Homeಅಂಕಣಗಳುನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ 'ಬುದ್ಧ ಬಾಬಾಸಾಹೇಬ ಮತ್ತು ನಾನು'

ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ ‘ಬುದ್ಧ ಬಾಬಾಸಾಹೇಬ ಮತ್ತು ನಾನು’

- Advertisement -
- Advertisement -

ಒಂದು ದಿನ ಸಂಜೆ ಮಹಾಲಕ್ಷ್ಮಿ ದಂತ ಚಿಕಿತ್ಸಾಲಯದ ಡಾಕ್ಟರ್ ಮತ್ತು ಕವಿ ಮಿತ್ರರಾದ ಶಿವಕುಮಾರ್ ಮಾಲಿಪಾಟೀಲ್‌ರವರ ಚೇಂಬರ್ ಪ್ರವೇಶಿಸಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡೆ. ಶೀರ್ಷಿಕೆ ಗಮನಸೆಳೆಯಿತು: ’ಬುದ್ಧ ಬಾಬಾಸಾಹೇಬ ಮತ್ತು ನಾನು’. ಅವರಿಂದ ಪುಸ್ತಕ ಪಡೆದು ಪುಟ ತಿರುವುತ್ತಾ ಹೋದೆ. ಕನ್ನಡ ನಾಡಿನ ಖ್ಯಾತ ನಟರಲ್ಲಿ ಒಬ್ಬರಾದ ಅಶೋಕ್ ಅವರಿಗೆ ಬುದ್ಧ ಮತ್ತು ಬಾಬಾಸಾಹೇಬರು ಹೇಗೆ ಅವಾಹಿಸಿಕೊಂಡಿರಬಹುದು, ನನ್ನ ಪ್ರೀತಿಯ ನಟನೊಬ್ಬನ ಮನದೊಳಗೆ ಬುದ್ಧ ಭೀಮರ ಪ್ರವೇಶ ಹೇಗಿರಬಹುದೆಂದು ಕುತೂಹಲದಿಂದ ಓದಲು ತೊಡಗಿದೆ.

ಶೂಟಿಂಗ್ ಸ್ಪಾಟ್ ಹಗಲು ಸ್ಟುಡಿಯೋ

ಶೂಟಿಂಗ್ ಸ್ಪಾಟ್‌ನಲ್ಲಿ ಪಾತ್ರಧಾರಿಯಾದ ಲೇಖಕರ ಪ್ರವೇಶದ ಜೊತೆಗೇ ಬುದ್ಧರ ಮತ್ತು ಪರಿವ್ರಾಜಕರ ಸಂಭಾಷಣೆ ಆರಂಭವಾಗುತ್ತದೆ. ಈ ಸಂಭಾಷಣೆಯನ್ನು ಹಲವು ಲೇಖಕರು ಬೇರೆಬೇರೆ ಪುಸ್ತಕಗಳಲ್ಲಿ ಬರೆದಿದ್ದಾರೆ. ಸ್ವತಃ ಅಂಬೇಡ್ಕರರು ತಮ್ಮ ಕೃತಿ ’ಬುದ್ಧ ಮತ್ತು ಆತನ ಧಮ್ಮ’ದಲ್ಲಿಯೂ ಬರೆದಿದ್ದಾರೆ. ಇಲ್ಲಿ ಬುದ್ಧ ಪರಿವ್ರಾಜಕರೊಡನೆ ಮಾತಾಡುತ್ತಿಲ್ಲ, ಬದಲಾಗಿ ಲೇಖಕರ ಒಳಗಿನ ಬುದ್ಧ ಜಾಗೃತನಾಗಿ, ಪಾತ್ರವಾಗಿ ಆವಾಹಿಸಿಕೊಂಡು ಮಾತನಾಡುವ ಬಗೆ ಮತ್ತು ಅಲ್ಲಿ ಕಟ್ಟಿಕೊಡುವ ಸನ್ನಿವೇಶಗಳಿಂದ, ಅಲ್ಲಿನ ಒಂದಷ್ಟು ಮಾತುಗಳು ಅತ್ಯುತ್ತಮವಾದ ಪ್ರವಚನದ ಹಿತ ನೀಡುತ್ತವೆ. ಮಹಾಜ್ಞಾನಿ ಬುದ್ಧನಿಗೆ ತಕ್ಕಂತೆ ಪಾತ್ರ ಮತ್ತು ಅದರ ವಿಚಾರಗಳನ್ನು ಇಲ್ಲಿ ಚರ್ಚೆ ಮಾಡಿಸಿರುವುದು ’ಬುದ್ಧ ಅಂಡ್ ಹಿಸ್ ಧಮ್ಮ’ವನ್ನು ಬಹಳ ಸರಳವಾಗಿ ವಿವರಿಸುತ್ತದೆ. ಈ ಮಾತುಗಳನ್ನು ಬರೆಯುವಾಗ ಲೇಖಕರು ಬಾಬಾಸಾಹೇಬರ ಸಂಪೂರ್ಣ ಮಾರ್ಗದ ಬಗ್ಗೆ ಸ್ಪಷ್ಟತೆಯನ್ನು ಹೊಂದಿ, ಅದನ್ನ ಮತ್ತೆ ಹೇಳುತ್ತಾ ತಮ್ಮ ಮಾರ್ಗವೂ ಸಹ ಇದೇ ಎಂಬುದನ್ನು ಇಲ್ಲಿ ಓದುಗರಿಗೆ ವಿಶದಪಡಿಸುತ್ತಾರೆ.

