Homeಅಂಕಣಗಳುನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ 'ಬುದ್ಧ ಬಾಬಾಸಾಹೇಬ ಮತ್ತು ನಾನು'

ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ ‘ಬುದ್ಧ ಬಾಬಾಸಾಹೇಬ ಮತ್ತು ನಾನು’

- Advertisement -
- Advertisement -

ಒಂದು ದಿನ ಸಂಜೆ ಮಹಾಲಕ್ಷ್ಮಿ ದಂತ ಚಿಕಿತ್ಸಾಲಯದ ಡಾಕ್ಟರ್ ಮತ್ತು ಕವಿ ಮಿತ್ರರಾದ ಶಿವಕುಮಾರ್ ಮಾಲಿಪಾಟೀಲ್‌ರವರ ಚೇಂಬರ್ ಪ್ರವೇಶಿಸಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡೆ. ಶೀರ್ಷಿಕೆ ಗಮನಸೆಳೆಯಿತು: ’ಬುದ್ಧ ಬಾಬಾಸಾಹೇಬ ಮತ್ತು ನಾನು’. ಅವರಿಂದ ಪುಸ್ತಕ ಪಡೆದು ಪುಟ ತಿರುವುತ್ತಾ ಹೋದೆ. ಕನ್ನಡ ನಾಡಿನ ಖ್ಯಾತ ನಟರಲ್ಲಿ ಒಬ್ಬರಾದ ಅಶೋಕ್ ಅವರಿಗೆ ಬುದ್ಧ ಮತ್ತು ಬಾಬಾಸಾಹೇಬರು ಹೇಗೆ ಅವಾಹಿಸಿಕೊಂಡಿರಬಹುದು, ನನ್ನ ಪ್ರೀತಿಯ ನಟನೊಬ್ಬನ ಮನದೊಳಗೆ ಬುದ್ಧ ಭೀಮರ ಪ್ರವೇಶ ಹೇಗಿರಬಹುದೆಂದು ಕುತೂಹಲದಿಂದ ಓದಲು ತೊಡಗಿದೆ.

ಶೂಟಿಂಗ್ ಸ್ಪಾಟ್ ಹಗಲು ಸ್ಟುಡಿಯೋ

ಶೂಟಿಂಗ್ ಸ್ಪಾಟ್‌ನಲ್ಲಿ ಪಾತ್ರಧಾರಿಯಾದ ಲೇಖಕರ ಪ್ರವೇಶದ ಜೊತೆಗೇ ಬುದ್ಧರ ಮತ್ತು ಪರಿವ್ರಾಜಕರ ಸಂಭಾಷಣೆ ಆರಂಭವಾಗುತ್ತದೆ. ಈ ಸಂಭಾಷಣೆಯನ್ನು ಹಲವು ಲೇಖಕರು ಬೇರೆಬೇರೆ ಪುಸ್ತಕಗಳಲ್ಲಿ ಬರೆದಿದ್ದಾರೆ. ಸ್ವತಃ ಅಂಬೇಡ್ಕರರು ತಮ್ಮ ಕೃತಿ ’ಬುದ್ಧ ಮತ್ತು ಆತನ ಧಮ್ಮ’ದಲ್ಲಿಯೂ ಬರೆದಿದ್ದಾರೆ. ಇಲ್ಲಿ ಬುದ್ಧ ಪರಿವ್ರಾಜಕರೊಡನೆ ಮಾತಾಡುತ್ತಿಲ್ಲ, ಬದಲಾಗಿ ಲೇಖಕರ ಒಳಗಿನ ಬುದ್ಧ ಜಾಗೃತನಾಗಿ, ಪಾತ್ರವಾಗಿ ಆವಾಹಿಸಿಕೊಂಡು ಮಾತನಾಡುವ ಬಗೆ ಮತ್ತು ಅಲ್ಲಿ ಕಟ್ಟಿಕೊಡುವ ಸನ್ನಿವೇಶಗಳಿಂದ, ಅಲ್ಲಿನ ಒಂದಷ್ಟು ಮಾತುಗಳು ಅತ್ಯುತ್ತಮವಾದ ಪ್ರವಚನದ ಹಿತ ನೀಡುತ್ತವೆ. ಮಹಾಜ್ಞಾನಿ ಬುದ್ಧನಿಗೆ ತಕ್ಕಂತೆ ಪಾತ್ರ ಮತ್ತು ಅದರ ವಿಚಾರಗಳನ್ನು ಇಲ್ಲಿ ಚರ್ಚೆ ಮಾಡಿಸಿರುವುದು ’ಬುದ್ಧ ಅಂಡ್ ಹಿಸ್ ಧಮ್ಮ’ವನ್ನು ಬಹಳ ಸರಳವಾಗಿ ವಿವರಿಸುತ್ತದೆ. ಈ ಮಾತುಗಳನ್ನು ಬರೆಯುವಾಗ ಲೇಖಕರು ಬಾಬಾಸಾಹೇಬರ ಸಂಪೂರ್ಣ ಮಾರ್ಗದ ಬಗ್ಗೆ ಸ್ಪಷ್ಟತೆಯನ್ನು ಹೊಂದಿ, ಅದನ್ನ ಮತ್ತೆ ಹೇಳುತ್ತಾ ತಮ್ಮ ಮಾರ್ಗವೂ ಸಹ ಇದೇ ಎಂಬುದನ್ನು ಇಲ್ಲಿ ಓದುಗರಿಗೆ ವಿಶದಪಡಿಸುತ್ತಾರೆ.

