Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...