ಕಪಿಲವಸ್ತು ಅಧ್ಯಾಯದಲ್ಲಿ ಅಂಬೇಡ್ಕರ್‌ರವರು ತಮ್ಮ ಪತ್ನಿಯ ಜೊತೆ ಸಂಭಾಷಿಸುತ್ತಾ ಬುದ್ಧನ ಪ್ರಸ್ತುತತೆಯನ್ನು ಓದುಗರಿಗೆ ತಿಳಿಸುತ್ತಾರೆ. ಇಲ್ಲಿ ಲೇಖಕರ ಬದ್ಧತೆ ಸ್ವಲ್ಪವೂ ಅಲುಗಾಡದೆ ಸ್ಥಿರವಾಗಿದೆ. ಬುದ್ಧ ಯಾಕೆ ಈಗ ನಮಗೆ ಪ್ರಸ್ತುತ ಎಂದು ಹೇಳುತ್ತಾ “ಬುದ್ಧನ ಚಿಂತನೆಗಳು ಧಾರ್ಮಿಕವಲ್ಲ, ಅವು ಸಮಾಜಮುಖಿ” ಎನ್ನುವಾಗ ಲೇಖಕರು ವರ್ತಮಾನದ ಎಲ್ಲಾ ತಾಕಲಾಟಗಳಿಗೂ ಮಧ್ಯಮ ಮಾರ್ಗವನ್ನು ಸೂಚಿಸುತ್ತಾರೆ. ದೃಶ್ಯಮಾಧ್ಯಮದಲ್ಲಿ ಬುದ್ಧನನ್ನು ತರುವ ಬಗ್ಗೆ ಯೋಚಿಸುತ್ತಲೇ ಆರಂಭವಾಗುವ ಕಪಿಲವಸ್ತು ಅಧ್ಯಾಯ, ಬುದ್ಧನ ಬಾಲ್ಯದಿಂದ ಆತ ಮನೆ ಬಿಟ್ಟು ಹೋಗುವವರೆಗಿನ ಘಟನೆಗಳು ಸಂಕಲಿಸಿಕೊಳ್ಳುವಾಗ ಸಂಪ್ರದಾಯವಾದಿಗಳು ಬರೆದ ಪಠ್ಯಗಳನ್ನು ಮತ್ತು ಬಾಬಾಸಾಹೇಬರ ಸಂಶೋಧನಾತ್ಮಕ ಪಠ್ಯಗಳನ್ನು ಮುಖಾಮುಖಿಯಾಗಿಸುತ್ತಾರೆ.