ಕಪಿಲವಸ್ತು ಅಧ್ಯಾಯದಲ್ಲಿ ಅಂಬೇಡ್ಕರ್‌ರವರು ತಮ್ಮ ಪತ್ನಿಯ ಜೊತೆ ಸಂಭಾಷಿಸುತ್ತಾ ಬುದ್ಧನ ಪ್ರಸ್ತುತತೆಯನ್ನು ಓದುಗರಿಗೆ ತಿಳಿಸುತ್ತಾರೆ. ಇಲ್ಲಿ ಲೇಖಕರ ಬದ್ಧತೆ ಸ್ವಲ್ಪವೂ ಅಲುಗಾಡದೆ ಸ್ಥಿರವಾಗಿದೆ. ಬುದ್ಧ ಯಾಕೆ ಈಗ ನಮಗೆ ಪ್ರಸ್ತುತ ಎಂದು ಹೇಳುತ್ತಾ “ಬುದ್ಧನ ಚಿಂತನೆಗಳು ಧಾರ್ಮಿಕವಲ್ಲ, ಅವು ಸಮಾಜಮುಖಿ” ಎನ್ನುವಾಗ ಲೇಖಕರು ವರ್ತಮಾನದ ಎಲ್ಲಾ ತಾಕಲಾಟಗಳಿಗೂ ಮಧ್ಯಮ ಮಾರ್ಗವನ್ನು ಸೂಚಿಸುತ್ತಾರೆ. ದೃಶ್ಯಮಾಧ್ಯಮದಲ್ಲಿ ಬುದ್ಧನನ್ನು ತರುವ ಬಗ್ಗೆ ಯೋಚಿಸುತ್ತಲೇ ಆರಂಭವಾಗುವ ಕಪಿಲವಸ್ತು ಅಧ್ಯಾಯ, ಬುದ್ಧನ ಬಾಲ್ಯದಿಂದ ಆತ ಮನೆ ಬಿಟ್ಟು ಹೋಗುವವರೆಗಿನ ಘಟನೆಗಳು ಸಂಕಲಿಸಿಕೊಳ್ಳುವಾಗ ಸಂಪ್ರದಾಯವಾದಿಗಳು ಬರೆದ ಪಠ್ಯಗಳನ್ನು ಮತ್ತು ಬಾಬಾಸಾಹೇಬರ ಸಂಶೋಧನಾತ್ಮಕ ಪಠ್ಯಗಳನ್ನು ಮುಖಾಮುಖಿಯಾಗಿಸುತ್ತಾರೆ.

