Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...