ಎಪಿಸೋಡ್ ಮೂರರಲ್ಲಿ ಲೇಖಕರು ಒಂದು ಕುತೂಹಲಕರವಾದ ಸನ್ನಿವೇಶವನ್ನು ಕಟ್ಟಿಕೊಡುತ್ತಾರೆ. ಅದು ಕರ್ನಾಟಕದಲ್ಲಿ ನಡೆದ ಬಹುಮುಖ್ಯ ಘಟನೆಯೊಂದಿಗೆ ಆರಂಭವಾಗುತ್ತದೆ ಮತ್ತು ವರ್ತಮಾನಕ್ಕೆ ತಳುಕು ಹಾಕುತ್ತ ಸಾಗುತ್ತದೆ. ಆ ಭಾಗದಲ್ಲಿ ಮೂಡಿರುವ, ಸಶಸ್ತ್ರ ಹೋರಾಟ ಮಾಡುವ ತಂಡವನ್ನು ಮುಖ್ಯವಾಹಿನಿಗೆ ತರುವುದರೊಂದಿಗಿನ ಮಾತುಕತೆ ಕುತೂಹಲಕರವಾಗಿದೆ. ಈ ಸಂಭಾಷಣೆ ಓದುವಾಗಲೆಲ್ಲ ನನಗೆ ಬುದ್ಧನನ್ನು ಎದುರುಗೊಂಡ ಅಂಗುಲಿಮಾಲ ನೆನಪಾಗುತ್ತಾನೆ. ಲೇಖಕರು ಇಲ್ಲಿನ ಸೂಕ್ಷ್ಮ ಸನ್ನಿವೇಶವನ್ನು, ಬುದ್ಧ ಮಾಡಿದ ಬದಲಾವಣೆಯಂತೆಯೇ ಕಟ್ಟಿಕೊಡಲು, ತಾವು ಒಂದು ಪಾತ್ರವಾಗಿ ಮೂಡಿಬಂದು, ಘಟನೆಯನ್ನು ಜೋಡಿಸಿಕೊಂಡು ಓದುಗರಿಗೆ ಕುತೂಹಲವನ್ನೂ, ತಿಳಿವಳಿಕೆಯನ್ನೂ ಮೂಡಿಸುತ್ತಾರೆ.

ಪ್ರಗತಿಪರ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಮತ್ತು ಅವರ ಹಿಂದೆ ಬಿದ್ದ ಪೊಲೀಸರ ನಡುವೆ ಸಮನ್ವಯ ಸಾಧಿಸುವ ಲೇಖಕರು, ಹೋರಾಟಗಾರರು ಮುಖ್ಯವಾಹಿನಿಗೆ ಬಂದ ನಂತರದ ಮುಂದಿನ ಯೋಜನೆಯನ್ನು ಜಾರಿಯಲ್ಲಿಡುವ ಭಾಗವಾಗಿ ಆರಂಭಿಕ ಸಭೆಗಳನ್ನು ನಡೆಸುತ್ತಾರೆ. ಅವರೇ ಕೊನೆಯಲ್ಲಿ ಹೇಳುವಂತೆ ಸಿದ್ಧತಾ ಪರ್ವ ಮುಗಿಯಿತೆಂದು ಕಥೆಯನ್ನು ಸಮಾಪ್ತಿ ಮಾಡುತ್ತಾರೆ. ಹೀಗೆ ಹೇಳುವಾಗ ಓದುಗನಿಗೆ ಧಾರಾವಾಹಿ ಎಪಿಸೋಡ್‌ಗಳ ಕಾಯುವಿಕೆಯ ಭಾಸವಾಗುತ್ತದೆ. ವರ್ತಮಾನದೊಂದಿಗೆ ಭೂತ ಮತ್ತು ಭವಿಷ್ಯತ್ತು ಬೆಸೆಯುವ ಈ ಭಾಗದಲ್ಲಿ ಲೇಖಕರ ವಿಶಿಷ್ಟ ನಿರೂಪಣೆ ಗಮನ ಸೆಳೆಯುತ್ತದೆ. ಎಪಿಸೋಡ್ 3 ಓದುವಾಗಲೆಲ್ಲಾ ನನ್ನೊಳಗಿನ ವಿಚಾರಗಳಿಗೆ ಪುಷ್ಟಿ ಸಿಗುತ್ತದೆ ಮತ್ತು ಸ್ಪಷ್ಟತೆ ದೊರಕುತ್ತದೆ. ಭ್ರಷ್ಟ ರಾಜಕಾರಣವನ್ನು ಕೊನೆಗಾಣಿಸಿ ಮತ್ತೊಂದು ಹೊಸ ಪಡೆಯನ್ನು ಕಟ್ಟುವ ಕನಸುಗಳ ಭಾಗವಾಗಿ ನಮ್ಮನ್ನು ಅದರಲ್ಲಿ ಸೇರಿಸಿಕೊಂಡು ಓದಿಸಿಕೊಂಡು ಹೋಗುತ್ತದೆ.

ಈ ಕೃತಿಯಲ್ಲಿ ಕಥೆಯನ್ನು ಜೋಡಿಸಿಕೊಂಡು ಹೊಸೆದಿರುವ ಬಗೆ ಹೊಸದು. ಇದು ಕಥೆಯೊಳಗಿನ ಕಾದಂಬರಿಯೋ, ಕಾದಂಬರಿಯೊಳಗಿನ ಅಧ್ಯಾಯವೋ, ಮಹಾ ಧಾರಾವಾಹಿಯ ಮೊದಲ ಕಂತೋ ಎಂಬ ಗೊಂದಲ ಉಂಟಾಗುತ್ತದೆ. ಆದರೆ, ಎಲ್ಲಿಯು ಬೋರಾಗದೆ ಓದಿಸಿಕೊಂಡುಹೋಗುವ, ಚರಿತ್ರೆಯೊಳಗಿನ ಹಲವು ಸಂಗತಿಗಳನ್ನು ವರ್ತಮಾನದ ಕನ್ನಡಿಯಲ್ಲಿ ನೋಡುವ ಬಗೆ ಆಪ್ತವಾಗಿಯೂ, ಗಹನವಾಗಿಯೂ ಮೂಡಿದೆ. ಮತ್ತೊಂದು ವಿಶೇಷವೇನೆಂದರೆ ಪೂನಾ ಒಪ್ಪಂದವನ್ನು ಬಹಳ ಸರಳವಾಗಿ ಹೇಳುತ್ತಾ ಲೇಖಕರು ನಮಗೆ ಆಪ್ತರಾಗಿಬಿಡುತ್ತಾರೆ. ಈ ಕೃತಿಯನ್ನು ಪೂರ್ಣ ಓದಿದನಂತರ ಲೇಖಕರ ಒಳಗಿನ ಬುದ್ಧತ್ವ ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸಿ ಬಾಬಾಸಾಹೇಬರ ಹಾದಿ ಎಂತಹುದು ಎಂದು ಅರಿವಿಗೆ ತರುತ್ತದೆ.

ಲೇಖಕರಾದ ಅಶೋಕ್‌ರವರ ಬದ್ಧತೆ ಮತ್ತು ವಿಷಯದ ಪ್ರಸ್ತುತತೆ ಜೊತೆಗೆ ಅವರು ಆರಿಸಿಕೊಂಡ ಪ್ರಕಾರ ನನಗಿಷ್ಟವಾಯಿತು. ಬುದ್ಧನ ಪ್ರೀತಿ ಇಲ್ಲಿದೆ ಎಂದುಕೊಳ್ಳುತ್ತೇನೆ…

ನಮೋ ಬುದ್ಧಾಯ, ಜೈಭೀಮ್

ರಮೇಶ್ ಗಬ್ಬೂರ್

ರಮೇಶ್ ಗಬ್ಬೂರ್
ಎದೆಯೊಳಗಿನ ಸಿಟ್ಟನ್ನು ಬಸಿದು ಅಕ್ಷರ ರೂಪ ಕೊಡುವ ರಮೇಶ್ ಗಬ್ಬೂರ್ ರವರು ಜನಕವಿ ಎಂದೇ ಪರಿಚಿತರು. ‘ಒಲಿದಂತೆ ಹಾಡುವೆ’ ಸೇರಿ ಹಲವು ಹೋರಾಟದ ಹಾಡುಗಳ ಪುಸ್ತಕ ರಚಿಸಿದ್ದಾರೆ. ಸದ್ಯಕ್ಕೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಅನಾರ್ಕಲಿಯ ಸೇಫ್ಟಿಪಿನ್: ಲಲಿತ ಪ್ರಬಂಧದ ಲಹರಿಗೆ ಬಿದ್ದ ಕತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ...

ತಮಿಳುನಾಡು: ಪ್ರತಿಭಟನಾ ನಿರತ ಶಿಕ್ಷಕರು, ನೈರ್ಮಲ್ಯ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಪ್ರೇಮಲತಾ ವಿಜಯಕಾಂತ್

ತಮಿಳುನಾಡು ಸರ್ಕಾರವು ಪ್ರತಿಭಟನಾ ನಿರತ ಮಾಧ್ಯಮಿಕ ದರ್ಜೆಯ ಶಿಕ್ಷಕರು ಮತ್ತು ನೈರ್ಮಲ್ಯ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಗುರುವಾರ ಹೇಳಿದ್ದಾರೆ.  ತಮ್ಮ...

ಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ "ಲೆ ಕಾನ್ಸ್ಟೆಲೇಷನ್" ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ...

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ. ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ...

ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ

ಹಿಂದುತ್ವ ಗುಂಪುಗಳು ಹಿಂದೂ ರಾಷ್ಟ್ರ ರಚನೆಗೆ ಕರೆ ನೀಡುವ ಮತ್ತು ಅಲ್ಪಸಂಖ್ಯಾತರಿಗೆ ನೇರ ಅಥವಾ ಪರೋಕ್ಷ ಬೆದರಿಕೆಗಳನ್ನು ಹಾಕುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಭಾರತದಲ್ಲಿ ಸಾಮಾನ್ಯವಾಗಿದೆ. ಆದರೆ, ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 'ಸನಾತನ...

ಜಮ್ಮು-ಕಾಶ್ಮೀರ| 17 ಹಳ್ಳಿಗಳ 150 ಜನರಿಗೆ ‘ರಕ್ಷಣಾ ತರಬೇತಿ’ ನೀಡುತ್ತಿರುವ ಸೇನಾ ಪಡೆ

ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಚೆನಾಬ್ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಭಾಗವಾಗಿ, ಗ್ರಾಮ ಮಟ್ಟದ ಭದ್ರತೆಯನ್ನು ಬಲಪಡಿಸಲು ಸೇನೆಯು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ದೋಡಾ-ಚಂಬಾ ಗಡಿಯುದ್ದಕ್ಕೂ 17...

ಬೆಸ್ಕಾಂ ವ್ಯಾಪ್ತಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿ ಮೇಲ್ವಿಚಾರಣೆಗೆ ಹೊಸ ಮೊಬೈಲ್ ಆ್ಯಪ್ 

ಬೆಂಗಳೂರು: ಬೆಸ್ಕಾಂ ತನ್ನ ವ್ಯಾಪ್ತಿಯಲ್ಲಿ ಬರುವ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು 'ಡಿಸ್ಟ್ರಿಬ್ಯೂಷನ್ ಟ್ರಾನ್ಸ್‌ಫಾರ್ಮರ್ ಲೈಫ್ ಸೈಕಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್' (DTLMS) ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕ್ರಮವು...

ಇಂದೋರ್‌ ಕಲುಷಿತ ನೀರು ಸೇವನೆ ಪ್ರಕರಣ: ಹತ್ತಕ್ಕೇರಿದ ಸಾವಿನ ಸಂಖ್ಯೆ; ಇಬ್ಬರು ಅಧಿಕಾರಿಗಳು ಅಮಾನತು

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಕನಿಷ್ಠ 10 ಮಂದಿ ಸಾವನ್ನಪ್ಪಿದ ಕಾರಣ ಓರ್ವ ಅಧಿಕಾರಿಯನ್ನು ವಜಾಗೊಳಿಸಲಾಗಿದ್ದು, ಇತರ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಪುರಸಭೆಯಿಂದ ಸರಬರಾಜು ಮಾಡಲಾದ ಕಲುಷಿತ ಕುಡಿಯುವ ನೀರನ್ನು ಸೇವಿಸಿ 2,000...

ಪತ್ರಕರ್ತನ ಪ್ರಶ್ನೆಗೆ ಬೇಜವಬ್ದಾರಿ ಉತ್ತರ ಕೊಟ್ಟ ಬಿಜೆಪಿ ಸಚಿವ : ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

ಕಲುಷಿತ ನೀರು ಕುಡಿದು ಜನರು ಸಾವನ್ನಪ್ಪಿದ್ದಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ ಎನ್‌ಡಿಟಿವಿಯ ವರದಿಗಾರನನ್ನು ನಿಂದಿಸಿದ ಮತ್ತು ಬೇಜವಬ್ದಾರಿ ಹೇಳಿಕೆ ನೀಡಿದ ಮಧ್ಯಪ್ರದೇಶ ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ...

‘ಚೀನೀ-ಮೋಮೋ ಎಂದು ನಿಂದಿಸುತ್ತಾರೆ..’; ನೋವು ತೋಡಿಕೊಂಡ ಈಶಾನ್ಯ ಭಾರತದ ವಿದ್ಯಾರ್ಥಿಗಳು

ತ್ರಿಪುರಾ ವಿದ್ಯಾರ್ಥಿ ಅಂಜೆಲ್ ಚಕ್ಮಾ ಅವರ ಜನಾಂಗೀಯ ದ್ವೇಷದ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಮತ್ತು ಈಶಾನ್ಯ ಭಾರತದ ವಿದ್ಯಾರ್ಥಿಗಳಿಗೆ ಸುರಕ್ಷತೆಗೆ ಒತ್ತಾಯಿಸಲು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನೂರಾರು ಜನರು ಮೇಣದಬತ್ತಿ...