಡುವ ಭಾಗವಾಗಿ ಆರಂಭಿಕ ಸಭೆಗಳನ್ನು ನಡೆಸುತ್ತಾರೆ. ಅವರೇ ಕೊನೆಯಲ್ಲಿ ಹೇಳುವಂತೆ ಸಿದ್ಧತಾ ಪರ್ವ ಮುಗಿಯಿತೆಂದು ಕಥೆಯನ್ನು ಸಮಾಪ್ತಿ ಮಾಡುತ್ತಾರೆ. ಹೀಗೆ ಹೇಳುವಾಗ ಓದುಗನಿಗೆ ಧಾರಾವಾಹಿ ಎಪಿಸೋಡ್‌ಗಳ ಕಾಯುವಿಕೆಯ ಭಾಸವಾಗುತ್ತದೆ. ವರ್ತಮಾನದೊಂದಿಗೆ ಭೂತ ಮತ್ತು ಭವಿಷ್ಯತ್ತು ಬೆಸೆಯುವ ಈ ಭಾಗದಲ್ಲಿ ಲೇಖಕರ ವಿಶಿಷ್ಟ ನಿರೂಪಣೆ ಗಮನ ಸೆಳೆಯುತ್ತದೆ. ಎಪಿಸೋಡ್ 3 ಓದುವಾಗಲೆಲ್ಲಾ ನನ್ನೊಳಗಿನ ವಿಚಾರಗಳಿಗೆ ಪುಷ್ಟಿ ಸಿಗುತ್ತದೆ ಮತ್ತು ಸ್ಪಷ್ಟತೆ ದೊರಕುತ್ತದೆ. ಭ್ರಷ್ಟ ರಾಜಕಾರಣವನ್ನು ಕೊನೆಗಾಣಿಸಿ ಮತ್ತೊಂದು ಹೊಸ ಪಡೆಯನ್ನು ಕಟ್ಟುವ ಕನಸುಗಳ ಭಾಗವಾಗಿ ನಮ್ಮನ್ನು ಅದರಲ್ಲಿ ಸೇರಿಸಿಕೊಂಡು ಓದಿಸಿಕೊಂಡು ಹೋಗುತ್ತದೆ.

ಈ ಕೃತಿಯಲ್ಲಿ ಕಥೆಯನ್ನು ಜೋಡಿಸಿಕೊಂಡು ಹೊಸೆದಿರುವ ಬಗೆ ಹೊಸದು. ಇದು ಕಥೆಯೊಳಗಿನ ಕಾದಂಬರಿಯೋ, ಕಾದಂಬರಿಯೊಳಗಿನ ಅಧ್ಯಾಯವೋ, ಮಹಾ ಧಾರಾವಾಹಿಯ ಮೊದಲ ಕಂತೋ ಎಂಬ ಗೊಂದಲ ಉಂಟಾಗುತ್ತದೆ. ಆದರೆ, ಎಲ್ಲಿಯು ಬೋರಾಗದೆ ಓದಿಸಿಕೊಂಡುಹೋಗುವ, ಚರಿತ್ರೆಯೊಳಗಿನ ಹಲವು ಸಂಗತಿಗಳನ್ನು ವರ್ತಮಾನದ ಕನ್ನಡಿಯಲ್ಲಿ ನೋಡುವ ಬಗೆ ಆಪ್ತವಾಗಿಯೂ, ಗಹನವಾಗಿಯೂ ಮೂಡಿದೆ. ಮತ್ತೊಂದು ವಿಶೇಷವೇನೆಂದರೆ ಪೂನಾ ಒಪ್ಪಂದವನ್ನು ಬಹಳ ಸರಳವಾಗಿ ಹೇಳುತ್ತಾ ಲೇಖಕರು ನಮಗೆ ಆಪ್ತರಾಗಿಬಿಡುತ್ತಾರೆ. ಈ ಕೃತಿಯನ್ನು ಪೂರ್ಣ ಓದಿದನಂತರ ಲೇಖಕರ ಒಳಗಿನ ಬುದ್ಧತ್ವ ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸಿ ಬಾಬಾಸಾಹೇಬರ ಹಾದಿ ಎಂತಹುದು ಎಂದು ಅರಿವಿಗೆ ತರುತ್ತದೆ.