ಎಪಿಸೋಡ್ ಮೂರರಲ್ಲಿ ಲೇಖಕರು ಒಂದು ಕುತೂಹಲಕರವಾದ ಸನ್ನಿವೇಶವನ್ನು ಕಟ್ಟಿಕೊಡುತ್ತಾರೆ. ಅದು ಕರ್ನಾಟಕದಲ್ಲಿ ನಡೆದ ಬಹುಮುಖ್ಯ ಘಟನೆಯೊಂದಿಗೆ ಆರಂಭವಾಗುತ್ತದೆ ಮತ್ತು ವರ್ತಮಾನಕ್ಕೆ ತಳುಕು ಹಾಕುತ್ತ ಸಾಗುತ್ತದೆ. ಆ ಭಾಗದಲ್ಲಿ ಮೂಡಿರುವ, ಸಶಸ್ತ್ರ ಹೋರಾಟ ಮಾಡುವ ತಂಡವನ್ನು ಮುಖ್ಯವಾಹಿನಿಗೆ ತರುವುದರೊಂದಿಗಿನ ಮಾತುಕತೆ ಕುತೂಹಲಕರವಾಗಿದೆ. ಈ ಸಂಭಾಷಣೆ ಓದುವಾಗಲೆಲ್ಲ ನನಗೆ ಬುದ್ಧನನ್ನು ಎದುರುಗೊಂಡ ಅಂಗುಲಿಮಾಲ ನೆನಪಾಗುತ್ತಾನೆ. ಲೇಖಕರು ಇಲ್ಲಿನ ಸೂಕ್ಷ್ಮ ಸನ್ನಿವೇಶವನ್ನು, ಬುದ್ಧ ಮಾಡಿದ ಬದಲಾವಣೆಯಂತೆಯೇ ಕಟ್ಟಿಕೊಡಲು, ತಾವು ಒಂದು ಪಾತ್ರವಾಗಿ ಮೂಡಿಬಂದು, ಘಟನೆಯನ್ನು ಜೋಡಿಸಿಕೊಂಡು ಓದುಗರಿಗೆ ಕುತೂಹಲವನ್ನೂ, ತಿಳಿವಳಿಕೆಯನ್ನೂ ಮೂಡಿಸುತ್ತಾರೆ.

ಪ್ರಗತಿಪರ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಮತ್ತು ಅವರ ಹಿಂದೆ ಬಿದ್ದ ಪೊಲೀಸರ ನಡುವೆ ಸಮನ್ವಯ ಸಾಧಿಸುವ ಲೇಖಕರು, ಹೋರಾಟಗಾರರು ಮುಖ್ಯವಾಹಿನಿಗೆ ಬಂದ ನಂತರದ ಮುಂದಿನ ಯೋಜನೆಯನ್ನು ಜಾರಿಯಲ್ಲಿಡುವ ಭಾಗವಾಗಿ ಆರಂಭಿಕ ಸಭೆಗಳನ್ನು ನಡೆಸುತ್ತಾರೆ. ಅವರೇ ಕೊನೆಯಲ್ಲಿ ಹೇಳುವಂತೆ ಸಿದ್ಧತಾ ಪರ್ವ ಮುಗಿಯಿತೆಂದು ಕಥೆಯನ್ನು ಸಮಾಪ್ತಿ ಮಾಡುತ್ತಾರೆ. ಹೀಗೆ ಹೇಳುವಾಗ ಓದುಗನಿಗೆ ಧಾರಾವಾಹಿ ಎಪಿಸೋಡ್‌ಗಳ ಕಾಯುವಿಕೆಯ ಭಾಸವಾಗುತ್ತದೆ. ವರ್ತಮಾನದೊಂದಿಗೆ ಭೂತ ಮತ್ತು ಭವಿಷ್ಯತ್ತು ಬೆಸೆಯುವ ಈ ಭಾಗದಲ್ಲಿ ಲೇಖಕರ ವಿಶಿಷ್ಟ ನಿರೂಪಣೆ ಗಮನ ಸೆಳೆಯುತ್ತದೆ. ಎಪಿಸೋಡ್ 3 ಓದುವಾಗಲೆಲ್ಲಾ ನನ್ನೊಳಗಿನ ವಿಚಾರಗಳಿಗೆ ಪುಷ್ಟಿ ಸಿಗುತ್ತದೆ ಮತ್ತು ಸ್ಪಷ್ಟತೆ ದೊರಕುತ್ತದೆ. ಭ್ರಷ್ಟ ರಾಜಕಾರಣವನ್ನು ಕೊನೆಗಾಣಿಸಿ ಮತ್ತೊಂದು ಹೊಸ ಪಡೆಯನ್ನು ಕಟ್ಟುವ ಕನಸುಗಳ ಭಾಗವಾಗಿ ನಮ್ಮನ್ನು ಅದರಲ್ಲಿ ಸೇರಿಸಿಕೊಂಡು ಓದಿಸಿಕೊಂಡು ಹೋಗುತ್ತದೆ.

ಈ ಕೃತಿಯಲ್ಲಿ ಕಥೆಯನ್ನು ಜೋಡಿಸಿಕೊಂಡು ಹೊಸೆದಿರುವ ಬಗೆ ಹೊಸದು. ಇದು ಕಥೆಯೊಳಗಿನ ಕಾದಂಬರಿಯೋ, ಕಾದಂಬರಿಯೊಳಗಿನ ಅಧ್ಯಾಯವೋ, ಮಹಾ ಧಾರಾವಾಹಿಯ ಮೊದಲ ಕಂತೋ ಎಂಬ ಗೊಂದಲ ಉಂಟಾಗುತ್ತದೆ. ಆದರೆ, ಎಲ್ಲಿಯು ಬೋರಾಗದೆ ಓದಿಸಿಕೊಂಡುಹೋಗುವ, ಚರಿತ್ರೆಯೊಳಗಿನ ಹಲವು ಸಂಗತಿಗಳನ್ನು ವರ್ತಮಾನದ ಕನ್ನಡಿಯಲ್ಲಿ ನೋಡುವ ಬಗೆ ಆಪ್ತವಾಗಿಯೂ, ಗಹನವಾಗಿಯೂ ಮೂಡಿದೆ. ಮತ್ತೊಂದು ವಿಶೇಷವೇನೆಂದರೆ ಪೂನಾ ಒಪ್ಪಂದವನ್ನು ಬಹಳ ಸರಳವಾಗಿ ಹೇಳುತ್ತಾ ಲೇಖಕರು ನಮಗೆ ಆಪ್ತರಾಗಿಬಿಡುತ್ತಾರೆ. ಈ ಕೃತಿಯನ್ನು ಪೂರ್ಣ ಓದಿದನಂತರ ಲೇಖಕರ ಒಳಗಿನ ಬುದ್ಧತ್ವ ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸಿ ಬಾಬಾಸಾಹೇಬರ ಹಾದಿ ಎಂತಹುದು ಎಂದು ಅರಿವಿಗೆ ತರುತ್ತದೆ.

ಲೇಖಕರಾದ ಅಶೋಕ್‌ರವರ ಬದ್ಧತೆ ಮತ್ತು ವಿಷಯದ ಪ್ರಸ್ತುತತೆ ಜೊತೆಗೆ ಅವರು ಆರಿಸಿಕೊಂಡ ಪ್ರಕಾರ ನನಗಿಷ್ಟವಾಯಿತು. ಬುದ್ಧನ ಪ್ರೀತಿ ಇಲ್ಲಿದೆ ಎಂದುಕೊಳ್ಳುತ್ತೇನೆ…

ನಮೋ ಬುದ್ಧಾಯ, ಜೈಭೀಮ್

ರಮೇಶ್ ಗಬ್ಬೂರ್

ರಮೇಶ್ ಗಬ್ಬೂರ್
ಎದೆಯೊಳಗಿನ ಸಿಟ್ಟನ್ನು ಬಸಿದು ಅಕ್ಷರ ರೂಪ ಕೊಡುವ ರಮೇಶ್ ಗಬ್ಬೂರ್ ರವರು ಜನಕವಿ ಎಂದೇ ಪರಿಚಿತರು. ‘ಒಲಿದಂತೆ ಹಾಡುವೆ’ ಸೇರಿ ಹಲವು ಹೋರಾಟದ ಹಾಡುಗಳ ಪುಸ್ತಕ ರಚಿಸಿದ್ದಾರೆ. ಸದ್ಯಕ್ಕೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಅನಾರ್ಕಲಿಯ ಸೇಫ್ಟಿಪಿನ್: ಲಲಿತ ಪ್ರಬಂಧದ ಲಹರಿಗೆ ಬಿದ್ದ ಕತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...