Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...