ಲೇಖಕರಾದ ಅಶೋಕ್‌ರವರ ಬದ್ಧತೆ ಮತ್ತು ವಿಷಯದ ಪ್ರಸ್ತುತತೆ ಜೊತೆಗೆ ಅವರು ಆರಿಸಿಕೊಂಡ ಪ್ರಕಾರ ನನಗಿಷ್ಟವಾಯಿತು. ಬುದ್ಧನ ಪ್ರೀತಿ ಇಲ್ಲಿದೆ ಎಂದುಕೊಳ್ಳುತ್ತೇನೆ…

ನಮೋ ಬುದ್ಧಾಯ, ಜೈಭೀಮ್

ರಮೇಶ್ ಗಬ್ಬೂರ್

ರಮೇಶ್ ಗಬ್ಬೂರ್
ಎದೆಯೊಳಗಿನ ಸಿಟ್ಟನ್ನು ಬಸಿದು ಅಕ್ಷರ ರೂಪ ಕೊಡುವ ರಮೇಶ್ ಗಬ್ಬೂರ್ ರವರು ಜನಕವಿ ಎಂದೇ ಪರಿಚಿತರು. ‘ಒಲಿದಂತೆ ಹಾಡುವೆ’ ಸೇರಿ ಹಲವು ಹೋರಾಟದ ಹಾಡುಗಳ ಪುಸ್ತಕ ರಚಿಸಿದ್ದಾರೆ. ಸದ್ಯಕ್ಕೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಅನಾರ್ಕಲಿಯ ಸೇಫ್ಟಿಪಿನ್: ಲಲಿತ ಪ್ರಬಂಧದ ಲಹರಿಗೆ ಬಿದ್ದ ಕತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...

ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್‌ಟಿಎಸ್‌ ವಿಶೇಷ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಿದ ಇಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸ ಎಫ್‌ಐಆರ್‌ ದಾಖಲಿಸಿದೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...

‘ಸಂಚಾರ ಸಾಥಿ’ ಆ್ಯಪ್‌ ಕಡ್ಡಾಯ: ಬಿಜೆಪಿ ದೇಶವನ್ನು ಸರ್ವಾಧಿಕಾರ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದೆ ಎಂದ ಪ್ರಿಯಾಂಕಾ ಗಾಂಧಿ 

ಮೊಬೈಲ್ ಫೋನ್ ತಯಾರಕರು ಹೊಸ ಹ್ಯಾಂಡ್‌ಸೆಟ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊದಲೇ ಸ್ಥಾಪಿಸುವಂತೆ ಟೆಲಿಕಾಂ ಇಲಾಖೆ ಕೇಳಿಕೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಇದನ್ನು "ಗೂಢಚಾರಿ ಅಪ್ಲಿಕೇಶನ್" ಎಂದು ಕರೆದಿದ್ದಾರೆ....

ಎಸ್‌ಐಆರ್ ಚರ್ಚೆಗೆ ಬಿಗಿಪಟ್ಟು ಹಿಡಿದ ಪ್ರತಿಪಕ್ಷಗಳು, ಉಭಯ ಸದನಗಳಲ್ಲಿ ಕೋಲಾಹಲ ; ಕಲಾಪ ಮುಂದೂಡಿಕೆ

ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದೂ (ಡಿ.2) ಕೂಡ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದೆ....

ಆಂಧ್ರಪ್ರದೇಶ| ‘ನೀವು ಕೊಳಕು ಜಾತಿಗೆ ಸೇರಿದವರು..’ ಎಂದು ದಲಿತ ವಿದ್ಯಾರ್ಥಿಗಳನ್ನು ನಿಂದಿಸಿದ ಇಂಗ್ಲಿಷ್ ಶಿಕ್ಷಕ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಿಂದ ಆಘಾತಕಾರಿ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಯಂಡಪಲ್ಲಿ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕರು ದಲಿತ ಸಮುದಾಯದ ವಿದ್ಯಾರ್ಥಿಗಳ ವಿರುದ್ಧ ಜಾತಿ ನಿಂದನೆ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು...

ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿದ ಕೇಂದ್ರ : ಗೌಪ್ಯತೆ ಕಳೆದುಕೊಳ್ಳುವ ಆತಂಕ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ಸೈಬರ್ ಭದ್ರತಾ ಅಪ್ಲಿಕೇಶನ್ 'ಸಂಚಾರ್ ಸಾಥಿ'ಯನ್ನು ಮೊದಲೇ ಇನ್‌ಸ್ಟಾಲ್‌ (Pre-install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂದು...

ಗಡಿಪಾರು ಮಾಡಲಾಗಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾ ಜೈಲಿನಿಂದ ಬಿಡುಗಡೆ

ಅಕ್ರಮ ವಲಸಿಗರು ಎಂದು ಭಾರತೀಯ ಅಧಿಕಾರಿಗಳು ಬಲವಂತವಾಗಿ ಗಡಿಯಾಚೆಗೆ ತಳ್ಳಿರುವ ತುಂಬು ಗರ್ಭಿಣಿ ಬಂಗಾಳಿ ಮಹಿಳೆ ಬಾಂಗ್ಲಾದೇಶದ ಜೈಲಿನಿಂದ ಸೋಮವಾರ (ಡಿಸೆಂಬರ್ 1) ಸಂಜೆ ಬಿಡುಗಡೆಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ...

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು 'ಮದುವೆ'ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ...