Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...